AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World TB Day 2026: ಟಿಬಿ ರೋಗದ ಲಕ್ಷಣಗಳೇನು? ಅದನ್ನು ತಡೆಗಟ್ಟುವುದು ಹೇಗೆ?

ಟಿಬಿ ಒಂದು ಸಾಂಕ್ರಾಮಿಕ, ಮಾರಣಾಂತಿಕ ರೋಗವಾಗಿದ್ದು, ಇದು ಪ್ರಾಥಮಿಕವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ, ಆದರೆ ಸಮಯೋಚಿತ ಅರಿವು ಮತ್ತು ಚಿಕಿತ್ಸೆಯಿಂದ ಇದನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮಾರ್ಚ್‌ 24 ರಂದು ವಿಶ್ವ ಕ್ಷಯರೋಗ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವೇನು ಎಂಬುದನ್ನು ತಿಳಿಯೋಣ ಬನ್ನಿ.

World TB Day 2026: ಟಿಬಿ ರೋಗದ ಲಕ್ಷಣಗಳೇನು? ಅದನ್ನು ತಡೆಗಟ್ಟುವುದು ಹೇಗೆ?
ವಿಶ್ವ ಕ್ಷಯರೋಗ ದಿನImage Credit source: png magic
ಮಾಲಾಶ್ರೀ ಅಂಚನ್​
|

Updated on: Mar 24, 2026 | 9:40 AM

Share

ಕ್ಷಯರೋಗ (TB) ಎನ್ನುವುದು ಶ್ವಾಸಕೋಶದ  ಮೇಲೆ ಪರಿಣಾಮ ಬೀರುವ ಮಾರಣಾಂತಿಕ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ʼಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್‌ʼ ಎಂಬ ಬ್ಯಾಕ್ಟೀರಿಯಾದ ಕಾರಣದಿಂದ ಉಂಟಾಗುತ್ತದೆ. ಕ್ಷಯರೋಗವು ಹೆಚ್ಚಾಗಿ ಶ್ವಾಸಕೋಶದ ಮೇಲೆ ದೀರ್ಘ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೆ ಸಾಂಕ್ರಾಮಿಕವಾಗಿ ಹರಡುವ ಈ ರೋಗವು ಮೆದುಳು, ಬೆನ್ನು ಹುರಿ, ಕಿಬ್ಬೊಟ್ಟೆ, ಮೂತ್ರಪಿಂಡ ಸೇರಿದಂತೆ ದೇಹದ ಇತರ ಭಾಗಗಳ ಮೇಲೆ ಕೂಡಾ ಇದು ಪರಿಣಾಮ ಬೀರುತ್ತದೆ.  ಪ್ರತಿ ವರ್ಷ ಲಕ್ಷಾಂತರ ಜನ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಕೊಲ್ಲುತ್ತದೆ. ಆದರೆ  ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳುವ ಮೂಲಕ ಈ ರೋಗವನ್ನು ಈ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಮತ್ತು ತಡೆಗಟ್ಟಬಹುದು. ಹೀಗಾಗಿ ಕ್ಷಯರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದರ ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಮಾರ್ಚ್‌ 24 ರಂದು ವಿಶ್ವ ಕ್ಷಯರೋಗ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಕ್ಷಯರೋಗ ದಿನದ ಇತಿಹಾಸವೇನು?

ಡಾ. ರಾಬರ್ಟ್ ಕೋಚ್ ಕ್ಷಯರೋಗಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾವಾದ ಮೈಕೋಬ್ಯಾಕ್ಟೀರಿಯಂ ಬ್ಯಾಕ್ಟೀರಿಯಾವನ್ನು ಕಂಡು ಹಿಡಿದರು. ಡಾ. ರಾಬರ್ಟ್ ಕೋಚ್ ಅವರ ಟಿಬಿ ಬ್ಯಾಕ್ಟೀರಿಯಾದ ಈ ಆವಿಷ್ಕಾರವು ವೈದ್ಯಕೀಯ ವಿಜ್ಞಾನದಲ್ಲಿ ಒಂದು ಪ್ರಮುಖ ಹೆಜ್ಜೆಯಾಯಿತು. ಈ ನಿಟ್ಟಿನಲ್ಲಿ ಇವರ ಈ ಆವಿಷ್ಕಾರವನ್ನು ನೆನಪಿಸುವ ಸಲುವಾಗಿ 1982 ರಲ್ಲಿ ಮಾರ್ಚ್ 24 ರಂದು ವಿಶ್ವ ಆರೋಗ್ಯ ಸಂಸ್ಥೆಯು ಮೊದಲ ಬಾರಿಗೆ ಕ್ಷಯ ರೋಗ ದಿನವನ್ನು ಆಚರಿಸಿತು. ಅಂದಿನಿಂದ ಪ್ರತಿವರ್ಷ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಕ್ಷಯರೋಗ ದಿನದ ಮಹತ್ವವೇನು?

  • ವಿಶ್ವ ಕ್ಷಯರೋಗ ದಿನದ ಆಚರಣೆಯ ಪ್ರಮುಖ ಉದ್ದೇಶವೆಂದರೆ ಕ್ಷಯರೋಗದ (ಟಿಬಿ) ಗಂಭೀರತೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅದರ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯನ್ನು ಉತ್ತೇಜಿಸುವುದು.
  • ವಿಶ್ವದೆಲ್ಲೆಡೆ ಅನೇಕ ಜನರು ಟಿಬಿ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಈ ಕ್ಷಯರೋಗದ ಲಕ್ಷಣಗಳು, ಕಾರಣಗಳು ಮತ್ತು ತಡೆಗಟ್ಟುವ ವಿಧಾನಗಳ ಬಗ್ಗೆ ಸಾಮಾನ್ಯ ಜನರಿಗೆ ಮಾಹಿತಿಯನ್ನು ನೀಡಲಾಗುತ್ತದೆ.
  • ಈ ದಿನದಂದು, ವಿವಿಧ ಆರೋಗ್ಯ ಸಂಸ್ಥೆಗಳು, ಸರ್ಕಾರಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಕ್ಷಯರೋಗದ (ಟಿಬಿ) ಲಕ್ಷಣಗಳು, ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತವೆ.
  • ವಿಶ್ವ ಕ್ಷಯರೋಗ ದಿನ ಕೇವಲ ಜಾಗೃತಿ ದಿನವಲ್ಲ, ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಜಾಗತಿಕ ಬದ್ಧತೆಯಾಗಿದೆ.

ಟಿಬಿ ಎಂದರೇನು ಮತ್ತು ಅದು ಹೇಗೆ ಹರಡುತ್ತದೆ?

ಕ್ಷಯರೋಗವು ಕ್ಷಯರೋಗ ಬ್ಯಾಕ್ಟೀರಿಯಾದಿಂದ (ಮೈಕೋಬ್ಯಾಕ್ಟೀರಿಯಂ ಟ್ಯೂಬರ್ಕ್ಯುಲೋಸಿಸ್) ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಪ್ರಾಥಮಿಕವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ನಂತರ ಇದು ದೇಹದ ಇತರ ಭಾಗಗಳಿಗೂ ಹರಡಬಹುದು.

  • ಟಿಬಿ ಗಾಳಿಯ ಮೂಲಕ ಹರಡುತ್ತದೆ. ಟಿಬಿ ಸೋಂಕಿತ ವ್ಯಕ್ತಿಯು ಕೆಮ್ಮಿದಾಗ, ಸೀನಿದಾಗ ಅಥವಾ ಜೋರಾಗಿ ಮಾತನಾಡಿದಾಗ, ಬ್ಯಾಕ್ಟೀರಿಯಾಗಳು ಗಾಳಿಯಲ್ಲಿ ಹರಡುತ್ತವೆ.
  • ಆರೋಗ್ಯವಂತ ವ್ಯಕ್ತಿ ಅದೇ ಗಾಳಿಯನ್ನು ಉಸಿರಾಡಿದರೆ, ಅವನಿಗೂ ಟಿಬಿ ಬರಬಹುದು.
  • ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರನ್ನು ಕ್ಷಯರೋಗ ಬೇಗನೆ ಬಾಧಿಸುತ್ತದೆ.

ಟಿಬಿಯ ಸಾಮಾನ್ಯ ಲಕ್ಷಣಗಳೇನು?

  • 2 ವಾರಗಳಿಗಿಂತ ಹೆಚ್ಚು ಕಾಲ ನಿರಂತರ ಕೆಮ್ಮು
  • ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು
  • ಚಳಿ ಜ್ವರ
  • ಎದೆ ನೋವು
  • ಉಸಿರಾಟದ ತೊಂದರೆ
  • ತೂಕ ಇಳಿಕೆ
  • ರಾತ್ರಿಯಲ್ಲಿ ಬೆವರುವುದು
  • ಹಸಿವಿನ ಕೊರತೆ

ಈ ಲಕ್ಷಣಗಳು ದೀರ್ಘಕಾಲದವರೆಗೆ ಮುಂದುವರಿದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಕ್ಷಯರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಅದು ದೀರ್ಘಕಾಲದ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಹಾಗೂ ಶ್ವಾಸಕೋಶಕ್ಕೆ ಹಾನಿಯನ್ನು ಉಂಟು ಮಾಡಬಹುದು.

ಇದನ್ನೂ ಓದಿ: ಲಕ್ಷಣಗಳು ದೇಹದಲ್ಲಿ ಕಂಡುಬಂದ್ರೆ ನಿಮಗೆ ಹೃದಯದಲ್ಲಿ ಬ್ಲಾಕೇಜ್ ಇರಬಹುದು ಎಚ್ಚರ!

ಕ್ಷಯರೋಗ ತಡೆಗಟ್ಟಲು 5 ಮಾರ್ಗಗಳು:

  • ಬಿಸಿಜಿ ಲಸಿಕೆ ಪಡೆಯಿರಿ: ಮಕ್ಕಳನ್ನು ಟಿಬಿಯಿಂದ ರಕ್ಷಿಸಲು ಈ ಲಸಿಕೆ ಅತ್ಯಗತ್ಯ.
  • ಸೋಂಕಿತ ವ್ಯಕ್ತಿಯಿಂದ ಅಂತರ ಕಾಯ್ದುಕೊಳ್ಳಿ: ಯಾರಿಗಾದರೂ ಕ್ಷಯರೋಗವಿದ್ದರೆ, ಅವರಿಗೆ ಹೆಚ್ಚು ಹತ್ತಿರವಾಗಬೇಡಿ.
  • ಮಾಸ್ಕ್ ಧರಿಸಿ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಿ: ಕೆಮ್ಮುವಾಗ ಅಥವಾ ಸೀನುವಾಗ ಬಾಯಿಯನ್ನು ಮುಚ್ಚಿಕೊಳ್ಳಿ ಮತ್ತು ಮಾಸ್ಕ್ ಧರಿಸಿ.
  • ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ: ಪೌಷ್ಟಿಕ ಆಹಾರವನ್ನು ಸೇವಿಸಿ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ.
  • ಕ್ಷಯರೋಗದ ಲಕ್ಷಣಗಳನ್ನು ಗಮನಿಸಿದರೆ, ತಕ್ಷಣ ಪರೀಕ್ಷೆ ಮಾಡಿಸಿ: ಆರಂಭಿಕ ಪತ್ತೆ  ಕ್ಷಯ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಾಯಕವಾಗಿದೆ.

ಹೀಗೆ ಸಮಯೋಚಿತ ಜಾಗೃತಿ ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳುವುದರಿಂದ ಕ್ಷಯರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್