AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Leprosy Day 2026: ಜನವರಿ 30 ರಂದೇ ವಿಶ್ವ ಕುಷ್ಠ ರೋಗ ದಿನವನ್ನು ಆಚರಿಸುವುದು ಏಕೆ?

ಕುಷ್ಠರೋಗವು ರೋಗಪೀಡಿತ ವ್ಯಕ್ತಿಯನ್ನು ಮುಟ್ಟುವುದರಿಂದ ಹರಡುತ್ತದೆ. ಹೀಗೆ ಈ ರೋಗದ ಬಗ್ಗೆ ನಾನಾ ರೀತಿಯ ತಪ್ಪು ಕಲ್ಪನೆಗಳಿವೆ. ಆದರೆ ರೋಗ ಪೀಡಿತ ವ್ಯಕ್ತಿಯ ಜತೆಗೆ ದೀರ್ಘಕಾಲದ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದರೆ ಮಾತ್ರ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಆದರೆ ಈ ಕಾಯಿಲೆಯ ಲಕ್ಷಣಗಳು ಹಾಗೂ ಚಿಕಿತ್ಸಾ ವಿಧಾನ ಹೇಗೆ? ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

World Leprosy Day 2026: ಜನವರಿ 30 ರಂದೇ ವಿಶ್ವ ಕುಷ್ಠ ರೋಗ ದಿನವನ್ನು ಆಚರಿಸುವುದು ಏಕೆ?
ವಿಶ್ವ ಕುಷ್ಠ ರೋಗ ದಿನImage Credit source: Pinterest
ಸಾಯಿನಂದಾ
|

Updated on: Jan 30, 2026 | 10:10 AM

Share

ಕುಷ್ಠರೋಗವು ಮೈಕೋಬ್ಯಾಕ್ಟೀರಿಯಂ ಲೆಪ್ರೇ ಬ್ಯಾಕ್ಟೀರಿಯಾದಿಂದ ಬರುವ ದೀರ್ಘಕಾಲದ ಸೋಂಕಾಗಿದೆ. ಇದು ಶಾಪವಲ್ಲ, ಸಾಂಕ್ರಾಮಿಕ ರೋಗವಲ್ಲ. ಚಿಕಿತ್ಸೆ ಆರಂಭಿಸಿದ ಕೆಲವೇ ದಿನಗಳಲ್ಲಿ ಸೋಂಕು ಹರಡುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತದೆ. ಈ ರೋಗದ ಬಗ್ಗೆ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಈ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 30 ರಂದು ವಿಶ್ವ ಕುಷ್ಠ ರೋಗ ದಿನವನ್ನು (World Leprosy Day) ಆಚರಿಸಲಾಗುತ್ತದೆ.

 ವಿಶ್ವ ಕುಷ್ಠ ರೋಗದ ದಿನದ ಇತಿಹಾಸ ಹಾಗೂ ಮಹತ್ವವೇನು?

ವಿಶ್ವ ಕುಷ್ಠ ರೋಗ ದಿನದ ಇತಿಹಾಸವನ್ನು ನೋಡುವುದಾದರೆ ಈ ರೋಗದಿಂದ ಬಳಲುತ್ತಿರುವ ಜನರ ಬಗ್ಗೆ ಕರುಣೆ ಹೊಂದಿದ್ದ ಮಹಾತ್ಮ ಗಾಂಧೀಜಿಯವರು ಕುಷ್ಠ ರೋಗಿಗಳ ಅಭಿವೃದ್ಧಿಗೆ ಶ್ರಮಿಸಿದರು. ಈ ರೋಗ ಪೀಡಿತರಿಗೆ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ಒದಗಿಸುವತ್ತ ಕಾರ್ಯಪ್ರವೃತ್ತರಾದರು. ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಈ ಕಾರಣದಿಂದಾಗಿ ಅವರ ಪುಣ್ಯತಿಥಿಯನ್ನು ವಿಶ್ವ ಕುಷ್ಠ ರೋಗ ದಿನ ಎಂದು ಆಚರಿಸಲಾಗುತ್ತದೆ. ಇದೆಲ್ಲದರ ಪರಿಣಾಮವಾಗಿ ಭಾರತದಲ್ಲಿ 2005 ರಲ್ಲಿ ಕುಷ್ಠರೋಗವು ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಘೋಷಣೆ ಮಾಡಲಾಯಿತು. ಈ ದಿನದ ಆಚರಣೆಯ ಮುಖ್ಯ ಉದ್ದೇಶವೇ ಕುಷ್ಠರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು. ರೋಗ ಪೀಡಿತರ ಮೇಲೆ ಬೆಳಕು ಚೆಲ್ಲುವುದು ಹಾಗೂ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.

ಕುಷ್ಠ ರೋಗ ಲಕ್ಷಣಗಳು:

ಈ ರೋಗದ ಬ್ಯಾಕ್ಟೀರಿಯಾ ಸೋಂಕು ತಗುಲಿದ ನಂತರ ಲಕ್ಷಣಗಳು ಕಾಣಿಸಿಕೊಳ್ಳಲು 5 ರಿಂದ 7 ವರ್ಷಗಳವರೆಗೆ ಇಲ್ಲವಾದರೆ 20 ವರ್ಷಗಳು ಬೇಕಾಗಬಹುದು. ರೋಗ ಲಕ್ಷಣಗಳು ಈ ಕೆಳಗಿನಂತಿರುತ್ತದೆ.

  • ಸಂವೇದನೆಯಿಲ್ಲದ ಚರ್ಮದ ತೇಪೆಗಳು
  • ಬಣ್ಣ ಕಳೆದುಕೊಂಡ ಹಾಗೂ ಕೆಂಪು ಕಲೆಯುಳ್ಳ ಚರ್ಮ
  •  ಕೈ-ಕಾಲುಗಳಲ್ಲಿ ಜುಮ್ಮೆನಿಸುವಿಕೆ
  •  ಸ್ನಾಯು ದೌರ್ಬಲ್ಯ
  •  ಕಣ್ಣು ಹಾಗೂ ಮೂಗಿನ ಸಮಸ್ಯೆಗಳು
  •  ಮುಖ ಅಥವಾ ಕಿವಿಗಳ ಮೇಲೆ ಗಂಟುಗಳು
  •  ಹುಬ್ಬುಗಳು ಹಾಗೂ ರೆಪ್ಪೆಗೂದಲು ಉದುರುವುದು

ಇದನ್ನೂ ಓದಿ: ಚರ್ಮರೋಗ ಇದ್ಯಾ? ಚಳಿಗಾಲದಲ್ಲಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಸಮಸ್ಯೆ ಉಲ್ಬಣವಾಗುವುದು ಗ್ಯಾರೆಂಟಿ

ಕುಷ್ಠ ರೋಗವನ್ನು ಹೇಗೆ ಗುಣಪಡಿಸಬಹುದು?

ಆರಂಭಿಕ ಹಂತದಲ್ಲಿಯೇ ರೋಗವನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಈ ಕುಷ್ಠರೋಗವನ್ನು ಬಹುಬೇಗನೇ ನಿಯಂತ್ರಿಸಬಹುದಾಗಿದೆ. ಈ ರೋಗ ಕಾಣಿಸಿಕೊಂಡ ತಕ್ಷಣವೇ ಆರಂಭಿಕ ಹಂತದಲ್ಲಿ ವೈದ್ಯಕೀಯ ಚಿಕಿತ್ಸೆ ಮಲ್ಟಿಡ್ರಗ್ ಥೆರಪಿ (ಎಂಡಿಟಿ) ಪಡೆಯುವುದರಿಂದ ಅಂಗವೈಕಲ್ಯವನ್ನು ತಡೆಗಟ್ಟಬಹುದಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ