AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Pulses Day: ಡಯಾಬಿಟಿಕ್ ರೋಗಿಗಳ ಸಕ್ಕರೆ ಮಟ್ಟ ನಿಯಂತ್ರಿಸುವ ಧಾನ್ಯಗಳಿವು

Pulses Health Benefits: ದ್ವಿದಳ ಧಾನ್ಯಗಳು ಆರೋಗ್ಯಕರ ಆಹಾರ ಪದ್ಧತಿಗೆ ಅತ್ಯಗತ್ಯವಾದ ಪದಾರ್ಥಗಳಾಗಿವೆ. ಇವೆಲ್ಲವೂ ನಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತವೆ. ವಿಶ್ವಸಂಸ್ಥೆಯು 2016 ಅನ್ನು 'ದ್ವಿದಳ ಧಾನ್ಯಗಳ ವರ್ಷ' ಎಂದು ಆಚರಿಸಿತು. ಇಂದು ವಿಶ್ವ ದ್ವಿದಳ ಧಾನ್ಯಗಳ ದಿನ.

World Pulses Day: ಡಯಾಬಿಟಿಕ್ ರೋಗಿಗಳ ಸಕ್ಕರೆ ಮಟ್ಟ ನಿಯಂತ್ರಿಸುವ ಧಾನ್ಯಗಳಿವು
ದ್ವಿದಳ ಧಾನ್ಯಗಳು Image Credit source: iStock
Follow us
ಸುಷ್ಮಾ ಚಕ್ರೆ
|

Updated on: Feb 10, 2024 | 1:18 PM

ಇಂದು ವಿಶ್ವ ದ್ವಿದಳ ಧಾನ್ಯಗಳ ದಿನ (World Pulses Day). ನಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಬೇಳೆಕಾಳುಗಳು ಮತ್ತು ಧಾನ್ಯಗಳು ಬಹಳ ಸಹಾಯ ಮಾಡುತ್ತವೆ. ಬೇಳೆಕಾಳುಗಳ ಮಹತ್ವದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ 2018ರಲ್ಲಿ ಫೆಬ್ರವರಿ 10 ಅನ್ನು ವಿಶ್ವ ದ್ವಿದಳ ಧಾನ್ಯಗಳ ದಿನವೆಂದು ಘೋಷಿಸಲಾಯಿತು. ಬೇಳೆಕಾಳುಗಳು ಏಕೆ ಮುಖ್ಯ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ದ್ವಿದಳ ಧಾನ್ಯಗಳು ಹಲವಾರು ದೇಶಗಳ ಪ್ರಧಾನ ಆಹಾರದಲ್ಲಿ ಸ್ಥಾನ ಪಡೆದಿದೆ. ಇದು ಹೆಚ್ಚಿನ ಪೌಷ್ಟಿಕಾಂಶದ ಮಟ್ಟವನ್ನು ಹೊಂದಿದೆ ಮತ್ತು ನಮ್ಮ ದೈನಂದಿನ ಆಹಾರದ ಭಾಗವಾಗಿದೆ.

ವಿವಿಧ ರೀತಿಯ ದ್ವಿದಳ ಧಾನ್ಯಗಳು ಬಳಕೆಯಲ್ಲಿವೆ. ಅವುಗಳ ಪೌಷ್ಟಿಕಾಂಶದ ಮೌಲ್ಯ ಭಿನ್ನವಾಗಿರುತ್ತವೆ. ಮಧುಮೇಹಿಗಳಿಗೆ ನಿಯಮಿತವಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೊಂದಲು ಕೆಲವು ಅತ್ಯುತ್ತಮ ಆಯ್ಕೆಗಳು ಇಲ್ಲಿವೆ. ಇನ್ಸುಲಿನ್ ಮಟ್ಟವನ್ನು ನೈಸರ್ಗಿಕವಾಗಿ ನಿರ್ವಹಿಸಲು ಸಹಾಯ ಮಾಡುವ 5 ದ್ವಿದಳ ಧಾನ್ಯಗಳಿವು…

ಕಡಲೆ:

ಕಡಲೆ ಸಲಾಡ್‌ಗಳು, ಸೂಪ್‌ಗಳು ಮುಂತಾದ ವಿವಿಧ ಭಕ್ಷ್ಯಗಳಲ್ಲಿ ಬಳಸಬಹುದಾದ ಬಹುಮುಖ ದ್ವಿದಳ ಧಾನ್ಯವಾಗಿದೆ. ಅವುಗಳಲ್ಲಿ ಫೈಬರ್ ಮತ್ತು ಪ್ರೊಟೀನ್‌ ಅಂಶ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸಲು ಮತ್ತು ರಕ್ತಪ್ರವಾಹಕ್ಕೆ ಗ್ಲೂಕೋಸ್‌ನ ಬಿಡುಗಡೆಗೆ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟದ ನಿಯಂತ್ರಣಕ್ಕೆ ಸಹಾಯಕವಾಗಿದೆ.

ಇದನ್ನೂ ಓದಿ: ಮಧುಮೇಹ ಬಾರದಂತೆ ತಡೆಯಲು ಈ 10 ಆಹಾರ ಸೇವಿಸಿ

ಮಸೂರ:

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಮಸೂರ ಮತ್ತೊಂದು ಅತ್ಯುತ್ತಮ ಆಯ್ಕೆಯಾಗಿದೆ. ಹಸಿರು, ಕಂದು, ಕೆಂಪು ಮತ್ತು ಕಪ್ಪು ಮುಂತಾದ ವಿವಿಧ ಬಣ್ಣಗಳಲ್ಲಿ ಮಸೂರು ಇರುತ್ತವೆ. ಸೂಪ್‌ಗಳು, ಸ್ಟ್ಯೂಗಳು ಮತ್ತು ಸಲಾಡ್‌ಗಳಲ್ಲಿ ಇವುಗಳನ್ನು ಬಳಸಬಹುದು. ಮಸೂರವು ಫೈಬರ್, ಪ್ರೋಟೀನ್ ಮತ್ತು ಸಂಕೀರ್ಣ ಕಾರ್ಬೋಹೈಡ್ರೇಟ್‌ಗಳಲ್ಲಿ ಸಮೃದ್ಧವಾಗಿದೆ. ಇದು ಅತ್ಯಾಧಿಕ ಮತ್ತು ಸ್ಥಿರವಾದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ.

ಕಪ್ಪು ಬೀನ್ಸ್:

ಕಪ್ಪು ಬೀನ್ಸ್ ಪೌಷ್ಟಿಕಾಂಶದ ಆಗರವಾಗಿದ್ದು, ಅದು ಉತ್ತಮ ಪ್ರಮಾಣದ ಫೈಬರ್, ಪ್ರೋಟೀನ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ದೇಹಕ್ಕೆ ಒದಗಿಸುತ್ತದೆ. ಅವು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ. ಅಂದರೆ ಅವು ರಕ್ತದಲ್ಲಿನ ಸಕ್ಕರೆಯ ಮಟ್ಟಗಳ ಮೇಲೆ ಕನಿಷ್ಠ ಪರಿಣಾಮ ಬೀರುತ್ತವೆ. ಕಪ್ಪು ಬೀನ್ಸ್ ಅನ್ನು ಸಲಾಡ್‌ಗಳು, ಬರ್ರಿಟೊಗಳಿಗೆ ಸೇರಿಸಬಹುದು ಅಥವಾ ಸಸ್ಯಾಹಾರಿ ಬರ್ಗರ್‌ಗಳಲ್ಲಿ ಉಪಯೋಗಿಸಬಹುದು.

ಇದನ್ನೂ ಓದಿ: ಮಧುಮೇಹಿಗಳ ದೇಹದಲ್ಲಿ ಈ ಲಕ್ಷಣ ಕಂಡುಬಂದರೆ ಎಂದಿಗೂ ನಿರ್ಲಕ್ಷ್ಯಬೇಡ

ಕಿಡ್ನಿ ಬೀನ್ಸ್:

ಕಿಡ್ನಿ ಬೀನ್ಸ್ ಫೈಬರ್​ನಿಂದ ತುಂಬಿರುತ್ತದೆ. ಇದು ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇದು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಇತರ ಪ್ರಯೋಜನಕಾರಿ ಪೋಷಕಾಂಶಗಳನ್ನು ಹೊಂದಿರುತ್ತವೆ.

ಹೆಸರುಕಾಳು:

ಹೆಸರು ಕಾಳಿನಲ್ಲಿ ಕ್ಯಾಲೋರಿಗಳು ಕಡಿಮೆ ಇರುತ್ತದೆ. ಫೈಬರ್ ಮತ್ತು ಪ್ರೊಟೀನ್ ಅಂಶ ಹೆಚ್ಚಾಗಿರುತ್ತದೆ. ಅವು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೆಸರು ಕಾಳುಗಳನ್ನು ಸೂಪ್‌ಗಳು, ಸಲಾಡ್, ಇತರೆ ಪದಾರ್ಥಗಳಲ್ಲಿ ಬಳಸಬಹುದು. ಮೊಳಕೆಯೊಡೆದ ಹೆಸರು ಕಾಳುಗಳು ಕೂಡ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ