AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Liver Day 2023: ಆರೋಗ್ಯಕರ ಯಕೃತ್ತನ್ನು ಕಾಪಾಡಿಕೊಳ್ಳಲು ಏನು ಮಾಡಬೇಕು ಮತ್ತು ಮಾಡಬಾರದು? ಇಲ್ಲಿದೆ ಮಾಹಿತಿ

ದೇಹದ ಅತಿದೊಡ್ಡ ಅಂಗವಾದ ಯಕೃತ್ತು ಒಟ್ಟಾರೆ ಆರೋಗ್ಯಕ್ಕೆ ಕಾರಣವಾಗಿದ್ದು ಯಕೃತ್ತಿಗೆ ಸಂಬಂಧಿಸಿದ ರೋಗಗಳು ಮತ್ತು ಪರಿಸ್ಥಿತಿಗಳ ಬಗ್ಗೆ ಜನರಿಗೆ ಹೆಚ್ಚು ಅರಿವು ಮೂಡಿಸಿ ಯಕೃತ್ತನ್ನು ಕಾಪಾಡಿಕೊಳ್ಳಲು ಏನು ಮಾಡಬೇಕು ಮತ್ತು ಮಾಡಬಾರದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

World Liver Day 2023: ಆರೋಗ್ಯಕರ ಯಕೃತ್ತನ್ನು ಕಾಪಾಡಿಕೊಳ್ಳಲು ಏನು ಮಾಡಬೇಕು ಮತ್ತು ಮಾಡಬಾರದು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 19, 2023 | 3:11 PM

Share

ದೇಹದ ಒಟ್ಟಾರೆ ಆರೋಗ್ಯದಲ್ಲಿ ಪಿತ್ತಜನಕಾಂಗದ ಪಾತ್ರದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಯಕೃತ್ತಿಗೆ (Liver) ಸಂಬಂಧಿಸಿದ ರೋಗಗಳು ಮತ್ತು ಪರಿಸ್ಥಿತಿಗಳ ಬಗ್ಗೆ ಜನರಿಗೆ ಹೆಚ್ಚು ಅರಿವು ಮೂಡಿಸಲು ಪ್ರತಿವರ್ಷ ಏಪ್ರಿಲ್ 19 ಅನ್ನು ವಿಶ್ವ ಯಕೃತ್ತಿನ ದಿನವಾಗಿ ಆಚರಿಸಲಾಗುತ್ತದೆ. ಜೀರ್ಣಕ್ರಿಯೆ ಸೇರಿದಂತೆ ನಮ್ಮನ್ನು ಆರೋಗ್ಯವಾಗಿಡಲು ಪಿತ್ತಜನಕಾಂಗ ಮುಖ್ಯ. ನಾವು ತಿನ್ನುವ ಆಹಾರದಿಂದ ಹಿಡಿದು ಕುಡಿಯುವ ಎಲ್ಲವೂ ಯಕೃತ್ತಿನ ಮೂಲಕ ಹಾದು ಹೋಗುತ್ತದೆ. ಆಹಾರವನ್ನು ಕಲುಷಿತದಿಂದ ಬೇರ್ಪಡಿಸಿ, ಪೌಷ್ಠಿಕಾಂಶಯುಕ್ತ ಆಹಾರವನ್ನು ನಮ್ಮ ದೇಹಕ್ಕೆ ನೀಡುವ ಕ್ರಿಯೆ ಪಿತ್ತಜನಕಾಂಗ ನಡೆಸುತ್ತದೆ. ಸಾಮಾನ್ಯವಾಗಿ, ಹೆಪಟೈಟಿಸ್ ಬಿ, ಸಿ, ಮತ್ತು ಆಲ್ಕೋಹಾಲ್ ಅಥವಾ ಮಾದಕವಸ್ತುಗಳ ದುರುಪಯೋಗದಿಂದಾಗಿ ಯಕೃತ್ತು ನಕಾರಾತ್ಮಕವಾಗಿ ಪರಿಣಾಮ ಬೀರುತ್ತದೆ.

ವಿಶ್ವ ಯಕೃತ್ತಿನ ದಿನವಾದ ಇಂದು ಆರೋಗ್ಯಕರ ಪಿತ್ತಜನಕಾಂಗವನ್ನು ಕಾಪಾಡಿಕೊಳ್ಳಲು ಏನು ಮಾಡಬೇಕು; ಯಾವುದರಿಂದ ದೂರವಿರಬೇಕು.. ಎಂಬುದರ ಕುರಿತ ಮಾಹಿತಿ ಇಲ್ಲಿದೆ.

-ಲಿವರ್ ಉತ್ತಮವಾಗಿಡಲು ಇವು ಸಹಕಾರಿ: ಕೇಲ್, ಪಾಲಕ್, ಬ್ರೊಕೋಲಿ ಮುಂತಾದ ಹಸಿರು ತರಕಾರಿಗಳನ್ನು ಉತ್ತಮ ಪ್ರಮಾಣದಲ್ಲಿ ಸೇವಿಸಿ. ಈ ತರಕಾರಿಗಳು ದೇಹದಲ್ಲಿ ನೈಸರ್ಗಿಕ ಶುದ್ಧೀಕರಣ ಪ್ರಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

-ವಾಲ್ನಟ್ಸ್, ಆವಕಾಡೋಸ್, ಆಲಿವ್ ಆಯಿಲ್​ನಲ್ಲಿ ಕಂಡುಬರುವ ‘ಗುಡ್ ಫ್ಯಾಟ್​’ಗೆ ನಿಮ್ಮ ಆಹಾರ ಶೈಲಿ ಬದಲಾಯಿಸಿಕೊಳ್ಳಿ.

-ಆರೋಗ್ಯಕರ ಪಿತ್ತಜನಕಾಂಗವನ್ನು ಕಾಪಾಡಿಕೊಳ್ಳಲು ಹೆಚ್ಚು ನೀರನ್ನು ಕುಡಿಯಿರಿ. ಇದು ದೇಹದಿಂದ ಕಲ್ಮಶವನ್ನು ಹೊರಹಾಕಲು ಯಕೃತ್ತಿಗೆ ಮತ್ತಷ್ಟು ಶಕ್ತಿ ನೀಡುತ್ತದೆ.

-ನಿಮ್ಮ ಆಹಾರದಲ್ಲಿ ಹಣ್ಣುಗಳ ಪ್ರಮಾಣವನ್ನು ಹೆಚ್ಚಿಸಿ. ಇದಲ್ಲದೆ, ನೀವು ಕೆಲವು ವಿಟಮಿನ್-ಸಮೃದ್ಧ ಹಣ್ಣುಗಳನ್ನು ವಾರದಲ್ಲಿ ಒಮ್ಮೆಯಾದರೂ ತಿನ್ನುತ್ತಿರಾ ಎಂದು ಖಚಿತಪಡಿಸಿಕೊಳ್ಳಿ.

-ಬಹುತೇಕ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೆಂದರೆ ಉತ್ತಮ ವ್ಯಾಯಾಮ, ನಡಿಗೆ, ಯೋಗ ಮೊದಲಾದವುಗಳು. ಇದನ್ನು ಪ್ರತಿ ದಿನ ಮಾಡಿ ಇವು ಯಕೃತ್ತಿನ ಆರೋಗ್ಯಕ್ಕೂ ಅನ್ವಯಿಸುತ್ತದೆ.

ಇದನ್ನೂ ಓದಿ: World Liver Day 2023: ಮಧುಮೇಹವು ಯಕೃತ್ತಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಅದರ ನಿರ್ವಹಣೆ ಹೇಗೆ?

ಯಕೃತ್ತಿನ ಆರೋಗ್ಯಕ್ಕಾಗಿ ಇವುಗಳಿಂದ ದೂರವಿರಿ:

-ಸಂಸ್ಕರಿತ ಆಹಾರಗಳು ಹೆಚ್ಚಿನ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವುದರಿಂದ ಕೊಬ್ಬಿನ ಹೆಚ್ಚಳಕ್ಕೆ ಕಾರಣವಾಗಬಹುದು. ಅಲ್ಲದೇ ಅವುಗಳು ದೇಹದಲ್ಲಿನ ಸಕ್ಕರೆ ಮಟ್ಟವನ್ನು ಸಹ ಹೆಚ್ಚಿಸುತ್ತವೆ. ಹೀಗಾಗಿ ಸಂಸ್ಕರಿಸಿದ ಆಹಾರಗಳಿಂದ ಸಾಧ್ಯವಾದಷ್ಟು ದೂರವಿರಿ.

-ಕೆಟ್ಟ ಕೊಬ್ಬುಗಳು ಎಂದು ಕರೆಯಲ್ಪಡುವ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಫ್ಯಾಟ್​ಗಳನ್ನು ತಪ್ಪಿಸಿ. ಇದರಲ್ಲಿ ಕರಿದ ತಿಂಡಿಗಳೂ ಸೇರಿವೆ.

-ಯಕೃತ್ತಿನ ಆರೋಗ್ಯಕ್ಕೆ ಆಲ್ಕೊಹಾಲ್ ಸೇವನೆ ಬಹಳ ಕೆಟ್ಟದ್ದು. ಮದ್ಯಪಾನದಿಂದ ಯಕೃತ್ತಿಗೆ ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಕಷ್ಟವಾಗುತ್ತದೆ. ಇದರಿಂದ ಬೇರೆ ಬೇರೆ ಕಾಯಿಲೆಗಳಿಗೆ ತುತ್ತಾಗಬಹುದು.

-ಅತಿ ಕೆಂಪಾದ ಮಾಂಸಹಾರ ಸೇವನೆ ಯಕೃತ್ತಿನ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತವೆ ವರದಿಗಳು. ಹಾಗಾಗಿ ಆದಷ್ಟು ಕಲರ್ ಬೆರೆಸಿರುವ ಆಹಾರ ತಿನ್ನಬೇಡಿ.

-ಚಾಕೊಲೇಟ್‌ಗಳು, ಮಿಠಾಯಿಗಳು ಮತ್ತು ತಂಪು ಪಾನೀಯಗಳಂತಹ ಹೆಚ್ಚಿನ ಸಕ್ಕರೆ ಅಂಶವಿರುವ ಆಹಾರವನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ.

-ಬೆಳ್ಳುಳ್ಳಿ, ಸೊಪ್ಪು ತರಕಾರಿಗಳು, ಸೇಬು ಹಣ್ಣು, ದ್ರಾಕ್ಷಿಹಣ್ಣು ಮತ್ತು ಕ್ಯಾರೆಡ್​ಗಳನ್ನು ಹೆಚ್ಚು ಸೇವಿಸಬೇಕು. ನಿಂಬೆ ರಸ, ಗ್ರೀನ್​ ಟೀ ಹೆಚ್ಚು ಕುಡಿಯಬೇಕು. ಆಹಾರದಲ್ಲಿ ಅರಿಶಿಣ ಬಳಸಿ ಆಹಾರ ಸೇವಿಸಬೇಕು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ