AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udalu Benefits: ಊದಲು ಸಿರಿಧಾನ್ಯದ ಬಗ್ಗೆ ನಿಮಗೆಷ್ಟು ಗೊತ್ತು? ಪಿತ್ತಜನಕಾಂಗದ ಸ್ವಚ್ಛತೆಗೆ ವಾರಕ್ಕೊಮ್ಮೆ ಸೇವಿಸಿ

Health benefits: ರುಚಿಗೆ ಸಿಹಿಯಾಗಿರುವ ಊದಲಿನಿಂದ ಮಾಡಿದ ಆಹಾರಗಳು ಉತ್ತಮ ಬಲವರ್ಧಕವಾಗಿದೆ. ಇದು ಸುಲಭವಾಗಿ ಜೀರ್ಣವಾಗುತ್ತದೆ. ಅದಕ್ಕಾಗಿಯೇ ಉತ್ತರ ಭಾರತದಲ್ಲಿ ಅನೇಕ ಜನರು ಉಪವಾಸದ ಸಮಯದಲ್ಲಿ ಊದಲಿನಿಂದ ಮಾಡಿದ ಆಹಾರವನ್ನು ಸೇವಿಸುತ್ತಾರೆ.

Udalu Benefits: ಊದಲು ಸಿರಿಧಾನ್ಯದ ಬಗ್ಗೆ ನಿಮಗೆಷ್ಟು ಗೊತ್ತು? ಪಿತ್ತಜನಕಾಂಗದ ಸ್ವಚ್ಛತೆಗೆ ವಾರಕ್ಕೊಮ್ಮೆ ಸೇವಿಸಿ
ಊದಲು
Follow us
TV9 Web
| Updated By: preethi shettigar

Updated on: Aug 03, 2021 | 8:43 AM

ಊದಲು ಸಣ್ಣ ಸಿರಿಧಾನ್ಯಗಳಲ್ಲಿ ಒಂದಾಗಿದೆ. ಸಿಹಿ ಮತ್ತು ರುಚಿಯಾಗಿರುವ ಊದಲನ್ನು(Udalu) ಮುಖ್ಯವಾಗಿ ಭಾರತ, ಪಾಕಿಸ್ತಾನ, ನೇಪಾಳ, ಜಪಾನ್ ಮತ್ತು ಚೀನಾದ ಪರ್ವತ ಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. ಅದರಲ್ಲೂ ಭಾರತದಲ್ಲಿ ಈ ಸಿರಿಧಾನ್ಯವನ್ನು ಹೆಚ್ಚಾಗಿ ಉತ್ತರಾಖಂಡದಲ್ಲಿ ಬೆಳೆಯಲಾಗುತ್ತದೆ. ಅಲ್ಲದೇ ತಮಿಳುನಾಡಿನ ಪರ್ವತ ಪ್ರದೇಶಗಳಲ್ಲಿ ಕೂಡ ಇವುಗಳನ್ನು ಬೆಳೆಯಲಾಗುತ್ತದೆ.

ರುಚಿಗೆ ಸಿಹಿಯಾಗಿರುವ ಊದಲಿನಿಂದ ಮಾಡಿದ ಆಹಾರಗಳು ಉತ್ತಮ ಬಲವರ್ಧಕವಾಗಿದೆ. ಇದು ಸುಲಭವಾಗಿ ಜೀರ್ಣವಾಗುತ್ತದೆ. ಅದಕ್ಕಾಗಿಯೇ ಉತ್ತರ ಭಾರತದಲ್ಲಿ ಅನೇಕ ಜನರು ಉಪವಾಸದ ಸಮಯದಲ್ಲಿ ಊದಲಿನಿಂದ ಮಾಡಿದ ಆಹಾರವನ್ನು ಸೇವಿಸುತ್ತಾರೆ. ಊದಲು ತಿನ್ನುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಅವುಗಳು ಏನು ಎಂದು ಹುಬ್ಬೇರಿಸುವವರಿಗೆ ಇಲ್ಲಿದೆ ಉತ್ತರ.

ಉಷ್ಣತೆಯನ್ನು ಸಮತೋಲನಗೊಳಿಸುತ್ತದೆ ನಮ್ಮ ದೇಹದ ಸ್ಥಿತಿಯೂ ಯಾವಾಗಲೂ ಒಂದೇ ತೆರನಾಗಿರುವುದಿಲ್ಲ. ಅದರಲ್ಲೂ ಉಷ್ಣತೆಯಿಂದಾಗಿ ಅನೇಕ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಇನ್ನು ಕೆಲವೊಮ್ಮೆ ಸೇವಿಸಿದ ಔಷಧಿಯ ಪರಿಣಾಮದಿಂದಾಗಿಯೂ ದೇಹದಲ್ಲಿ ಉಷ್ಣತೆ ಕಾಣಿಸಿಕೊಳ್ಳುತ್ತದೆ. ಅಂತಹ ಸಂದರ್ಭದಲ್ಲಿ ಊದಲು ಸೇವಿಸುವುದು ಉತ್ತಮ. ಇದು ದೇಹದ ಉಷ್ಣತೆಯನ್ನು ಸಮತೋಲನದಲ್ಲಿರಿಸುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಊದಲು ಸಿರಿಧಾನ್ಯವು ರೋಗನಿರೋಧಕ ಶಕ್ತಿಯನ್ನು ಹೊಂದಿದೆ. ಇದು ಉತ್ಕರ್ಷಣ ನಿರೋಧಕವಾಗಿಯೂ ಕೆಲಸ ಮಾಡುತ್ತದೆ. ಅದರಲ್ಲೂ ಕೊರೊನಾ ಕಾಲಘಟ್ಟದಲ್ಲಿ ಈ ಸಿರಿಧಾನ್ಯವನ್ನು ದಿನಕ್ಕೆ ಒಂದು ಬಾರಿಯಾದರೂ ಸೇವಿಸುವುದು ಸೂಕ್ತ.

ಜೀರ್ಣಕ್ರಿಯೆಗೆ ಸಹಕಾರಿ ದೀರ್ಘಕಾಲದವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವವರಿಗೆ ಇದು ಉತ್ತಮ ಆಹಾರವಾಗಿದ್ದು, ಊದಲು ಸುಲಭವಾಗಿ ಜೀರ್ಣವಾಗುತ್ತದೆ. ಅಲ್ಲದೇ ಇದು ಅಜೀರ್ಣ, ಹೊಟ್ಟೆ ನೋವು ಮುಂತಾದ ಸಮಸ್ಯೆಯನ್ನು ದೂರ ಮಾಡುತ್ತದೆ.

ಮಲಬದ್ಧತೆ ಊದಲಿನಲ್ಲಿ ನಾರಿನಂಶ ಹೆಚ್ಚಾಗಿರುವುದರಿಂದ ಮಲಬದ್ಧತೆ ಮತ್ತು ಮಧುಮೇಹಕ್ಕೆ ತುಂಬಾ ಒಳ್ಳೆಯದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಹೃದಯದ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ಮೂಲವ್ಯಾದಿ ಸಮಸ್ಯೆಯಿಂದ ಬಳುತ್ತಿರುವವರಿಗೆ ವೈದ್ಯರು ಈ ಆಹಾರವನ್ನು ಸೇವಿಸಲು ಸೂಚಿಸುತ್ತಾರೆ.

ಗ್ಯಾಸ್ಟ್ರಿಕ್ ನಿವಾರಕ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರ ಮಾಡಲು ಇದು ಉಪಯುಕ್ತವಾಗಿದೆ. ಅಲ್ಲದೇ ಕ್ಯಾನ್ಸರ್​ನ ಪರಿಣಾಮವನ್ನು ತಡೆಯಲು ಊದಲು ಸಹಾಯ ಮಾಡುತ್ತದೆ. ಮೂತ್ರಕೋಶ, ಪಿತ್ತಜನಕಾಂಗ ಮತ್ತು ಪಿತ್ತಕೋಶವನ್ನು ಸ್ವಚ್ಛಗೊಳಿಸಲು ಕೂಡ ಇದು ಸಹಾಯ ಮಾಡುತ್ತದೆ.

ಗರ್ಭಿಣಿಯರಿಗೆ ಉತ್ತಮ ಆಹಾರ ಉತ್ತರಾಖಂಡ ಮತ್ತು ನೇಪಾಳದಲ್ಲಿ ಊದಲನ್ನು ಗರ್ಭಿಣಿ ಮತ್ತು ಪ್ರಸವಾನಂತರದ ಮಹಿಳೆಯರಿಗೆ ನೀಡಲಾಗುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರನ್ನು ಬಲಪಡಿಸುವ ಆಹಾರವಾಗಿ ಇದನ್ನು ನೀಡಲಾಗುತ್ತದೆ. ಗರ್ಭಕಂಠದ ಕ್ಯಾನ್ಸರ್ ಅನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

ಇನ್ನಿತರ ಉಪಯೋಗಗಳು ಜಾಂಡೀಸ್ ಅನ್ನು ಕಡಿಮೆ ಮಾಡಲು ಮತ್ತು ಲಿವರ್ ಅನ್ನು ಪೋಷಿಸಲು ಊದಲು ಸಹಕಾರಿಯಾಗಿದೆ. ವಯಸ್ಕರಲ್ಲಿ ಗಾಳಿಗುಳ್ಳೆಯ ನಿಯಂತ್ರಣಕ್ಕೆ, ಪಿತ್ತಕಲ್ಲುಗಳನ್ನು ತೊಡೆದುಹಾಕಲು ಮತ್ತು ಟೈಫಾಯಿಡ್ ನಂತಹ ಜೀವಾಣುಗಳನ್ನು ಗುಣಪಡಿಸಲು ಊದಲು ಸಹಾಯಕವಾಗಿದೆ.

ಇದನ್ನೂ ಓದಿ: Health Benefits: ಹೂವು ಕೇವಲ ಅಂದಕ್ಕಷ್ಟೇ ಅಲ್ಲ ಅನೇಕ ಆರೋಗ್ಯಕರ ಗುಣಗಳು ಇದರಲ್ಲಿ ಅಡಗಿದೆ

Health Tips: ತಲೆಕೂದಲು ಬಿಳಿಯಾಗಿದೆ ಎಂದು ಚಿಂತಿಸುವ ಬದಲು ಈ 5 ಕ್ರಮಗಳನ್ನು ಅನುಸರಿಸಿ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ