AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Double lung Transplantation:ಏಕಕಾಲದಲ್ಲಿ ಎರಡು ಶ್ವಾಸಕೋಶಗಳ ಶಸ್ತ್ರಚಿಕಿತ್ಸೆ ಯಶಸ್ವಿ; ಭಾರತದಲ್ಲಿ ನಡೆದ ಮೊದಲ ಪ್ರಯೋಗವಿದು

ಇಲ್ಲಿಯವರೆಗೆ ವಿಶ್ವದಲ್ಲಿ ಕೇವಲ 4 ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಭಾರತದಲ್ಲಿ ನಡೆದ ಮೊದಲ ಶ್ವಾಸಕೋಶ ಕಸಿ ಇದಾಗಿದೆ. ಭಾರತದ ವೈದ್ಯಕೀಯ-ಅಂಗಾಂಗ ಕಸಿ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ್ದು ಹೆಮ್ಮೆಯ ವಿಷಯ ಎಂದು ಯಶೋದಾ ಆಸ್ಪತ್ರೆಗಳ ನಿರ್ದೇಶಕ ಡಾ.ಪಾವಸ್ ಗೊರುಕಂಟಿ ಸುದ್ದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Double lung Transplantation:ಏಕಕಾಲದಲ್ಲಿ ಎರಡು ಶ್ವಾಸಕೋಶಗಳ ಶಸ್ತ್ರಚಿಕಿತ್ಸೆ ಯಶಸ್ವಿ; ಭಾರತದಲ್ಲಿ ನಡೆದ ಮೊದಲ ಪ್ರಯೋಗವಿದು
Double lung Transplantation
Follow us
ಅಕ್ಷತಾ ವರ್ಕಾಡಿ
|

Updated on: Oct 13, 2023 | 7:07 PM

ಹೈದರಾಬಾದ್​​​:  ಸಿಕಂದರಾಬಾದ್​​​ನ ಯಶೋದಾ ಆಸ್ಪತ್ರೆಯ ವೈದ್ಯರು ಏಕಕಾಲದಲ್ಲಿ ಎರಡು ಶ್ವಾಸಕೋಶಗಳ ಶಸ್ತ್ರಚಿಕಿತ್ಸೆ (Double Lung Transplant) ಯಶಸ್ವಿಯಾಗಿ ನಡೆಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಮಹಬೂಬಾಬಾದ್ ಜಿಲ್ಲೆಯ ಮುರ್ರಾಯಗುಡೆಮ್‌ನ ರೋಹಿತ್ (23) ಕಳೆದ ತಿಂಗಳು ವೈಯಕ್ತಿಕ ಕಾರಣಗಳಿಂದ ನೊಂದು ಪ್ಯಾರಾಕ್ವಾಟ್ ಹರ್ಬಲ್ ಔಷಧ ಅಂದರೆ ಅಪಾಯಕಾರಿ ಕೀಟನಾಶಕ ಸೇವಿಸಿದ್ದರು. ಪರಿಣಾಮ ರೋಹಿತ್ ನ ಶ್ವಾಸಕೋಶ, ಕಿಡ್ನಿ, ಲಿವರ್ ಗೆ ತೀವ್ರ ಹಾನಿಗೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾರಂಭದಲ್ಲಿ ಮೆಕ್ಯಾನಿಕಲ್ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚುವರಿ ಕಾರ್ಪೋರಲ್ ಸಪೋರ್ಟ್ (ECMO) ನಲ್ಲಿ ಚಿಕಿತ್ಸೆಯನ್ನು ಮಾಡಲಾಗಿದೆ. ಆದರೆ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಕಾರಣ ವೈದ್ಯರು ಶ್ವಾಸಕೋಶ ಕಸಿ ಮಾಡಲು ಮುಂದಾಗಿದ್ದಾರೆ. ರೋಗಿಯ ಕುಟುಂಬ ಸದಸ್ಯರ ಒಪ್ಪಿಗೆ ಪಡೆದು “ಜೀವನ್ ದಾನ್” ಅಂಗಾಂಗ ದಾನ ವಿಭಾಗದಿಂದ ಬ್ರೈನ್​​​ ಡೆಡ್​​​ ಆಗಿ ಸತ್ತ ವ್ಯಕ್ತಿಯಿಂದ ಸಂಗ್ರಹಿಸಿದ ಶ್ವಾಸಕೋಶವನ್ನು ರೋಹಿತ್ ಕಸಿ ಮಾಡಲಾಗಿದೆ. ಈ ಮೂಲಕ ಯಶೋದಾ ಆಸ್ಪತ್ರೆಯ ವೈದ್ಯರ ತಂಡ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಇಲ್ಲಿಯವರೆಗೆ ವಿಶ್ವದಲ್ಲಿ ಕೇವಲ 4 ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್​ದು, ಭಾರತದಲ್ಲಿ ನಡೆದ ಮೊದಲ ಶ್ವಾಸಕೋಶ ಕಸಿ ಇದಾಗಿದೆ. ಭಾರತೀಯ ವೈದ್ಯಕೀಯ-ಅಂಗಾಂಗ ಕಸಿ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ್ದು ಹೆಮ್ಮೆಯ ವಿಷಯ ಎಂದು ಯಶೋದಾ ಆಸ್ಪತ್ರೆಗಳ ನಿರ್ದೇಶಕ ಡಾ.ಪಾವಸ್ ಗೊರುಕಂಟಿ ಸುದ್ದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:  ಸ್ಮಾರ್ಟ್​ಫೋನ್ ಮೂಲಕ ಕ್ಯಾನ್ಸರ್ ಪತ್ತೆ; ಹೈದರಾಬಾದ್ ಸಂಶೋಧಕರ ಹೊಸ ಆವಿಷ್ಕಾರ

ಸಿಕಂದರಾಬಾದ್ ಯಶೋದಾ ಆಸ್ಪತ್ರೆ, ಹಿರಿಯ ಇಂಟರ್ವೆನ್ಷನಲ್ ಪಲ್ಮನಾಲಜಿ ತಜ್ಞ ಡಾ. ಹರಿಕಿಶನ್ ಗೋನುಗುಂಟ್ಲ, ಡಾ. ಕೆ.ಆರ್. ಬಾಲ ಸುಬ್ರಹ್ಮಣ್ಯಂ, ಡಾ. ಮಂಜುನಾಥ ಬಾಳೆ, ಡಾ.ಚೇತಾಸ್, ಡಾ. ಶ್ರೀಚರಣ್, ಡಾ. ವಿಮಿ ವರ್ಗೀಸ್ ಸೇರಿದಂತೆ ವೈದ್ಯಕೀಯ ತಂಡವು ಆರು ಗಂಟೆಗಳ ಕಾರ್ಯಾಚರಣೆಯ ನಂತರ ರೋಹಿತ್ ಗೆ “ಶ್ವಾಸಕೋಶ ಕಸಿ” ಶಸ್ತ್ರಚಿಕಿತ್ಸೆಯನ್ನು ಯಶಸ್ವಿಗೊಳಿಸಿದೆ. 24 ಗಂಟೆಗಳ ಕಸಿ ನಂತರ, ವೆಂಟಿಲೇಟರ್‌ನಲ್ಲಿ ಮತ್ತು ಎರಡು ವಾರಗಳ ಐಸಿಯುನಲ್ಲಿ, ನಂತರ ರೋಹಿತ್ ವೇಗವಾಗಿ ಚೇತರಿಸಿಕೊಂಡಿದ್ದರಿಂದ ಜರ್ನರ್​​​​ ವಾರ್ಡ್​ಗೆ ಸ್ಥಳಾಂತರಿಸಲಾಯಿತು. 15 ದಿನಗಳ ನಂತರ ರೋಹಿತ್ ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಯಶೋದಾ ವೈದ್ಯರು ತಿಳಿಸಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್