AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips: ಕುಳಿತಿರುವುದಕ್ಕಿಂತ ಕೆಟ್ಟ ಅಭ್ಯಾಸ ಮತ್ತೊಂದಿಲ್ಲ; ಡಾ. ದೇವಿ ಪ್ರಸಾದ್ ಶೆಟ್ಟಿ

ಆರೋಗ್ಯಕ್ಕೆ ಪೂರಕವಾಗುವಂತಹ ದಿನಚರಿಯನ್ನು ರೂಢಿಸಿಕೊಳ್ಳಬೇಕು ಎಂದುಕೊಂಡರೂ ಒಂದಿಲ್ಲೊಂದು ರೀತಿಯಲ್ಲಿ ಅದನ್ನು ನಾವೇ ತಡೆಯುತ್ತೇವೆ. ಜೊತೆಗೆ ಖರೀದ ಪದಾರ್ಥಗಳ ಸೇವನೆ ಮಾಡುವುದು, ಸರಿಯಾಗಿ ನಿದ್ರೆ ಮಾಡದಿರುವುದು, ಒತ್ತಡ ಎಲ್ಲವೂ ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾದರೆ ಇದಕ್ಕೆ ಪರಿಹಾರ ಇಲ್ಲವೇ? ಇಂತಹ ಅಭ್ಯಾಸಗಳನ್ನು ತಡೆಯಲು ಸಾಧ್ಯವಿಲ್ಲವೇ? ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

Health Care Tips: ಕುಳಿತಿರುವುದಕ್ಕಿಂತ ಕೆಟ್ಟ ಅಭ್ಯಾಸ ಮತ್ತೊಂದಿಲ್ಲ; ಡಾ. ದೇವಿ ಪ್ರಸಾದ್ ಶೆಟ್ಟಿ
Dr. Devi Prasad Shetty
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 25, 2024 | 6:26 PM

Share

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನ ಶೈಲಿ ಹದಗೆಟ್ಟಿದ್ದು ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿದೆ. ಆರೋಗ್ಯವಿದ್ದರೆ ಎಲ್ಲವೂ ಇದ್ದಂತೆ ಎಂಬ ಮಾತು ನಮಗೆ ಅರಿವಾಗುತ್ತಿದೆ. ನಾವು ಎಷ್ಟು ಒಳ್ಳೆಯ, ಆರೋಗ್ಯಕ್ಕೆ ಪೂರಕವಾಗುವಂತಹ ದಿನಚರಿಯನ್ನು ರೂಢಿಸಿಕೊಳ್ಳಬೇಕು ಎಂದುಕೊಂಡರೂ ಒಂದಿಲ್ಲೊಂದು ರೀತಿಯಲ್ಲಿ ಅದನ್ನು ನಾವೇ ತಡೆಯುತ್ತೇವೆ. ಜೊತೆಗೆ ಖರೀದ ಪದಾರ್ಥಗಳ ಸೇವನೆ ಮಾಡುವುದು, ಸರಿಯಾಗಿ ನಿದ್ರೆ ಮಾಡದಿರುವುದು, ಒತ್ತಡ ಎಲ್ಲವೂ ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾದರೆ ಇದಕ್ಕೆ ಪರಿಹಾರ ಇಲ್ಲವೇ? ಇಂತಹ ಅಭ್ಯಾಸಗಳನ್ನು ತಡೆಯಲು ಸಾಧ್ಯವಿಲ್ಲವೇ? ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಎಎನ್ಐ ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದು “ಕುಳಿತುಕೊಳ್ಳುವುದಕ್ಕಿಂತ ಕೆಟ್ಟ ಅಭ್ಯಾಸ ಮತ್ತೊಂದಿಲ್ಲ. ಹಾಗಾಗಿ ಒಂದೇ ಸ್ಥಳದಲ್ಲಿ ಕುಳಿತುಕೊಂಡು ಇರಬಾರದು. ಪ್ರತಿನಿತ್ಯ ಸ್ವಲ್ಪ ಸಮಯವಾದರೂ ನಡಿಗೆ ಮಾಡಬೇಕು. ಬೆಳಿಗ್ಗೆಯೇ ಮಾಡಬೇಕು ಎಂಬುದಿಲ್ಲ, ನಿಮ್ಮ ಬಿಡುವಿನ ಸಮಯದಲ್ಲಿ ಸಣ್ಣ ನಡಿಗೆ ಮಾಡಬಹುದು. ಸಾಧ್ಯವಾದರೆ ಸ್ಮಾರ್ಟ್ ವಾಚ್ ಗಳನ್ನು ಬಳಸಿ ಇದರಿಂದ ನೀವು ಎಷ್ಟು ದೂರ ಕ್ರಮಿಸುತ್ತೀರಿ ಎಂಬುದು ತಿಳಿಯುತ್ತದೆ ಆಗ ನಿಮಗೆ ಹೆಚ್ಚು ಉತ್ಸಾಹ ಮೂಡುತ್ತದೆ” ಎಂದಿದ್ದಾರೆ. ಇದರ ಜೊತೆಗೆ ಹೊರಗಡೆ ಆಹಾರ ಸೇವನೆ ಮಾಡುವುದನ್ನು ಆದಷ್ಟು ಕಡಿಮೆ ಮಾಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ ಸರ್ಕಾರ

ಸಾಮಾನ್ಯವಾಗಿ ನಾವು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅವರು ಮಾತನಾಡಿದ್ದು “ಯೋಗ ನಮಗೆ ಸಿಕ್ಕಿರುವ ಕೊಡುಗೆ ಅದನ್ನು ಆದಷ್ಟು ಸರಿಯಾಗಿ ಬಳಸಿಕೊಳ್ಳಿ, ಯಾವ ವಯಸ್ಸಿನವರಾಗಲಿ ಯೋಗವನ್ನು ಅಭ್ಯಾಸ ಮಾಡಿ, ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗೂ ಇದು ಪರಿಹಾರ ನೀಡುತ್ತದೆ. ಬೊಜ್ಜು, ಅಧಿಕ ರಕ್ತದೊತ್ತಡ, ಮಧುಮೇಹ, ಹೃದ್ರೋಗ ಸಮಸ್ಯೆ ಎಲ್ಲಕ್ಕೂ ಯೋಗ ಮಾಡುವುದರಿಂದ ಪರಿಹಾರ ಸಿಗುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿ ಇದರಿಂದ ಅವರಿಗೆ ಆರೋಗ್ಯ ಸಮಸ್ಯೆ ಕಾಡುವುದಿಲ್ಲ. ಜೊತೆಗೆ ಅವರು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಲು ಯೋಗ ಸಹಕಾರಿಯಾಗಿರುತ್ತದೆ” ಎಂದಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್