AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಮಹಿಳೆಯರೇ ಎಚ್ಚರ! ಈ ಕೆಲವು ಕಾರಣಗಳಿಂದ ನಿಮ್ಮ ಆರೋಗ್ಯ ಕೆಡುತ್ತದೆ

ಮನೆಯೊಳಗೂ ಕೆಲಸ ಜತೆಗೆ ಹೊರಗೂ ಕೆಲಸ. ಇವುಗಳ ಮಧ್ಯೆ ತಮ್ಮ ಆರೋಗ್ಯ ಸುರಕ್ಷತೆಯನ್ನೇ ಮರೆಯುತ್ತಿದ್ದಾರೆ ಮಹಿಳೆಯರು. ಈ ಕೆಳಗಿನ ಕೆಲವು ಕಾರಣಗಳಿಂದ ಮಹಿಳೆಯರ ಆರೋಗ್ಯ ಕೆಡುತ್ತಿದೆ. ಈ ಕುರಿತಾಗಿ ಹೆಚ್ಚು ಲಕ್ಷ್ಯವಹಿಸಿ.

Women Health: ಮಹಿಳೆಯರೇ ಎಚ್ಚರ! ಈ ಕೆಲವು ಕಾರಣಗಳಿಂದ ನಿಮ್ಮ ಆರೋಗ್ಯ ಕೆಡುತ್ತದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 19, 2021 | 9:47 PM

Share

ಬೆಳಗ್ಗಿನಿಂದ ಸಂಜೆಯವರೆಗೆ ದುಡಿದು ದೇಹಕ್ಕೆ ಸುಸ್ತು ಅನ್ನುತ್ತಿದ್ದಾರೆ ಮಹಿಳೆಯರು. ಜೀವನದ ಪ್ರತೀ ಹಂತದಲ್ಲಿ ಕುಟುಂಬದವರ ಆರೋಗ್ಯ ಮಕ್ಕಳ ಆರೋಗ್ಯದ ಮಧ್ಯೆ ತಮ್ಮ ಆರೋಗ್ಯದ ಕುರಿತಾಗಿ ಮರೆತೇ ಬಿಟ್ಟಿದ್ದಾರೆ. ಈಗಿನ ಮಹಿಳೆಯರು ಹೆಚ್ಚು ಮಾನಸಿಕ ಒತ್ತಡಕ್ಕೆ ಸಿಲುಕುತ್ತಿರುವುದು ಕಂಡು ಬರುತ್ತದೆ. ಮನೆಯೊಳಗೂ ಕೆಲಸ ಜತೆಗೆ ಹೊರಗೂ ಕೆಲಸ. ಇವುಗಳ ಮಧ್ಯೆ ತಮ್ಮ ಆರೋಗ್ಯ ಸುರಕ್ಷತೆಯನ್ನೇ ಮರೆಯುತ್ತಿದ್ದಾರೆ ಮಹಿಳೆಯರು. ಈ ಕೆಳಗಿನ ಕೆಲವು ಕಾರಣಗಳಿಂದ ಮಹಿಳೆಯರ ಆರೋಗ್ಯ ಕೆಡುತ್ತಿದೆ. ಈ ಕುರಿತಾಗಿ ಹೆಚ್ಚು ಲಕ್ಷ್ಯವಹಿಸಿ.

ಕೆಲಸದ ಒತ್ತಡ ಹೆಚ್ಚು ಒತ್ತಡದ ಕೆಲಸ ಮಹಿಳೆಯರ ಆರೋಗ್ಯ ಸ್ಥಿತಿಯನ್ನು ಬದಲಾಯಿಸುತ್ತಿದೆ. ಪ್ರತಿನಿತ್ಯ ಚಿಂತೆ, ಕೆಲಸದ ಒತ್ತಡ ಈ ನಡುವೆ ದೇಹಕ್ಕೆ ಹೆಚ್ಚು ಆಯಾಸವಾಗುತ್ತಿದೆ. ಮೊದಲೆಲ್ಲಾ ಹೆಚ್ಚು ಗೃಹಿಣಿಯರೇ ಆಗಿರುತ್ತಿದ್ದರು. ಇದೀಗ ಗೃಹಿಣಿಯ ಜತೆಗೆ ಹೊರಗಡೆ ಉದ್ಯೋಗಕ್ಕೂ ಹೋಗುತ್ತಿದ್ದಾರೆ. ಎರಡೂ ಕೆಲಸವನ್ನು ನಿಭಾಯಿಸುವ ಕೌಶಲ್ಯದ ಜತೆಗೆ ಹೆಚ್ಚು ಮಾನಸಿಕ ಒತ್ತಡಕ್ಕೂ ಸಿಲುಕುತ್ತಿದ್ದಾರೆ.

ಪೌಷ್ಟಿಕ ಆಹಾರದ ಕೊರತೆ ಪ್ರತಿನಿತ್ಯ ಪ್ರಯಾಣ, ಹವಾಮಾನ, ಧೂಳು, ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಂಠಿತಗೊಳ್ಳುತ್ತಿದೆ. ಕೆಲಸದ ಒತ್ತಡದಲ್ಲಿ ಮಧ್ಯಾಹ್ನದ ಊಟ, ಬೆಳಿಗ್ಗೆಯ ತಿಂಡಿಯನ್ನು ಸರಿಯಾಗಿ ಸೇವಿಸದ ಮಹಿಳೆಯರಲ್ಲಿ ಹೆಚ್ಚು ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ.

ವ್ಯಾಯಾಮವಿಲ್ಲ ಹೆಚ್ಚು ಕೆಲಸದಿಂದ ವ್ಯಾಯಾಮಕ್ಕೆ ಸಮಯವೇ ಇಲ್ಲದಂತಾಗಿದೆ. ದೇಹಕ್ಕೆ ಸರಿಯಾದ ವ್ಯಾಯಾಮವಿಲ್ಲದಿದ್ದರೆ ದೇಹ ಸದೃಢವಾಗುವುದಿಲ್ಲ. ಅದರಲ್ಲಿಯೂ ಮಹಿಳೆಯರು ಹೆಚ್ಚು ಸೂಕ್ಷ್ಮವಾಗಿರುವುದರಿಂದ ಬಹುಬೇಗ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಹೀಗಿರುವಾಗ ಪ್ರತಿನಿತ್ಯ ಯೋಗಾಭ್ಯಾಸ ಬೇಕೆ ಬೇಕು. ವ್ಯಾಯಾಮದ ಕೊರತೆಯಿಂದಾಗಿ ಮಹಿಳೆಯರು ಹೆಚ್ಚಿನ ಅನಾರೋಗ್ಯವನ್ನು ಅನುಭವಿಸುತ್ತಿದ್ದಾರೆ.

ಹೊರಗಿನ ತಿಂಡಿ ಸೇವನೆ ಕೆಲಸದ ಒತ್ತಡದಲ್ಲಿ ಮಹಿಳೆಯರು ಮನೆಯಲ್ಲಿ ಅಡುಗೆ ತಯಾರಿಸಲು ಹಿಂದೇಟು ಹಾಕುವ ಪ್ರಸಂಗಗಳು ಎದುರಾಗುತ್ತವೆ. ಸಮಯವಿಲ್ಲದ ಕಾರಣ ಫುಡ್ ಆರ್ಡ್​ರ್​ ಅಥವಾ ಜಂಕ್​ಫುಡ್​ಗಳನ್ನು ಹೆಚ್ಚು ಸೇವಿಸುತ್ತಾರೆ. ಇದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ.

ಇದನ್ನೂ ಓದಿ:

Women Health: ತುಂಬಾ ತೆಳ್ಳಗಿದ್ದೇನೆ ಎಂಬ ಚಿಂತೆಯೇ? ದಪ್ಪಗಾಗಲು ಯುವತಿಯರಿಗಾಗಿ ಒಂದಿಷ್ಟು ಟಿಪ್ಸ್​

Women Health: ಯಾವುದೇ ಡಯಟ್​ ಇಲ್ಲದೇ ತೂಕ ಇಳಿಸಿಕೊಳ್ಳುವುದು ಹೇಗೆ? ಮಹಿಳೆಯರಿಗಾಗಿ ಇಲ್ಲಿದೆ ಸಲಹೆಗಳು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ