Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಆ್ಯಂಟಿಆಕ್ಸಿಡೆಂಟ್​ಗಳಿಂದ ಸಮೃದ್ಧವಾಗಿರುವ ಈ 5 ತರಕಾರಿಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

ಆ್ಯಂಟಿಆಕ್ಸಿಡೆಂಟ್​ಗಳು ಜೀವಕೋಶಗಳ ಹಾನಿಯ ವಿರುದ್ಧ ಹೋರಾಡುತ್ತವೆ ಮತ್ತು ದೇಹದಿಂದ ಸ್ವತಂತ್ರ ರಾಡಿಕಲ್​ಗಳನ್ನು ತೆಗೆದುಹಾಕುವ ಮೂಲಕ ಗಂಭೀರ ರೋಗಗಳಿಂದ ರಕ್ಷಿಸುತ್ತವೆ.

Health Tips: ಆ್ಯಂಟಿಆಕ್ಸಿಡೆಂಟ್​ಗಳಿಂದ ಸಮೃದ್ಧವಾಗಿರುವ ಈ 5 ತರಕಾರಿಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Sep 22, 2021 | 4:00 PM

ಉತ್ತಮ ಆರೋಗ್ಯದೊಂದಿಗೆ ದೇಹವು ಸದಾ ಸದೃಢವಾಗಿರುವಂತೆ ನೋಡಿಕೊಳ್ಳಲು ಹೆಚ್ಚಿನ ಜನರು ಬಯಸುತ್ತಾರೆ. ಇದಕ್ಕಾಗಿ  ಅಗತ್ಯ ಪೋಷಕಾಂಶಗಳೊಂದಿಗೆ ಉತ್ತಮ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಪೌಷ್ಟಿಕಾಂಶಯುಕ್ತ ಆಹಾರದ ಹೊರತಾಗಿ, ಆ್ಯಂಟಿಆಕ್ಸಿಡೆಂಟ್​ಗಳು ನಮ್ಮ ದೇಹವನ್ನು ಆರೋಗ್ಯವಾಗಿಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಅದರಲ್ಲು ಕೆಲವು ತರಕಾರಿಗಳು ಆ್ಯಂಟಿಆಕ್ಸಿಡೆಂಟ್​ ಶಕ್ತಿಯನ್ನು ಒದಗಿಸುತ್ತವೆ. ಹಾಗಿದ್ದರೆ ದೇಹವನ್ನು ಆರೋಗ್ಯವಾಗಿಡಲು ಯಾವೆಲ್ಲ ತರಕಾರಿಗಳ ಸೇವನೆ ಅಗತ್ಯ ಎಂದು ತಿಳಿದುಕೊಳ್ಳೊಣ.

ಆ್ಯಂಟಿಆಕ್ಸಿಡೆಂಟ್​ಗಳು ಮಾನವ ನಿರ್ಮಿತ ಅಥವಾ ನೈಸರ್ಗಿಕವಾಗಿರಬಹುದು. ಇವುಗಳು ವಿವಿಧ ಆಹಾರಗಳಲ್ಲಿ ಕಂಡುಬರುತ್ತವೆ. ಈ ಆ್ಯಂಟಿಆಕ್ಸಿಡೆಂಟ್​ಗಳು ಜೀವಕೋಶಗಳ ಹಾನಿಯ ವಿರುದ್ಧ ಹೋರಾಡುತ್ತವೆ ಮತ್ತು ದೇಹದಿಂದ ಸ್ವತಂತ್ರ ರಾಡಿಕಲ್​ಗಳನ್ನು ತೆಗೆದುಹಾಕುವ ಮೂಲಕ ಗಂಭೀರ ರೋಗಗಳಿಂದ ರಕ್ಷಿಸುತ್ತವೆ. ಆದ್ದರಿಂದ ನಿಮ್ಮ ಆಹಾರವನ್ನು ಹೆಚ್ಚು ಆರೋಗ್ಯಕರವಾಗಿಸಲು, ಈ 5 ಆ್ಯಂಟಿಆಕ್ಸಿಡೆಂಟ್​ ಸಮೃದ್ಧ ತರಕಾರಿಗಳನ್ನು ಸೇವಿಸುವುದು ಸೂಕ್ತ.

ಎಲೆಕೋಸು ಎಲೆಕೋಸು ಆ್ಯಂಟಿಆಕ್ಸಿಡೆಂಟ್​ಗಳ ಅತ್ಯುತ್ತಮ ಮೂಲವಾಗಿದೆ. ಎಲೆಕೋಸಿನಲ್ಲಿ ಅತ್ಯಧಿಕ ಪ್ರಮಾಣದ ಆ್ಯಂಟಿಆಕ್ಸಿಡೆಂಟ್​ಗಳಿವೆ. ಈ ತರಕಾರಿಯು ವಿಟಮಿನ್ ಸಿ ಯಿಂದ ಕೂಡಿದ್ದು, ರೋಗನಿರೋಧಕ ಶಕ್ತಿಯನ್ನು ನಿರ್ಮಿಸುವಲ್ಲಿ ಸಹಾಯ ಮಾಡುತ್ತದೆ. ಈ ತರಕಾರಿ ಉರಿಯೂತವನ್ನು ಎದುರಿಸಲು ಸಹಾಯ ಮಾಡುತ್ತದೆ. ಇದು ತೂಕ ನಷ್ಟಕ್ಕೆ ಕೂಡ ಸಹಾಯ ಮಾಡುತ್ತದೆ. ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿರ್ವಹಿಸುತ್ತದೆ. ಜತೆಗೆ ಆರೋಗ್ಯಕರ ಚರ್ಮವನ್ನು ಉತ್ತೇಜಿಸುತ್ತದೆ.

ಬ್ರೊಕೋಲಿ ಬ್ರೊಕೋಲಿಯಲ್ಲಿ ಕ್ಯಾರೊಟಿನಾಯ್ಡ್​, ಲ್ಯೂಟೀನ್, ಜೀಕ್ಸಾಂಥಿನ್ ಮತ್ತು ಬೀಟಾ-ಕ್ಯಾರೋಟಿನ್ ನಂತಹ ಆ್ಯಂಟಿಆಕ್ಸಿಡೆಂಟ್​ಗಳಿವೆ. ಇದು ವರ್ಷಪೂರ್ತಿ ಲಭ್ಯವಿದೆ ಮತ್ತು ಇದನ್ನು ಹಲವು ವಿಧಗಳಲ್ಲಿ ಬೇಯಿಸಬಹುದು. ತರಕಾರಿ ಸಲಾಡ್ ಮತ್ತು ಪಾಸ್ತಾದಲ್ಲಿ ಬ್ರೊಕೋಲಿ ಸೇರಿಸಿದರೆ, ಉತ್ತಮ ರುಚಿ ನೀಡುತ್ತದೆ.

ಟೊಮೆಟೋ ಟೊಮೆಟೋ ಆ್ಯಂಟಿಆಕ್ಸಿಡೆಂಟ್​ಗಳ ಉತ್ತಮ ಮೂಲವಾಗಿದೆ. ಈ ತರಕಾರಿ ವರ್ಷವಿಡೀ ಲಭ್ಯವಿದೆ. ಈ ತರಕಾರಿಯನ್ನು ಸಾಮಾನ್ಯವಾಗಿ ನಾವು ತಯಾರಿಸುವ ಎಲ್ಲಾ ಅಡುಗೆಯಲ್ಲೂ  ಬಳಸಲಾಗುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಕೂಡ ಇದೆ. ಈ ತರಕಾರಿಯನ್ನು ಬೇಯಿಸಿ ಅಥವಾ ಹಸಿ ತಿನ್ನಬಹುದು.

ಲೆಟಿಸ್ ಲೆಟಿಸ್ ಸಲಾಡ್ ಮತ್ತು ಬರ್ಗರ್‌ಗಳಲ್ಲಿ ಬಳಸುವ ಒಂದು ತರಕಾರಿಯಾಗಿದೆ. ಈ ತರಕಾರಿಯು ಆ್ಯಂಟಿಆಕ್ಸಿಡೆಂಟ್​ಗಳಿಂದ ಸಮೃದ್ಧವಾಗಿದೆ ಮತ್ತು ಇತರ ಹಲವು ಪ್ರಯೋಜನಗಳನ್ನು ಹೊಂದಿದೆ. ಈ ತರಕಾರಿ ಹೆಚ್ಚಿನ ಫೈಬರ್​ನಿಂದ ಕೂಡಿದೆ. ಇದು ತೂಕ ಇಳಿಸಲು ಸಹಾಯ ಮಾಡುತ್ತದೆ.

ಆಲೂಗಡ್ಡೆ ಆಲೂಗಡ್ಡೆ ಎಲ್ಲರಿಗೂ ಇಷ್ಟವಾಗುತ್ತದೆ ಮತ್ತು ಪ್ರತಿಯೊಬ್ಬರ ಅಡುಗೆ ಮನೆಯಲ್ಲಿಯೂ ಇದು ಇರುತ್ತದೆ. ಅವುಗಳು ಹೆಚ್ಚಿನ ಮಟ್ಟದ ಆ್ಯಂಟಿಆಕ್ಸಿಡೆಂಟ್​ಗಳನ್ನು ಹೊಂದಿರುತ್ತವೆ. ಇವುಗಳು ಸಂಯುಕ್ತಗಳಾಗಿವೆ. ಆಲೂಗಡ್ಡೆಯಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಮ್ಯಾಂಗನೀಸ್ ಕೂಡ ಇರುತ್ತದೆ. ಈ ತರಕಾರಿ ಉರಿಯೂತವನ್ನು ತಡೆಯಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Health Tips: ಹಲಸಿನ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ; ಈ ಕೆಲವು ಸಲಹೆಗಳು ನಿಮಗಾಗಿ

Health Tips: ಬಾಳೆ ಎಲೆಯ ಮೇಲೆ ಊಟ ಮಾಡುವ ಅಭ್ಯಾಸ ಇದೆಯೇ? ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Published On - 7:47 am, Wed, 22 September 21

ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ