AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Hemophilia Day 2024: ರಕ್ತಸ್ರಾವ ನಿಲ್ಲುತ್ತಿಲ್ಲವೇ, ಈ ರೋಗದ ಲಕ್ಷಣವಾಗಿರಬಹುದು ಜೋಕೆ!

ಇತ್ತೀಚೆಗಿನ ದಿನಗಳಲ್ಲಿ ಹಲವಾರು ಆರೋಗ್ಯ ಸಮಸ್ಯೆ ಗಳು ಕಾಡುತ್ತಿದೆ. ಅಂತಹ ಸಮಸ್ಯೆಗಳ ಸಾಲಿಗೆ ʼಹಿಮೋಫಿಲಿಯಾʼ ರಕ್ತಸ್ರಾವಕ್ಕೆ ಸಂಬಂಧಿಸಿದ ಸಮಸ್ಯೆ ಕೂಡ ಒಂದು. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 17 ರಂದು ವಿಶ್ವ ಹಿಮೋಫಿಲಿಯಾ ದಿನʼವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

World Hemophilia Day 2024: ರಕ್ತಸ್ರಾವ ನಿಲ್ಲುತ್ತಿಲ್ಲವೇ, ಈ ರೋಗದ ಲಕ್ಷಣವಾಗಿರಬಹುದು ಜೋಕೆ!
World Hemophilia Day 2024
ಸಾಯಿನಂದಾ
| Edited By: |

Updated on: Apr 16, 2024 | 8:48 PM

Share

ಹಿಮೋಫಿಲಿಯಾ ಕಾಯಿಲೆಯೂ ಇರುವವರಲ್ಲಿ ರಕ್ತ ಹೆಪ್ಪುಗಟ್ಟುವುದು ನಿಧಾನವಾಗುತ್ತದೆ. ಸಣ್ಣ ಪುಟ್ಟ ಗಾಯಗಳಾದಾಗ ರಕ್ತಸ್ರಾವವು ನಿಲ್ಲುವುದಿಲ್ಲ. ಅನುವಂಶೀಯವಾಗಿ ಈ ಕಾಯಿಲೆಯೂ ಇದಾಗಿದ್ದು, ಹೆಚ್ಚಿನವರಿಗೆ ಹಿಮೋಫಿಲಿಯಾ ಕಾಯಿಲೆಯ ಬಗ್ಗೆ ಅಷ್ಟಾಗಿ ತಿಳಿದಿಲ್ಲ. ಇದನ್ನು ಕುಸುಮ ರೋಗ ಎಂದು ಕರೆಯುವುದಿದೆ. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಸಲುವಾಗಿ ʼವಿಶ್ವ ಹಿಮೋಫಿಲಿಯಾ ದಿನʼವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಹಿಮೋಫಿಲಿಯಾ ದಿನದ ಇತಿಹಾಸ:

ವಿಶ್ವ ಹಿಮೋಫಿಲಿಯಾ ದಿನದ ಇತಿಹಾಸದ ಬಗ್ಗೆ ಹೇಳುವುದಾದರೆ, 1989ರಲ್ಲಿ ವಿಶ್ವ ಹಿಮೋಫಿಲಿಯಾ ಫೆಡರೇಶನ್‌ ಮೊದಲ ಬಾರಿ ವಿಶ್ವ ಹಿಮೋಫಿಲಿಯಾ ದಿನವನ್ನು ಆಚರಿಸಲು ಮುಂದಾಯಿತು. ಈ ದಿನವು ವಿಶ್ವ ಹಿಮೋಫಿಲಿಯಾ ಫೆಡರೇಶನ್‌ ಸಂಸ್ಥಾಪಕ ಫ್ರಾಂಕ್‌ ಷ್ನಾಬೆಲ್‌ ಅವರ ಜನ್ಮದಿನವಾಗಿದೆ. ಇವರ ಜನ್ಮದಿನದ ಗೌರವಾರ್ಥವಾಗಿ ವಿಶ್ವ ಹಿಮೋಫಿಲಿಯಾ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: Skin Care: ಮುಖದ ಕಾಂತಿ ಹೆಚ್ಚಲು ಮೊಸರು ಬಳಸುವುದು ಹೇಗೆ?

ವಿಶ್ವ ಹಿಮೋಫಿಲಿಯಾ ದಿನದ ಮಹತ್ವ:

ರಕ್ತಸ್ರಾವದ ಅಸ್ವಸ್ಥತೆಗಳ ಬಗ್ಗೆ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಈ ವಿಶ್ವ ಹಿಮೋಫಿಲಿಯಾ ದಿನದ ಮುಖ್ಯ ಉದ್ದೇಶವಾಗಿದೆ. ಈ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಸರಿಯಾದ ಚಿಕಿತ್ಸೆಯ ನೀಡಿ ಗುಣ ಪಡಿಸುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿ ನೀಡುವ ಕೆಲಸಗಳು ಈ ದಿನದಂದು ನಡೆಯುತ್ತವೆ. ಹೀಗಾಗಿ ಆರೋಗ್ಯ ಇಲಾಖೆ, ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ವಿಚಾರ ಸಂಕಿರಣಗಳು, ಮಾಹಿತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ