AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಗರ್ಭಾವಸ್ಥೆಯಲ್ಲಿ ಒಣ ಕೆಮ್ಮಿನ ಸಮಸ್ಯೆ ತೊಂದರೆಗಳನ್ನು ಹೆಚ್ಚಿಸಬಹುದು; ಪರಿಹಾರ ಕ್ರಮಗಳನ್ನು ತಿಳಿಯಿರಿ

ಗರ್ಭಿಣಿ ಮಹಿಳೆಯರು ಆರೋಗ್ಯವನ್ನು ಹೆಚ್ಚು ಕಾಳಜಿಯಿಂದ ನೋಡಿಕೊಳ್ಳುವುದು ಉತ್ತಮ. ಜತೆಗೆ ಗರ್ಭಾವಸ್ಥೆಯಲ್ಲಿ ಕೆಮ್ಮು ಕಾಣಿಸಿಕೊಳ್ಳುವುದರಿಂದ ಇದು ಆರೋಗ್ಯಕ್ಕೆ ಇನ್ನಷ್ಟು ತೊಂದರೆಗಳನ್ನು ಕೊಡಬಹುದು. ಹಾಗಿರುವಾಗ ಕೆಮ್ಮಿನ ಸಮಸ್ಯೆಗೆ ಪರಿಹಾರ ನೀಡಲು ಒಂದಿಷ್ಟು ಮನೆಮದ್ದುಗಳನ್ನು ಬಳಸಿ.

Women Health: ಗರ್ಭಾವಸ್ಥೆಯಲ್ಲಿ ಒಣ ಕೆಮ್ಮಿನ ಸಮಸ್ಯೆ ತೊಂದರೆಗಳನ್ನು ಹೆಚ್ಚಿಸಬಹುದು; ಪರಿಹಾರ ಕ್ರಮಗಳನ್ನು ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 16, 2021 | 7:49 AM

Share

ಒಣ ಕೆಮ್ಮು ಸಾಮಾನ್ಯವಾಗಿ ಎಣ್ಣೆಯಲ್ಲಿ ಕರಿದ ಪದಾರ್ಥಗಳಿಂದ ಅಥವಾ ಧೂಳಿನಿಂದ, ವಾತಾವರಣ ಬದಲಾವಣೆಗಳಿಂದ ಬರುತ್ತವೆ. ಕೆಮ್ಮು ಜೋರಾದಾಗ ಪಕ್ಕೆಲುಬುಗಳು ನೋಯುವುದು ಸಾಮಾನ್ಯ. ಅದರಲ್ಲಿಯೂ ಮುಖ್ಯವಾಗಿ ಗರ್ಭಿಣಿ ಮಹಿಳೆಯರು ಆರೋಗ್ಯವನ್ನು ಹೆಚ್ಚು ಕಾಳಜಿಯಿಂದ ನೋಡಿಕೊಳ್ಳುವುದು ಉತ್ತಮ. ಜತೆಗೆ ಗರ್ಭಾವಸ್ಥೆಯಲ್ಲಿ ಕೆಮ್ಮು ಕಾಣಿಸಿಕೊಳ್ಳುವುದರಿಂದ ಇದು ಆರೋಗ್ಯಕ್ಕೆ ಇನ್ನಷ್ಟು ತೊಂದರೆಗಳನ್ನು ಕೊಡಬಹುದು. ಹಾಗಿರುವಾಗ ಕೆಮ್ಮಿನ ಸಮಸ್ಯೆಗೆ ಪರಿಹಾರ ನೀಡಲು ಒಂದಿಷ್ಟು ಮನೆಮದ್ದುಗಳನ್ನು ಬಳಸಿ.

ನಿರಂತರವಾಗಿ ಕಾಣಿಸಿಕೊಳ್ಳುವ ಕೆಮ್ಮಿನಿಂದಾಗಿ ಹೊಟ್ಟೆಗೆ ಹೆಚ್ಚು ಒತ್ತಡ ಬೀಳುವ ಸಾಧ್ಯತೆಗಳು ಇರುತ್ತವೆ. ಈ ಕಾರಣದಿಂದ ಮಗುವಿನ ಆರೋಗ್ಯಕ್ಕೆ ತೊಂದರೆಯಾಗಬಹುದು. ಅದರಲ್ಲಿಯೂ ಗರ್ಭಿಣಿಯರು ಅತಿಯಾಗಿ ಔಷಧಗಳನ್ನು ಸೇವಿಸುವುದು ಒಳ್ಳೆಯದಲ್ಲ. ಗರ್ಭಾವಸ್ಥೆಯಲ್ಲಿ ಸಮಸ್ಯೆ ಉಂಟಾದಾಗ ಹತ್ತಿರದ ವೈದ್ಯರಲ್ಲಿ ಸಲಹೆ ಪಡೆಯಿರಿ. ಇಲ್ಲವೇ ಮನೆಮದ್ದುಗಳನ್ನು ಬಳಸುವ ಮೂಲಕ ಆರೋಗ್ಯ ಸುಧಾರಿಸಿಕೊಳ್ಳಬಹುದು.

ನೀರಿಗೆ ಶುಂಠಿಯನ್ನು ಹಾಕಿ ಚೆನ್ನಾಗಿ ಕುದಿಸಿ. ಬಳಿಕ ಫಿಲ್ಟರ್ ಮಾಡಿ ಆ ನೀರಿಗೆ ಒಂದು ಚಮಚ ಜೇನುತುಪ್ಪ ಸೇರಿಸಿ ಸೇವಿಸಬಹುದು. ಒಣಕೆಮ್ಮು ಅಲರ್ಜಿಗಳಿಂದ ಉಂಟಾಗುತ್ತವೆ. ಈ ನೀರನ್ನು ದಿನಕ್ಕೆ ಎರಡರಿಂದ ಮೂರು ಬಾರಿ ಸೇವಿಸುವುದರಿಂದ ಕಫ, ಶೀತದಂತಹ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು.

ಒಣ ಕೆಮ್ಮಿನ ಸಮಸ್ಯೆಗೆ ಜೇನು ತುಪ್ಪ ಉತ್ತಮ ಪರಿಹಾರ. ಆದ್ದರಿಂದ ಒಣ ಕೆಮ್ಮು ಸಮಸ್ಯೆ ಇದ್ದರೆ ದಿನಕ್ಕೆ ಎರಡರಿಂದ ಮೂರು ಚಮಚ ಜೇನುತುಪ್ಪ ಸೇವಿಸಿ. ಮಲಗುವ ಮೊದಲು ಹಾಲಿಗೆ ಜೇನುತುಪ್ಪ ಸೇರಿಸಿ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಉಗುರು ಬೆಚ್ಚಗಿನ ನೀರಿಗೆ ಕಲ್ಲು ಉಪ್ಪು ಸೇರಿಸಿ. ಆ ನೀರಿನಿಂದ ಗಂಟಲು ತೊಳೆಯಿರಿ. ಇದರಿಂದ ಕಫ, ಶೀತ ಜತೆಗೆ ಒಣ ಕೆಮ್ಮಿನ ಸಮಸ್ಯೆಯಿಂದ ಹೊರಬರಬಹುದು.

ತುಳಸಿಯಿಂದ ತಯಾರಿಸಿದ ಕಷಾಯ ಸೇವಿಸಬಹುದು. ಉಗು ಬೆಚ್ಚಗಿರುವಾಗಲೇ ಈ ಕಷಾಯವನ್ನು ಸೇವಿಸುವ ಮೂಲಕ ಒಣ ಕೆಮ್ಮಿ ನಿವಾರಿಸಿಕೊಳ್ಳಬಹುದು.

ಇದನ್ನೂ ಓದಿ:

Health Tips: ಮಳೆಗಾಲದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಈ 6 ಕಷಾಯಗಳನ್ನು ಮಾಡಿ ಕುಡಿಯಿರಿ

Health Benefits: ಹೂವು ಕೇವಲ ಅಂದಕ್ಕಷ್ಟೇ ಅಲ್ಲ ಅನೇಕ ಆರೋಗ್ಯಕರ ಗುಣಗಳು ಇದರಲ್ಲಿ ಅಡಗಿದೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ