AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Post Covid: ದೀರ್ಘಕಾಲಿಕ ಕೊವಿಡ್​ ಬಳಿಕ ಅನುಸರಿಸಬಹುದಾದ ವ್ಯಾಯಾಮ ಭಂಗಿಗಳು

ಯೋಗಾಸನ: ದೇಹದ ಸಮತೋಲನವನ್ನು ಕಾಪಾಡಿಕೊಳ್ಳಲು ವೃಕ್ಷಾಸನ ಸಹಾಯಕವಾಗಿದೆ. ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಜತೆಗೆ ಮಾನಸಿಕ ಅಸ್ವಸ್ಥತೆಯನ್ನು ಸುಧಾರಿಸುತ್ತದೆ.

Post Covid: ದೀರ್ಘಕಾಲಿಕ ಕೊವಿಡ್​ ಬಳಿಕ ಅನುಸರಿಸಬಹುದಾದ ವ್ಯಾಯಾಮ ಭಂಗಿಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 27, 2021 | 1:53 PM

Share

ದೇಶ ಕೊವಿಡ್​-19 ಸಾಂಕ್ರಾಮಿಕದಿಂದಾಗಿ ನಲುಗಿ ಹೋಗಿದೆ. ಕೊವಿಡ್​ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಾ ಸಾಗುತ್ತಿದ್ದರೂ ಎರಡನೇ ಅಲೆ, ಮೂರನೇ ಅಲೆಯ ಹೆಸರು ಜನರ ತಲೆಕೆಡಿಸಿದೆ. ಹೀಗಿರುವಾಗ ಕೊವಿಡ್​ ಸೋಂಕಿನಿಂದ ಹೊರಬಂದ ಮೇಲೂ ಸಹ ಲಕ್ಷಣಗಳು ಕಾಣಿಸಿಕೊಳ್ಳುತ್ತಿರಬಹುದು. ಹೀಗಿರುವಾಗ ಯೋಗಾಭ್ಯಾಸದಿಂದ ನಿಮ್ಮ ದೇಹವನ್ನು ಸದೃಢವಾಗಿರಿಸಿಕೊಳ್ಳಬಹುದು. ಹಾಗಿದ್ದರೆ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಮತ್ತು ಉಸಿರಾಟ ಕ್ರಿಯೆಯನ್ನು ಸರಾಗಗೊಳಿಸುವ ಯೋಗ ಭಂಗಿಗಳ ಕುರಿತಾಗಿ ತಿಳಿಯೋಣ.

ದೀರ್ಘಕಾಲಿಕ ಕೊವಿಡ್​ ಸಮಯಲ್ಲಿ ನಿಮ್ಮ ದೇಹ ನಿಧಾನವಾಗಿ ಸದೃಢವಾಗುತ್ತಾ ಹೋಗಬೇಕು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಜತೆಗೆ ಮಾನಸಿಕವಾಗಿ ಸದೃಢರಾಗಬೇಕು. ಅನಗತ್ಯ ಚಿಂತೆಯು ಮನಷ್ಯನ ಆರೋಗ್ಯದ ಸ್ಥಿತಿಯನ್ನು ಹದಗೆಡಿಸುತ್ತದೆ. ಹಾಗಾಗಿ ವ್ಯಾಯಾಮ ಮತ್ತು ಯೋಗಾಸನದ ಮೂಲಕವಾಗಿ ಇಂತಹ ಸಮಸ್ಯೆಗಳಿಂದ ದೂರವಿರಬಹುದು.

ಅನುಲೋಮ- ವಿಲೋಮ ಪ್ರಾಣಾಯಾಮವನ್ನು ನೀವು ಮಾಡಬಹುದು. ಈ ಮೂಲಕ ನಿಮ್ಮ ಉಸಿರಾಟ ಕ್ರಿಯೆ ಸರಾಗವಾಗುತ್ತದೆ. ಜತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ. ಶ್ವಾಸಕೋಶದ ಸದೃಢತೆ ಮುಖ್ಯವಾಗಿರುವುದರಿಂದ ಅನುಲೋಮ ವಿಲೋಮ ಪ್ರಾಣಾಯಾಮದ ಮೂಲಕವಾಗಿ ಉಸಿರಾಟ ಕ್ರಿಯೆ ಸರಾಗವಾಗುತ್ತದೆ.

ಭುಜಂಗಾಸನ ದೇಹದ ನರಭಾಗಗಳನ್ನು ಸದೃಢಗೊಳಿಸುತ್ತದೆ. ಬೆನ್ನಿನ ಹುರಿಯನ್ನು ಹಾಗೂ ಸ್ನಾಯುಗಳನ್ನು ಬಲಪಡಿಸಿಕೊಳ್ಳಲು ಸಹಾಯವಾಗುತ್ತದೆ. ಶ್ವಾಸಕೋಶ ಹಿಗ್ಗುವುದರಿಂದ ಉಸಿರಾಟ ಕ್ರಿಯೆ ಸರಾಗವಾಗಲು ಸಹಾಯವಾಗುತ್ತದೆ. ಮನಸ್ಸಿನ ಶಾಂತಿಯ ಜತೆಗೆ ದೇಹ ಸಡಿಲಗೊಳ್ಳಲು ಸಹಾಯ ಮಾಡುತ್ತದೆ.

ಕಾಲು, ಸೊಂಟ ನೋವಿಗೆ ಪರಿಹಾರ ಕಂಡುಕೊಳ್ಳಲು ಪಶ್ಚಿಮೊತ್ತಾನಾಸನ ಯೋಗ ಭಂಗಿಯನ್ನು ಮಾಡುತ್ತಾರೆ. ಜತೆಗೆ ಉಸಿರಾಟ ಕ್ರಿಯೆ ಸರಾಗವಾಗಲು ಸಹಾಯ ಮಾಡುತ್ತವೆ. ರಕ್ತದೊತ್ತಡದಂತಹ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಈ ಯೋಗ ಭಂಗಿ ಸಹಾಯಕವಾಗಿದೆ.

ದೇಹದ ಸಮತೋಲನವನ್ನು ಕಾಪಾಡಿಕೊಳ್ಳಲು ವೃಕ್ಷಾಸನ ಸಹಾಯಕವಾಗಿದೆ. ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಜತೆಗೆ ಮಾನಸಿಕ ಅಸ್ವಸ್ಥತೆಯನ್ನು ಸುಧಾರಿಸುತ್ತದೆ. ಉಸಿರಾಟ ಕ್ರಿಯೆಯನ್ನು ಸುಧಾರಿಸುವದರ ಜತೆಗೆ ದೇಹದ ಸದೃಢತೆಯನ್ನು ಕಾಪಾಡಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ:

International Yoga Day 2021: ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಾಯ ಮಾಡುವ ಐದು ಯೋಗಾಸನ

Yoga Benefits: ಬೆಳಗ್ಗೆ ಬೇಗ ಎದ್ದು ಮಾಡುವ ಯೋಗ ಭಂಗಿಗಳಿವು

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ