AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಮಹಿಳೆಯರೇ ಎಚ್ಚರ! ಈ ಕೆಲವು ಕಾರಣಗಳಿಂದ ನಿಮ್ಮ ಆರೋಗ್ಯ ಕೆಡುತ್ತದೆ

ಮನೆಯೊಳಗೂ ಕೆಲಸ ಜತೆಗೆ ಹೊರಗೂ ಕೆಲಸ. ಇವುಗಳ ಮಧ್ಯೆ ತಮ್ಮ ಆರೋಗ್ಯ ಸುರಕ್ಷತೆಯನ್ನೇ ಮರೆಯುತ್ತಿದ್ದಾರೆ ಮಹಿಳೆಯರು. ಈ ಕೆಳಗಿನ ಕೆಲವು ಕಾರಣಗಳಿಂದ ಮಹಿಳೆಯರ ಆರೋಗ್ಯ ಕೆಡುತ್ತಿದೆ. ಈ ಕುರಿತಾಗಿ ಹೆಚ್ಚು ಲಕ್ಷ್ಯವಹಿಸಿ.

Women Health: ಮಹಿಳೆಯರೇ ಎಚ್ಚರ! ಈ ಕೆಲವು ಕಾರಣಗಳಿಂದ ನಿಮ್ಮ ಆರೋಗ್ಯ ಕೆಡುತ್ತದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 19, 2021 | 9:47 PM

Share

ಬೆಳಗ್ಗಿನಿಂದ ಸಂಜೆಯವರೆಗೆ ದುಡಿದು ದೇಹಕ್ಕೆ ಸುಸ್ತು ಅನ್ನುತ್ತಿದ್ದಾರೆ ಮಹಿಳೆಯರು. ಜೀವನದ ಪ್ರತೀ ಹಂತದಲ್ಲಿ ಕುಟುಂಬದವರ ಆರೋಗ್ಯ ಮಕ್ಕಳ ಆರೋಗ್ಯದ ಮಧ್ಯೆ ತಮ್ಮ ಆರೋಗ್ಯದ ಕುರಿತಾಗಿ ಮರೆತೇ ಬಿಟ್ಟಿದ್ದಾರೆ. ಈಗಿನ ಮಹಿಳೆಯರು ಹೆಚ್ಚು ಮಾನಸಿಕ ಒತ್ತಡಕ್ಕೆ ಸಿಲುಕುತ್ತಿರುವುದು ಕಂಡು ಬರುತ್ತದೆ. ಮನೆಯೊಳಗೂ ಕೆಲಸ ಜತೆಗೆ ಹೊರಗೂ ಕೆಲಸ. ಇವುಗಳ ಮಧ್ಯೆ ತಮ್ಮ ಆರೋಗ್ಯ ಸುರಕ್ಷತೆಯನ್ನೇ ಮರೆಯುತ್ತಿದ್ದಾರೆ ಮಹಿಳೆಯರು. ಈ ಕೆಳಗಿನ ಕೆಲವು ಕಾರಣಗಳಿಂದ ಮಹಿಳೆಯರ ಆರೋಗ್ಯ ಕೆಡುತ್ತಿದೆ. ಈ ಕುರಿತಾಗಿ ಹೆಚ್ಚು ಲಕ್ಷ್ಯವಹಿಸಿ.

ಕೆಲಸದ ಒತ್ತಡ ಹೆಚ್ಚು ಒತ್ತಡದ ಕೆಲಸ ಮಹಿಳೆಯರ ಆರೋಗ್ಯ ಸ್ಥಿತಿಯನ್ನು ಬದಲಾಯಿಸುತ್ತಿದೆ. ಪ್ರತಿನಿತ್ಯ ಚಿಂತೆ, ಕೆಲಸದ ಒತ್ತಡ ಈ ನಡುವೆ ದೇಹಕ್ಕೆ ಹೆಚ್ಚು ಆಯಾಸವಾಗುತ್ತಿದೆ. ಮೊದಲೆಲ್ಲಾ ಹೆಚ್ಚು ಗೃಹಿಣಿಯರೇ ಆಗಿರುತ್ತಿದ್ದರು. ಇದೀಗ ಗೃಹಿಣಿಯ ಜತೆಗೆ ಹೊರಗಡೆ ಉದ್ಯೋಗಕ್ಕೂ ಹೋಗುತ್ತಿದ್ದಾರೆ. ಎರಡೂ ಕೆಲಸವನ್ನು ನಿಭಾಯಿಸುವ ಕೌಶಲ್ಯದ ಜತೆಗೆ ಹೆಚ್ಚು ಮಾನಸಿಕ ಒತ್ತಡಕ್ಕೂ ಸಿಲುಕುತ್ತಿದ್ದಾರೆ.

ಪೌಷ್ಟಿಕ ಆಹಾರದ ಕೊರತೆ ಪ್ರತಿನಿತ್ಯ ಪ್ರಯಾಣ, ಹವಾಮಾನ, ಧೂಳು, ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಂಠಿತಗೊಳ್ಳುತ್ತಿದೆ. ಕೆಲಸದ ಒತ್ತಡದಲ್ಲಿ ಮಧ್ಯಾಹ್ನದ ಊಟ, ಬೆಳಿಗ್ಗೆಯ ತಿಂಡಿಯನ್ನು ಸರಿಯಾಗಿ ಸೇವಿಸದ ಮಹಿಳೆಯರಲ್ಲಿ ಹೆಚ್ಚು ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ.

ವ್ಯಾಯಾಮವಿಲ್ಲ ಹೆಚ್ಚು ಕೆಲಸದಿಂದ ವ್ಯಾಯಾಮಕ್ಕೆ ಸಮಯವೇ ಇಲ್ಲದಂತಾಗಿದೆ. ದೇಹಕ್ಕೆ ಸರಿಯಾದ ವ್ಯಾಯಾಮವಿಲ್ಲದಿದ್ದರೆ ದೇಹ ಸದೃಢವಾಗುವುದಿಲ್ಲ. ಅದರಲ್ಲಿಯೂ ಮಹಿಳೆಯರು ಹೆಚ್ಚು ಸೂಕ್ಷ್ಮವಾಗಿರುವುದರಿಂದ ಬಹುಬೇಗ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಹೀಗಿರುವಾಗ ಪ್ರತಿನಿತ್ಯ ಯೋಗಾಭ್ಯಾಸ ಬೇಕೆ ಬೇಕು. ವ್ಯಾಯಾಮದ ಕೊರತೆಯಿಂದಾಗಿ ಮಹಿಳೆಯರು ಹೆಚ್ಚಿನ ಅನಾರೋಗ್ಯವನ್ನು ಅನುಭವಿಸುತ್ತಿದ್ದಾರೆ.

ಹೊರಗಿನ ತಿಂಡಿ ಸೇವನೆ ಕೆಲಸದ ಒತ್ತಡದಲ್ಲಿ ಮಹಿಳೆಯರು ಮನೆಯಲ್ಲಿ ಅಡುಗೆ ತಯಾರಿಸಲು ಹಿಂದೇಟು ಹಾಕುವ ಪ್ರಸಂಗಗಳು ಎದುರಾಗುತ್ತವೆ. ಸಮಯವಿಲ್ಲದ ಕಾರಣ ಫುಡ್ ಆರ್ಡ್​ರ್​ ಅಥವಾ ಜಂಕ್​ಫುಡ್​ಗಳನ್ನು ಹೆಚ್ಚು ಸೇವಿಸುತ್ತಾರೆ. ಇದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ.

ಇದನ್ನೂ ಓದಿ:

Women Health: ತುಂಬಾ ತೆಳ್ಳಗಿದ್ದೇನೆ ಎಂಬ ಚಿಂತೆಯೇ? ದಪ್ಪಗಾಗಲು ಯುವತಿಯರಿಗಾಗಿ ಒಂದಿಷ್ಟು ಟಿಪ್ಸ್​

Women Health: ಯಾವುದೇ ಡಯಟ್​ ಇಲ್ಲದೇ ತೂಕ ಇಳಿಸಿಕೊಳ್ಳುವುದು ಹೇಗೆ? ಮಹಿಳೆಯರಿಗಾಗಿ ಇಲ್ಲಿದೆ ಸಲಹೆಗಳು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್