AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pneumonia: ಚಳಿಗಾಲದಲ್ಲಿ ನ್ಯುಮೋನಿಯಾಗೆ ಬಲಿಯಾಗಬೇಡಿ, ಈ ಲಕ್ಷಣ ಕಂಡು ಬಂದರೆ ವೈದ್ಯರನ್ನು ಭೇಟಿಯಾಗಿ

ಸಾಕಷ್ಟು ಜನರು ಶೀತ, ಕೆಮ್ಮು, ಕಫ, ಜ್ವರದಂತಹ ಸಮಸ್ಯೆಗಳು ಚಳಿಗಾಲದಲ್ಲಿ ಸಾಮಾನ್ಯವೆಂದು ಪರಿಗಣಿಸುತ್ತಾರೆ. ಸಾಮಾನ್ಯವೆಂದು ನಿರ್ಲಕ್ಷ್ಯಿಸುತ್ತಾ ಹೋದರೆ ನೀವು ನ್ಯುಮೋನಿಯಾಕ್ಕೆ ಗುರಿಯಾಗಬಹುದು. ಅದರಲ್ಲೂ ಮಕ್ಕಳ ಮೇಲೆ ಇದರ ಪರಿಣಾಮ ತೀವ್ರವಾಗಿರುತ್ತದೆ. ನ್ಯುಮೋನಿಯಾದ ಲಕ್ಷಣಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Pneumonia: ಚಳಿಗಾಲದಲ್ಲಿ ನ್ಯುಮೋನಿಯಾಗೆ ಬಲಿಯಾಗಬೇಡಿ, ಈ ಲಕ್ಷಣ ಕಂಡು ಬಂದರೆ ವೈದ್ಯರನ್ನು ಭೇಟಿಯಾಗಿ
Pneumonia
Follow us
ಅಕ್ಷತಾ ವರ್ಕಾಡಿ
|

Updated on: Dec 31, 2023 | 4:16 PM

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ, ವಿಶೇಷವಾಗಿ ಆಹಾರ ಪದ್ಧತಿ. ನೀವು ಆರೋಗ್ಯದ ಬಗ್ಗೆ ನಿರ್ಲಕ್ಷ್ಯಿಸುತ್ತಾ ಹೋದಂತೆ ವೈರಲ್​​ ಸೋಂಕಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಿದೆ. ನ್ಯುಮೋನಿಯಾದ ಅನೇಕ ಪ್ರಕರಣಗಳು ಚಳಿಗಾಲದಲ್ಲಿ ಕಂಡುಬರುತ್ತವೆ ಮತ್ತು ಪರಿಸ್ಥಿತಿಯು ಗಂಭೀರವಾಗಿದ್ದರೆ, ಸಾವಿನ ಅಪಾಯವಿರುತ್ತದೆ. ಚಿಕ್ಕ ಮಕ್ಕಳ ಬಗ್ಗೆ ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು. ಚಳಿಗಾಲದಲ್ಲಿ ಶೀತ ಮತ್ತು ಕೆಮ್ಮನ್ನು ಲಘುವಾಗಿ ತೆಗೆದುಕೊಳ್ಳಬಾರದು ಮತ್ತು ಕೆಲವು ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು, ಏಕೆಂದರೆ ಇವು ನ್ಯುಮೋನಿಯಾದ ಲಕ್ಷಣಗಳಾಗಿರಬಹುದು.

ಚಳಿಗಾಲದಲ್ಲಿ ತಾಪಮಾನ ಕಡಿಮೆಯಾದ ತಕ್ಷಣ, ನ್ಯುಮೋನಿಯಾ ಪ್ರಕರಣಗಳು ಹೆಚ್ಚಾಗುತ್ತವೆ, ಆದ್ದರಿಂದ ಜಾಗರೂಕರಾಗಿರುವುದು ಉತ್ತಮ. ವಾಸ್ತವವಾಗಿ, ನ್ಯುಮೋನಿಯಾದಲ್ಲಿ, ಶ್ವಾಸಕೋಶದಲ್ಲಿ ಸೋಂಕು ಪ್ರಾರಂಭವಾಗುತ್ತದೆ, ಇದರಿಂದ ಉಸಿರಾಟದ ತೊಂದರೆಗಳು ಉಂಟಾಗುತ್ತವೆ.

ಇದನ್ನೂ ಓದಿ: ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ವಾಕಿಂಗ್​ ಹೋಗುವುದು ಸುರಕ್ಷಿತವೇ?

ಉಸಿರಾಟದ ತೊಂದರೆ:

ನ್ಯುಮೋನಿಯಾ ನಿಮ್ಮ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಕಫದಿಂದಾಗಿ ನೀವು ಎದೆಯಲ್ಲಿ ಬಿಗಿತ ಮತ್ತು ನೋವನ್ನು ಅನುಭವಿಸಿದರೆ,ಅದು ನ್ಯುಮೋನಿಯಾದ ಲಕ್ಷಣವಾಗಿರಬಹುದು.

ಜ್ವರವನ್ನು ನಿರ್ಲಕ್ಷಿಸಬೇಡಿ:

ನ್ಯುಮೋನಿಯಾದ ಆರಂಭಿಕ ರೋಗಲಕ್ಷಣಗಳಲ್ಲಿ ಒಂದು ದೇಹದ ಉಷ್ಣಾಂಶದಲ್ಲಿ ಹಠಾತ್ ಹೆಚ್ಚಳ ಅಥವಾ ಮರುಕಳಿಸುವ ಜ್ವರ. ಈ ರೀತಿಯ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ನಿರ್ಲಕ್ಷಿಸಬೇಡಿ. ದೇಹದ ಉಷ್ಣತೆಯು 100.4 ಡಿಗ್ರಿ ಫ್ಯಾರನ್‌ಹೀಟ್‌ಗಿಂತ ಹೆಚ್ಚಿದ್ದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಇಲ್ಲದಿದ್ದರೆ ಪರಿಸ್ಥಿತಿ ತುಂಬಾ ಗಂಭೀರವಾಗಬಹುದು.

ಹಸಿವಿನ ನಷ್ಟ ಮತ್ತು ಆಯಾಸ:

ನೆಗಡಿ, ಕೆಮ್ಮು, ನೋವಿದ್ದು, ಹಸಿವೆಯಲ್ಲಿ ಬದಲಾವಣೆ ಇದೆ ಅಂದರೆ ತಿನ್ನಲು ಮನಸ್ಸಾಗದಿದ್ದರೆ ಸಾಮಾನ್ಯವೆಂದು ನಿರ್ಲಕ್ಷ್ಯಿಸದಿರಿ. ಈ ರೀತಿಯ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ