AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Chocolate Day: ಲೈಂಗಿಕ ಆಸಕ್ತಿ ಹೆಚ್ಚಿಸಿಕೊಳ್ಳಲು ಬಯಸುತ್ತೀರಾ, ಡಾರ್ಕ್ ಚಾಕೊಲೇಟ್ ಸೇವನೆ ಮಾಡಿ

ಸಂಶೋಧನೆಗಳ ಪ್ರಕಾರ ಚಾಕೊಲೇಟ್ ಸೇವನೆ ಮಾಡಿ ಲೈಂಗಿಕ ಕ್ರಿಯೆ ನಡೆಸುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದೆ. ಜೊತೆಗೆ ಡಾರ್ಕ್ ಚಾಕೊಲೇಟ್ ಸೇವನೆಯು ವ್ಯಕ್ತಿಯಲ್ಲಿ ಪ್ರೀತಿಯ ಭಾವನೆ ಹೆಚ್ಚಿಸುತ್ತದೆ ಎಂದು ಕೆಲವು ಸಂಶೋಧನೆಗಳು ಕಂಡುಕೊಂಡಿವೆ. ಹಾಗಾದರೆ ದಂಪತಿಗಳು ಯಾವಾಗ ಚಾಕೊಲೇಟ್ ಸೇವನೆ ಮಾಡಬೇಕು? ಏನೆಲ್ಲಾ ಪ್ರಯೋಜನಗಳಿವೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

World Chocolate Day: ಲೈಂಗಿಕ ಆಸಕ್ತಿ ಹೆಚ್ಚಿಸಿಕೊಳ್ಳಲು ಬಯಸುತ್ತೀರಾ, ಡಾರ್ಕ್ ಚಾಕೊಲೇಟ್ ಸೇವನೆ ಮಾಡಿ
Dark chocolate
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 07, 2024 | 6:32 PM

Share

ಚಾಕೊಲೇಟ್ ರುಚಿಯ ಜೊತೆಗೆ ಮನಸ್ಸಿಗೆ ಸಂತೋಷ ನೀಡುತ್ತದೆ. ಅದಕ್ಕಾಗಿಯೇ ಹೆಚ್ಚಿನ ಜನರಿಗೆ ಚಾಕೊಲೇಟ್ ನಿಂದ ಮಾಡಿದ ಐಸ್ ಕ್ರೀಮ್ ಆಗಿರಲಿ ಅಥವಾ ಕೇಕ್ ಆಗಿರಲಿ, ಅವರು ತುಂಬಾ ಇಷ್ಟಪಟ್ಟು ತಿನ್ನುತ್ತಾರೆ. ಅದರಲ್ಲಿಯೂ ಹುಡುಗಿಯರಿಗೆ ಚಾಕೊಲೇಟ್ ಎಂದರೆ ಸಾಮಾನ್ಯವಾಗಿ ತುಂಬಾ ಇಷ್ಟವಾಗಿರುತ್ತದೆ. ಇನ್ನು ಕೆಲವು ಸಂಶೋಧನೆಗಳ ಪ್ರಕಾರ ಚಾಕೊಲೇಟ್ ಸೇವನೆ ಮಾಡಿ ಲೈಂಗಿಕ ಕ್ರಿಯೆ ನಡೆಸುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದೆ. ಜೊತೆಗೆ ಡಾರ್ಕ್ ಚಾಕೊಲೇಟ್ ಸೇವನೆಯು ವ್ಯಕ್ತಿಯಲ್ಲಿ ಪ್ರೀತಿಯ ಭಾವನೆ ಹೆಚ್ಚಿಸುತ್ತದೆ ಎಂದು ಕೆಲವು ಸಂಶೋಧನೆಗಳು ಕಂಡುಕೊಂಡಿವೆ. ಹಾಗಾದರೆ ದಂಪತಿಗಳು ಯಾವಾಗ ಚಾಕೊಲೇಟ್ ಸೇವನೆ ಮಾಡಬೇಕು? ಏನೆಲ್ಲಾ ಪ್ರಯೋಜನಗಳಿವೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಲೈಂಗಿಕ ಬಯಕೆಯನ್ನು ಹೆಚ್ಚಿಸುತ್ತದೆ:

ತಜ್ಞರು ಹೇಳುವ ಪ್ರಕಾರ ಚಾಕೊಲೇಟ್‌ನಲ್ಲಿ ಫೆನೈಲೆಥೈಲಮೈನ್ ಎಂಬ ರಾಸಾಯನಿಕವಿದ್ದು ಇದನ್ನು ಪ್ರೀತಿಯ ರಾಸಾಯನಿಕ ಅಥವಾ ಲವ್ ಕೆಮಿಕಲ್ ಎಂದೂ ಕರೆಯುತ್ತಾರೆ. ಹಾಗಾಗಿ ಇದರ ಸೇವನೆ ಮಾಡುವುದು ದೇಹಕ್ಕೆ ಒಳ್ಳೆಯದು. ಇನ್ನು ಮಹಿಳೆಯರು ಚಾಕೊಲೇಟ್ ಸೇವನೆ ಮಾಡುವುದರಿಂದ ಹೆಚ್ಚು ಸಂತೋಷವಾಗಿರುತ್ತಾರೆ. ಅದರಲ್ಲಿಯೂ ಲೈಂಗಿಕ ಕ್ರಿಯೆ ನಡೆಸುವ ಮೊದಲು ಚಾಕೊಲೇಟ್ ಸೇವನೆ ಮಾಡುವುದು ಒಳ್ಳೆಯದು, ಏಕೆಂದರೆ ಡಾರ್ಕ್ ಚಾಕೊಲೇಟ್ ಸೇವನೆ ಉತ್ತಮ ಪರಾಕಾಷ್ಠೆ ಪಡೆಯಲು ಸಾಧ್ಯವಾಗುತ್ತದೆ ಎಂದು ಸಂಶೋಧನೆಗಳು ಹೇಳುತ್ತವೆ. ಹಾಗಾಗಿ ಮಹಿಳೆಯರಿಗೆ ಮೂಡ್ ಬರಿಸಲು ಚಾಕೊಲೇಟ್ ತುಂಬಾ ಪ್ರಯೋಜನಕಾರಿಯಾಗಿದೆ. ಆದರೆ ಪ್ರತಿದಿನ ಚಾಕೊಲೇಟ್ ಸೇವನೆ ಒಳ್ಳೆಯದಲ್ಲ. ಏಕೆಂದರೆ ಇದರಲ್ಲಿ ಕೆಫೀನ್ ಅಂಶವಿದ್ದು ಹೆಚ್ಚು ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಇದನ್ನೂ ಓದಿ: ಹೋಮ್ ಮೇಡ್ ಚಾಕೊಲೇಟ್ ಸವಿಯಬೇಕಾದ್ರೆ ಈ ಸ್ಥಳಗಳಲ್ಲಿ ತಪ್ಪದೇ ಭೇಟಿ ನೀಡಿ

ಲೈಂಗಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ:

ಪುರುಷರು ಸಂಭೋಗದ ಮೊದಲು ಚಾಕೊಲೇಟ್ ಸೇವನೆ ಮಾಡುವುದು ಕೂಡ ಒಳ್ಳೆಯದು, ಇದರಿಂದ ಅವರ ತ್ರಾಣ ಹೆಚ್ಚಾಗುವುದಲ್ಲದೆ ಹೆಚ್ಚು ಸಮಯದವರೆಗೆ ಸಂಭೋಗಿಸಬಹುದು ಎಂದು ಹೇಳಲಾಗುತ್ತದೆ. ಅಂದರೆ, ಚಾಕೊಲೇಟ್ ತಿನ್ನುವುದು ಪುರುಷರ ಲೈಂಗಿಕ ಕಾರ್ಯಕ್ಷಮತೆ ಸುಧಾರಿಸುತ್ತದೆ. ಹಾಗಾಗಿ ದಂಪತಿ ಲೈಂಗಿಕ ಕ್ರಿಯೆ ನಡೆಸುವ ಮೊದಲು ಚಾಕೊಲೇಟ್‌ ತಿನ್ನುವುದು ಒಳ್ಳೆಯದು. ಅಲ್ಲದೆ ಡಾರ್ಕ್ ಚಾಕೊಲೇಟ್ ಸೇವನೆ ಲೈಂಗಿಕ ಬಯಕೆಯನ್ನು ಹೆಚ್ಚಿಸುವುದಕ್ಕೂ ಸಹಕಾರಿಯಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬರಬೇಕಿದ್ದ 'ಕೈ' ಶಾಸಕರ ಪ್ರವಾಸ ರದ್ದು
ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬರಬೇಕಿದ್ದ 'ಕೈ' ಶಾಸಕರ ಪ್ರವಾಸ ರದ್ದು
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ