Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಸಿ ಬೆಳ್ಳುಳ್ಳಿ ತಿನ್ನುವ ಅಭ್ಯಾಸದಿಂದ ಈ ನಾಲ್ಕು ಕಾಯಿಲೆಗಳನ್ನು ದೂರ ಇಡಬಹುದು

ಬೆಳ್ಳುಳ್ಳಿ ಅಡುಗೆಯನ್ನು ರುಚಿಕರವಾಗಿಸುತ್ತದೆ ಮತ್ತು ಹೆಚ್ಚು ಪರಿಮಳಯುಕ್ತ ಆಹಾರವಾಗಿಸುತ್ತದೆ. ಹೀಗಾಗಿ ಅನಾದಿಕಾಲದಿಂದಲೂ ಬೆಳ್ಳ್ಳುಳ್ಳಿಯನ್ನು ಅಡುಗೆಯಲ್ಲಿ ಬಳಸಲಾಗುತ್ತದೆ. ಆದಾಗ್ಯೂ ಇದನ್ನು ಬೇಯಿಸುವುದಕ್ಕಿಂತ ಹಸಿ ತಿನ್ನುವುದು ಉತ್ತಮ.

Health Tips: ಹಸಿ ಬೆಳ್ಳುಳ್ಳಿ ತಿನ್ನುವ ಅಭ್ಯಾಸದಿಂದ ಈ ನಾಲ್ಕು ಕಾಯಿಲೆಗಳನ್ನು ದೂರ ಇಡಬಹುದು
ಬೆಳ್ಳುಳ್ಳಿ
Follow us
TV9 Web
| Updated By: Skanda

Updated on: Jun 24, 2021 | 8:30 AM

ಬೆಳ್ಳುಳ್ಳಿಗೆ ವಿಶಿಷ್ಟ ರುಚಿ ಇದ್ದು, ಅನೇಕ ಆರೋಗ್ಯ ಪ್ರಯೋಜನಗಳಿಂದ ಕೂಡಿದೆ. ಸಾಮಾನ್ಯವಾಗಿ ಅಡುಗೆಗಳಲ್ಲಿ ಬೆಳ್ಳುಳ್ಳಿ ಬಳಸುವಾಗ ಅದನ್ನು ಹುರಿದು ಹಾಕಲಾಗುತ್ತದೆ. ಹೀಗಾಗಿಯೇ ಅನೇಕರಿಗೆ ಹಸಿ ಬೆಳ್ಳುಳ್ಳಿ ತಿನ್ನುವ ಕ್ರಮದ ಬಗ್ಗೆ ತಿಳಿದಿಲ್ಲ. ಬೆಳ್ಳುಳ್ಳಿ ಅಡುಗೆಯನ್ನು ರುಚಿಕರವಾಗಿಸುತ್ತದೆ ಮತ್ತು ಹೆಚ್ಚು ಪರಿಮಳಯುಕ್ತ ಆಹಾರವಾಗಿಸುತ್ತದೆ. ಹೀಗಾಗಿ ಅನಾದಿಕಾಲದಿಂದಲೂ ಬೆಳ್ಳ್ಳುಳ್ಳಿಯನ್ನು ಅಡುಗೆಯಲ್ಲಿ ಬಳಸಲಾಗುತ್ತದೆ. ಆದಾಗ್ಯೂ ಇದನ್ನು ಬೇಯಿಸುವುದಕ್ಕಿಂತ ಹಸಿ ತಿನ್ನುವುದು ಉತ್ತಮ. ಬೇಯಿಸಿದ ಬೆಳ್ಳುಳ್ಳಿಗಿಂತ ಹಸಿ ಬೆಳ್ಳುಳ್ಳಿ ಹೆಚ್ಚು ಪ್ರಯೋಜನಕಾರಿ ಹೇಗೆ ಎಂದು ಹುಬ್ಬೇರಿಸುವವರ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ.

1. ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ ಬೆಳ್ಳುಳ್ಳಿ ಉರಿಯೂತವನ್ನು ಕಡಿಮೆ ಮಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳು ತಿಳಿಸಿವೆ. ಬೆಳ್ಳುಳ್ಳಿ ಆಂಟಿಆಕ್ಸಿಡೆಂಟ್‌ಗಳು ಮತ್ತು ಆಲಿಸಿನ್‌ನಂತಹ ಸಲ್ಫರ್ ಹೊಂದಿರುವ ಸಂಯುಕ್ತಗಳಿಂದ ಕೂಡಿದೆ.

2. ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ ಎಂದು ಹೃದ್ರೋಗ ತಜ್ಞರು ತಿಳಿಸಿದ್ದಾರೆ. ಅಲ್ಲದೆ ಬೆಳ್ಳುಳ್ಳಿ ಹೃದಯವನ್ನು ಆರೋಗ್ಯಯುತವಾಗಿ ಇಡಲು ಉಪಯುಕ್ತವಾಗಿದೆ.

3. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುತ್ತದೆ ಬೆಳ್ಳುಳ್ಳಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಮತ್ತು ಸಕ್ಕರೆ ನಿರ್ವಹಣೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಟೈಪ್ 2 ಡಯಾಬಿಟಿಸ್ ನಿರ್ವಹಣೆಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ.

4. ಮೆದುಳಿನ ಆರೋಗ್ಯವನ್ನು ಕಾಪಾಡುತ್ತದೆ ಮೆದುಳಿನ ಆರೋಗ್ಯ ಚೆನ್ನಾಗಿದ್ದಾಗ ಮಾತ್ರ ಮನುಷ್ಯ ಆರೋಗ್ಯವಾಗಿರಲು ಸಾಧ್ಯ. ಬೆಳ್ಳುಳ್ಳಿಯ ಸೇವನೆಯು ಮೆದುಳಿನ ಆರೋಗ್ಯವನ್ನು ರಕ್ಷಿಸುತ್ತದೆ.

5. ಇನ್ನಿತರ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಹಸಿ ಬೆಳ್ಳುಳ್ಳಿ ಗ್ಯಾಸ್ಟಿಕ್​ನಂತಹ ಸಮಸ್ಯೆಯನ್ನು ದೂರ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿ ಹೆಚ್ಚಿನ ಪ್ರಮಾಣದ ಆಲಿಸಿನ್ ಇರುತ್ತದೆ. ಇದು ಗಂಧಕವನ್ನು ಒಳಗೊಂಡಿರುವ ಸಂಯುಕ್ತವಾಗಿದ್ದು, ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಲು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ:

Omega-3: ರೋಗನಿರೋಧಕ ಶಕ್ತಿ ಹೆಚ್ಚಿಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುವ ಒಮೆಗಾ-3 ಆಹಾರಗಳ ಬಗ್ಗೆ ತಿಳಿಯಿರಿ

Health Tips: ವಿಟಮಿನ್ ಬಿ 12 ಕೊರತೆ ಎಂದರೇನು? ಈ ಸಮಸ್ಯೆಯಿಂದ ಹೊರಬರಲು ಸೇವಿಸಬೇಕಾದ ಆಹಾರ ಪದ್ಧತಿಗಳ ವಿವರ ಹೀಗಿದೆ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ