AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಆ್ಯಂಟಿಆಕ್ಸಿಡೆಂಟ್​ಗಳಿಂದ ಸಮೃದ್ಧವಾಗಿರುವ ಈ 5 ತರಕಾರಿಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

ಆ್ಯಂಟಿಆಕ್ಸಿಡೆಂಟ್​ಗಳು ಜೀವಕೋಶಗಳ ಹಾನಿಯ ವಿರುದ್ಧ ಹೋರಾಡುತ್ತವೆ ಮತ್ತು ದೇಹದಿಂದ ಸ್ವತಂತ್ರ ರಾಡಿಕಲ್​ಗಳನ್ನು ತೆಗೆದುಹಾಕುವ ಮೂಲಕ ಗಂಭೀರ ರೋಗಗಳಿಂದ ರಕ್ಷಿಸುತ್ತವೆ.

Health Tips: ಆ್ಯಂಟಿಆಕ್ಸಿಡೆಂಟ್​ಗಳಿಂದ ಸಮೃದ್ಧವಾಗಿರುವ ಈ 5 ತರಕಾರಿಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 22, 2021 | 4:00 PM

Share

ಉತ್ತಮ ಆರೋಗ್ಯದೊಂದಿಗೆ ದೇಹವು ಸದಾ ಸದೃಢವಾಗಿರುವಂತೆ ನೋಡಿಕೊಳ್ಳಲು ಹೆಚ್ಚಿನ ಜನರು ಬಯಸುತ್ತಾರೆ. ಇದಕ್ಕಾಗಿ  ಅಗತ್ಯ ಪೋಷಕಾಂಶಗಳೊಂದಿಗೆ ಉತ್ತಮ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಪೌಷ್ಟಿಕಾಂಶಯುಕ್ತ ಆಹಾರದ ಹೊರತಾಗಿ, ಆ್ಯಂಟಿಆಕ್ಸಿಡೆಂಟ್​ಗಳು ನಮ್ಮ ದೇಹವನ್ನು ಆರೋಗ್ಯವಾಗಿಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಅದರಲ್ಲು ಕೆಲವು ತರಕಾರಿಗಳು ಆ್ಯಂಟಿಆಕ್ಸಿಡೆಂಟ್​ ಶಕ್ತಿಯನ್ನು ಒದಗಿಸುತ್ತವೆ. ಹಾಗಿದ್ದರೆ ದೇಹವನ್ನು ಆರೋಗ್ಯವಾಗಿಡಲು ಯಾವೆಲ್ಲ ತರಕಾರಿಗಳ ಸೇವನೆ ಅಗತ್ಯ ಎಂದು ತಿಳಿದುಕೊಳ್ಳೊಣ.

ಆ್ಯಂಟಿಆಕ್ಸಿಡೆಂಟ್​ಗಳು ಮಾನವ ನಿರ್ಮಿತ ಅಥವಾ ನೈಸರ್ಗಿಕವಾಗಿರಬಹುದು. ಇವುಗಳು ವಿವಿಧ ಆಹಾರಗಳಲ್ಲಿ ಕಂಡುಬರುತ್ತವೆ. ಈ ಆ್ಯಂಟಿಆಕ್ಸಿಡೆಂಟ್​ಗಳು ಜೀವಕೋಶಗಳ ಹಾನಿಯ ವಿರುದ್ಧ ಹೋರಾಡುತ್ತವೆ ಮತ್ತು ದೇಹದಿಂದ ಸ್ವತಂತ್ರ ರಾಡಿಕಲ್​ಗಳನ್ನು ತೆಗೆದುಹಾಕುವ ಮೂಲಕ ಗಂಭೀರ ರೋಗಗಳಿಂದ ರಕ್ಷಿಸುತ್ತವೆ. ಆದ್ದರಿಂದ ನಿಮ್ಮ ಆಹಾರವನ್ನು ಹೆಚ್ಚು ಆರೋಗ್ಯಕರವಾಗಿಸಲು, ಈ 5 ಆ್ಯಂಟಿಆಕ್ಸಿಡೆಂಟ್​ ಸಮೃದ್ಧ ತರಕಾರಿಗಳನ್ನು ಸೇವಿಸುವುದು ಸೂಕ್ತ.

ಎಲೆಕೋಸು ಎಲೆಕೋಸು ಆ್ಯಂಟಿಆಕ್ಸಿಡೆಂಟ್​ಗಳ ಅತ್ಯುತ್ತಮ ಮೂಲವಾಗಿದೆ. ಎಲೆಕೋಸಿನಲ್ಲಿ ಅತ್ಯಧಿಕ ಪ್ರಮಾಣದ ಆ್ಯಂಟಿಆಕ್ಸಿಡೆಂಟ್​ಗಳಿವೆ. ಈ ತರಕಾರಿಯು ವಿಟಮಿನ್ ಸಿ ಯಿಂದ ಕೂಡಿದ್ದು, ರೋಗನಿರೋಧಕ ಶಕ್ತಿಯನ್ನು ನಿರ್ಮಿಸುವಲ್ಲಿ ಸಹಾಯ ಮಾಡುತ್ತದೆ. ಈ ತರಕಾರಿ ಉರಿಯೂತವನ್ನು ಎದುರಿಸಲು ಸಹಾಯ ಮಾಡುತ್ತದೆ. ಇದು ತೂಕ ನಷ್ಟಕ್ಕೆ ಕೂಡ ಸಹಾಯ ಮಾಡುತ್ತದೆ. ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿರ್ವಹಿಸುತ್ತದೆ. ಜತೆಗೆ ಆರೋಗ್ಯಕರ ಚರ್ಮವನ್ನು ಉತ್ತೇಜಿಸುತ್ತದೆ.

ಬ್ರೊಕೋಲಿ ಬ್ರೊಕೋಲಿಯಲ್ಲಿ ಕ್ಯಾರೊಟಿನಾಯ್ಡ್​, ಲ್ಯೂಟೀನ್, ಜೀಕ್ಸಾಂಥಿನ್ ಮತ್ತು ಬೀಟಾ-ಕ್ಯಾರೋಟಿನ್ ನಂತಹ ಆ್ಯಂಟಿಆಕ್ಸಿಡೆಂಟ್​ಗಳಿವೆ. ಇದು ವರ್ಷಪೂರ್ತಿ ಲಭ್ಯವಿದೆ ಮತ್ತು ಇದನ್ನು ಹಲವು ವಿಧಗಳಲ್ಲಿ ಬೇಯಿಸಬಹುದು. ತರಕಾರಿ ಸಲಾಡ್ ಮತ್ತು ಪಾಸ್ತಾದಲ್ಲಿ ಬ್ರೊಕೋಲಿ ಸೇರಿಸಿದರೆ, ಉತ್ತಮ ರುಚಿ ನೀಡುತ್ತದೆ.

ಟೊಮೆಟೋ ಟೊಮೆಟೋ ಆ್ಯಂಟಿಆಕ್ಸಿಡೆಂಟ್​ಗಳ ಉತ್ತಮ ಮೂಲವಾಗಿದೆ. ಈ ತರಕಾರಿ ವರ್ಷವಿಡೀ ಲಭ್ಯವಿದೆ. ಈ ತರಕಾರಿಯನ್ನು ಸಾಮಾನ್ಯವಾಗಿ ನಾವು ತಯಾರಿಸುವ ಎಲ್ಲಾ ಅಡುಗೆಯಲ್ಲೂ  ಬಳಸಲಾಗುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಕೂಡ ಇದೆ. ಈ ತರಕಾರಿಯನ್ನು ಬೇಯಿಸಿ ಅಥವಾ ಹಸಿ ತಿನ್ನಬಹುದು.

ಲೆಟಿಸ್ ಲೆಟಿಸ್ ಸಲಾಡ್ ಮತ್ತು ಬರ್ಗರ್‌ಗಳಲ್ಲಿ ಬಳಸುವ ಒಂದು ತರಕಾರಿಯಾಗಿದೆ. ಈ ತರಕಾರಿಯು ಆ್ಯಂಟಿಆಕ್ಸಿಡೆಂಟ್​ಗಳಿಂದ ಸಮೃದ್ಧವಾಗಿದೆ ಮತ್ತು ಇತರ ಹಲವು ಪ್ರಯೋಜನಗಳನ್ನು ಹೊಂದಿದೆ. ಈ ತರಕಾರಿ ಹೆಚ್ಚಿನ ಫೈಬರ್​ನಿಂದ ಕೂಡಿದೆ. ಇದು ತೂಕ ಇಳಿಸಲು ಸಹಾಯ ಮಾಡುತ್ತದೆ.

ಆಲೂಗಡ್ಡೆ ಆಲೂಗಡ್ಡೆ ಎಲ್ಲರಿಗೂ ಇಷ್ಟವಾಗುತ್ತದೆ ಮತ್ತು ಪ್ರತಿಯೊಬ್ಬರ ಅಡುಗೆ ಮನೆಯಲ್ಲಿಯೂ ಇದು ಇರುತ್ತದೆ. ಅವುಗಳು ಹೆಚ್ಚಿನ ಮಟ್ಟದ ಆ್ಯಂಟಿಆಕ್ಸಿಡೆಂಟ್​ಗಳನ್ನು ಹೊಂದಿರುತ್ತವೆ. ಇವುಗಳು ಸಂಯುಕ್ತಗಳಾಗಿವೆ. ಆಲೂಗಡ್ಡೆಯಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಮ್ಯಾಂಗನೀಸ್ ಕೂಡ ಇರುತ್ತದೆ. ಈ ತರಕಾರಿ ಉರಿಯೂತವನ್ನು ತಡೆಯಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Health Tips: ಹಲಸಿನ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ; ಈ ಕೆಲವು ಸಲಹೆಗಳು ನಿಮಗಾಗಿ

Health Tips: ಬಾಳೆ ಎಲೆಯ ಮೇಲೆ ಊಟ ಮಾಡುವ ಅಭ್ಯಾಸ ಇದೆಯೇ? ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Published On - 7:47 am, Wed, 22 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್