AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಗರ್ಭಿಣಿಯರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇಲ್ಲಿದೆ ಕೆಲವು ಸಲಹೆಗಳು

ಅಗತ್ಯವಾದ ಪೋಷಕಾಂಶಗಳು ದೊರೆಯದ ಕಾರಣ ಗರ್ಭಿಣಿಯರ ಆರೋಗ್ಯ ಸ್ಥಿತಿ ಹದಗೆಡುತ್ತದೆ. ಇದು ಬೆಳವಣಿಗೆ ಹೊಂದುತ್ತಿರುವ ಮಗುವಿನ ಮೇಲೆ ಪರಿಣಾಮ ಬೀರಬಹುದು. ಹಾಗಾಗಿ ಆರೋಗ್ಯ ಸುಧಾರಣೆಯ ಕುರಿತಾಗಿ ಗರ್ಭಿಣಿಯರು ಹೆಚ್ಚು ಗಮನವಹಿಸಬೇಕು.

Women Health: ಗರ್ಭಿಣಿಯರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇಲ್ಲಿದೆ ಕೆಲವು ಸಲಹೆಗಳು
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on: Aug 08, 2021 | 9:41 PM

Share

ಗರ್ಭಾವಸ್ಥೆಯಲ್ಲಿ ತಾಯಿ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಮಗುವಿನ ಆರೋಗ್ಯದ ಕುರಿತಾಗಿಯೂ ಹೆಚ್ಚು ಕಾಳಜಿಯನ್ನು ವಹಿಸಬೇಕಾಗುತ್ತದೆ. ಹಾಗಿರುವಾಗ ಗರ್ಭಿಣಿ ತಾನು ಸೇವಿಸುವ ಆಹಾರದ ಕುರಿತಾಗಿ ಹೆಚ್ಚು ಗಮನವಹಿಸಬೇಕಾಗುವುದು ಅತ್ಯಗತ್ಯ. ಅಗತ್ಯವಾದ ಪೋಷಕಾಂಶಗಳು ದೊರೆಯದ ಕಾರಣ ಗರ್ಭಿಣಿಯರ ಆರೋಗ್ಯ ಸ್ಥಿತಿ ಹದಗೆಡುತ್ತದೆ. ಇದು ಬೆಳವಣಿಗೆ ಹೊಂದುತ್ತಿರುವ ಮಗುವಿನ ಮೇಲೆ ಪರಿಣಾಮ ಬೀರಬಹುದು. ಹಾಗಾಗಿ ಆರೋಗ್ಯ ಸುಧಾರಣೆಯ ಕುರಿತಾಗಿ ಗರ್ಭಿಣಿಯರು ಹೆಚ್ಚು ಗಮನವಹಿಸಬೇಕು.

*ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ದಿನಕ್ಕೆ 80 ರಿಂದ 85 ಗ್ರಾಂ ವಿಟಮಿನ್ ಸಿ ಅಂಶ ಬೇಕು. ಆದ್ದರಿಂದ ಪ್ರತಿನಿತ್ಯ ವಿಟಮಿನ್ ಸಿ ಸೇವಿಸುವುದು ಅತ್ಯಗತ್ಯ. ವಿಟಮಿನ್ ಸಿ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

*ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚು ಪ್ರೋಟೀನ್, ಕ್ಯಾಲ್ಸಿಯಂ ಅಗತ್ಯವಿರುತ್ತದೆ. ಹಾಗಾಗಿ ದ್ವಿದಳ ದಾನ್ಯಗಳು, ಮೊಸರು ಮತ್ತು ಡೈರಿ ಉತ್ಪನ್ನಗಳನ್ನು ಆಹಾರದಲ್ಲಿ ಸೇವಿಸುವ ಅಭ್ಯಾಸ ಒಳ್ಳೆಯದು. ಇದರಿಂದ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಪೋಷಕಾಂಶಗಳನ್ನು ಪಡೆಯಬಹುದಾಗಿದೆ.

*ಗರ್ಭಾವಸ್ಥೆಯಲ್ಲಿ ಕೋಪ, ಸಿಟ್ಟು, ಬೇಸರವನ್ನು ಬದಿಗಿಟ್ಟು ಖುಷಿಯಿಂದ ಇರುವುದು ಮುಖ್ಯ. ಇದು ನಿಮ್ಮ ಆರೋಗ್ಯ ಸ್ಥಿತಿಯ ಜತೆಗೆ ಮಗುವಿನ ಸ್ಥಿತಿಯನ್ನು ಸುಧಾರಿಸುತ್ತದೆ. ಮಹಿಳೆಯರು ಮಾನಸಿಕ ಆರೋಗ್ಯ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ನಗು ಅತ್ಯವಶ್ಯಕ.

*ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ವಿಶ್ರಾಂತಿ ಬೇಕು. ಮಾನಸಿಕ ಆರೋಗ್ಯದ ಜತೆಗೆ ದೈಹಿಕ ಆರೋಗ್ಯ ಸುಧಾರಿಸಿಕೊಳ್ಳಲು ವಿಶ್ರಾಂತಿ ಪಡೆಯುವುದು ಅಗತ್ಯ.

*ಸಮತೋಲಿತ ಆಹಾರ ಸೇವಿಸಿ. ಪೌಷ್ಟಿಕ ಆಹಾರವಾದ ತರಕಾರಿಗಳು ಮತ್ತು ಹಣ್ಣುಗಳು ನಿಮ್ಮ ಆಹಾರದಲ್ಲಿರಲಿ.

*ಗರ್ಭಾವಸ್ಥೆಯಲ್ಲಿ ಹೆಚ್ಚು ಯೋಚಿಸದಿರಿ. ಮಾನಸಿಕ ಚಿಂತೆ ಆರೋಗ್ಯ ಸಮಸ್ಯೆಯನ್ನು ತಂದೊಡ್ಡುತ್ತದೆ. ನಿಯಮಿತ ವ್ಯಾಯಾಮ ಮತ್ತು ಧ್ಯಾನದ ಮೂಲಕ ಮಾನಸಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದು.

ಇದನ್ನೂ ಓದಿ:

Women Health: ಮಹಿಳೆಯರಲ್ಲಿ ಈ ಸಮಸ್ಯೆಗಳಿದ್ದರೆ ಮಕ್ಕಳಾಗುವ ಸಾಧ್ಯತೆ ಕಡಿಮೆ

Women Health: ಹಾಲುಣಿಸುವ ತಾಯಂದಿರು ಗಮನಿಸಬೇಕಾದ ಆಹಾರ ಕ್ರಮ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ