AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Mental Health Day 2024: ಇಂದು ವಿಶ್ವ ಮಾನಸಿಕ ಆರೋಗ್ಯ ದಿನ; ಇತಿಹಾಸ, ಥೀಮ್ ಕುರಿತ ಮಾಹಿತಿ ಇಲ್ಲಿದೆ

ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಗಣನೀಯವಾಗಿ ಹೆಚ್ಚುತ್ತಿವೆ. ಸಾಮಾನ್ಯವಾಗಿ ಇದು ಗಂಭೀರ ಆರೋಗ್ಯ ಸಮಸ್ಯೆಗಳಾಗಿದ್ದರು ಕೂಡ ಇದಕ್ಕೆ ಸರಿಯಾದ ಮದ್ದನ್ನು ಮಾಡುವ ಬದಲು ಅದನ್ನು ನಿರ್ಲಕ್ಷಿಸುತ್ತಾರೆ. ಇದು ಆರೋಗ್ಯದ ಮೇಲೆ ಮತ್ತಷ್ಟು ನಕರಾತ್ಮಕ ಪರಿಣಾಮವನ್ನು ಬೀರಬಹುದು. ಇಂದು ಬದಲಾಗುತ್ತಿರುವ ಜೀವನಶೈಲಿಯ ನಡುವೆ ಮಾನಸಿಕ ಆರೋಗ್ಯ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಹಾಗಾಗಿ ಮಾನಸಿಕ ಆರೋಗ್ಯದ ಮಹತ್ವವನ್ನು ಜನರಿಗೆ ತಿಳಿಸಲು ಹಾಗೂ ಈ ದಿನದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಅಕ್ಟೋಬರ್ 10 ರಂದು ಜಾಗತಿಕ ಮಟ್ಟದಲ್ಲಿ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ.

World Mental Health Day 2024: ಇಂದು ವಿಶ್ವ ಮಾನಸಿಕ ಆರೋಗ್ಯ ದಿನ; ಇತಿಹಾಸ, ಥೀಮ್ ಕುರಿತ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 10, 2024 | 9:27 AM

Share

ಇತ್ತೀಚಿನ ದಿನಗಳಲ್ಲಿ ಖಿನ್ನತೆ, ಒತ್ತಡ ಮುಂತಾದ ಮಾನಸಿಕ ಆರೋಗ್ಯಕ್ಕೆ (Mental Health) ಸಂಬಂಧಿಸಿದ ಸಮಸ್ಯೆಗಳು ಗಣನೀಯವಾಗಿ ಹೆಚ್ಚುತ್ತಿವೆ. ಸಾಮಾನ್ಯವಾಗಿ ಇದು ಗಂಭೀರ ಆರೋಗ್ಯ ಸಮಸ್ಯೆಗಳಾಗಿದ್ದರು ಕೂಡ ಇದಕ್ಕೆ ಸರಿಯಾದ ಮದ್ದನ್ನು ಮಾಡುವ ಬದಲು ಅದನ್ನು ನಿರ್ಲಕ್ಷಿಸುತ್ತಾರೆ. ಇದು ಆರೋಗ್ಯದ ಮೇಲೆ ಮತ್ತಷ್ಟು ನಕರಾತ್ಮಕ ಪರಿಣಾಮವನ್ನು ಬೀರಬಹುದು. ಇಂದು ಬದಲಾಗುತ್ತಿರುವ ಜೀವನಶೈಲಿಯ ನಡುವೆ ಮಾನಸಿಕ ಆರೋಗ್ಯ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಹಾಗಾಗಿ ಮಾನಸಿಕ ಆರೋಗ್ಯದ ಮಹತ್ವವನ್ನು ಜನರಿಗೆ ತಿಳಿಸಲು ಹಾಗೂ ಈ ದಿನದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಅಕ್ಟೋಬರ್ 10 ರಂದು ಜಾಗತಿಕ ಮಟ್ಟದಲ್ಲಿ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ.

ಈ ದಿನದ ಇತಿಹಾಸ:

ವರ್ಲ್ಡ್ ಫೆಡರೇಶನ್ ಫಾರ್ ಮೆಂಟಲ್ ಹೆಲ್ತ್ (WFMH) ಸಂಸ್ಥೆಯ ಉಪಕ್ರಮದ ಮೇರೆಗೆ ಅಕ್ಟೋಬರ್ 10, 1992 ರಲ್ಲಿ ವಿಶ್ವಸಂಸ್ಥೆಯು ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲು ಪ್ರಾರಂಭಿಸಿತು. ಜಾಗತಿಕವಾಗಿ ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವುದು ಮತ್ತು ಮಾನಸಿಕ ಆರೋಗ್ಯಕ್ಕೆ ಸಂಬಂಧಿತ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಶಿಕ್ಷಣ ನೀಡುವುದಾಗಿದೆ.

ಈ ಬಾರಿಯ ಥೀಮ್

ಈ ಬಾರಿ ‘ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ’ ಎಂಬ ವಿಷಯದ ಮೇಲೆ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತಿದೆ. ಉದ್ಯೋಗಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಈ ಥೀಮ್ ಅನ್ನು ಆಯ್ಕೆ ಮಾಡಲಾಗಿದೆ.

ಏಕೆಂದರೆ ಮಾನಸಿಕ ಆರೋಗ್ಯ ಹದಗೆಟ್ಟರೆ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಆದಷ್ಟು ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗುತ್ತದೆ.

ಇದನ್ನೂ ಓದಿ: ಈ ಆಹಾರಗಳು ನಿಮ್ಮ ಆರೋಗ್ಯಕ್ಕೆ ಸಂಜೀವಿನಿ

ಈ ದಿನದ ಮಹತ್ವ

ಸಾಮಾನ್ಯವಾಗಿ ಖಿನ್ನತೆ ಮತ್ತು ಒತ್ತಡವನ್ನು ಸಣ್ಣ ಸಮಸ್ಯೆ ಎಂದು ಪರಿಗಣಿಸಿ ನಿರ್ಲಕ್ಷಿಸುತ್ತಾರೆ, ಆದರೆ ಇದು ತಪ್ಪು. ಮಾನಸಿಕ ಆರೋಗ್ಯ ಹದಗೆಟ್ಟರೆ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಇದೊಂದು ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಇದರಿಂದಾಗಿ ಪ್ರತಿ ವರ್ಷ ನೂರಾರು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ಮಾನಸಿಕ ಆರೋಗ್ಯ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ. ಈ ದಿನದಂದು ಜಾಗತಿಕವಾಗಿ ಸೆಮಿನಾರ್, ಕಾರ್ಯಗಾರಗಳು ಮತ್ತು ಸಮ್ಮೇಳನಗಳಂತಹ ವಿವಿಧ ಚಟುವಟಟಿಕೆಗಳನ್ನು ನಡೆಸಲಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!