ವಿಶ್ವ ಗರ್ಭನಿರೋಧಕ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ, ಮಹತ್ವ ತಿಳಿಯಿರಿ

World Contraception Day 2024: ಅಂಕಿ ಅಂಶಗಳ ಪ್ರಕಾರ, ಹೆಚ್ಚಿನ ಮಹಿಳೆಯರು ತಜ್ಞರನ್ನು ಸಂಪರ್ಕಿಸದೆ ಗರ್ಭನಿರೋಧಕ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಅದರ ಪರಿಣಾಮವಾಗಿ, ಅವರು ಭವಿಷ್ಯದಲ್ಲಿ ಮತ್ತೆ ಗರ್ಭಧರಿಸಲು ಸಾಧ್ಯವಾಗದಿರಬಹುದು. ಜೊತೆಗೆ ಇತರ ಆರೋಗ್ಯ ಸಮಸ್ಯೆಗಳನ್ನು ಸಹ ಎದುರಿಸಬೇಕಾಗಿ ಬರಬಹುದು. ಆಸ್ಪತ್ರೆಗಳಲ್ಲಿ ಇಂತಹ ಅನೇಕ ಪ್ರಕರಣಗಳು ಕಂಡುಬರುತ್ತಿದೆ. ಮಹಿಳೆಯರು ಸರಿಯಾದ ಸಮಾಲೋಚನೆಯಿಲ್ಲದೆ ಗರ್ಭನಿರೋಧಕ ಔಷಧಿಗಳನ್ನು ತೆಗೆದುಕೊಳ್ಳುವುದು ಗರ್ಭಧರಿಸಲು ಅಸಮರ್ಥತೆಗೆ ಕಾರಣವಾಗುತ್ತದೆ. ಈ ಎಲ್ಲಾ ಕಾರಣಗಳಿಂದ ವಿಶ್ವ ಗರ್ಭನಿರೋಧಕ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ 26 ರಂದು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ಕುಟುಂಬ ಯೋಜನೆ ಮತ್ತು ಗರ್ಭನಿರೋಧಕದ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಮೀಸಲಿಡಲಾಗಿದೆ. ಮಹಿಳೆಯರು ಮತ್ತು ಪುರುಷರಿಗೆ ಸುರಕ್ಷಿತ ಮತ್ತು ಪರಿಣಾಮಕಾರಿ ಗರ್ಭನಿರೋಧಕ ವಿಧಾನಗಳ ಬಗ್ಗೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿದೆ.

ವಿಶ್ವ ಗರ್ಭನಿರೋಧಕ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ, ಮಹತ್ವ ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 26, 2024 | 9:24 AM

ಇತ್ತೀಚಿನ ವರ್ಷಗಳಲ್ಲಿ ಗರ್ಭನಿರೋಧಕ ಔಷಧಿಗಳ ಬಳಕೆ ಹೆಚ್ಚಾಗುತ್ತಿದೆ. ಆದರೆ ತಜ್ಞರ ಸಲಹೆಯಿಲ್ಲದೆ ಇದರ ಬಳಕೆ ಮಾಡುವುದು ಹಾನಿಕಾರಕವಾಗಿದೆ. ಅಂಕಿ ಅಂಶಗಳ ಪ್ರಕಾರ, ಹೆಚ್ಚಿನ ಮಹಿಳೆಯರು ತಜ್ಞರನ್ನು ಸಂಪರ್ಕಿಸದೆ ಗರ್ಭನಿರೋಧಕ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಅದರ ಪರಿಣಾಮವಾಗಿ, ಅವರು ಭವಿಷ್ಯದಲ್ಲಿ ಮತ್ತೆ ಗರ್ಭಧರಿಸಲು ಸಾಧ್ಯವಾಗದಿರಬಹುದು. ಜೊತೆಗೆ ಇತರ ಆರೋಗ್ಯ ಸಮಸ್ಯೆಗಳನ್ನು ಸಹ ಎದುರಿಸಬೇಕಾಗಿ ಬರಬಹುದು. ಆಸ್ಪತ್ರೆಗಳಲ್ಲಿ ಇಂತಹ ಅನೇಕ ಪ್ರಕರಣಗಳು ಕಂಡುಬರುತ್ತಿದೆ. ಮಹಿಳೆಯರು ಸರಿಯಾದ ಸಮಾಲೋಚನೆಯಿಲ್ಲದೆ ಗರ್ಭನಿರೋಧಕ ಔಷಧಿಗಳನ್ನು ತೆಗೆದುಕೊಳ್ಳುವುದು ಗರ್ಭಧರಿಸಲು ಅಸಮರ್ಥತೆಗೆ ಕಾರಣವಾಗುತ್ತದೆ. ಈ ಎಲ್ಲಾ ಕಾರಣಗಳಿಂದ ವಿಶ್ವ ಗರ್ಭನಿರೋಧಕ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ 26 ರಂದು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ಕುಟುಂಬ ಯೋಜನೆ ಮತ್ತು ಗರ್ಭನಿರೋಧಕದ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಮೀಸಲಿಡಲಾಗಿದೆ. ಮಹಿಳೆಯರು ಮತ್ತು ಪುರುಷರಿಗೆ ಸುರಕ್ಷಿತ ಮತ್ತು ಪರಿಣಾಮಕಾರಿ ಗರ್ಭನಿರೋಧಕ ವಿಧಾನಗಳ ಬಗ್ಗೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿದೆ.

ಈ ದಿನದ ಇತಿಹಾಸ ಮತ್ತು ಉದ್ದೇಶ?

ವಿಶ್ವ ಗರ್ಭನಿರೋಧಕ ದಿನವನ್ನು ಮೊದಲ ಬಾರಿಗೆ 2007 ರಲ್ಲಿ ಆಚರಿಸಲಾಯಿತು. ವಿಶ್ವಾದ್ಯಂತ ಗರ್ಭನಿರೋಧಕದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಕುಟುಂಬ ಯೋಜನೆಯ ಪ್ರಾಮುಖ್ಯತೆಯ ಬಗ್ಗೆ ಜನರಿಗೆ ಶಿಕ್ಷಣ ನೀಡುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿತ್ತು. ಗರ್ಭನಿರೋಧಕ ವಿಧಾನಗಳ ಲಭ್ಯತೆಯ ಕೊರತೆಯಿಂದಾಗಿ, ಲಕ್ಷಾಂತರ ಮಹಿಳೆಯರು ಅನಗತ್ಯ ಗರ್ಭಧಾರಣೆ ಮತ್ತು ಸಂಬಂಧಿತ ತೊಡಕುಗಳನ್ನು ಎದುರಿಸುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ತಜ್ಞರ ಸಲಹೆಯಿಲ್ಲದೆ ಗರ್ಭನಿರೋಧಕ ಔಷಧಿಗಳ ಬಳಕೆ ಹೆಚ್ಚಾಗುತ್ತಿದೆ ಹಾಗಾಗಿ ಈ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ.

ತಜ್ಞರ ಅಭಿಪ್ರಾಯವೇನು?

ಹಿರಿಯ ಮಹಿಳಾ ಸ್ತ್ರೀರೋಗ ತಜ್ಞೆ ಡಾ. ಅನಿತಾ ನೇಗಿ ಅವರು ಹೇಳುವ ಪ್ರಕಾರ, ಈ ದಿನವನ್ನು ಆಚರಿಸುವ ಉದ್ದೇಶವು ಸಾಮಾನ್ಯವಾಗಿ ಜನರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ, ಅವರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಗರ್ಭನಿರೋಧಕದಲ್ಲಿ ಅನೇಕ ವಿಧಾನಗಳಿದ್ದು ಮಹಿಳೆಗೆ ಯಾವುದು ಸೂಕ್ತ ಎಂಬುದನ್ನು ತಜ್ಞರ ಸಲಹೆ ಮೂಲಕವೇ ತೆಗೆದುಕೊಳ್ಳಬೇಕು. ಸಾಮಾನ್ಯವಾಗಿ, ತಜ್ಞರನ್ನು ಸಂಪರ್ಕಿಸದೆ, ಮಹಿಳೆಯರು ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ, ಇದು ಗಂಭೀರ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು. ಈ ಔಷಧಿಗಳು ಒಳ್ಳೆಯದು, ಆದರೆ ಅಪೇಕ್ಷಿತ ಫಲಿತಾಂಶ ಪಡೆಯಲು ಅವುಗಳ ಸರಿಯಾದ ಬಳಕೆ ಅತ್ಯಗತ್ಯ. ಅನೇಕ ಬಾರಿ, ಮಹಿಳೆಯರು ಎರಡು ತಿಂಗಳ ಗರ್ಭಿಣಿಯಾಗಿದ್ದರೂ ಸಹ ಔಷಧಿ ತೆಗೆದುಕೊಳ್ಳುತ್ತಾರೆ. ಇದು ತುಂಬಾ ಅಪಾಯಕಾರಿ. ಹೆಚ್ಚುವರಿಯಾಗಿ, ಮಹಿಳೆಯರು ದೀರ್ಘಕಾಲದಿಂದ ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿರುವ ಪ್ರಕರಣಗಳೂ ಇವೆ. ಇದು ಭವಿಷ್ಯದಲ್ಲಿ ನಕಾರಾತ್ಮಕ ಪರಿಣಾಮಗಳನ್ನು ಸಹ ಉಂಟುಮಾಡಬಹುದು, ಏಕೆಂದರೆ ಪ್ರತಿ ಔಷಧಿಯು ಕೆಲವು ಅಡ್ಡಪರಿಣಾಮಗಳನ್ನು ಹೊಂದಿರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ವಿರಾಟ್ ಕೊಹ್ಲಿ ಮಾಂಸಾಹಾರಿಯಿಂದ ಸಸ್ಯಾಹಾರಿಯಾಗಲು ಕಾರಣವಾದ ಆರೋಗ್ಯ ಸಮಸ್ಯೆ ಯಾವುದು?

ಕುಟುಂಬ ಯೋಜನೆ ಔಷಧಿಗಳನ್ನು ಪ್ರಾರಂಭಿಸಬೇಕಾದರೆ, ಮೊದಲು ಮಹಿಳಾ ತಜ್ಞರೊಂದಿಗೆ ಸಮಾಲೋಚಿಸಿ, ನಂತರ ಔಷಧಿಗಳನ್ನು ಪ್ರಾರಂಭಿಸಿ ಎಂದು ಅವರು ಸಲಹೆ ನೀಡಿದರು. ಈಗ ಪ್ರತಿ 3 ತಿಂಗಳಿಗೊಮ್ಮೆ ಮತ್ತು ನಂತರ ಪ್ರತಿ 6 ತಿಂಗಳಿಗೊಮ್ಮೆ ತೆಗೆದುಕೊಳ್ಳಬೇಕಾದ ಹೊಸ ಔಷಧಿಗಳಿವೆ. ಇದಲ್ಲದೆ, ವಾರಕ್ಕೊಮ್ಮೆ ಅಥವಾ ನಿಯಮಿತವಾಗಿ ತೆಗೆದುಕೊಳ್ಳಬೇಕಾದ ಇತರ ಔಷಧಿಗಳಿವೆ. ಇದು ಮಹಿಳೆಗೆ ಯಾವುದು ಸೂಕ್ತ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ