Women Health: ನಿಮ್ಮ ಮಗು ಆರೋಗ್ಯವಾಗಿ ಮತ್ತು ಚುರುಕಾಗಿ ಬೆಳೆಯಲು ಗರ್ಭಿಣಿಯರಿಗಾಗಿ ಕೆಲವೊಂದಿಷ್ಟು ಟಿಪ್ಸ್​ಗಳು

ಗರ್ಭಾವಸ್ಥೆಯಲ್ಲಿ ಮಗುವನ್ನು ತಾಯಿ ಎಷ್ಟು ಹೆಚ್ಚು ಕಾಳಜಿ ಮಾಡುತ್ತಾಳೊ ಹಾಗೆಯೇ ಮಗು ಬೆಳವಣಿಗೆ ಹೊಂದುತ್ತದೆ. ಹೀಗಿರುವಾಗ ಗರ್ಭಿಣಿಯರು ತಮ್ಮ ಆರೋಗ್ಯದ ಕುರಿತಾಗಿ ಹೆಚ್ಚು ಗಮನವಹಿಸಬೇಕು.

Women Health: ನಿಮ್ಮ ಮಗು ಆರೋಗ್ಯವಾಗಿ ಮತ್ತು ಚುರುಕಾಗಿ ಬೆಳೆಯಲು ಗರ್ಭಿಣಿಯರಿಗಾಗಿ ಕೆಲವೊಂದಿಷ್ಟು ಟಿಪ್ಸ್​ಗಳು
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Aug 27, 2021 | 7:25 AM

ಗರ್ಭಾವಸ್ಥೆಯಲ್ಲಿ ಮಹಿಳೆ ಮಗುವಿನ ಎಲ್ಲಾ ಚಲನವಲನಗಳನ್ನು ಅನುಭವಿಸುತ್ತಾಳೆ. ಇಂತಹ ಸಮಯದಲ್ಲಿ ಆಕೆಯು ತನ್ನ ಮಗುವಿನೊಂದಿಗೆ ಒಂದು ಸುಂದರ ಸಂಬಂಧವನ್ನು ಪಡೆಯುತ್ತಾಳೆ. ಪ್ರತಿಯೊಬ್ಬ ಮಹಿಳೆಗೂ ಕೂಡಾ ತನ್ನ ಮಗು ಆರೋಗ್ಯಕರ ಮತ್ತು ಬುದ್ಧಿವಂತನಾಗಿ ಜನಿಸಲಿ ಎಂಬ ಆಸೆ ಇರುತ್ತದೆ. ಹೀಗಿರುವಾಗ ಗರ್ಭಿಣಿಯರು ಕೆಲವೊಂದಿಷ್ಟು ವಿಷಯಗಳನ್ನು ತಿಳಿಯಲೇಬೇಕು.

ಗರ್ಭಾವಸ್ಥೆಯಲ್ಲಿ ಮಗುವನ್ನು ತಾಯಿ ಎಷ್ಟು ಹೆಚ್ಚು ಕಾಳಜಿ ಮಾಡುತ್ತಾಳೊ ಹಾಗೆಯೇ ಮಗು ಬೆಳವಣಿಗೆ ಹೊಂದುತ್ತದೆ. ಹೀಗಿರುವಾಗ ಗರ್ಭಿಣಿಯರು ತಮ್ಮ ಆರೋಗ್ಯದ ಕುರಿತಾಗಿ ಹೆಚ್ಚು ಗಮನವಹಿಸಬೇಕು. ಜತೆಗೆ ಮಗು ಆರೋಗ್ಯಕರವಾಗಿ ಮತ್ತು ಚುರುಕಾಗಿ ಬೆಳೆಯಲು ಈ ಕೆಲವು ವಿಷಯಗಳನ್ನು ತಿಳಿಯಿರಿ.

ಗರ್ಭಾವಸ್ಥೆಯಲ್ಲಿ ಅತ್ಯಂತ ಮುಖ್ಯವಾದ ವಿಷಯವೆಂದರೆ ಸರಿಯಾದ ಆಹಾರ. ಗರ್ಭಾವಸ್ಥೆಯಲ್ಲಿ ತಾಯಿ ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಬೇಕು. ಮಗುವಿನ ಸರಿಯಾದ ಬೆಳವಣಿಗೆಗೆ ಒಮೆಗಾ 3 ಕೊಬ್ಬಿನಾಮ್ಲಗಳನ್ನು ಒಳಗೊಂಡಿರುವ ಆಹಾರವನ್ನು ಸೇವಿಸಿ. ಮಾಂಸಹಾರಿಗಳಾಗಿದ್ದರೆ ಮೀನು ಸೇವಿಸಬಹುದು. ಇಲ್ಲವೇ ಬಾದಾಮಿ, ಅಗಸೆಬೀಜದಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಸಿಗುತ್ತವೆ.

ಯೋಗ ಮಾಡುವುದು ತಾಯಿ ಮತ್ತು ಮಗುವಿನ ಸುರಕ್ಷತೆಯ ದೃಷ್ಟಿಯಿಂದ ಒಳ್ಳೆಯದು. ಆದರೆ ಯಾವುದೇ ಯೋಗಾಸನವನ್ನು ಮಾಡುವ ಮೊದಲು ವೈದ್ಯರಲ್ಲಿ ಸಲಹೆ ಪಡೆದುಕೊಳ್ಳುವುದು ಉತ್ತಮ. ಬಳಿಕ ವೈದ್ಯರು ಸೂಚಿಸಿರುವ ವ್ಯಾಯಾಮ ಪ್ರಕ್ರಿಯೆಯನ್ನು ಮುಂದುವರೆಸಿ.

ಮಗುವಿನ ಕಲಿಕೆಯು ತಾಯಿಯ ಗರ್ಭದಿಂದಲೇ ಆರಂಭವಾಗುತ್ತದೆ. ಗರ್ಭಾವಸ್ಥೆಯಲ್ಲಿ ತಾಯಿ ಮೆದುಳಿನ ಚಟುವಟಿಕೆಯನ್ನು ಮಾಡಬೇಕು. ಇದರಿಂದ ಮಗುವಿನ ಮನಸ್ಸು ಕೂಡಾ ತೀಕ್ಷ್ಣವಾಗುತ್ತದೆ. ಹಾಗೆಯೇ ತಾಯಿ ಒಳ್ಳೆಯ ಪುಸ್ತಕಗಳನ್ನು ಮತ್ತು ಕತೆಗಳನ್ನು ಓದುವುದು ಒಳ್ಳೆಯದು. ಬರೆಯುವ ಉತ್ಸಾಹವಿದ್ದರೆ ಗರ್ಭಾವಸ್ಥೆಯಲ್ಲಿ ಕಥೆ, ಕಾದಂಬರಿ, ಕವನಗಳನ್ನು ಬರೆಯಿರಿ. ಇದು ನಿಮ್ಮ ಹಾಗೂ ಮಗುವಿನ ಮನಸ್ಥಿತಿಯನ್ನು ಸುಧಾರಿಸುತ್ತದೆ.

ಸಾಧ್ಯವಾದಷ್ಟು ಒತ್ತಡದಿಂದ ದೂರವಿರಿ. ಒತ್ತಡವು ನಿಮ್ಮ ಮಗುವಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ನಿಮಗೆ ಖುಷಿ ಕೊಡುವ ಕೆಲಸಗಳನ್ನು ಮಾಡಿ. ಸಾಕಷ್ಟು ನಿದ್ರೆ ಮತ್ತು ವಿಶ್ರಾಂತಿ ಪಡೆಯಿರಿ.

ಇದನ್ನೂ ಓದಿ:

Women Health: ಗರ್ಭಪಾತಕ್ಕೆ ಕಾರಣಗಳೇನು? ಈ ಅಂಶಗಳನ್ನು ಮಹಿಳೆಯರು ತಿಳಿದಿರುವುದು ಒಳಿತು

Women Health: ಯುವತಿಯರಿಗಾಗಿಯೇ ಕೆಲವೊಂದಿಷ್ಟು ಟಿಪ್ಸ್​; ಹೊಟ್ಟೆಯ ಬೊಜ್ಜು ಕರಗಿಸಲು ಇಲ್ಲಿದೆ ಸುಲಭ ವಿಧಾನಗಳು

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ