AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Autism Awareness Day 2024: ಸ್ವಲೀನತೆ ಹೊಂದಿದ ಮಕ್ಕಳಿಗೂ ಬೇಕು ಪೋಷಕರ ಕಾಳಜಿ

ಪ್ರತಿ ವರ್ಷ ಏಪ್ರಿಲ್ 2ರಂದು ವಿಶ್ವ ಆಟಿಸಂ ಜಾಗೃತಿ ದಿನ ಆಚರಿಸಲಾಗುತ್ತಿದೆ. ಬಾಲ್ಯದಲ್ಲಿಯೇ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಈ ಆಟಿಸಂ ಸಮಸ್ಯೆಯನ್ನು ಸಂಪೂರ್ಣವಾಗಿ ಗುಣಪಡಿಸಲಾಗುವುದಿಲ್ಲ. ಈ ಆರೋಗ್ಯ ಸಮಸ್ಯೆಯ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಿ ಮಕ್ಕಳ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಬಹುದು. ಹಾಗಾದ್ರೆ ವಿಶ್ವ ಆಟಿಸಂ ದಿನದ ಇತಿಹಾಸದ ಬಗೆಗಿನ ಮಾಹಿತಿಯು ಇಲ್ಲಿದೆ.

World Autism Awareness Day 2024: ಸ್ವಲೀನತೆ ಹೊಂದಿದ ಮಕ್ಕಳಿಗೂ ಬೇಕು ಪೋಷಕರ ಕಾಳಜಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: Ganapathi Sharma

Updated on: Apr 01, 2024 | 3:20 PM

ಜಗತ್ತಿನಲ್ಲಿ ಆಟಿಸಂ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಈ ಕಾಯಿಲೆಯ ಬಗ್ಗೆ ಬಹುತೇಕರಿಗೆ ಜ್ಞಾನವಿಲ್ಲ. ಆದರೆ ಈ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳು ಎಲ್ಲರಂತೆ ಇರುವುದಿಲ್ಲ. ಒಂದು ವೇಳೆ ಮಗುವಿಗೆ ಆಟಿಸಂ ಕಾಯಿಲೆಯಿದ್ದರೆ ಮೊದಲ ಲಕ್ಷಣ ಮಗು ಆರು ತಿಂಗಳಿದ್ದಾಗಲೇ ತಿಳಿಯುತ್ತದೆ. ಆದಾದ ಬಳಿಕ ಮೂರು ಅಥವಾ ನಾಲ್ಕನೇ ವರ್ಷದಲ್ಲಿ ಕಾಯಿಲೆಯ ಸ್ಪಷ್ಟ ಲಕ್ಷಣಗಳು ಹೆತ್ತವರ ಗಮನಕ್ಕೆ ಬರುತ್ತದೆ.

ಚುರುಕುತನದಿಂದ ಕೂಡಿರದ ಈ ಮಕ್ಕಳನ್ನು ನೋಡಿಕೊಳ್ಳಲು ಒಬ್ಬರು ಜೊತೆಯಿರಲೇಬೇಕು. ವಿಚಿತ್ರವಾದ ಹಾವ ಭಾವಗಳನ್ನು ಹೊಂದಿದ್ದು, ಮಾಡಿದ ಕೆಲಸವನ್ನು ಮತ್ತೆ ಮತ್ತೆ ಮಾಡುತ್ತಿರುತ್ತಾರೆ. ತಮ್ಮಷ್ಟಕ್ಕೆ ತಾವು ಮಾತನಾಡುವುದು, ನಗುವುದು, ಅಳುವುದು ಹೀಗೆ ಹಲವಾರು ರೀತಿಯ ವರ್ತನೆಗಳು ಕಾಣಿಸುತ್ತದೆ. ಆದರೆ ಇಂತಹ ಮಕ್ಕಳನ್ನು ಪೂರ್ಣ ಪ್ರಮಾಣದಲ್ಲಿ ಗುಣಪಡಿಸಲು ಸಾಧ್ಯವಿಲ್ಲ, ಇಂತಹದ್ದೇ ಚಿಕಿತ್ಸೆಯೆನ್ನುವುದು ಇಲ್ಲ. ಪ್ರಾರಂಭದಲ್ಲೇ ಈ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತಂದು ಚಿಕಿತ್ಸೆ ನೀಡಿದರೆ ಸಮಾಜದಿಂದ ಇಂತಹ ಮಕ್ಕಳು ದೂರ ಉಳಿಯಲು ಸಾಧ್ಯವಿಲ್ಲ. ಈ ಆಟಿಸಂ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 2 ರಂದು ವಿಶ್ವ ಆಟಿಸಂ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಆಟಿಸಂ ಜಾಗೃತಿ ದಿನದ ಇತಿಹಾಸ

ಆಟಿಸಂ ಸಮಸ್ಯೆ ಇರುವ ಮಕ್ಕಳನ್ನು ಎಲ್ಲರಂತೆ ನೋಡುವುದೇ ಕಡಿಮೆ. ಆಟಿಸಂ ಎಂದ ಕೂಡಲೇ ವಿಚಿತ್ರ ಎನ್ನುವಂತೆ ನೋಡುವವರೇ ಹೆಚ್ಚು. ಜನಸಾಮಾನ್ಯರಿಗೆ ಇರುವ ಈ ಕಾಯಿಲೆ ಕುರಿತಾಗಿನ ಪೂರ್ವಾಗ್ರಹಗಳು ನಿವಾರಣೆಯಾಗಬೇಕು ಎಂಬ ಉದ್ದೇಶದಿಂದ ವಿಶ್ವಸಂಸ್ಥೆಯು ಆಟಿಸಂ ಜಾಗೃತಿ ದಿನವನ್ನು ವಿಶ್ವಸಂಸ್ಥೆಯು ಡಿಸೆಂಬರ್ 18, 2007 ರಂದು ಘೋಷಣೆ ಮಾಡಿತು. ಅಂದಿನಿಂದ ಪ್ರತಿ ವರ್ಷ ವಿಶ್ವದಾದಂತ್ಯ ವಿಶ್ವ ಆಟಿಸಂಜಾಗೃತಿ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

Also Read: ಒಣ ಕೊಬ್ಬರಿ ತಿನ್ನುವುದರಿಂದ ಆಗುವ ಲಾಭಗಳೇನು? ಮಧುಮೇಹ ನಿಯಂತ್ರಣಕ್ಕೆ ಅದು ಒಳ್ಳೆಯದಾ?

ವಿಶ್ವ ಆಟಿಸಂ ಜಾಗೃತಿ ದಿನದ ಮಹತ್ವ

ಆಟಿಸಂ ಕಾಯಿಲೆಯ ಬಗೆಗಿರುವ ತಪ್ಪು ಕಲ್ಪನೆಯನ್ನು ದೂರ ಮಾಡಿ ಅರಿವು ಮೂಡಿಸುವ ಉದ್ದೇಶವನ್ನು ಈ ದಿನವು ಹೊಂದಿದೆ. ಈ ದಿನದಂದು ಸಾಮಾಜಿಕ ಸಂಸ್ಥೆಗಳು, ವೈದ್ಯಕೀಯ ಸಂಸ್ಥೆಗಳು ಆಟಿಸಂ ಕಾಯಿಲೆಯನ್ನು ಹೊಂದಿರುವ ಮಕ್ಕಳ ಲಾಲನೆ ಪಾಲನೆ, ಅವರಿಗೆ ನೀಡಬೇಕಾದ ತರಬೇತಿಗಳು, ಥೆರಪಿಯ ಕುರಿತಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತವೆ.

ಆರೋಗ್ಯ ಕುರಿತಾದ ಹೆಚ್ಚಿನ ಲೇಖನಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ