AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Health: ಹೃದಯಾಘಾತ ಮಾತ್ರ ಅಲ್ಲ, ಹೃದಯಕ್ಕೆ ಸಂಬಂಧಿಸಿದ ಇನ್ನಿತರ ಕಾಯಿಲೆಗಳಿಂದ ಪಾರಾಗಲು ಸದಾ ಪ್ರಯತ್ನಿಸಿ

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ ವಿಶ್ವಾದ್ಯಂತ ಅನೇಕ ಜನರ ಸಾವಿಗೆ ಹೃದಯ ಕಾಯಿಲೆ ಪ್ರಮುಖ ಕಾರಣವಾಗಿದೆ. ಪ್ರತಿ ವರ್ಷ 17.9 ಮಿಲಿಯನ್ ಜನರು ಹೃದ್ರೋಗದಿಂದ ಸಾಯುತ್ತಾರೆ ಎಂದು ಡಬ್ಲ್ಯುಎಚ್‌ಒ ಅಂದಾಜಿಸಿದೆ.

Heart Health: ಹೃದಯಾಘಾತ ಮಾತ್ರ ಅಲ್ಲ, ಹೃದಯಕ್ಕೆ ಸಂಬಂಧಿಸಿದ ಇನ್ನಿತರ ಕಾಯಿಲೆಗಳಿಂದ ಪಾರಾಗಲು ಸದಾ ಪ್ರಯತ್ನಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 20, 2021 | 8:01 AM

Share

ಆಧುನಿಕ ಜೀವನದಲ್ಲಿ ಜನರನ್ನು ಕಾಡುತ್ತಿರುವ ಅನೇಕ ಆರೋಗ್ಯ ಸಮಸ್ಯೆಗಳಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆ ಕೂಡ ಒಂದು. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ ವಿಶ್ವಾದ್ಯಂತ ಅನೇಕ ಜನರ ಸಾವಿಗೆ ಹೃದಯ ಕಾಯಿಲೆ ಪ್ರಮುಖ ಕಾರಣವಾಗಿದೆ. ಪ್ರತಿ ವರ್ಷ 17.9 ಮಿಲಿಯನ್ ಜನರು ಹೃದ್ರೋಗದಿಂದ ಸಾಯುತ್ತಾರೆ ಎಂದು ಡಬ್ಲ್ಯುಎಚ್‌ಒ ಅಂದಾಜಿಸಿದೆ. ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ ಮುಖ್ಯ ಕಾರಣ ನಮ್ಮ ಜೀವನಶೈಲಿ, ಆಹಾರ ಪದ್ಧತಿ. ವಯಸ್ಸಾದವರಲ್ಲಿ ಮಾತ್ರವಲ್ಲ, ಇತ್ತೀಚೆಗೆ ಯುವಕರಲ್ಲಿಯೂ ಹೃದ್ರೋಗ ಹೆಚ್ಚುತ್ತಿದೆ. ಅದರಲ್ಲೂ ಈಗ ಕೊರೊನಾ ಕಾಲಘಟ್ಟ. ಹೀಗಾಗಿ ಬಹುತೇಕ ಎಲ್ಲರ ಜೀವನಶೈಲಿಯೂ ಬದಲಾಗಿದೆ.

ಲಾಕ್​ಡೌನ್​ನಿಂದಾಗಿ ಹೆಚ್ಚಿನ ಜನರು ಹೊರಗೆ ಹೋಗದೆ ಮನೆಯೊಳಗೆ ಇರುತ್ತಾರೆ. ಈ ಕಾರಣದಿಂದಾಗಿ ದೈಹಿಕ ಚಟುವಟಿಕೆಯೂ ಕಡಿಮೆಯಾಗುತ್ತಿದೆ. ಹಲವು ಗಂಟೆಗಳ ಕಾಲ ಒಂದೇ ಸ್ಥಳದಲ್ಲಿ ಕೆಲಸ ಮಾಡುವುದು ಮತ್ತು ಈ ಸಮಯದಲ್ಲಿ ಜಂಕ್ ಫುಡ್ ಸೇವಿಸುವುದರಿಂದ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೃದ್ರೋಗ ಬರದಂತೆ ನಿಮ್ಮ ಜೀವನಶೈಲಿ ಮತ್ತು ಆಹಾರ ಕ್ರಮವನ್ನು ಬದಲಾಯಿಸಿದರೆ, ಆರೋಗ್ಯವು ನಿಮ್ಮ ಕೈಯಲ್ಲಿದೆ ಎಂದು ತಜ್ಞರು ಹೇಳುತ್ತಾರೆ. ಹೀಗಾಗಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಯಿಂದ ದೂರ ಇರಲು ಈ ಕ್ರಮವನ್ನು ಅನುಸರಿಸಿ.

ಒತ್ತಡ ಒತ್ತಡವು ಅಧಿಕ ರಕ್ತದೊತ್ತಡ, ಎದೆ ನೋವು ಮತ್ತು ಅತಿ ವೇಗದ ಹೃದಯ ಬಡಿತದಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಇದು ಹೃದಯ ಸ್ನಾಯುವನ್ನು ದುರ್ಬಲಗೊಳಿಸುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಅಧಿಕ ರಕ್ತದೊತ್ತಡವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಹೀಗಾಗಿ ಒತ್ತಡದಿಂದ ದೂರ ಇರುವುದು ಸೂಕ್ತ.

ಧೂಮಪಾನ ಪರಿಧಮನಿಯ ಕಾಯಿಲೆ ಮತ್ತು ಮೆದುಳಿನ ಕಾಯಿಲೆಗಯಿಂದ ಧೂಮಪಾನಿಗಳು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಹೃದಯಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಸಾಯುವ ಪ್ರತಿ ಐದು ಜನರಿಗೆ ಒಬ್ಬರು ಧೂಮಪಾನಿಗಳು. ಅತಿ ಹೆಚ್ಚು ಧೂಮಪಾನ ಮಾಡುವವರಲ್ಲಿ ಹೃದಯಾಘಾತದ ಅಪಾಯ ಹೆಚ್ಚು.

ಜೀವನಶೈಲಿ ಜೀವನಶೈಲಿ ಸಹ ವಿವಿಧ ರೋಗಗಳಿಗೆ ಕಾರಣವಾಗಬಹುದು. ಆರೋಗ್ಯಕರ ಹೃದಯಕ್ಕಾಗಿ ನೀವು ದಿನಕ್ಕೆ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡಬೇಕು. ದೈಹಿಕ ಚಟುವಟಿಕೆಯ ಕೊರತೆಯು ಅಧಿಕ ರಕ್ತದೊತ್ತಡ, ಮಧುಮೇಹ, ಬೊಜ್ಜು ಮತ್ತು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.

ನಿಯಮಿತವಾಗಿ ಕೆಲಸ ಮಾಡಿ ಹೆಚ್ಚು ಸಮಯ ಕೆಲಸ ಮಾಡುವುದರಿಂದ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ನಿದ್ರಾಹೀನತೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳ ಜತೆಗೆ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ. ಕೆಲಸದ ಸಮಯದ ನಡುವೆ ವಿರಾಮಗಳನ್ನು ತೆಗೆದುಕೊಳ್ಳಿ. ಸಮಯಕ್ಕೆ ಸರಿಯಾಗಿ ಆರೋಗ್ಯಕರ ಆಹಾರವನ್ನು ಸೇವಿಸಿ.

ನಿದ್ರೆ ಚೆನ್ನಾಗಿ ಮಾಡಿ ಮಧ್ಯರಾತ್ರಿ ಅಥವಾ ತಡವಾಗಿ ಮಲಗುವ ಅಭ್ಯಾಸ ಬಿಟ್ಟುಬಿಡಿ. ಇದು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ಆರೋಗ್ಯಕ್ಕಾಗಿ 7 ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡಿ.

ಜಂಕ್ ಫುಡ್ ಜಂಕ್ ಫುಡ್ ತಿನ್ನುವುದರಿಂದ ಕ್ಯಾಲೊರಿ ಹೆಚ್ಚಳ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಉಂಟಾಗುತ್ತದೆ. ನಿರಂತರವಾಗಿ ತಿನ್ನುವುದು ನಿಮ್ಮ ತೂಕವನ್ನು ಹೆಚ್ಚಿಸುತ್ತದೆ. ಅಧಿಕ ರಕ್ತದೊತ್ತಡದ ಜತೆಗೆ, ಕೊಲೆಸ್ಟ್ರಾಲ್ ಸಮಸ್ಯೆಗಳೂ ಹೆಚ್ಚಾಗುತ್ತವೆ. ಅದಕ್ಕಾಗಿಯೇ ತಜ್ಞರು ಸಮತೋಲನ ಆಹಾರವನ್ನು ಸೇವಿಸಲು ಸೂಚಿಸುತ್ತಾರೆ.

ಇದನ್ನೂ ಓದಿ: Liver Health: ಪಿತ್ತಜನಕಾಂಗದ ಆರೋಗ್ಯವನ್ನು ಕಾಪಾಡಲು ವಾರದ 7 ದಿನವನ್ನು ಬಳಸಿ; ಆಹಾರದಲ್ಲಿನ ಈ ಕ್ರಮ ಯಕೃತ್ತಿನ ಕಾಯಿಲೆಯಿಂದ ನಿಮ್ಮನ್ನು ದೂರ ಇಡುತ್ತದೆ

Health Benefits: ಕಿಡ್ನಿ ಸಮಸ್ಯೆ ಉಂಟಾದ ಮೇಲೆ ಪರಿಹಾರ ಹುಡುಕುವ ಬದಲು, ಪ್ರತಿದಿನ ಡಿಟಾಕ್ಸ್​ ಮಾಡಿ ಕುಡಿಯಿರಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ