AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಹೃದಯಾಘಾತವನ್ನು ತಡೆಗಟ್ಟಲು ಈ ಐದು ಕ್ರಮಗಳನ್ನು ಅನುಸರಿಸಿ

ಹೃದಯಾಘಾತದಿಂದ ಅಕಾಲಿಕ ಮರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಇದರಿಂದ ಹೊರಬರಲು ಆಯುರ್ವೇದ ತಜ್ಞರು 5 ವಿಧಾನಗಳನ್ನು ಸೂಚಿಸಿದ್ದಾರೆ.

Heart Attack: ಹೃದಯಾಘಾತವನ್ನು ತಡೆಗಟ್ಟಲು ಈ ಐದು ಕ್ರಮಗಳನ್ನು ಅನುಸರಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 07, 2021 | 7:42 AM

Share

ಇತ್ತೀಚಿನ ವರ್ಷಗಳಲ್ಲಿ ಯುವಕರು ಕೂಡ ಹೃದಯಾಘಾತ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಪ್ರತಿ 4 ಸಾವುಗಳಲ್ಲಿ ಒಂದು ಹೃದಯ ಸಂಬಂಧಿ ಕಾಯಿಲೆಯಿಂದ ಉಂಟಾಗುವ ಸಾವಾಗಿದೆ. ಶೇ 80ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದೆ. ಅದರಲ್ಲೂ ಹೆಚ್ಚಿನವರು 40 ಮತ್ತು 55 ರ ವಯಸ್ಸಿನವರಾಗಿದ್ದಾರೆ. ಹೃದಯಾಘಾತದಿಂದ ಅಕಾಲಿಕ ಮರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಇದರಿಂದ ಹೊರಬರಲು ಆಯುರ್ವೇದ ತಜ್ಞರು 5 ವಿಧಾನಗಳನ್ನು ಸೂಚಿಸಿದ್ದಾರೆ. ಅವುಗಳು ಯಾವುದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

1. ಸೂರ್ಯೋದಯಕ್ಕೆ 2 ಗಂಟೆಗಳ ಮೊದಲು ಎಚ್ಚರಗೊಳ್ಳುವುದು ಆಯುರ್ವೇದ ತಜ್ಞರು ಸೂರ್ಯೋದಯಕ್ಕೆ ಎರಡು ಗಂಟೆ ಮುಂಚಿತವಾಗಿ ಎಲ್ಲರೂ ಎಚ್ಚರಗೊಳ್ಳಬೇಕು ಎಂದು ಹೇಳಿದ್ದಾರೆ. ಆಗ ಮನಸ್ಸು ತುಂಬಾ ಶಾಂತವಾಗಿರುತ್ತದೆ ಮತ್ತು ಮಾನಸಿಕ ಒತ್ತಡವು ಹೃದಯದ ಮೇಲೆ ಪರಿಣಾಮ ಬೀರುವುದಿಲ್ಲ.

2. ಎರಡು ಲೋಟ ಉಗುರುಬೆಚ್ಚಗಿನ ನೀರನ್ನು ಕುಡಿಯಿರಿ ಆಯುರ್ವೇದ ತಜ್ಞರು ಬೆಳಿಗ್ಗೆ ಎದ್ದ ನಂತರ ಎರಡು ಲೋಟ ಉಗುರುಬೆಚ್ಚನೆಯ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ಇದು ದೇಹದಲ್ಲಿ ಜೀವಾಣು ಸಂಗ್ರಹವಾಗದಂತೆ ರಕ್ಷಿಸುತ್ತದೆ. ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ.

3. ಯೋಗ ಮತ್ತು ಧ್ಯಾನವನ್ನು ಅಭ್ಯಾಸ ಮಾಡಬೇಕು ಒತ್ತಡವನ್ನು ಕಡಿಮೆ ಮಾಡುವ ಹಾರ್ಮೋನ್​ಗಳಾದ ಎಂಡಾರ್ಫಿನ್ ಮತ್ತು ಸಿರೊಟೋನಿನ್-ಮೂಡ್ ಆಫ್​ ಲಿಫ್ಟಿಂಗ್​ನ ಸರಿಯಾದ ಡೋಸ್ ಪಡೆಯಲು ದೈನಂದಿನ ಯೋಗ ಮತ್ತು ಧ್ಯಾನ ಅತ್ಯಗತ್ಯ. ದೀರ್ಘಕಾಲದ ಒತ್ತಡ ಮತ್ತು ಖಿನ್ನತೆಯು ಹೃದಯ ಕಾಯಿಲೆಯ ಪ್ರಮುಖ ಕಾರಣವೆಂದು ಹಲವಾರು ಅಧ್ಯಯನಗಳು ತೋರಿಸಿವೆ. ಅದಕ್ಕಾಗಿಯೇ ತಜ್ಞರು ತಪ್ಪದೆ ಯೋಗ ಮಾಡಲು ಸಲಹೆ ನೀಡುತ್ತಾರೆ.

4. ಆಹಾರವನ್ನು ತೆಗೆದುಕೊಳ್ಳಲು ಸರಿಯಾದ ಸಮಯ ಊಟವನ್ನು ಮಧ್ಯಾಹ್ನ 12 ರಿಂದ 12.30 ಒಳಗೆ ಮಾಡಿ ಮತ್ತು ಉಪಹಾರವನ್ನು ಬೆಳಿಗ್ಗೆ 7.00 ಗೆ ಮಾಡಬೇಕು. ಊಟ ಮತ್ತು ಉಪಹಾರದ ನಡುವೆ 4 ರಿಂದ 5 ಗಂಟೆಗಳ ಅಂತರವಿರಬೇಕು. ಇದು ಸರಿಯಾದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಪ್ರತಿದಿನ ಸಾಕಷ್ಟು ನೀರು ಕುಡಿಯಿರಿ. ಊಟದ ಸ್ವಲ್ಪ ಸಮಯದ ನಂತರ ಹಣ್ಣುಗಳನ್ನು ತಿನ್ನುವುದು ಉತ್ತಮ. ಒಳ್ಳೆಯ ನಿದ್ರೆಗಾಗಿ ಕನಿಷ್ಠ 2 ಗಂಟೆಗಳ ಊಟವನ್ನು ಸೇವಿಸಿ. ಆಗ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.

5. ಮಧ್ಯಾಹ್ನ ನಿದ್ರೆಯಿಂದ ದೂರವಿರಿ ಮಧ್ಯಾಹ್ನ ನಿದ್ರೆಯಿಂದ ದೂರವಿರಿ. ಇದು ನಿದ್ರಾಹೀನತೆ, ಆಯಾಸ ಮತ್ತು ಆಲಸ್ಯವನ್ನು ಹೆಚ್ಚಿಸುತ್ತದೆ. ಬೇಕಿದ್ದರೆ ವಯಸ್ಸಾದವರು ಯೋಗ ನಿದ್ರೆ ಮಾಡಬಹುದು ಎಂದು ವೈದ್ಯರು ಸೂಚಿಸಿದ್ದಾರೆ.

ಇದನ್ನೂ ಓದಿ: ಹದಿಹರೆಯದ ವಯಸ್ಸಿನಲ್ಲಿ ಮದ್ಯಪಾನ‌ ಮಾಡಿ ಹೃದಯ ಆರೋಗ್ಯ ಸಮಸ್ಯೆ ತಂದುಕೊಂಡೀರಿ; ಎಚ್ಚರ!

Heart Health: ಹೃದಯಾಘಾತ ಮಾತ್ರ ಅಲ್ಲ, ಹೃದಯಕ್ಕೆ ಸಂಬಂಧಿಸಿದ ಇನ್ನಿತರ ಕಾಯಿಲೆಗಳಿಂದ ಪಾರಾಗಲು ಸದಾ ಪ್ರಯತ್ನಿಸಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ