Women Health: ಗರ್ಭಪಾತಕ್ಕೆ ಕಾರಣಗಳೇನು? ಈ ಅಂಶಗಳನ್ನು ಮಹಿಳೆಯರು ತಿಳಿದಿರುವುದು ಒಳಿತು

ಕೆಲವರಿಗೆ ಆರೋಗ್ಯ ಸಮಸ್ಯೆಯಿಂದ ಗರ್ಭಪಾತ ಉಂಟಾಗುತ್ತದೆ. ಗರ್ಭಪಾತ ಉಂಟಾಗಲು ಕಾರಣವೇನು? ತಿಳಿಯಲೇ ಬೇಕಾದ ಕೆಲವು ಕಾರಣಗಳು ಈ ಕೆಳಗಿನಂತಿದೆ.

Women Health: ಗರ್ಭಪಾತಕ್ಕೆ ಕಾರಣಗಳೇನು? ಈ ಅಂಶಗಳನ್ನು ಮಹಿಳೆಯರು ತಿಳಿದಿರುವುದು ಒಳಿತು
ಸಾಂದರ್ಭಿಕ ಚಿತ್ರ
Follow us
| Updated By: ganapathi bhat

Updated on: Aug 24, 2021 | 6:44 PM

ಸಾಮಾನ್ಯವಾಗಿ ಮದುವೆಯಾದ ಹೆಣ್ಣುಮಕ್ಕಳು ಮಗುವಿನ ಜನನದ ಕುರಿತಾಗಿ ಅದೆಷ್ಟೋ ಆಸೆಗಳನ್ನು ಹೊಂದಿರುತ್ತಾರೆ. ತನ್ನ ಬದುಕಿನಲ್ಲಿ ಮತ್ತೊಂದು ಜೀವದ ಬರುವಿಕೆಯ ಆಸೆಗಳನ್ನು ಹೊಂದಿರುತ್ತಾರೆ. ಆದರೆ ಕೆಲವು ಮಹಿಳೆಯರಲ್ಲಿ ಗರ್ಭ ನಿಲ್ಲುವುದೇ ಇಲ್ಲ. ಇನ್ನು ಕೆಲವರಿಗೆ ಆರೋಗ್ಯ ಸಮಸ್ಯೆಯಿಂದ ಗರ್ಭಪಾತ ಉಂಟಾಗುತ್ತದೆ. ಗರ್ಭಪಾತ ಉಂಟಾಗಲು ಕಾರಣವೇನು? ತಿಳಿಯಲೇ ಬೇಕಾದ ಕೆಲವು ಕಾರಣಗಳು ಈ ಕೆಳಗಿನಂತಿದೆ.

ಕೆಲವು ಸಂದರ್ಭದಲ್ಲಿ ಅಹಿತಕರ ಘಟನೆಯಿಂದಾಗಿ ಮಹಿಳೆಯರಲ್ಲಿ ಗರ್ಭಪಾತ ಉಂಟಾಗುತ್ತದೆ. ಇದು ಆಕೆಯ ಮಾನಸಿಕ ಸ್ಥಿತಿಯನ್ನು ಹದಗೆಡಿಸುತ್ತದೆ. ಅದೆಷ್ಟೋ ಆಸೆಗಳನ್ನು ಹೊತ್ತ ಮಹಿಳೆಯ ಆರೋಗ್ಯವೂ ಸಹ ಹಾನಿಗೊಳಗಾಗುತ್ತದೆ. ಈ ಕುರಿಂತೆ ಕೆಲವು ಕಾರಣಗಳನ್ನು ನೀವು ತಿಳಿಯಲೇಬೇಕು.

ಥೈರೈಡ್ ಈಗಿನ ದಿನಮಾನಗಳಲ್ಲಿ ಥೈರೈಡ್ ಸಮಸ್ಯೆ ಜನರಲ್ಲಿ ಹೆಚ್ಚು ಕಾಡುತ್ತಿದೆ. ಈ ಸಮಸ್ಯೆಯಿಂದ ಮಹಿಳೆಯರು ಹೆಚ್ಚು ಬಾಧಿತರಾಗುತ್ತಿದ್ದಾರೆ. ಮಹಿಳೆಯರು ಥೈರೈಡ್ ಸಮಸ್ಯೆಯನ್ನು ಸಾಮಾನ್ಯ ಎಂದು ಭಾವಿಸುತ್ತಾರೆ. ನೀವು ಗರ್ಭಾವಸ್ಥೆಯಲ್ಲಿ ಥೈರೈಡ್ ಹೊಂದಿದ್ದರೆ ಹೆಚ್ಚು ಜಾಗರೂಕರಾಗಿರುವುದು ಒಳ್ಳೆಯದು. ಏಕೆಂದರೆ ಇದು ಹಾರ್ಮೋನ್ ಸಂಬಂಧಿತ ಸಮಸ್ಯೆಯಾಗಿದೆ. ಇದರಿಂದಾಗಿ ಕೆಲವು ಬಾರಿ ಗರ್ಭಪಾತ ಉಂಟಾಗುವ ಸಂಭವವಿರಬಹುದು.

ಮಧುಮೇಹ ಅನೇಕ ಮಹಿಳೆಯರು ಗರ್ಭಾವಸ್ಥೆಯಲ್ಲಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇಂತಹ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ನಿರ್ಲಕ್ಷ್ಯ ತೋರದೇ ಕಾಲಕಾಲಕ್ಕೆ ವೈದ್ಯರಲ್ಲಿ ಪರೀಕ್ಷೆಗೆ ಒಳಗಾಗುವುದು ಮುಖ್ಯ. ಮಧುಮೇಹ ಆರಂಭಿಕ ತಿಂಗಳುಗಳಲ್ಲಿ ಗರ್ಭಪಾತಕ್ಕೆ ಕಾರಣವಾಗಬಹುದು. ಜತೆಗೆ ಮಧುಮೇಹದ ಅತೀವ ತೊಂದರೆಗಳಿಂದ ಗರ್ಭಪಾತವೂ ಉಂಟಾಗಬಹುದು.

ಹಾರ್ಮೋನುಗಳ ಅಸಮತೋಲನ ಮಹಿಳೆಯು ಈಗಾಗಲೇ ಹಾರ್ಮೋನುಗಳ ಸಮಸ್ಯೆ ಹೊಂದಿದ್ದರೆ ಅಥವಾ ಆಕೆಯ ದೇಹವು ಸಾಕಷ್ಟು ಪ್ರೊಜೆಸ್ಟರಾನ್​ ಹಾರ್ಮೋನ್ ಉತ್ಪಾದಿಸದಿದ್ದರೆ ಗರ್ಭಾಪಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ ಔಷಧಿಗಳಿಂದ ಈ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

ಇದನ್ನೂ ಓದಿ:

Women Health: ಮುಟ್ಟಿನ ದಿನಗಳಲ್ಲಿ ಹೊಟ್ಟೆ ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ಸರಳ ವಿಧಾನಗಳು

Women Health: ಯುವತಿಯರಿಗಾಗಿಯೇ ಕೆಲವೊಂದಿಷ್ಟು ಟಿಪ್ಸ್​; ಹೊಟ್ಟೆಯ ಬೊಜ್ಜು ಕರಗಿಸಲು ಇಲ್ಲಿದೆ ಸುಲಭ ವಿಧಾನಗಳು

(Women Health Why Does Miscarriage happen know about these reasons check in kannada)

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ