Sign In

By signing in or creating an account, you agree with Associated Broadcasting Company's Terms & Conditions and Privacy Policy.

World Brain Tumour Day 2021: ಕೊವಿಡ್​ ಸಮಯದಲ್ಲಿ ಬ್ರೈನ್​ ಟ್ಯೂಮರ್​ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ

ಸಾಂಕ್ರಾಮಿಕದ ಸಮಯದಲ್ಲಿ ಬ್ರೈನ್​ ಟ್ಯೂಮರ್​ ಹೊಂದಿರುವ ರೋಗುಗಳು ಸೋಂಕು, ರಕ್ತದೊತ್ತಡದಂತಹ ಸಮಸ್ಯೆಗಳಿಂದ ದೂರವಿರುವುದು ಅತ್ಯಂತ ಮಹತ್ವದ್ದಾಗಿದೆ. ಇದಕ್ಕಾಗಿ ನಿಮ್ಮ ಆಹಾರ ವ್ಯವಸ್ಥೆಯನ್ನು ಮತ್ತು ಜೀವನದಲ್ಲಿ ಕೆಲವು ಬದಲಾವಣೆಗಳು ಮುಖ್ಯ.

World Brain Tumour Day 2021: ಕೊವಿಡ್​ ಸಮಯದಲ್ಲಿ ಬ್ರೈನ್​ ಟ್ಯೂಮರ್​ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ
World Brain Tumour Day 2021
Follow us
TV9 Web
| Updated By: shruti hegde

Updated on: Jun 08, 2021 | 10:26 AM

ಮಾನಸಿಕ ನೆಮ್ಮದಿಯನ್ನು ಕಿತ್ತುಕೊಳ್ಳುವಂತಹ ರೋಗಗಳು ಬಾರದಂತೆ ಎಚ್ಚರವಹಿಸುವುದು ಪ್ರಸ್ತುತ ಸಮಯದಲ್ಲಿ ಅವಶ್ಯಕವಾಗಿದೆ. ಅದರಲ್ಲಿಯೂ ಮಿದುಳಿನಲ್ಲಿ ಬೆಳೆಯುವ ಕ್ಯಾನ್ಸರ್​ ಗೆಡ್ಡೆ ಕೇಳಿದರೆ ಭಯ ಬೀಳುವವರೇ ಹೆಚ್ಚು. ಹಾಗಾಗಿ ಈ ಕುರಿತಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್​ 8ರಂದು ಪ್ರತಿ ವರ್ಷ ವಿಶ್ವ ಬ್ರೈನ್​ ಟ್ಯೂಮರ್​ ದಿನವನ್ನು ಆಚರಿಸಲಾಗುತ್ತದೆ. ಕ್ಯಾನ್ಸರ್​ನಲ್ಲಿ ಪ್ರತಿಯೊಂದು ಪ್ರಕರಣಗಳೂ ಕೂಡಾ ವಿಭಿನ್ನವಾಗಿರುವುದರಿಂದ ಚಿಕಿತ್ಸೆಯು ಒಂದು ಪ್ರಕರಣದಿಂದ ಮತ್ತೊಂದು ಪ್ರಕರಣಕ್ಕೆ ವಿಭಿನ್ನವಾಗಿರುತ್ತದೆ. ಹಾಗಾಗಿ ಜೀವಕ್ಕೆ ಅಪಾಯಕಾರಿಯಾದ ಮಿದುಳಿನ ಕ್ಯಾನ್ಸರ್​ಗೆ ಸಮಯೋಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದು ಬಹಳ ಮುಖ್ಯವಾಗಿದೆ.

ಕೀಮೋಥೆರಪಿ ಮತ್ತು ಆರೋಗ್ಯದ ಕುರಿತಾದ ಕಾಳಜಿ ಪ್ರಸ್ತುತ ಸಮಯದಲ್ಲಿ ಕೊರೊನಾ ಸೋಂಕು ಹರಡುವಿಕೆಯಿಂದ ಇತರ ರೋಗದಿಂದ ಬಳಲುತ್ತಿರುವವರು ಬಹಳ ಎಚ್ಚರಿಕೆಯಿಂದ ಇರುವುದು ಉತ್ತಮ. ಕ್ಯಾನ್ಸರ್​ ಚಿಕಿತ್ಸೆಯ ಒಂದು ಭಾಗವಾದ ಕೀಮೋಥೆರಪಿ ಮಾನವನಲ್ಲಿನ ರೋಗ ನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಆದ್ದರಿಂದ ಕೊವಿಡ್​ 19 ಸೋಂಕಿಗೆ ಒಳಗಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಪ್ರಸ್ತುತ, ಕ್ಯಾನ್ಸರ್​​ ರೋಗಿಗಳಲ್ಲಿ ಕೀಮೋಥೆರಪಿಯನ್ನು ಬದಲಾಯಿಸುವ ಯಾವುದೇ ಪುರಾವೆಗಳು ಹೊರಬಂದಿಲ್ಲ. ಹಾಗಿರುವಾಗ ಆರೋಗ್ಯದ ಕುರಿತಾಗಿ ಹೆಚ್ಚು ಎಚ್ಚರಿಕೆಯಿಂದಿರಿ.

ಆರೋಗ್ಯದ ದೃಷ್ಟಿಯಿಂದ ಬದಲಾಯಿಕೊಳ್ಳಬೇಕಾದ ವಿಧಾನಗಳು ಸಾಂಕ್ರಾಮಿಕದ ಸಮಯದಲ್ಲಿ ಬ್ರೈನ್​ ಟ್ಯೂಮರ್​ ಹೊಂದಿರುವ ರೋಗಿಗಳು ಸೋಂಕು, ರಕ್ತದೊತ್ತಡದಂತಹ ಸಮಸ್ಯೆಗಳಿಂದ ದೂರವಿರುವುದು ಅತ್ಯಂತ ಮಹತ್ವದ್ದಾಗಿದೆ. ಇದಕ್ಕಾಗಿ ನಿಮ್ಮ ಆಹಾರ ವ್ಯವಸ್ಥೆಯನ್ನು ಮತ್ತು ಜೀವನದಲ್ಲಿ ಕೆಲವು ಬದಲಾವಣೆಗಳು ಮುಖ್ಯ.

* ಆರೋಗ್ಯಕರ ಸಮತೋತನ ಆಹಾರ ಪದ್ಧತಿಯನ್ನು ಅನುಸರಿಸಿ * ಮಾನಸಿಕ ಒತ್ತಡವಿಲ್ಲದೇ ಅನಗತ್ಯ ಚಿಂತೆಯನ್ನು ದೂರವಾಡಿಕೊಳ್ಳಲು ವ್ಯಾಯಾಮ, ಧ್ಯಾನದಲ್ಲಿ ತೊಡಗಿಕೊಳ್ಳಿ * ಸರಿಯಾಗಿ ನಿದ್ರೆ ಮಾಡಿ. ಉತ್ತಮ ನಿದ್ರೆಯು ಔಷಧಿಯಷ್ಟೇ ಮುಖ್ಯವಾಗಿದೆ.

ವಿಶೆಷವಾಗಿ ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಶಸ್ತ್ರಚಿಕಿತ್ಸೆಯ ನಂತರ ಕಿಮೋಥೆರಪಿಯನ್ನು ಸೂಚಿಸಬಹುದು. ಹಾಗಿರುವಾಗ ರೋಗಿಗಳನ್ನು ಕೊವಿಡ್​ 19 ಸೋಂಕಿನಿಂದ ದೂರವಿಡುವುದರ ಕುರಿತಾಗಿಯೂ ಮನೆಯ ಸದಸ್ಯರಿಗೆ ತರಬೇತಿ ನೀಡುವುದು ಅಥವಾ ಜಾಗೃತಿ ಮೂಡಿಸುವುದು ಪ್ರಸ್ತುತ ಸಮಯದಲ್ಲಿ ಅತ್ಯವಶ್ಯಕವಾಗಿದೆ.

ಇದನ್ನೂ ಓದಿ:

ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ‘ಮಿಸ್ಸಿ’ ಸಮಸ್ಯೆ, ಬಾಗಲಕೋಟೆಯಲ್ಲಿ ಐವರಿಗೆ ಚಿಕಿತ್ಸೆ

ನಿಜವಾಯ್ತು ಬಬಲಾದಿ ಮಠದ ಕೊರೊನಾ ಭವಿಷ್ಯ, ದರ್ಶನಕ್ಕೆ ಮುಗಿಬಿದ್ದ ಭಕ್ತರು

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು