AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Carom Seeds: ಓಂ ಕಾಳು ರುಚಿಯ ಜತೆಗೆ ಹಲವು ಆರೋಗ್ಯಕರ ಗುಣಗಳನ್ನು ಹೊಂದಿದೆ

Health benefits: ಆಯುರ್ವೇದದಲ್ಲಿ ಓಂ ಕಾಳು ಪ್ರಮುಖ ಪಾತ್ರವನ್ನು ಹೊಂದಿದೆ. ಏಕೆಂದರೆ ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ.

Carom Seeds: ಓಂ ಕಾಳು ರುಚಿಯ ಜತೆಗೆ ಹಲವು ಆರೋಗ್ಯಕರ ಗುಣಗಳನ್ನು ಹೊಂದಿದೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 15, 2021 | 7:33 AM

Share

ಓಂ ಕಾಳು ಅಥವಾ ಅಜ್ವಾನ (Ajwain) ಭಾರತೀಯ ಪಾಕಪದ್ಧತಿಯಲ್ಲಿ ಸಾಮಾನ್ಯವಾಗಿ ಬಳಸುವ ಮಸಾಲೆಗಳಲ್ಲಿ ಒಂದಾಗಿದೆ. ಇದನ್ನು ಮಸಾಲೆ ಮತ್ತು ಉಪ್ಪಿನಕಾಯಿಗಳಲ್ಲಿ ಬಳಸಲಾಗುತ್ತದೆ. ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುಣಪಡಿಸಲು ಈ ಬೀಜಗಳು ಸಹಾಯ ಮಾಡುತ್ತವೆ. ಓಂ ಕಾಳನ್ನು(Carom Seeds) ಸುಗಂಧಕ್ಕಾಗಿ ಬಳಸಲಾಗುತ್ತದೆ. ಆಯುರ್ವೇದದಲ್ಲಿ ಓಂ ಕಾಳು ಪ್ರಮುಖ ಪಾತ್ರವನ್ನು ಹೊಂದಿದೆ. ಏಕೆಂದರೆ ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ.

ಜೀರ್ಣಾಂಗ ಸಮಸ್ಯೆಯನ್ನು ನಿವಾರಿಸುತ್ತದೆ ಓಂ ಕಾಳು ನಮ್ಮ ದೇಹದ ಜೀರ್ಣಕಾರಿ ಅಂಗಗಳಾದ ಹೊಟ್ಟೆ, ಕರುಳು ಮತ್ತು ಹುಣ್ಣಿನಂತಹ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಓಂ ಕಾಳು ಹೆಚ್ಚಾಗಿ ಆಮ್ಲೀಯತೆ, ಗ್ಯಾಸ್ ಮತ್ತು ಅಜೀರ್ಣಕ್ಕೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತವೆ. ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ನೀವು ಅರ್ಧ ಟೀ ಚಮಚ ಓಂ ಕಾಳು ಜಗಿದು ರಸ ನುಂಗಬೇಕು ಅಥವಾ ನೀರಿನೊಂದಿಗೆ ಈ ಕಾಳನ್ನು ಕುದಿಸಿ ಕೂಡ ಕುಡಿಯಬಹುದು.

ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ ಓಂ ಕಾಳಿನಲ್ಲಿ ಥೈಮೋಲ್ ಇರುತ್ತದೆ. ಇದು ರೋಗಾಣುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಸಣ್ಣ ಚರ್ಮದ ಕಿರಿಕಿರಿಯನ್ನು ನಿಮಿಷಗಳಲ್ಲಿ ಗುಣಪಡಿಸಲು ಓಂ ಕಾಳನ್ನು ಬಳಸಬಹುದು. ಈ ಬೀಜಗಳನ್ನು ಪುಡಿಮಾಡಿ ಪೇಸ್ಟ್ ರೀತಿಯಾಗಿ ಕೂಡ ಬಳಸಬಹುದು. ಈ ಬೀಜಗಳನ್ನು ನೀರಿನಲ್ಲಿ ಬೆರೆಸಿ ಪೇಸ್ಟ್ ತಯಾರಿಸಿ, ಮೊಡವೆ ಕಲೆಗಳ ಮೇಲೆ ಕನಿಷ್ಠ 15 ನಿಮಿಷಗಳ ಕಾಲ ಹಚ್ಚಿ ನಂತರ ತೊಳೆಯಿರಿ. ಓಂ ಕಾಳು ಕೂದಲಿನಲ್ಲಿನ ಬಿಳಿ ಬಣ್ಣವನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಕೂದಲು ಉದುರುವಿಕೆಯನ್ನು ಸಹ ನಿವಾರಿಸುತ್ತದೆ. ಕೂದಲಿನ ಬೂದು ಬಣ್ಣವನ್ನು ಗುಣಪಡಿಸಲು ನೀವು ಓಂ ಕಾಳು ಸೇವಿಸಲು ಬಯಸಿದರೆ, ರಾತ್ರಿ ಇಡೀ ಈ ಕಾಳನ್ನು ನೀರಿನಲ್ಲಿ ನೆನೆಸಿ ಬೆಳಿಗ್ಗೆ ಕಾಲಿ ಹೊಟ್ಟೆಗೆ ಈ ನೀರನ್ನು ಕುಡಿಯಿರಿ.

ಇತರ ಆರೋಗ್ಯ ಪ್ರಯೋಜನಗಳು ಓಂ ಕಾಳಿನಲ್ಲಿ ನಾರಿನಾಂಶ ಅಧಿಕವಾಗಿದೆ. ಇದು ಹಸಿವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ದೇಹದಿಂದ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ಇದು ಸಹಾಯ ಮಾಡುತ್ತದೆ. ಇದರಲ್ಲಿರುವ ಮೊನೊ ಮತ್ತು ಪಾಲಿ ಅಪರ್ಯಾಪ್ತ ಕೊಬ್ಬುಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಓಂ ಕಾಳು ಸಂಧಿವಾತ, ಕೀಲುಗಳ ಸುತ್ತಲಿನ ಕೆಂಪು ಬಣ್ಣವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಏಕೆಂದರೆ ಇದು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಇದು ನೋವನ್ನು ಶಮನಗೊಳಿಸಲು ಮತ್ತು ಸಂಧಿವಾತದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆಹಾರದ ರುಚಿ ಹೆಚ್ಚಿಸುತ್ತದೆ ಓಂ ಕಾಳಿನಲ್ಲಿ ಪೋಷಕಾಂಶಗಳಿವೆ. ಇದು ಆಹಾರದ ಪರಿಮಳ ಮತ್ತು ರುಚಿಯನ್ನು ಹೆಚ್ಚಿಸುತ್ತದೆ. ನೀವು ಓಂ ಕಾಳನ್ನು ಹಲವು ವಿಧಗಳಲ್ಲಿ ಬಳಸಬಹುದು. ದಾಲ್, ಕರಿ ಅಥವಾ ಸಾಂಬಾರು ಮಾಡುವಾಗ ನೀವು ಓಂ ಕಾಳಿನ ಪುಡಿಯನ್ನು ಬಳಸಬಹುದು. ಅಜೀರ್ಣ ಸಮಸ್ಯೆಯನ್ನು ನಿವಾರಿಸಲು ಜೀರಿಗೆ ಬದಲು ಓಂ ಕಾಳು ಬಳಸಬಹುದು. ಇದನ್ನು ಮೌತ್ ಫ್ರೆಶ್ನರ್ ಆಗಿ ಕೂಡ ಬಳಸಬಹುದು.

ಇದನ್ನೂ ಓದಿ: Weight Loss Tips: ತೂಕ ಇಳಿಕೆಗೆ ಕಲ್ಲಂಗಡಿ ಬೀಜದಿಂದ ತಯಾರಿಸಿದ ಲಡ್ಡು ಸೇವಿಸಿ

Guava Side Effect: ಪೇರಲೆ ಹಣ್ಣಿನ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ