AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Arthritis day 2023: ಯುವಕರೇ ಹೆಚ್ಚು ಸಂಧಿವಾತಕ್ಕೆ ಬಲಿಯಾಗುತ್ತಿದ್ದಾರೆ: ಡಾ. ಅಮಿತ್ ಪಂಕಜ್ ಅಗರ್ವಾಲ್

ಇತ್ತೀಚಿನ ದಿನಗಳಲ್ಲಿ ಯುವಕರು ಕೂಡ ಸಂಧಿವಾತಕ್ಕೆ ಬಲಿಯಾಗುತ್ತಿದ್ದಾರೆ. ಈ ರೋಗದ ಪ್ರಕರಣಗಳು 30 ರಿಂದ 40 ವರ್ಷ ವಯಸ್ಸಿನವರಲ್ಲಿಯೂ ಕಂಡುಬರುತ್ತವೆ. ಇದಕ್ಕೆ ಪ್ರಮುಖ ಕಾರಣ ಕಳಪೆ ಆಹಾರ ಪದ್ದತಿ ಹಾಗೂ ಹೆಚ್ಚುತ್ತಿರುವ ಬೊಜ್ಜು ಎಂದು ತಜ್ಞರು ಎಚ್ಚರಿಸುತ್ತಾರೆ.

World Arthritis day 2023: ಯುವಕರೇ ಹೆಚ್ಚು ಸಂಧಿವಾತಕ್ಕೆ ಬಲಿಯಾಗುತ್ತಿದ್ದಾರೆ: ಡಾ. ಅಮಿತ್ ಪಂಕಜ್ ಅಗರ್ವಾಲ್
World Arthritis day 2023Image Credit source: Pinterest
ಅಕ್ಷತಾ ವರ್ಕಾಡಿ
|

Updated on:Oct 12, 2023 | 4:26 PM

Share

ಕಳೆದ ಕೆಲವು ವರ್ಷಗಳಿಂದ, ಭಾರತದಲ್ಲಿ ಸಂಧಿವಾತದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಈಗ ಚಿಕ್ಕ ವಯಸ್ಸಿನಲ್ಲೇ ಈ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಸಂಧಿವಾತವನ್ನು ಸಾಮಾನ್ಯ ಭಾಷೆಯಲ್ಲಿ ರುಮಾಟಿಕ್ ಕಾಯಿಲೆ ಎಂದೂ ಕರೆಯುತ್ತಾರೆ. ಇದರ ಲಕ್ಷಣವೆಂದರೆ ಕೀಲುಗಳಲ್ಲಿ ಊತ ಇರುತ್ತದೆ. ಈ ರೋಗವು ಸಾಮಾನ್ಯವಾಗಿ ಮೊಣಕಾಲುಗಳು, ಪಾದಗಳು ಮತ್ತು ಕೈಗಳ ಮೇಲೆ ಪರಿಣಾಮ ಬೀರುತ್ತದೆ. ಸಂಧಿವಾತವನ್ನು ಹೇಗೆ ತಡೆಯಬಹುದು? ಈ ಬಗ್ಗೆ ಫೋರ್ಟಿಸ್ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಾದ ಡಾ. ಅಮಿತ್ ಪಂಕಜ್ ಅಗರ್ವಾಲ್ ನೀಡಿರುವ ಮಾಹಿತಿ ಇಲ್ಲಿದೆ.

ಸಂಧಿವಾತ ತಡೆಯಲು ಆರೋಗ್ಯಕರ ದೇಹದ ತೂಕವನ್ನು ಕಾಪಾಡಿಕೊಳ್ಳುವುದು ಮುಖ್ಯ. ಅಧಿಕ ತೂಕವು ಕೀಲುಗಳ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ, ಇದರಿಂದಾಗಿ ಸಂಧಿವಾತವು ಗಂಭೀರವಾಗಬಹುದು. ಸಂಧಿವಾತವನ್ನು ನಿಯಂತ್ರಿಸುವಲ್ಲಿ ಆರೋಗ್ಯಕರ ಆಹಾರ ಕೂಡ ಮುಖ್ಯ ಪಾತ್ರ ವಹಿಸುತ್ತದೆ. ಇದಕ್ಕಾಗಿ, ತರಕಾರಿಗಳು, ಹಣ್ಣುಗಳು ಮತ್ತು ಧಾನ್ಯಗಳನ್ನು ಸೇವಿಸಿ. ಸಂಸ್ಕರಿಸಿದ ಆಹಾರಗಳ ಸೇವನೆಯನ್ನು ತಪ್ಪಿಸಿ. ನೀವು ಕೀಲುಗಳಲ್ಲಿ ನೋವು ಅಥವಾ ಊತವನ್ನು ಅನುಭವಿಸಿದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಆರಂಭಿಕ ಚಿಕಿತ್ಸೆಯಿಂದ, ಈ ರೋಗವು ಗಂಭೀರವಾಗುವುದನ್ನು ತಡೆಯಬಹುದು. ಇದಲ್ಲದೆ, ಸಂಧಿವಾತ ರೋಗಿಯು ತನ್ನ ಅಗತ್ಯಗಳಿಗೆ ಅನುಗುಣವಾಗಿ ವೈಯಕ್ತಿಕ ಚಿಕಿತ್ಸೆಯನ್ನು ಪಡೆಯಬೇಕು. ಇದಕ್ಕಾಗಿ ನೀವು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಹೊಟ್ಟೆಯ ಕೊಬ್ಬು ಕರಗಿಸಲು ಮನೆಯಲ್ಲೇ ಸುಲಭವಾಗಿ ಮಾಡುವ ವ್ಯಾಯಾಮಗಳಿವು

ನೀವು ಕುಳಿತುಕೊಳ್ಳುವ ಭಂಗಿಯೂ ಸಂಧಿವಾತಕ್ಕೆ ಕಾರಣವಾಗಬಹುದು:

ನೀವು ದಿನಪೂರ್ತಿ ಒಂದೇ ಭಂಗಿಯಲ್ಲಿ ಕುಳಿತು ಕೆಲಸ ಮಾಡಿದರೆ, ಅದು ರಕ್ತ ಪರಿಚಲನೆಯನ್ನು ಕಡಿಮೆ ಮಾಡುತ್ತದೆ. ಇದು ಕೀಲುಗಳ ಮೇಲೆ ಪರಿಣಾಮ ಬೀರಬಹುದು, ಇದು ನಂತರ ಸಂಧಿವಾತಕ್ಕೆ ಕಾರಣವಾಗುತ್ತದೆ. ಅನೇಕ ಸಂದರ್ಭಗಳಲ್ಲಿ, ನಿರಂತರವಾಗಿ ಕುಳಿತುಕೊಳ್ಳುವುದರಿಂದ ಬೊಜ್ಜು ಹೆಚ್ಚಾಗುತ್ತದೆ, ಇದು ಸಂಧಿವಾತದ ಅಪಾಯವನ್ನು ಹೆಚ್ಚಿಸುತ್ತದೆ. ಹೆಚ್ಚುತ್ತಿರುವ ವಯಸ್ಸಿನೊಂದಿಗೆ ಈ ಅಪಾಯವು ಹೆಚ್ಚಾಗುತ್ತದೆ.

ಸಂಧಿವಾತ ತಡೆಗಟ್ಟುವುದು ಹೇಗೆ?

ಸಂಧಿವಾತವನ್ನು ತಡೆಗಟ್ಟಲು, ನಿಮ್ಮ ಆಹಾರದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ನಿಮ್ಮ ತೂಕವನ್ನು ನಿಯಂತ್ರಣದಲ್ಲಿಡಿ. ಇದಕ್ಕಾಗಿ, ಪ್ರತಿದಿನ ವ್ಯಾಯಾಮ ಮಾಡಿ. ವೈದ್ಯರ ಸಲಹೆಯಂತೆ ಆಹಾರ ಕ್ರಮ ತೆಗೆದುಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:25 pm, Thu, 12 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ