Women Health: ಮಹಿಳೆಯರೇ ಗಮನಿಸಿ! ಋತುಚಕ್ರದಲ್ಲಿ ಈ ಆಹಾರಗಳು ನಿಮ್ಮ ಹೊಟ್ಟೆ ನೋವನ್ನು ಹೆಚ್ಚಿಸುತ್ತದೆ

ಮುಟ್ಟಿನ ಸಮಯದಲ್ಲಿ ಮಹಿಳೆಯರು ಹೆಚ್ಚು ಚಹ ಮತ್ತು ಕಾಫಿಯನ್ನು ಸೇವಿಸುತ್ತಾರೆ. ಆದರೆ ಇದರಲ್ಲಿನ ಕೆಫೀನ್ ನೋವನ್ನು ಇನ್ನಷ್ಟು ಹೆಚ್ಚಿಸುತ್ತದೆ.

Women Health: ಮಹಿಳೆಯರೇ ಗಮನಿಸಿ! ಋತುಚಕ್ರದಲ್ಲಿ ಈ ಆಹಾರಗಳು ನಿಮ್ಮ ಹೊಟ್ಟೆ ನೋವನ್ನು ಹೆಚ್ಚಿಸುತ್ತದೆ
ಸಾಂದರ್ಭಿಕ ಚಿತ್ರ
Follow us
| Updated By: guruganesh bhat

Updated on: Aug 05, 2021 | 8:26 PM

ಅನೇಕ ಮಹಿಳೆಯರು ಮುಟ್ಟಿನ ಸಮಯದಲ್ಲಿ ಅಥವಾ ಋತುಚಕ್ರದ ಸಮಯದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಅನೇಕರಿಗೆ ಹೊಟ್ಟೆ ಕೆಳ ಭಾಗದಲ್ಲಿ ಸೆಳೆತ ಉಂಟಾಗುತ್ತದೆ. ಕೆಲವೊಮ್ಮೆ ತೊಡೆ, ಕಾಲು ಮತ್ತು ಸೊಂಟದ ನೋವು ಕಾಣಿಸಿಕೊಳ್ಳುತ್ತದೆ. ಗರ್ಭಾಶಯದಲ್ಲಿ ರಕ್ತದ ಕೊರತೆಯಿಂದ ಹೊಟ್ಟೆ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಿರುವಾಗ ನೀವು ಸೇವಿಸುವ ಆಹಾರ ಕ್ರಮ ಮತ್ತು ಕೆಲವು ವಿಷಯಗಳನ್ನು ನೆನಪಿನಲ್ಲಿಡಬೇಕು. ಈ ಕೆಲವು ಅಂಶಗಳು ಯುವತಿಯರಲ್ಲಿ ಅಥವಾ ಮಹಿಳೆಯರಲ್ಲಿ ಹೊಟ್ಟೆ ನೋವು ವಿಪರೀತವಾಗಿ ಕಾಣಿಸಿಕೊಳ್ಳಲು ಕಾರಣವಾಗುತ್ತದೆ.

ಮುಟ್ಟಿನ ಸಮಯದಲ್ಲಿ ಮಹಿಳೆಯರು ಹೆಚ್ಚು ಚಹ ಮತ್ತು ಕಾಫಿಯನ್ನು ಸೇವಿಸುತ್ತಾರೆ. ಆದರೆ ಇದರಲ್ಲಿನ ಕೆಫೀನ್ ನೋವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಇದರಿಂದ ಹೊಟ್ಟೆಯಲ್ಲಿ ಹೆಚ್ಚು ಗ್ಯಾಸ್ ಅಥವಾ ವಾಯು ಸಮಸ್ಯೆ ಕಂಡು ಬರುತ್ತದೆ. ಆದ್ದರಿಂದ ಮುಟ್ಟಿನ ಸಮಯದಲ್ಲಿ ಹೆಚ್ಚು ಚಹಾ ಮತ್ತು ಕಾಫಿ ಸೇವನೆ ಒಳ್ಳೆಯದಲ್ಲ.

ಚಾಕಲೇಟ್ ಸೇವಿಸುವುದರಿಂದ ಹೊಟ್ಟೆ ಸೆಳೆತ ಇನ್ನಷ್ಟು ಹೆಚ್ಚಾಗುತ್ತದೆ. ಚಾಕಲೇಟ್​ನಲ್ಲಿ ಕೆಫೀನ್ ಅಂಶವಿರುವುದರಿಂದ ಸ್ನಾಯುಗಳು ಸಂಕುಚಿತಗೊಳ್ಳುತ್ತದೆ. ಇದರಿಂದ ಹೊಟ್ಟೆ ನೋವಿನ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ.

ಮದ್ಯಪಾನ ಮತ್ತು ಧೂಮಪಾನ ಸೇವನೆ ಆರೋಗ್ಯಕ್ಕೆ ಹಾನಿಕರ. ಅದರಲ್ಲಿಯೂ ಮುಖ್ಯವಾಗಿ ಋತುಚಕ್ರದ ಸಮಯದಲ್ಲಿ ಮದ್ಯಪಾನ ಅಥವಾ ಧೂಮಪಾನ ಸೇವನೆಯಿಂದ ಹೊಟ್ಟೆಯ ಕೆಳಭಾಗದಲ್ಲಿ ಊತ ಹೆಚ್ಚಾಗುತ್ತದೆ. ಈ ಕಾರಣದಿಂದ ಹೊಟ್ಟೆಯ ನೋವು ಕೂಡಾ ಹೆಚ್ಚಾಗುತ್ತದೆ. ಆದ್ದರಿಂದ ಋತು ಚಕ್ರದ ಸಮಯದಲ್ಲಿ ಎಂದಿಗೂ ಆಲ್ಕೋಹಾಲ್ ಸೇವಿಸಬೇಡಿ.

ಋತ ಚಕ್ರದ ಸಮಯದಲ್ಲಿ ತಣ್ಣನೆಯ ಪದಾರ್ಥವಾದ ಮೊಸರು, ಮಜ್ಜಿಗೆ, ತಂಪು ಪಾನೀಯಗಳನ್ನು ತೆಗೆದುಕೊಳ್ಳುವುದನ್ನು ಆದಷ್ಟು ತಪ್ಪಿಸಿ. ಇದು ಹೊಟ್ಟೆಯಲ್ಲಿ ಊತವನ್ನು ಹೆಚ್ಚಿಸುತ್ತದೆ. ಇದರಿಂದ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಇದರ ಜತೆಗೆ ಅತಿ ಖಾರವಾದ ತಿಂಡಿ, ಉಪ್ಪಿನಕಾಯಿ, ಹುಳಿ ಪದಾರ್ಥಗಳು, ನಿಂಬೆ ರಸ ಈ ರೀತಿಯ ಕೆಲವು ಪದಾರ್ಥಗಳನ್ನು ಆದಷ್ಟು ತಪ್ಪಿಸಿ.

ಋತುಚಕ್ರದ ಸಮಯದಲ್ಲಿ ಜಂಕ್ ಫುಡ್​ಗಳು ಅಥವಾ ಪ್ಯಾಕೆಟ್ ಫುಡ್​ಗಳನ್ನು ಸೇವಿಸುವುದನ್ನು ತಪ್ಪಿಸಿ. ಈ ಸಮಯದಲ್ಲಿ ದೇಹಕ್ಕೆ ಹೆಚ್ಚು ಪೋಷಕಾಂಶಗಳು ಬೇಕು. ಆದ್ದರಿಂದ ಮೃದು ಆಹಾರದ ಹತೆಗೆ ಜೀರ್ಣವಾಗುವ ಆಹಾರವನ್ನು ಸೇವಿಸಿ.

ಇದನ್ನೂ ಓದಿ:

Women Health: ಗರ್ಭಿಣಿಯರಿಗೆ ಎದೆ ನೋವು ಏಕೆ ಕಾಣಿಸಿಕೊಳ್ಳುತ್ತದೆ? ಇದು ಹೆಚ್ಚು ಅಪಾಯವೇ?

Women Health: ಗರ್ಭಿಣಿಯರು ಈ ಕೆಲಸಗಳನ್ನು ಮಾಡಲೇಬಾರದು; ಆರೋಗ್ಯ ಕಾಪಾಡಿಕೊಳ್ಳಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ