AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Anaesthesia Day 2023: ಆಪರೇಷನ್​ಗೆ ಅನಸ್ತೇಷಿಯಾದಿಂದ ಏನು ಪ್ರಯೋಜನ? ಅರಿವಳಿಕೆಯ ಅಪಾಯಗಳೇನು?

ಅರಿವಳಿಕೆ ಕಂಡುಹಿಡಿಯುವ ಮೊದಲು, ಶಸ್ತ್ರಚಿಕಿತ್ಸೆಯನ್ನು ತೀರಾ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಮಾಡಲಾಗುತ್ತಿತ್ತು. ಆಗ ಅರಿವಳಿಕೆ ಇಲ್ಲದೆ ರೋಗಿಗೆ ಶಸ್ತ್ರಚಿಕಿತ್ಸೆ ಮಾಡಿದರೆ ಆ ಸಮಯದಲ್ಲಿ ರೋಗಿ ಅಸಹನೀಯ ನೋವನ್ನು ಅನುಭವಿಸಬೇಕಾಗಿತ್ತು. ರೋಗಿಯ ಕಿರುಚಾಟದ ನಡುವೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಬೇಕಾಗಿತ್ತು. ಇದು ಭಾವನಾತ್ಮಕ ಯಾತನೆಯನ್ನೂ ಉಂಟುಮಾಡುತ್ತಿತ್ತು.

World Anaesthesia Day 2023: ಆಪರೇಷನ್​ಗೆ ಅನಸ್ತೇಷಿಯಾದಿಂದ ಏನು ಪ್ರಯೋಜನ? ಅರಿವಳಿಕೆಯ ಅಪಾಯಗಳೇನು?
ಅನಸ್ತೇಷಿಯಾImage Credit source: iStock
ಸುಷ್ಮಾ ಚಕ್ರೆ
|

Updated on: Oct 18, 2023 | 11:48 AM

Share

ವಿಶ್ವ ಅನಸ್ತೇಷಿಯಾ (ಅರಿವಳಿಕೆ) ದಿನವನ್ನು ಪ್ರತಿ ವರ್ಷ ಅಕ್ಟೋಬರ್ 16ರಂದು ಆಚರಿಸಲಾಗುತ್ತದೆ. ಈ ದಿನದಂದು ಆರೋಗ್ಯ ಸೇವೆಗಳಲ್ಲಿ ಅನಸ್ತೇಷಿಯಾವನ್ನು ಬಳಸುವುದರ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗಿದೆ. ಅರಿವಳಿಕೆ ತಜ್ಞರ ಗೌರವಾರ್ಥವಾಗಿಯೂ ಈ ದಿನವನ್ನು ಆಚರಿಸಲಾಗುತ್ತದೆ. ಶಸ್ತ್ರಚಿಕಿತ್ಸೆಯನ್ನು ಸುಲಭಗೊಳಿಸುವಲ್ಲಿ ಅನಸ್ತೇಷಿಯಾ ತಜ್ಞರು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತಾರೆ. 1846ರ ಅ. 16ರಂದು ಅರಿವಳಿಕೆಯನ್ನು ಮೊದಲ ಬಾರಿಗೆ ಬಳಸಲಾಯಿತು. ಅರಿವಳಿಕೆಯ ಆವಿಷ್ಕಾರಕ್ಕೂ ಮೊದಲು ಶಸ್ತ್ರಚಿಕಿತ್ಸೆಯು ವೈದ್ಯರಿಗೆ ಮತ್ತು ರೋಗಿಗೆ ತುಂಬಾ ಕಷ್ಟಕರವಾಗಿತ್ತು ಮತ್ತು ನೋವಿನಿಂದ ಕೂಡಿರುತ್ತಿತ್ತು. ಅರಿವಳಿಕೆಯನ್ನು ಕಂಡುಹಿಡಿಯುವ ಮೊದಲು ಶಸ್ತ್ರಚಿಕಿತ್ಸೆಯನ್ನು ಹೇಗೆ ಮಾಡಲಾಯಿತು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

1846ರಲ್ಲಿ ಈ ದಿನದಂದು ಅರಿವಳಿಕೆಯನ್ನು ಮೊದಲ ಬಾರಿಗೆ ಯಶಸ್ವಿಯಾಗಿ ಬಳಸಲಾಯಿತು. ಈ ದಿನದಂದು ಈಥರ್ ಅನ್ನು ಅರಿವಳಿಕೆಯಾಗಿ ಹೇಗೆ ಬಳಸಬಹುದು ಎಂಬುದನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ಆದ್ದರಿಂದ ಅನೇಕ ದೇಶಗಳಲ್ಲಿ ಈ ದಿನವನ್ನು ಈಥರ್ ಡೇ ಎಂದೂ ಕರೆಯುತ್ತಾರೆ. ವೈದ್ಯಕೀಯ ಕ್ಷೇತ್ರದಲ್ಲಿನ ಈ ಮಹಾನ್ ಸಾಧನೆಯನ್ನು ಸ್ಮರಿಸುವುದಕ್ಕಾಗಿ ಈ ವಿಶೇಷ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ವೈದ್ಯರ ಎಡವಟ್ಟು, ಬಾಣಂತಿ ಜೀವ ತೆಗೆಯಿತಾ ಅನಸ್ತೇಶಿಯಾ?

ಈ ವರ್ಷದ ಥೀಮ್ “ಅನಸ್ತೇಷಿಯಾ ಮತ್ತು ಕ್ಯಾನ್ಸರ್ ಕೇರ್” ಆಗಿದೆ. ಈ ವಿಷಯದ ಮೂಲಕ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅರಿವಳಿಕೆ ಯಾವ ರೀತಿಯ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಬಗ್ಗೆ ವಿವರಿಸಲಾಗುತ್ತದೆ. ಭವಿಷ್ಯದಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅರಿವಳಿಕೆಯ ಸುರಕ್ಷಿತ ಬಳಕೆಯನ್ನು ಉತ್ತೇಜಿಸಲು ಈ ಥೀಮ್ ಅನ್ನು ಆಯ್ಕೆ ಮಾಡಲಾಗಿದೆ.

ಅನಸ್ತೇಷಿಯಾಕ್ಕೂ ಮೊದಲು ಶಸ್ತ್ರಚಿಕಿತ್ಸೆಯನ್ನು ಹೇಗೆ ಮಾಡಲಾಗುತ್ತಿತ್ತು?:

ಅರಿವಳಿಕೆ ಕಂಡುಹಿಡಿಯುವ ಮೊದಲು, ಶಸ್ತ್ರಚಿಕಿತ್ಸೆಯನ್ನು ತೀರಾ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಮಾಡಲಾಗುತ್ತಿತ್ತು. ಆಗ ಅರಿವಳಿಕೆ ಇಲ್ಲದೆ ರೋಗಿಗೆ ಶಸ್ತ್ರಚಿಕಿತ್ಸೆ ಮಾಡಿದರೆ ಆ ಸಮಯದಲ್ಲಿ ರೋಗಿ ಅಸಹನೀಯ ನೋವನ್ನು ಅನುಭವಿಸಬೇಕಾಗಿತ್ತು. ರೋಗಿಯ ಕಿರುಚಾಟದ ನಡುವೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಬೇಕಾಗಿತ್ತು. ಇದು ಭಾವನಾತ್ಮಕ ಯಾತನೆಯನ್ನೂ ಉಂಟುಮಾಡುತ್ತಿತ್ತು. ನಂತರದ ಶಸ್ತ್ರಚಿಕಿತ್ಸಕರು ಅಫೀಮಿನ ರಸವನ್ನು ರೋಗಿಯ ದೇಹಕ್ಕೆ ಹಚ್ಚುತ್ತಿದ್ದರು. ಇದು ಸ್ವಲ್ಪ ನೋವನ್ನು ಕಡಿಮೆ ಮಾಡುತ್ತಿತ್ತು. ಆದರೆ ಇದು ಆಪರೇಷನ್​ಗೆ ಹೆಚ್ಚು ಸಹಾಯಕವಾಗಲಿಲ್ಲ. ಇದಲ್ಲದೆ, ಡ್ವೆಲ್ ಎಂಬ ಜ್ಯೂಸ್ ಅನ್ನು ಸಹ ಬಳಸಲಾಗುತ್ತಿತ್ತು. ಇದನ್ನು ಕುಡಿದ ನಂತರ ರೋಗಿಗಳು ನಿದ್ರೆಗೆ ಜಾರುತ್ತಿದ್ದರು. ಆಗ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿತ್ತು.

1600ರ ವೇಳೆಗೆ ಅಫೀಮು ಮತ್ತು ಮದ್ಯವನ್ನು ಬೆರೆಸಿ ದ್ರವವನ್ನು ತಯಾರಿಸಲಾಯಿತು. ಇದು ನೋವಿನಿಂದ ಪರಿಹಾರವನ್ನು ನೀಡಿತು. ಈ ದ್ರವಗಳ ಪರಿಣಾಮವು ಅಲ್ಪಾವಧಿಗೆ ಮಾತ್ರ ಇರುತ್ತಿತ್ತು. ಇದರಿಂದಾಗಿ ವೈದ್ಯರು ಶಸ್ತ್ರಚಿಕಿತ್ಸೆಯನ್ನು ಬೇಗ ಮುಗಿಸಬೇಕಾಗಿತ್ತು. ಇದಾದ ನಂತರ 1846ರಲ್ಲಿ ಮೊದಲ ಬಾರಿಗೆ ಈಥರ್ ಅನ್ನು ಅರಿವಳಿಕೆಯಾಗಿ ಬಳಸಲಾಯಿತು. ಇದರ ನಂತರ, 1848ರಲ್ಲಿ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನೋವನ್ನು ಕಡಿಮೆ ಮಾಡಲು ಕ್ಲೋರೊಫಾರ್ಮ್ ಬಳಸಲಾಯಿತು.

ಇದನ್ನೂ ಓದಿ: Liver Health: ಆಲ್ಕೋಹಾಲ್ ಮಾತ್ರವಲ್ಲ ಈ ಆಹಾರಗಳು ಕೂಡ ಲಿವರ್​​​ನ ಆರೋಗ್ಯವನ್ನು ಹದಗೆಡಿಸಬಹುದು ಎಚ್ಚರ!

ಈ ರೀತಿ ಅನೇಕ ಪ್ರಯೋಗಗಳ ನಂತರ, ಆಧುನಿಕ ಅರಿವಳಿಕೆಯನ್ನು ಕಂಡುಹಿಡಿಯಲಾಯಿತು. ಇದು ಶಸ್ತ್ರಚಿಕಿತ್ಸೆಯನ್ನು ತುಂಬಾ ಸುಲಭಗೊಳಿಸಿತು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ರೋಗಿಗಳಿಗೆ ನೋವು ಸಹ ಗೊತ್ತಾಗುವುದಿಲ್ಲ.

ಅನಸ್ತೇಷಿಯಾದ ಅಡ್ಡಪರಿಣಾಮಗಳು ಮತ್ತು ಅಪಾಯಗಳೇನು?:

– ದೇಹದ ಉಷ್ಣತೆ ಕಡಿಮೆಯಾಗುವುದು

– ಮೂತ್ರ ವಿಸರ್ಜನೆಯಲ್ಲಿ ತೊಂದರೆ

– ಆಯಾಸ

– ತಲೆನೋವು

– ಗಂಟಲು ಕೆರೆತ

– ವಾಂತಿ

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?