AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Lung Cancer Day 2022: ಭಾರತದಲ್ಲಿ ಮುಂದಿನ 5 ವರ್ಷದಲ್ಲಿ 1 ಲಕ್ಷಕ್ಕೂ ಹೆಚ್ಚು ಶ್ವಾಸಕೋಶ ಕ್ಯಾನ್ಸರ್ ಪ್ರಕರಣ ಪತ್ತೆ ಸಾಧ್ಯತೆ

ಭಾರತದಲ್ಲಿ ಇತ್ತೀಚಿನ ಕೆಲವು ವರ್ಷಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಎಂಬುದು ಪ್ರಮುಖ ಆರೋಗ್ಯ ಸಮಸ್ಯೆಯಾಗಿ ಕಾಡುತ್ತಿದೆ. ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಶ್ವಾಸಕೋಶದ ಕ್ಯಾನ್ಸರ್​ನ ಹೊಸ ಪ್ರಕರಣಗಳು ಕಂಡುಬರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

World Lung Cancer Day 2022: ಭಾರತದಲ್ಲಿ ಮುಂದಿನ 5 ವರ್ಷದಲ್ಲಿ 1 ಲಕ್ಷಕ್ಕೂ ಹೆಚ್ಚು ಶ್ವಾಸಕೋಶ ಕ್ಯಾನ್ಸರ್ ಪ್ರಕರಣ ಪತ್ತೆ ಸಾಧ್ಯತೆ
Vaping
TV9 Web
| Edited By: |

Updated on:Aug 01, 2022 | 4:06 PM

Share

ಭಾರತದಲ್ಲಿ ಇತ್ತೀಚಿನ ಕೆಲವು ವರ್ಷಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಎಂಬುದು ಪ್ರಮುಖ ಆರೋಗ್ಯ ಸಮಸ್ಯೆಯಾಗಿ ಕಾಡುತ್ತಿದೆ. ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಶ್ವಾಸಕೋಶದ ಕ್ಯಾನ್ಸರ್​ನ ಹೊಸ ಪ್ರಕರಣಗಳು ಕಂಡುಬರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈ ಕುರಿತು ಡಾ. ವಿಶೇಷ್ ಗುಮ್ದಾಲ್ ಮಾಹಿತಿ ನೀಡಿದ್ದಾರೆ.

ಇದು ಪುರುಷರಲ್ಲಿ ಸಾಮಾನ್ಯವಾಗಿದೆ (ಸುಮಾರು 70 ಪ್ರತಿಶತದಷ್ಟು ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು), ಆದರೆ ಕಳೆದ ಒಂದು ದಶಕದಿಂದ ಮಹಿಳೆಯರಲ್ಲಿ ಕೂಡ ಶ್ವಾಸಕೋಶ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದೆ. ಶ್ವಾಸಕೋಶದ ಕ್ಯಾನ್ಸರ್‌ಗೆ ಹಲವಾರು ಅಪಾಯಕಾರಿ ಅಂಶಗಳು ಕಾರಣವಾಗಬಹುದು, ಪ್ರಾಥಮಿಕ ಅಪಾಯಕಾರಿ ಅಂಶವೆಂದರೆ ಸಿಗರೇಟ್ ಸೇವನೆಯು ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇಕಡಾ 90 ರಷ್ಟು ಕಾರಣವಾಗಿದೆ. ಸಿಗರೇಟ್ ಹೊಗೆಯಲ್ಲಿ ಕಂಡುಬರುವ ರಾಸಾಯನಿಕಗಳು ಹುಕ್ಕಾ ಹೊಗೆಯಲ್ಲೂ ಕಂಡುಬರುತ್ತವೆ ಎಂದು ಡಾ ಗುಮ್ಡಾಲ್ ಹೇಳಿದ್ದಾರೆ.

ಶ್ವಾಸಕೋಶದ ಕ್ಯಾನ್ಸರ್ ಎಂದರೇನು ? ಶ್ವಾಸಕೋಶದಲ್ಲಿ ಕಂಡು ಬರುವ ಜೀವಕೋಶಗಳ ಅನಿಯಂತ್ರಿತ ಬೆಳವಣಿಗೆಯನ್ನು ಶ್ವಾಸಕೋಶದ ಕ್ಯಾನ್ಸರ್ ಎಂದು ಕರೆಯಲಾಗುತ್ತದೆ . ಶ್ವಾಸಕೋಶದ ಕ್ಯಾನ್ಸರ್‌ನ ಆರಂಭಿಕ ಹಂತಗಳಲ್ಲಿ, ಯಾವುದೇ ರೋಗಲಕ್ಷಣಗಳು ಗೋಚರಿಸುವುದಿಲ್ಲ, ಹೀಗಾಗಿಯೇ ಇದು ಹೆಚ್ಚು ಆತಂಕ ಪಡುವ ವಿಷಯವಾಗಿದೆ.

ಶ್ವಾಸಕೋಶದ ಕ್ಯಾನ್ಸರ್ ಗೆಡ್ಡೆ ಹತ್ತಿರದ ಅಂಗಗಳಿಗೆ ಹರಡಬಹುದು ಅಥವಾ ಕ್ಯಾನ್ಸರ್ ಕೋಶಗಳು ಇತರ ಅಂಗಗಳಲ್ಲಿ ಬೆಳೆಯಬಹುದು. ಶ್ವಾಸಕೋಶದ ಕ್ಯಾನ್ಸರ್‌ನಲ್ಲಿ ಎರಡು ವಿಧಗಳಿವೆ. ಸಣ್ಣ ಜೀವಕೋಶದ ಶ್ವಾಸಕೋಶದ ಕ್ಯಾನ್ಸರ್ ಶ್ವಾಸಕೋಶದ ಕ್ಯಾನ್ಸರ್‌ನ ಕೆಲವು ಪ್ರಮುಖ ಲಕ್ಷಣಗಳಿವೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಿರ್ದಿಷ್ಟ ಅಂಗದ ಜೀವಕೋಶಗಳ ಅಸಹಜ ಬೆಳವಣಿಗೆ ಇದ್ದಾಗ ಕ್ಯಾನ್ಸರ್ ಉಂಟಾಗುತ್ತದೆ, ಇದು ಅಂಗದ ಒಳಗೆ ಅಥವಾ ಹೊರಗೆ ಉಂಡೆಗಳ ರಚನೆಗೆ ಕಾರಣವಾಗುತ್ತದೆ. ಆ ಉಂಡೆಗಳು ನಂತರ ಗೆಡ್ಡೆಗಳನ್ನು ರೂಪಿಸುತ್ತವೆ. ಗೆಡ್ಡೆಗಳು ಎರಡು ವಿಧಗಳಾಗಿವೆ – ಹಾನಿಕರವಲ್ಲದ ಮತ್ತು ಮಾರಕ. ಹಾನಿಕರವಲ್ಲದ ಗೆಡ್ಡೆಗಳು ಮಾರಣಾಂತಿಕವಲ್ಲ ಮತ್ತು ಅದನ್ನು ಗುಣಪಡಿಸಬಹುದು, ಆದರೆ ಮಾರಣಾಂತಿಕ ಗಡ್ಡೆಗಳು ಸಾವಿಗೆ ಕಾರಣವಾಗಬಹುದು.

ಸೆಪ್ಟೆಂಬರ್ 2019ರಲ್ಲಿ ಕೇಂದ್ರ ಸರ್ಕಾರವು 2019ರ ಇಲೆಕ್ಟ್ರಾನಿಕ್ ಸಿಗರೇಟ್ (ಉತ್ಪಾದನೆ, ಆಮದು, ರಫ್ತು, ಸಾರಿಗೆ, ಮಾರಾಟ, ವಿತರಣೆ, ಸಂಗ್ರಹಣೆ ಮತ್ತು ಜಾಹೀರಾತು) ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿತು. ಅದು ಜೆಯುಯುಎಲ್​​ (JUUL) ನಂತಹ ಎಲೆಕ್ಟ್ರಾನಿಕ್ ಸಿಗರೇಟ್‌ಗಳಿಗೆ ನಿಷೇಧ ಹೇರಿದೆ.

ಲಕ್ಷಣಗಳು -ಶ್ವಾಸಕೋಶದ ಕ್ಯಾನ್ಸರ್ ಎದೆ ಮತ್ತು ಪಕ್ಕೆಲುಬಿನ ತಡೆಯಲಾರದ ನೋವುಂಟು ಮಾಡುವುದು -ಉಸಿರಾಟ ಸಮಸ್ಯೆ, ಉಬ್ಬಸ -ತೂಕ ನಷ್ಟ ಮತ್ತು ದೌರ್ಬಲ್ಯದ ಸಮಸ್ಯೆ -ಉಗುರುಗಳ ಆಕಾರದಲ್ಲಿ ಬದಲಾವಣೆ. -ರಕ್ತದೊಂದಿಗೆ ದೀರ್ಘಕಾಲದ ಒಣ ಕೆಮ್ಮು

ಕೈಗಾರಿಕೆಗಳು, ಗಣಿಗಾರಿಕೆ ವಲಯಗಳಲ್ಲಿ ಕೆಲಸ ಮಾಡುವವರ ಹೊರತಾಗಿ ಸಿಗರೇಟ್‌ ಸೇವನೆ, ತಂಬಾಕು ಜಗಿಯುವುದು, ಹುಕ್ಕಾ, ತಂಬಾಕಿನ ಜತೆಗೆ ವೀಳ್ಯದೆಲೆ ತಿನ್ನುವುದು, ಧೂಮಪಾನ, ಅಡುಗೆ ಮನೆಯ ಹೊಗೆ ಮತ್ತು ವಾಹನಗಳ ಮಾಲಿನ್ಯ ಮುಂತಾದವು ಶ್ವಾಸಕೋಶದ ಕ್ಯಾನ್ಸರ್‌ಗೆ ಮುಖ್ಯ ಕಾರಣಗಳಾಗಿವೆ.

ಮುಂದಿನ ಕೆಲವು ವರ್ಷಗಳಲ್ಲಿ ತಂಬಾಕು-ಸಂಬಂಧಿ ಮಾರಕ ರೋಗಗಳ ಹೊರೆ ಭಾರತದಲ್ಲಿ 12 ಪ್ರತಿಶತಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಎಚ್ಚರಿಸಲಾಗಿದೆ.

ಭಾರತದಲ್ಲಿ, 2019 ರಿಂದ ಸಂಪೂರ್ಣವಾಗಿ ವ್ಯಾಪಿಂಗ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದಾಗ್ಯೂ, ಇಲ್ಲಿಯವರೆಗೆ, ಹುಕ್ಕಾವನ್ನು ನಿಷೇಧಿಸುವ ಯಾವುದೇ ರಾಷ್ಟ್ರೀಯ ಮಟ್ಟದ ಕಾನೂನು ಇಲ್ಲ, ಇದು ಶ್ವಾಸಕೋಶದ ಅಸ್ವಸ್ಥತೆಗಳು ಮತ್ತು ಶ್ವಾಸಕೋಶದ ಕ್ಯಾನ್ಸರ್​ಗೆ ಕಾರಣವಾಗಬಹುದು.

Published On - 3:51 pm, Mon, 1 August 22

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ