AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Liver Day 2021: ಲಿವರ್ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ?

ದೇಹದ ಎರಡನೇ ಅತಿದೊಡ್ಡ ಅಂಗದ ಬಗ್ಗೆ ಜಾಗೃತಿ ಮೂಡಿಸಲು ಏಪ್ರಿಲ್ 19 ರಂದು ವಿಶ್ವ ಯಕೃತ್ತು ಅಥವಾ ಪಿತ್ತಜನಕಾಂಗ ದಿನವೆಂದು ಆಚರಿಸಲಾಗುತ್ತದೆ.

World Liver Day 2021: ಲಿವರ್ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ?
World Liver Day
shruti hegde
|

Updated on:Apr 19, 2021 | 11:42 AM

Share

ನಮ್ಮ ಆರೋಗ್ಯವನ್ನು ಕಾಪಾಡಲು ಪಿತ್ತಜನಕಾಂಗ ಅಥವಾ ಯಕೃತ್ತು (liver) ಮುಖ್ಯ ಪಾತ್ರವನ್ನು ವಹಿಸುತ್ತದೆ. ಜೀರ್ಣಕ್ರಿಯೆ ಸೇರಿದಂತೆ ನಮ್ಮನ್ನು ಆರೋಗ್ಯವಾಗಿಡಲು ಪಿತ್ತಜನಕಾಂಗ ಮುಖ್ಯ. ನಾವು ತಿನ್ನುವ ಆಹಾರದಿಂದ ಹಿಡಿದು ಕುಡಿಯುವ ಎಲ್ಲವೂ ಯಕೃತ್ತಿನ ಮೂಲಕ ಹಾದು ಹೋಗುತ್ತದೆ. ಆಹಾರವನ್ನು ಕಲುಷಿತದಿಂದ ಬೇರ್ಪಡಿಸಿ, ಪೌಷ್ಠಿಕಾಂಶಯುಕ್ತ ಆಹಾರವನ್ನು ನಮ್ಮ ದೇಹಕ್ಕೆ ನೀಡುವ ಕ್ರಿಯೆ ಪಿತ್ತಜನಕಾಂಗದಿಂದ ಆಗುತ್ತದೆ.  ದೇಹದ ಎರಡನೇ ಅತಿದೊಡ್ಡ ಅಂಗದ ಬಗ್ಗೆ ಜಾಗೃತಿ ಮೂಡಿಸಲು ಏಪ್ರಿಲ್ 19 ರಂದು ವಿಶ್ವ ಯಕೃತ್ತು ದಿನವೆಂದು ಆಚರಿಸಲಾಗುತ್ತದೆ.

ಪಿತ್ತಜನಕಾಂಗ, ಪ್ರತಿದಿನ ಸುಮಾರು 800-1,000 ಮಿಲಿ ಪಿತ್ತರಸವನ್ನು ಸ್ರವಿಸುತ್ತದೆ. ಇದರಲ್ಲಿ ಕೊಬ್ಬಿನ ಜೀರ್ಣ ಕ್ರಿಯೆಗೆ ಅಗತ್ಯವಾದ ಲವಣಗಳು ಇರುತ್ತವೆ ಮತ್ತು ರಕ್ತದಿಂದ ತ್ಯಾಜ್ಯ ಮತ್ತು ವಿಷಕಾರಿ ವಸ್ತುಗಳನ್ನು ತೆಗೆದು ಹಾಕುತ್ತದೆ. ಯಕೃತ್ತು ಹಾನಿಗೊಳಗಾದರೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಬೇಕು. ಸಮಯದ ವಿಳಂಬವು ಪಿತ್ತಜನಕಾಂಗದ ಸಿರೋಸಿಸ್ ಮತ್ತು ಪಿತ್ತಜನಕಾಂಗದ ಕ್ಯಾನ್ಸರ್​ಗೆ ಕಾರಣವಾಗಬಹುದು. ಯಕೃತ್ತಿಗೆ ಉಂಟಾಗುವ ತೊಂದರೆಗಳನ್ನು ದೂರವಿಡಲು ಅಥವಾ ನಾವು ಆರೋಗ್ಯವಾಗಿರಲು ಸಮತೋಲನ ಆಹಾರ ಮುಖ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ದೇಹದಲ್ಲಿ ಯಕೃತ್ತಿನ ಕೆಲಸವೇನು? ಅನಾರೋಗ್ಯದ ವಿರುದ್ಧ ಯಕೃತ್ತ ಹೋರಾಡುತ್ತದೆ. ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ. ದೇಹದಲ್ಲಿ ಸೇರಿಕೊಂಡ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಜೊತೆಗೆ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಣ ಮಾಡುತ್ತದೆ.

ಯಕೃತ್ತಿನ ಕಾಯಿಲೆಗೆ ಕಾರಣವೇನು? ಯಕೃತ್ತಿನ ಕಾಯಿಲೆ ಅನುವಂಶಿಕವಾಗಿ ಬರಬಹುದು. ಅನಾರೋಗ್ಯಕರ ಆಹಾರ ವ್ಯವಸ್ಥೆ ಮತ್ತು ತಿನ್ನುವ ಆಹಾರದ ಮಾದರಿಯ ಮೇಲೆ ಯಕೃತ್ತಿನ ಕಾಯಿಲೆಗಳು ಉಂಟಾಗುತ್ತದೆ. ಮದ್ಯಸೇವನೆ, ಬೀದಿಯಲ್ಲಿ ಸಿಗುವ ಜಂಕ್​ ಫುಡ್​​ಗಳ ಸೇವನೆ ಕಾಯಿಲೆಗೆ ಕಾರಣ. ದೇಹದಲ್ಲಿ ಹೆಚ್ಚು ಬೊಜ್ಜು, ಡಯಾಬಿಟಿಸ್​ ಉಂಟಾದಾಗ ಯಕೃತ್ತಿನ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತದೆ.

ಯಕೃತ್ತಿನ ಹಾನಿಯ ಲಕ್ಷಣಗಳು ಕಾಮಲೆ, ಕಡಿಮೆ ತೂಕ, ಹಸಿವಾಗದಿರುವುದು, ವಾಕರಿಕೆ ಮತ್ತು ವಾಂತಿ, ದೇಹಕ್ಕೆ ಸುಸ್ತು ಅಥವಾ ಆಯಾಸ, ಹೊಟ್ಟೆ ನೋವು ಇತ್ಯಾದಿಗಳಿಂದ ಯಕೃತ್ತ ಸಮಸ್ಯೆ ಆಗಿರುವುದು ತಿಳಿದು ಬರುತ್ತದೆ.

ಯಕೃತ್ತನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಹೇಗೆ? ಬೆಳ್ಳುಳ್ಳಿ, ಸೊಪ್ಪು ತರಕಾರಿಗಳು, ಸೇಬು ಹಣ್ಣು, ದ್ರಾಕ್ಷಿಹಣ್ಣು ಮತ್ತು ಕ್ಯಾರೆಡ್​ಗಳನ್ನು ಹೆಚ್ಚು ಸೇವಿಸಬೇಕು. ನಿಂಬೆ ರಸ, ಗ್ರೀನ್​ ಟೀ ಹೆಚ್ಚು ಕುಡಿಯಬೇಕು. ಆಹಾರದಲ್ಲಿ ಅರಿಶಿಣ ಬಳಸಿ ಆಹಾರ ಸೇವಿಸಬೇಕು. ಈ ರೀತಿಯಾಯಾಗಿ ಪಿತ್ತಜನಕಾಂಗವನ್ನು ಸರಿಯಾಗಿ ನೋಡಿಕೊಳ್ಳಬಹುದು.

ಇದನ್ನೂ ಓದಿ: ವಾಲ್​ನಟ್​ ಸೇವನೆಯಿಂದ ತೂಕ ಹೆಚ್ಚುತ್ತದೆ ಎಂಬ ಆತಂಕ ಬಿಡಿ.. ನಿಯಮಿತವಾಗಿ ಸೇವಿಸಿ ಹೃದಯದ ಆರೋಗ್ಯ ಕಾಪಾಡಿಕೊಳ್ಳಿ

Health Tips During Covid Pandemic: ಕೊರೊನಾ ಕಾಲದಲ್ಲಿ ಆರೋಗ್ಯ ರಕ್ಷಣೆಗೆ 9 ಸೂತ್ರಗಳು

(World liver day 2021 How to Maintain Liver Health)

Published On - 11:36 am, Mon, 19 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ