AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ

ಬೆಳಿಗ್ಗೆ ಹೊತ್ತಿಗೆ  ನಿಮ್ಮ ಮೊಬೈಲ್​ನಿಂದ ನೀವು ಸಾಧ್ಯವಾದಷ್ಟು ದೂರ ಇರುವುದು ಸೂಕ್ತ. ಹಾಗಿದ್ದರೆ ಬೆಳಿಗ್ಗೆ ಎದ್ದ ಕೂಡಲೇ ನಾವು ಏನು ಮಾಡಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

Health Tips: ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 30, 2021 | 7:51 AM

Share

ಬೆಳಿಗ್ಗೆ ಎದ್ದ ತಕ್ಷಣ ನಾವು ಅನುಸರಿಸುವ ಕೆಲವು ಅಭ್ಯಾಸಗಳು ದಿನವಿಡಿ ನಾವು ಹೆಚ್ಚು ಉತ್ಸಾಹದಿಂದ ಇರುವಂತೆ ಮಾಡುತ್ತದೆ. ಆದರೆ ಇತ್ತೀಚೆಗೆ ಜನರು ಬೆಳಿಗ್ಗೆ ಎಳುತ್ತಲೇ ತಮ್ಮ ಮೊಬೈಲ್ ನೋಡುವುದು, ವಾಟ್ಸಾಪ್, ಫೇಸ್​ಬುಕ್​ನಲ್ಲಿ ಯಾವ ರೀತಿಯ ಪೋಸ್ಟ್​ಗಳಿವೆ ಎಂಬುವುದನ್ನು ನೋಡುವುದರಿಂದಲೇ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ಆದರೆ ಇದು ಒಳ್ಳೆಯ ಅಭ್ಯಾಸ ಅಲ್ಲ. ಬೆಳಿಗ್ಗೆ ಹೊತ್ತಿಗೆ  ನಿಮ್ಮ ಮೊಬೈಲ್​ನಿಂದ ನೀವು ಸಾಧ್ಯವಾದಷ್ಟು ದೂರ ಇರುವುದು ಸೂಕ್ತ. ಹಾಗಿದ್ದರೆ ಬೆಳಿಗ್ಗೆ ಎದ್ದ ಕೂಡಲೇ ನಾವು ಏನು ಮಾಡಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಎಚ್ಚರವಾದ ನಂತರ 20 ಸೆಕೆಂಡುಗಳ ಕಾಲ ಕನ್ನಡಿಯಲ್ಲಿ ನಿಮ್ಮ ಮುಖವನ್ನು ನೋಡಿ ನೀವು ಎದ್ದಾಗ ಯಾವುದಾದರೂ ಒಂದು ಜೋಕ್ ಓದಿ. ನಂತರ ನಿಮ್ಮ ಮುಖವನ್ನು ಕನ್ನಡಿಯಲ್ಲಿ 20 ಸೆಕೆಂಡುಗಳ ಕಾಲ ನೋಡಿ ಮತ್ತು ಕಿರುನಗೆ ತೋರಿ. ನೀವು ಎದ್ದ ತಕ್ಷಣ, ಮನೆಯಲ್ಲಿರುವ ಎಲ್ಲರಿಗೂ ಮತ್ತು ನಿಮ್ಮ ಪಕ್ಕದಲ್ಲಿರುವವರಿಗೆ ಶುಭೋದಯ ಹೇಳಿ. ಇದು ನಿಮ್ಮ ಮನಸ್ಥಿತಿಯನ್ನು ಲವಲವಿಕೆಯಿಂದ ಇರಿಸುತ್ತದೆ.

ನಿಂಬೆ ರಸ ಬೆರಸಿದ ನೀರು ಕುಡಿಯಿರಿ ಹೆಚ್ಚಿನ ಜನರು ಬೆಳಿಗ್ಗೆ ಎದ್ದ ಕೂಡಲೆ ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಇವುಗಳಿಗಿಂತ ನಿಂಬೆ ರಸ ಬೆರೆಸಿದ ನೀರು ಅಥವಾ ಎಳನೀರನ್ನು ಕುಡಿಯುವುದು ಉತ್ತಮ ಎಂದು ವೈದ್ಯರು ತಿಳಿಸಿದ್ದಾರೆ. ಇದು ದೇಹದಿಂದ ಜೀವಾಣು ವಿಷವನ್ನು ಶುದ್ಧಗೊಳಿಸುತ್ತದೆ ಅಥವಾ ಹೊರಹಾಕುತ್ತದೆ.

ಹಣ್ಣುಗಳನ್ನು ಸೇವಿಸಿ ಬೆಳಿಗ್ಗೆ ಹಣ್ಣುಗಳನ್ನು ತಿನ್ನುವುದು ತುಂಬಾ ಒಳ್ಳೆಯದು. ಹಣ್ಣುಗಳಲ್ಲಿರುವ ಪೋಷಕಾಂಶಗಳು ಮತ್ತು ಪ್ರೋಟೀನ್​ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ದೇಹವನ್ನು ಸದೃಢವಾಗಿರಿಸುತ್ತವೆ. ಹಣ್ಣುಗಳನ್ನು ವಿಶೇಷವಾಗಿ ಬೆಳಿಗ್ಗೆ ತೆಗೆದುಕೊಂಡರೆ, ದಿನವಿಡೀ ಹೆಚ್ಚು ಉತ್ಸಾಹದಿಂದ ಇರಬಹುದು.

ಬೇಗ ಏಳುವುದು ಆರೋಗ್ಯಕ್ಕೆ ಒಳ್ಳೆಯದು ಹೆಚ್ಚಿನ ಜನರು ಬೆಳಿಗ್ಗೆ ತುಂಬಾ ತಡವಾಗಿ ಏಳುವ ಅಭ್ಯಾಸ ಹೊಂದಿರುತ್ತಾರೆ. ಬೆಳಿಗ್ಗೆ ಬೇಗನೆ ಎದ್ದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿ ದಿನ ನೀವು ಏಳುವ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಏಳುವುದನ್ನು ರೂಡಿಸಿಕೊಳ್ಳಿ. ಹಾಗೆಯೇ ಬೆಳಿಗ್ಗೆಯ ಸೂರ್ಯನ ಬಿಸಿಲು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ವ್ಯಾಯಾಮ ಮಾಡಿ ಎಚ್ಚರವಾದ ನಂತರ ವ್ಯಾಯಾಮ ಮಾಡುವುದು ನಿಮ್ಮ ಅಭ್ಯಾಸದಲ್ಲಿಲ್ಲದಿದ್ದರೆ ಈ ಅಭ್ಯಾಸವನ್ನು ರೂಢಿಸಿಕೊಳ್ಳಿ. ಇದು ಆರೋಗ್ಯಕ್ಕೆ ಒಳ್ಳೆಯದು. ಜತೆಗೆ ದಿನವನ್ನು ಆರಾಮದಾಯಕವಾಗಿಸಲು ಬೆಳಿಗ್ಗೆ ನಿಮ್ಮ ನೆಚ್ಚಿನ ಹಾಡನ್ನು ಕೇಳಿ. ಸಂಗೀತವು ನಮ್ಮಲ್ಲಿ ಜಾಗೃತಿ ಮೂಡಿಸುತ್ತದೆ. ಹಾಗೆಯೇ ಸಂಗೀತವು ನಮ್ಮ ಮನಸ್ಥಿತಿಯನ್ನು ಸುಧಾರಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Desi Chutney: ಈ ಆರು ಪದಾರ್ಥಗಳಿಂದ ತಯಾರಿಸಿದ ಚಟ್ನಿ ರುಚಿಗೆ ತಕ್ಕಂತೆ ಆರೋಗ್ಯಕರ ಗುಣಗಳನ್ನು ಹೊಂದಿದೆ

Left Side Sleeping: ಎಡಭಾಗಕ್ಕೆ ತಿರುಗಿ ಮಲಗುವುದು ನಮ್ಮ ಆರೋಗ್ಯಕ್ಕೆ ಎಷ್ಟು ಮುಖ್ಯ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್