AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits: ಕಿಡ್ನಿ ಸಮಸ್ಯೆ ಉಂಟಾದ ಮೇಲೆ ಪರಿಹಾರ ಹುಡುಕುವ ಬದಲು, ಪ್ರತಿದಿನ ಡಿಟಾಕ್ಸ್​ ಮಾಡಿ ಕುಡಿಯಿರಿ

Kidney: ಮೂತ್ರಪಿಂಡ ಕೆಲವೊಮ್ಮೆ ವಿಷದಿಂದ ಹಾನಿಗೊಳಗಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಮೂತ್ರಪಿಂಡ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಹೀಗಾಗಿ ನೀವು ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸುವುದು ಸೂಕ್ತ. ಹೀಗಾಗಿ ಮೂತ್ರಪಿಂಡದ ಆರೋಗ್ಯ ಸದಾ ಕಾಪಾಡಿಕೊಳ್ಳಲು ಡಿಟಾಕ್ಸ್​ ಮಾಡಿ ಕುಡಿಯಿರಿ.

Health Benefits: ಕಿಡ್ನಿ ಸಮಸ್ಯೆ ಉಂಟಾದ ಮೇಲೆ ಪರಿಹಾರ ಹುಡುಕುವ ಬದಲು, ಪ್ರತಿದಿನ ಡಿಟಾಕ್ಸ್​ ಮಾಡಿ ಕುಡಿಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 18, 2021 | 7:30 AM

Share

ಮೂತ್ರಪಿಂಡ ಅಥವಾ ಕಿಡ್ನಿಯು ಮಾನವನ ದೇಹ ಸರಿಯಾಗಿ ಕಾರ್ಯನಿರ್ವಹಿಸಲು ಉಪಯುಕ್ತವಾಗಿದೆ. ದೇಹದಿಂದ ವಿಷ ಮತ್ತು ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕಲು ಕಿಡ್ನಿ ಸಹಾಯ ಮಾಡುತ್ತವೆ. ಮೂತ್ರಪಿಂಡ (Kidney) ತನ್ನ ಕೆಲಸವನ್ನು ಸರಿಯಾಗಿ ಮಾಡಲು ಹೆಚ್ಚು ನೀರು ಕುಡಿಯಬೇಕು. ಮೂತ್ರಪಿಂಡ ಕೆಲವೊಮ್ಮೆ ವಿಷದಿಂದ ಹಾನಿಗೊಳಗಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಮೂತ್ರಪಿಂಡ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಹೀಗಾಗಿ ನೀವು ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸುವುದು ಸೂಕ್ತ. ಹೀಗಾಗಿ ಮೂತ್ರಪಿಂಡದ ಆರೋಗ್ಯ ಸದಾ ಕಾಪಾಡಿಕೊಳ್ಳಲು ಡಿಟಾಕ್ಸ್​ ಮಾಡಿ ಕುಡಿಯಿರಿ. ಯಾವೆಲ್ಲಾ ಡಿಟಾಕ್ಸ್​ ಮೂತ್ರಪಿಂಡದ ಆರೋಗ್ಯಕ್ಕೆ ಒಳ್ಳೆಯದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

1. ಚಹಾ ಮೂತ್ರಪಿಂಡವನ್ನು ಶುದ್ಧೀಕರಿಸಲು ಚಹಾ ಸಹಾಯ ಮಾಡುತ್ತದೆ. ಹಲವರಿಗೆ ದಿನಕ್ಕೆ 1ರಿಂದ 2 ಕಪ್​ ಟೀ ಅಥವಾ ಚಹಾ ಕುಡಿದು ಅಭ್ಯಾಸ ಇರುತ್ತದೆ. ಇದು ಒಳ್ಳೆಯದು. ಮೂತ್ರಪಿಂಡ ಸದಾ ಆರೋಗ್ಯವಾಗಿರಲು ಮತ್ತು ನಿರ್ವಿಷಗೊಳಿಸಲು ಚಹಾ ಸಹಾಯ ಮಾಡುತ್ತದೆ. ನೀವು ಪ್ರತಿದಿನ ವಿವಿಧ ಚಹಾಗಳನ್ನು ಕುಡಿಯಬಹುದು. ಆದರೆ ಹೆಚ್ಚು ಕುಡಿಯುವುದು ಒಳ್ಳೆಯದಲ್ಲ.

2. ಚೆರ್ರಿ ಮತ್ತು ಕ್ರ್ಯಾನ್ಬೆರಿ ಪ್ರತಿಯೊಬ್ಬರೂ ಚೆರ್ರಿ ಮತ್ತು ಕ್ರ್ಯಾನ್ಬೆರಿಗಳ ರುಚಿಯನ್ನು ಇಷ್ಟಪಡುತ್ತಾರೆ. ಆದರೆ ಇದನ್ನು ತಿನ್ನುವುದರಿಂದ ಏನು ಉಪಯೋಗವಿದೆ ಎಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಆಹಾರದಲ್ಲಿ ನೀವು ಚೆರ್ರಿ ಮತ್ತು ಕ್ರ್ಯಾನ್ಬೆರಿಗಳನ್ನು ಸೇರಿಸಿಕೊಳ್ಳಬಹುದು. ಎರಡು ವಾರಗಳವರೆಗೆ ಚೆರ್ರಿ ಮತ್ತು ಕ್ರ್ಯಾನ್‌ಬೆರಿಗಳನ್ನು ಸೇವಿಸುವುದರಿಂದ ಯುಟಿಐ ಲಕ್ಷಣಗಳು ಕಡಿಮೆಯಾಗುತ್ತವೆ. ಚೆರ್ರಿ ಮತ್ತು ಕ್ರ್ಯಾನ್ಬೆರಿಗಳನ್ನು ವಿವಿಧ ಪ್ರಕಾರವಾಗಿ ಸೇವಿಸಬಹುದು ಅಂದರೆ ಸಲಾಡ್​, ಜ್ಯೂಸ್​ ರೂಪದಲ್ಲಿ ತೆಗೆದುಕೊಳ್ಳಬಹುದು. ಇವುಗಳು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತವೆ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

3. ಹಣ್ಣಿನ ಜ್ಯೂಸ್ ಸಕ್ಕರೆ ಅಥವಾ ಉಪ್ಪು ಇಲ್ಲದೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ. ಮೂತ್ರಪಿಂಡದ ಆರೋಗ್ಯವನ್ನು ಕಾಪಾಡಿಕೊಳ್ಳಲು ಜ್ಯೂಸ್ ಸಹಾಯ ಮಾಡುತ್ತದೆ. ಜ್ಯೂಸ್ ಮೂತ್ರಪಿಂಡವನ್ನು ಶುದ್ಧಗೊಳಿಸುತ್ತದೆ. ನಿಂಬೆ, ಕಿತ್ತಳೆ, ಕಲ್ಲಂಗಡಿ ಜ್ಯೂಸ್ ಅನ್ನು ಕುಡಿಯಬಹುದು. ಇದು ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತದೆ. ಈ ರಸವು ಮೂತ್ರಪಿಂಡದಲ್ಲಿನ ಕಲ್ಲುಗಳ ಬೆಳವಣಿಗೆಯನ್ನು ತಡೆಯುತ್ತದೆ.

4. ಪಾಲಕ್​ ಸೊಪ್ಪು ಪಾಲಕ್ ಸೊಪ್ಪು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಹಸಿರು ಎಲೆಗಳ ತರಕಾರಿಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದು ಒಳ್ಳೆಯದು. ಪಾಲಕ್​ನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಅಗತ್ಯವಾದ ಜೀವಸತ್ವಗಳಿವೆ. ಮೂತ್ರಪಿಂಡಗಳನ್ನು ನಿರ್ವಿಷಗೊಳಿಸಲು ಇವು ಸಹಾಯ ಮಾಡುತ್ತವೆ. ಮೂತ್ರಪಿಂಡದ ಆರೋಗ್ಯಕ್ಕಾಗಿ ನೀವು ಪಾಲಕ್ ಸೊಪ್ಪನ್ನು ಮಿತವಾಗಿ ತೆಗೆದುಕೊಳ್ಳಬೇಕು. ಹೆಚ್ಚು ಪಾಲಕ್​ ಅನ್ನು ತಿನ್ನುವುದರಿಂದ ಮೂತ್ರಪಿಂಡದ ಕಲ್ಲುಗಳ ಅಪಾಯ ಉಂಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:

Health Tips: ನಾಲಿಗೆಯ ಮೇಲಿನ ಈ ಲಕ್ಷಣಗಳು, ದೇಹದ ಆರೋಗ್ಯ ಸ್ಥಿತಿಯ ಬಗ್ಗೆ ಮುನ್ನೆಚ್ಚರಿಕೆ ನೀಡುತ್ತವೆ

Kidney Stone: ಕಿಡ್ನಿ ಸ್ಟೋನ್ ಸಮಸ್ಯೆ ಏಕೆ ಕಂಡುಬರುತ್ತದೆ? ಅದರಿಂದ ರಕ್ಷಣೆ ಹೇಗೆ? ಇಲ್ಲಿದೆ ವಿವರ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್