AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day :ಮೊದಲ ಬಾರಿಗೆ ಯೋಗ ಮಾಡ್ತಾ ಇದ್ದೀರಾ? ತಜ್ಞರು ಹೇಳಿರುವ ಈ ವಿಷಯಗಳನ್ನು ಮರಿಬೇಡಿ

ನೀವು ಕೂಡ ಮೊದಲ ಬಾರಿಗೆ ಯೋಗ ಮಾಡಲು ಪ್ರಾರಂಭ ಮಾಡಬೇಕು ಎಂದು ಅಂದುಕೊಂಡಿದ್ದರೆ ತಜ್ಞರು ನೀಡಿರುವ ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಏಕೆಂದರೆ ಯೋಗ ಮಾಡುವುದು ತಪ್ಪಾದರೆ, ಅದು ಪ್ರಯೋಜನಗಳನ್ನು ನೀಡುವ ಬದಲು ಹಾನಿಯನ್ನುಂಟುಮಾಡುವುದೇ ಹೆಚ್ಚಾಗಿರುತ್ತದೆ. ಹಾಗಾಗಿ ಯೋಗದ ಆರಂಭಕ್ಕೂ ಮೊದಲು ನೀವು ಮಾಡಿಕೊಳ್ಳುವ ಪೂರ್ವ ತಯಾರಿ ಬಹಳ ಮುಖ್ಯವಾಗಿರುತ್ತದೆ. ಹಾಗಾದರೆ ತಜ್ಞರು ಮೊದಲ ಬಾರಿಗೆ ಯೋಗ ಮಾಡುವವರಿಗೆ ನೀಡಿರುವ ಸಲಹೆಗಳು ಯಾವವು ಎಂಬುದನ್ನು ತಿಳಿದುಕೊಳ್ಳಿ.

International Yoga Day :ಮೊದಲ ಬಾರಿಗೆ ಯೋಗ ಮಾಡ್ತಾ ಇದ್ದೀರಾ? ತಜ್ಞರು ಹೇಳಿರುವ ಈ ವಿಷಯಗಳನ್ನು ಮರಿಬೇಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
|

Updated on: Jun 17, 2025 | 9:25 PM

Share

ಆರೋಗ್ಯವಾಗಿರಬೇಕು ಎಂಬ ಹಂಬಲದಿಂದ ತಪ್ಪದೆ ಯೋಗ (Yoga) ಮಾಡುವವರು ನಮ್ಮ ಮಧ್ಯೆಯೇ ಇದ್ದಾರೆ. ಆದರೆ ಯೋಗ ಮಾಡುವುದಕ್ಕೆ ಆರಂಭ ಮಾಡಿ ಪ್ರತಿದಿನ ಯೋಗ ಮಾಡಬೇಕೆಂದು ಅಂದುಕೊಳ್ಳುವವರು ಕೂಡ ಅನೇಕರಿದ್ದಾರೆ. ಆ ರೀತಿ ದೃಢ ಸಂಕಲ್ಪ ಮಾಡಿಕೊಂಡು ಮೊದಲ ಬಾರಿಗೆ ಯೋಗ ಮಾಡಲು ಪ್ರಾರಂಭಿಸುವವರಿಗೆ ಸ್ವಲ್ಪ ಭಯ ಇದ್ದೆ ಇರುತ್ತದೆ. ಏಕೆಂದರೆ ಹೇಗೆ ಮಾಡಬೇಕು? ಸರಿಯಾಗದಿದ್ದರೆ? ಹೀಗೆ ನಾನಾ ರೀತಿಯ ಪ್ರಶ್ನೆಗಳು ಮನಸ್ಸಿನಲ್ಲಿ ಕೊರೆಯುತ್ತದೆ. ಆದರೆ ಯೋಗ ತಜ್ಞರು ಹೇಳುವ ಪ್ರಕಾರ ಮುಖ್ಯವಾಗಿ ಯೋಗ ಆರಂಭ ಮಾಡುವ ಮೊದಲು ಕೆಲವು ಅಂಶಗಳನ್ನು ನೆನಪಿನಲ್ಲಿಡಬೇಕು. ಈ ಸಲಹೆಗಳು ನಮ್ಮ ಆರೋಗ್ಯ (Health) ಕಾಪಾಡಿಕೊಳ್ಳಲು ತುಂಬಾ ಸಹಕಾರಿಯಾಗುತ್ತದೆ. ಜೊತೆಗೆ ಶಿಸ್ತಿನಿಂದ ಯೋಗ ಮಾಡಲು ಈ ಸಲಹೆಗಳು ಸಹಾಯ ಮಾಡುತ್ತದೆ. ಹಾಗಾದರೆ ಯೋಗದ ಆರಂಭಕ್ಕೂ ಮೊದಲು ನಮ್ಮ ತಯಾರಿ ಹೇಗಿರಬೇಕಾಗುತ್ತದೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಯೋಗವನ್ನು ಪ್ರಾರಂಭಿಸುವ ಮೊದಲು ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಅನೇಕ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕಾಗುತ್ತದೆ. ಏಕೆಂದರೆ ಈ ಸಮಯದಲ್ಲಿ ಮಾಡುವ ತಪ್ಪುಗಳು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ನೀವು ಯೋಗವನ್ನು ಪ್ರಾರಂಭಿಸುವಾಗ ಈ ಅಂಶಗಳನ್ನು ನೆನಪಿಟ್ಟುಕೊಳ್ಳಿ, ಜೊತೆಗೆ ಅದನ್ನು ತಪ್ಪದೆ ಪಾಲಿಸಿ.

ಖಾಲಿ ಹೊಟ್ಟೆಯಲ್ಲಿ ಯೋಗ ಮಾಡಿ:

ಯೋಗ ತಜ್ಞೆ ಡಾ. ಸುಪ್ರತಾ ಅವರು ಹೇಳುವ ಪ್ರಕಾರ, ಯೋಗವನ್ನು ಯಾವಾಗಲೂ ಖಾಲಿ ಹೊಟ್ಟೆಯಲ್ಲಿರುವಾಗಲೇ ಮಾಡಬೇಕು. ನೀವು ಯೋಗ ಮಾಡುವ ಅರ್ಧ ಗಂಟೆ ಮೊದಲು ನೀರು ಕುಡಿಯಬಹುದು ಅದರ ಹೊರತಾಗಿ ಯಾವುದೇ ರೀತಿಯ ಆಹಾರ ನಿಮ್ಮ ಹೊಟ್ಟೆಯಲ್ಲಿರದಂತೆ ನೋಡಿಕೊಳ್ಳಬೇಕಾಗುತ್ತದೆ. ನೀವು ಬೆಳಿಗ್ಗೆ ಬೇಗನೆ ಯೋಗ ಮಾಡಲು ಸಾಧ್ಯವಾಗದಿದ್ದಾಗ ಊಟ ಮಾಡಿದ ಕನಿಷ್ಠ 3 ಗಂಟೆಗಳ ನಂತರ ಯೋಗ ಮಾಡಬಹುದು. ನೀವು ಬೆಳಗ್ಗಿನ ತಿಂಡಿಯಾದ ಮೇಲೆ ಯೋಗ ಮಾಡುತ್ತೀರಿ ಎಂದಾದರೆ ಉಪಾಹಾರದ ನಂತರ ಕನಿಷ್ಠ 2 ಗಂಟೆಗಳ ಅಂತರವಿಟ್ಟುಕೊಳ್ಳಬೇಕು. ಆದರೆ ಯಾವುದೇ ಕಾರಣಕ್ಕೂ ತಿಂಡಿ, ಊಟ ಮಾಡಿದ ತಕ್ಷಣ ಯೋಗ ಮಾಡಬಾರದು.

ಇದನ್ನೂ ಓದಿ
Image
ಬಿ12 ಅಂಶ ಕಡಿಮೆ ಆಗಿದ್ಯಾ? ಈ ಒಂದು ಹಣ್ಣನ್ನು ಸೇವನೆ ಮಾಡಿ
Image
ಈ ಆಹಾರ ಹೃದಯಕ್ಕೆ ಒಳ್ಳೆಯದಲ್ಲ ಎಷ್ಟೇ ಇಷ್ಟವಾಗಿದ್ದರೂ ತಿನ್ನಬೇಡಿ
Image
ನಗುವಾಗ ಡಿಂಪಲ್ ಬೀಳೋದು ಅದೃಷ್ಟ ಅಲ್ಲ, ಇದಕ್ಕೆ ಈ ಆರೋಗ್ಯ ಸಮಸ್ಯೆಯೇ ಕಾರಣ
Image
ರಾತ್ರಿ ಪದೇ ಪದೇ ಎಚ್ಚರವಾಗುತ್ತಾ? ಈ ರೀತಿ ಆಗುವುದಕ್ಕೆ ಇದೇ ಕಾರಣ

ಯೋಗ ಭಂಗಿಗಳನ್ನು ಸರಿಯಾಗಿ ಮಾಡಿ:

ಯೋಗಾಭ್ಯಾಸ ಮಾಡುವಾಗ ಸರಿಯಾದ ಭಂಗಿಯಲ್ಲಿ ಮಾಡಿ. ಇದು ಎಲ್ಲಕಿಂತ ಮುಖ್ಯವಾದ ಅಂಶ. ಏಕೆಂದರೆ ಯೋಗ ಮಾಡುವುದು ತಪ್ಪಾಗಿದ್ದರೆ, ಅದು ಪ್ರಯೋಜನಗಳನ್ನು ನೀಡುವ ಬದಲು ಹಾನಿಯನ್ನುಂಟುಮಾಡಬಹುದು. ಪ್ರತಿಯೊಂದು ಯೋಗ ಭಂಗಿಯನ್ನು ಹೇಗೆ ಮಾಡಬೇಕು ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ನೀವು ದೈಹಿಕ ನೋವು ಅಥವಾ ಅನಾರೋಗ್ಯವನ್ನು ನಿವಾರಿಸಲು ಯೋಗ ಮಾಡುತ್ತಿದ್ದರೆ, ತಜ್ಞರೊಂದಿಗೆ ಸಮಾಲೋಚಿಸಿ ಅದಕ್ಕೆ ಸೂಕ್ತವಾಗಿರುವ ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ. ತಪ್ಪಾದ ಯೋಗ ಭಂಗಿಗಳನ್ನು ಆಯ್ಕೆ ಮಾಡುವುದರಿಂದ ಸಮಸ್ಯೆ ಇನ್ನಷ್ಟು ಹದಗೆಡಬಹುದು. ಅಲ್ಲದೆ ತಾಜಾ ಗಾಳಿ ಬರುವಲ್ಲಿ ಯೋಗಾಭ್ಯಾಸ ಮಾಡಿದರೆ ಅದು ನಿಮಗೆ ಹೆಚ್ಚು ಪ್ರಯೋಜನಕಾರಿಯಾಗಬಹುದು ಎಂದು ತಜ್ಞರು ಹೇಳುತ್ತಾರೆ.

ಬಟ್ಟೆ ಆಯ್ಕೆ:

ಯೋಗ ಮಾಡುವುದಕ್ಕೆ ಸರಿಯಾದ ಬಟ್ಟೆಗಳನ್ನು ಆಯ್ಕೆ ಮಾಡುವುದು ಕೂಡ ಬಹಳ ಮುಖ್ಯ. ಅದರಲ್ಲಿಯೂ ವಿಶೇಷವಾಗಿ ಸರಿಯಾದ ಒಳ ಉಡುಪುಗಳನ್ನು ಆರಿಸಿಕೊಳ್ಳುವುದು . ಬಹಳ ಮುಖ್ಯವಾಗುತ್ತದೆ. ನಿಮ್ಮ ದೇಹಕ್ಕೆ ಕಂಫರ್ಟ್ ನೀಡುವಂತಹ ಉಡುಗೆಗೆಳನ್ನು ಆಯ್ಕೆ ಮಾಡಿಕೊಳ್ಳಿ, ಆದಷ್ಟು ಅದು ಬಿಗಿಯಾಗಿ ಇರದಂತೆ ನೋಡಿಕೊಳ್ಳಿ. ಅಂದರೆ ಸರಿಯಾಗಿ ಉಸಿರಾಡಬಹುದಾದ ಬಟ್ಟೆಗಳ ಆಯ್ಕೆ ಮಾಡಿ. ಹೆಚ್ಚುವರಿಯಾಗಿ, ಹವಾಮಾನಕ್ಕೆ ಅನುಗುಣವಾಗಿ ಅಂತಹ ಬಟ್ಟೆಗಳನ್ನು ಆರಿಸಿ ಇದರಿಂದ ನೀವು ಸುಲಭವಾಗಿ ಯೋಗವನ್ನು ಅಭ್ಯಾಸ ಮಾಡಬಹುದು.

ಇದನ್ನೂ ಓದಿ: ವಾಕಿಂಗ್ ಕೂಡ ಒಂದು ಯೋಗ, ನಡಿಗೆ ಯೋಗದ ಪ್ರಯೋಜನ ಇಲ್ಲಿದೆ

ಯೋಗ ಮ್ಯಾಟ್:

ಯೋಗ ಮಾಡುವುದಕ್ಕೂ ಮೊದಲು ನಿಮ್ಮ ಮ್ಯಾಟ್ ಸರಿಯಾಗಿ ಇದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಯೋಗ ಮ್ಯಾಟ್ ಆರಾಮದಾಯಕವಾಗಿಲ್ಲದಿದ್ದರೆ, ನೀವು ಯೋಗ ಮಾಡುವಾಗ ಹಲವಾರು ರೀತಿಯಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ಅದರಲ್ಲಿಯೂ ಮ್ಯಾಟ್ ಜಾರುವಂತೆ ಇರಬಾರದು ಏಕೆಂದರೆ ಯೋಗ ಮಾಡುವಾಗ ಜಾರಿದರೆ ಆರೋಗ್ಯ ಚೆನ್ನಾಗಿರುವುದಕ್ಕಿಂತ ಹಾಳಾಗುವ ಸಂಭವವೇ ಹೆಚ್ಚಾಗಿರುತ್ತದೆ. ಹಾಗಾಗಿ ಮ್ಯಾಟ್ ಆಯ್ಕೆ ಬಹಳ ಮುಖ್ಯವಾಗುತ್ತದೆ. ಇನ್ನು ಅದರ ಜೊತೆಗೆ ಮ್ಯಾಟ್‌ನ ಶುಚಿತ್ವದ ಬಗ್ಗೆಯೂ ಗಮನ ಕೊಡುವುದು ಬಹಳ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್