AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Pepper Benefits: ನಾಲ್ಕು ಕಾಳು ಕರಿಮೆಣಸನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಅನೇಕ ಬದಲಾವಣೆಗಳಾಗುತ್ತದೆ

ಕರಿಮೆಣಸು ಅದ್ಭುತ ಔಷಧೀಯ ಗುಣಗಳನ್ನು ಹೊಂದಿದ್ದು, ಅದನ್ನು ಅನೇಕ ರೋಗಗಳು ಮತ್ತು ದೈಹಿಕ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.

Black Pepper Benefits: ನಾಲ್ಕು ಕಾಳು ಕರಿಮೆಣಸನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಅನೇಕ ಬದಲಾವಣೆಗಳಾಗುತ್ತದೆ
ಕರಿಮೆಣಸು
TV9 Web
| Edited By: |

Updated on: Jul 31, 2021 | 7:42 AM

Share

ಇತ್ತೀಚಿನ ದಿನಗಳಲ್ಲಿ ವಿವಿಧ ಕಾಯಿಲೆಗಳಿಂದ ಬಳಲುವುದು ದಿನಚರಿಯಾಗಿದೆ. ವಯಸ್ಕರಿಂದ ಹಿಡಿದು ಯುವಕರ ವರೆಗೆ ಎಲ್ಲರೂ ಒಂದಿಲ್ಲಾ ಒಂದು ಆರೋಗ್ಯ ಸಮಸ್ಯೆಗೆ ಗುರಿಯಾಗುತ್ತಾರೆ. ಆದಾಗ್ಯೂ ಅನೇಕ ಕಾಯಿಲೆಗಳನ್ನು ಕಡಿಮೆ ಮಾಡಲು ನಮ್ಮ ಮನೆಯಲ್ಲಿಯೇ ನೈಸರ್ಗಿಕ ಔಷಧಿಗಳಿವೆ. ಆದರೆ ಅವುಗಳ ಉಪಯೋಗಗಳ ಬಗ್ಗೆ ಯಾರಿಗೂ ತಿಳಿದಿಲ್ಲ. ಕರಿಮೆಣಸು ಅಂತಹ ಗಿಡಮೂಲಿಕೆಗಳಲ್ಲಿ ಒಂದಾಗಿದೆ. ಭಾರತೀಯರು ಅನಾದಿ ಕಾಲದಿಂದಲೂ ಕರಿಮೆಣಸನ್ನು ಮಸಾಲೆ ಪದಾರ್ಥವಾಗಿ ಬಳಸುತ್ತಿದ್ದಾರೆ. ಕರಿ ಮೆಣಸನ್ನು ಆಯುರ್ವೇದದಲ್ಲಿಯೂ ಬಳಸಲಾಗುತ್ತದೆ. ಕರಿಮೆಣಸು ಅಡುಗೆಗೆ ಉತ್ತಮ ರುಚಿ ನೀಡುವುದಷ್ಟೇ ಅಲ್ಲ ಅನೇಕ ಆರೋಗ್ಯಕರ ಗುಣವನ್ನು ಹೊಂದಿದೆ.

ಕರಿಮೆಣಸು ಅದ್ಭುತ ಔಷಧೀಯ ಗುಣಗಳನ್ನು ಹೊಂದಿದ್ದು, ಅದನ್ನು ಅನೇಕ ರೋಗಗಳು ಮತ್ತು ದೈಹಿಕ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.

ತೂಕ ನಷ್ಟಕ್ಕೆ ಸಹಕಾರಿ ಕರಿಮೆಣಸು ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ದೂರ ಮಾಡುತ್ತದೆ. ಕರಿಮೆಣಸು ಕೊಬ್ಬನ್ನು ಕರಗಿಸುವ ಗುಣಗಳನ್ನು ಹೊಂದಿದೆ. ವಿಶೇಷವಾಗಿ ಪ್ರತಿದಿನ ನಾಲ್ಕು ಕರಿಮೆಣಸಿನಕಾಯಿಗಳನ್ನು ಅಗಿದು ನುಂಗುವುದರಿಂದ ಅಧಿಕ ತೂಕವನ್ನು ಸುಲಭವಾಗಿ ಕಡಿಮೆ ಮಾಡಬಹುದು ಎಂದು ವೈದ್ಯಕೀಯ ತಜ್ಞರು ಸೂಚಿಸುತ್ತಾರೆ. ಇನ್ನು ಪ್ರತಿದಿನ ಬೆಳಿಗ್ಗೆ ಒಂದು ಲೋಟ ನೀರಿಗೆ ಕರಿಮೆಣಸು, ಪುದೀನಾವನ್ನು ಸೇರಿಸಿ ಕುಡಿಯುವುದರಿಂದ ದೇಹದಲ್ಲಿನ ಕಲ್ಮಶಗಳ ಜತೆಗೆ ಕೊಬ್ಬು ಕರಗುತ್ತದೆ. ಇದು ಅಧಿಕ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ ಊಟದ ನಂತರ ಕೆಲವರಿಗೆ ಗ್ಯಾಸ್ಟಿಕ್ ಸಮಸ್ಯೆಗಳು ಉಂಟಾಗುತ್ತದೆ. ಅಂತವರು ತಮ್ಮ ಆಹಾರದಲ್ಲಿ ಹಸಿ ಮೆಣಸಿನಕಾಯಿಗಿಂತ ಕರಿಮೆಣಸು ಬಳಸುವುದು ಸೂಕ್ತ. ಇದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಕಡಿಮೆಯಾಗುತ್ತದೆ.

ಶೀತ ನಿವಾರಕ ಶೀತ ಮತ್ತು ಕೆಮ್ಮಿನಿಂದ ಬಳಲುವವರು ಕರಿಮೆಣಸಿನ ಕಷಾಯ ಮಾಡಿ ಕುಡಿಯುವುದು ಸೂಕ್ತ. ಇದು ಗಂಟಲು ನೋವನ್ನು ಕೂಡ ದೂರ ಮಾಡುತ್ತದೆ. ಕರಿಮೆಣಸು, ಶುಂಠಿ ರಸ, ತುಳಸಿ ಎಲೆಗಳು, ದಾಲ್ಚಿನ್ನಿ ಪುಡಿಯನ್ನು ಸೇರಿಸಿ ಚಹಾದಂತೆ ಮಾಡಿ ಕುಡಿಯಿರಿ ಇದು ಕೆಮ್ಮು ದೂರ ಮಾಡುತ್ತದೆ.

ಹಲ್ಲುಗಳ ರಕ್ಷಕ ಹಲ್ಲಿನ ಆರೋಗ್ಯ ಕಾಪಾಡಲು ಕರಿಮೆಣಸನ್ನು ಬಳಸಿ. ಮುಖ್ಯವಾಗಿ ಹಲ್ಲುಜ್ಜುವಾಗ ಕರಿಮೆಣಸಿನ ಪುಡಿಯನ್ನು ಹಾಕಿ ಉಜ್ಜುವುದರಿಂದ ಹಲ್ಲು ಬಲಗೊಳ್ಳುತ್ತದೆ ಮತ್ತು ಬಣ್ಣ ಕೂಡ ಬಿಳಿಯಾಗುತ್ತದೆ. ಅಲ್ಲದೆ ವಸಡಿಗೆ ಸಂಬಂಧಿಸಿದ ಕಾಯಿಲೆ ಕೂಡ ದೂರವಾಗುತ್ತದೆ.

ಅಧಿಕ ರಕ್ತದೊತ್ತಡ ನಿವಾರಕ ಬಿಪಿಯನ್ನು ನಿಯಂತ್ರಿಸಲು ಕರಿಮೆಣಸನ್ನು ಸೇವಿಸಿ. ಹಾಗೆ ಸೇವಿಸಲು ಕಷ್ಟವಾದರೆ ಉಗುರು ಬೆಚ್ಚಗಿನ ನೀರಿಗೆ ಕರಿಮೆಣಸಿನ ಪುಡಿ ಹಾಕಿ ಕುಡಿಯಿರಿ. ಇದು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ದೂರ ಮಾಡುತ್ತದೆ.

ಇದನ್ನೂ ಓದಿ: ಮನೆಯೊಳಗೆ ಗಿಡ ನೆಡುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ಗಮನಹರಿಸಿ

Kadamba Tree: ಕದಂಬ ಮರದ ವಿಶೇಷತೆ ಮತ್ತು ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಲು, ಒಂದು ಗಿಡ ನೆಟ್ಟು ನೋಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ