Carrot Benefits: ಚಳಿಗಾಲದಲ್ಲಿ ಕ್ಯಾರೆಟ್ ಸೇವನೆ ಎಷ್ಟು ಮುಖ್ಯ? ಸಮಸ್ಯೆ ಬಂದ ಮೇಲೆ ಚಿಂತಿಸುವ ಮೊದಲೇ ಎಚ್ಚರ ವಹಿಸಿ

Health tips: ಚಳಿಗಾಲದ ಆಹಾರದಲ್ಲಿ ಕ್ಯಾರೆಟ್ ಬಳಕೆ ಕೂಡ ಮುಖ್ಯ. ಭಾರತದಲ್ಲಿ ಕ್ಯಾರೆಟ್ ಉತ್ಪಾದನೆ ಜತೆಗೆ ಮಾರಾಟವೂ ಚೆನ್ನಾಗಿದೆ. ಕ್ಯಾರೆಟ್ ನಿಮ್ಮ ಚರ್ಮ ಮತ್ತು ಆರೋಗ್ಯಕ್ಕೆ ಒಳ್ಳೆಯದು. ಅದು ಹೇಗೆ ಎಂದು ತಿಳಿದುಕೊಳ್ಳುವುದು ಸೂಕ್ತ.

Carrot Benefits: ಚಳಿಗಾಲದಲ್ಲಿ ಕ್ಯಾರೆಟ್ ಸೇವನೆ ಎಷ್ಟು ಮುಖ್ಯ? ಸಮಸ್ಯೆ ಬಂದ ಮೇಲೆ ಚಿಂತಿಸುವ ಮೊದಲೇ ಎಚ್ಚರ ವಹಿಸಿ
ಕ್ಯಾರೆಟ್​ (ಪ್ರಾತಿನಿಧಿಕ ಚಿತ್ರ)
Follow us
| Updated By: preethi shettigar

Updated on: Dec 14, 2021 | 8:04 AM

ನೆಲದಡಿಯಲ್ಲಿ ಬೆಳೆಯುವ ಕ್ಯಾರೆಟ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ತಜ್ಞರು ಯಾವಾಗಲೂ ಸಲಹೆ ನೀಡುತ್ತಾರೆ. ಇದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಅದರಲ್ಲೂ ಚಳಿಗಾಲದಲ್ಲಿ ಸಿಗುವ ಕ್ಯಾರೆಟ್ (Carrot) ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ಇದು ಅನೇಕ ಪೋಷಕಾಂಶಗಳಿಂದ ತುಂಬಿದೆ. ಕ್ಯಾರೆಟ್​ನಿಂದ ಹಲ್ವಾ, ಕ್ಯಾರೆಟ್ ಸೂಪ್, ಕ್ಯಾರೆಟ್ ಬರ್ಫಿ, ಕ್ಯಾರೆಟ್ ಚಟ್ನಿ, ಕ್ಯಾರೆಟ್ ಕೇಕ್ ಮುಂತಾದ ಭಕ್ಷ್ಯಗಳನ್ನು ಕೂಡ ಮಾಡಬಹುದು. ಚಳಿಗಾಲದ (Winter) ಆಹಾರದಲ್ಲಿ ಕ್ಯಾರೆಟ್ ಬಳಕೆ ಕೂಡ ಮುಖ್ಯ. ಭಾರತದಲ್ಲಿ ಕ್ಯಾರೆಟ್ ಉತ್ಪಾದನೆ ಜತೆಗೆ ಮಾರಾಟವೂ ಚೆನ್ನಾಗಿದೆ. ಕ್ಯಾರೆಟ್ ನಿಮ್ಮ ಚರ್ಮ ಮತ್ತು ಆರೋಗ್ಯಕ್ಕೆ ಒಳ್ಳೆಯದು. ಅದು ಹೇಗೆ ಎಂದು ತಿಳಿದುಕೊಳ್ಳುವುದು ಸೂಕ್ತ.

ಕ್ಯಾರೆಟ್ ದೇಹಕ್ಕೆ ಏಕೆ ಮುಖ್ಯ ?

1. ದೃಷ್ಟಿಗೆ ಒಳ್ಳೆಯದು ಕಣ್ಣಿನ ಆರೋಗ್ಯಕ್ಕೆ ಕ್ಯಾರೆಟ್ ತುಂಬಾ ಒಳ್ಳೆಯದು. ಕ್ಯಾರೆಟ್‌ನಲ್ಲಿ ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಇದು ನಿಮ್ಮ ದೇಹದಲ್ಲಿ ವಿಟಮಿನ್ ಎ ಮಟ್ಟವನ್ನು ಹೆಚ್ಚಿಸುತ್ತದೆ. ಇದು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

2. ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಕ್ಯಾರೆಟ್‌ನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅನಾರೋಗ್ಯದ ವಿರುದ್ಧ ಹೋರಾಡಲು ಮತ್ತು ದೇಹದ ಸಾಮರ್ಥ್ಯವನ್ನು ಹೆಚ್ಚಿಸಲು ಕ್ಯಾರೆಟ್ ಸಹಾಯಕ. ಕ್ಯಾರೆಟ್‌ನಲ್ಲಿರುವ ಆಂಟಿಆಕ್ಸಿಡೆಂಟ್ ಕ್ಯಾರೊಟಿನಾಯ್ಡ್‌ಗಳು ಮತ್ತು ಆಂಥೋಸಯಾನಿನ್‌ಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

3. ಹೃದಯದ ಆರೋಗ್ಯ ಕ್ಯಾರೆಟ್ ನಿಮ್ಮ ಹೃದಯಕ್ಕೆ ಉತ್ತಮ. ಹೃದ್ರೋಗ ಇರುವವರು ಕ್ಯಾರೆಟ್ ತಿನ್ನಬೇಕು. ಇವುಗಳಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಹೃದಯಕ್ಕೆ ವಿಶೇಷ ರಕ್ಷಣೆ ನೀಡುತ್ತದೆ. ಇವುಗಳಲ್ಲದೆ ಕ್ಯಾರೆಟ್‌ನಲ್ಲಿ ಪೊಟ್ಯಾಸಿಯಮ್ ಮತ್ತು ಫೈಬರ್ ಕೂಡ ಇದೆ. ಜೊತೆಗೆ ಕೆಂಪು ಕ್ಯಾರೆಟ್ ಲೈಕೋಪೀನ್ ಅನ್ನು ಹೊಂದಿರುತ್ತದೆ. ಇದು ಹೃದ್ರೋಗ ತಡೆಯಲು ಸಹಾಯ ಮಾಡುತ್ತದೆ.

4. ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ ಕ್ಯಾರೆಟ್ ಸೇವನೆಯು ನಿಮ್ಮ ರೋಗನಿರೋಧಕ ಶಕ್ತಿಯನ್ನು ಸಹ ಬಲಪಡಿಸುತ್ತದೆ. ಕ್ಯಾರೆಟ್‌ನಲ್ಲಿರುವ ವಿಟಮಿನ್ ಸಿ ನಿಮ್ಮ ದೇಹದ ಪ್ರತಿಕಾಯಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ. ವಿಟಮಿನ್ ಸಿ ಸೋಂಕಿನ ವಿರುದ್ಧ ಹೋರಾಡಲು ದೇಹವನ್ನು ಬಲಗೊಳಿಸುತ್ತದೆ.

5. ಕ್ಯಾರೆಟ್ ಮಲಬದ್ಧತೆಯನ್ನು ತಡೆಯುತ್ತದೆ ನಿಮಗೆ ಮಲಬದ್ಧತೆ ಸಮಸ್ಯೆ ಇದ್ದರೆ ಹಸಿ ಕ್ಯಾರೆಟ್ ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಈ ಸಮಸ್ಯೆಯಿರುವ ರೋಗಿಗಳು ಯಾವಾಗಲೂ ಹಸಿ ಕ್ಯಾರೆಟ್ ತಿನ್ನಬೇಕು. ಇದರಲ್ಲಿ ನಾರಿನಂಶ ಹೆಚ್ಚಿದ್ದು, ಮಲಬದ್ಧತೆಯನ್ನು ಸಂಪೂರ್ಣವಾಗಿ ತಡೆಯಲು ಇದು ಸಹಾಯ ಮಾಡುತ್ತದೆ.

6. ಮಧುಮೇಹಿಗಳಿಗೆ ಪರಿಹಾರ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಕ್ಯಾರೆಟ್ ಬಹಳಷ್ಟು ಸಹಾಯ ಮಾಡುತ್ತದೆ. ಮಧುಮೇಹ ಇರುವವರು ಕ್ಯಾರೆಟ್ ಅನ್ನು ತಿನ್ನಬೇಕು. ಕ್ಯಾರೆಟ್‌ನಲ್ಲಿರುವ ಫೈಬರ್ ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

7. ಮೂಳೆಗಳನ್ನು ಬಲಗೊಳಿಸುತ್ತದೆ ಪ್ರತಿದಿನ ಕ್ಯಾರೆಟ್ ಸೇವಿಸಿದರೆ ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಕ್ಯಾರೆಟ್‌ನಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಕೆ ಸಮೃದ್ಧವಾಗಿದೆ. ಈ ಎರಡೂ ಅಂಶಗಳು ಮೂಳೆಗಳಿಗೆ ಬಹಳ ಮುಖ್ಯ.

ಇದನ್ನೂ ಓದಿ: Dance Benefits: ನೃತ್ಯ ಮಾಡುವುದು ಕೇವಲ ಮನರಂಜನೆಗಲ್ಲ; ಆರೋಗ್ಯಕರ ಬದಲಾವಣೆಯಲ್ಲೂ ಇದರ ಪಾತ್ರವಿದೆ ಗಮನಿಸಿ

ಸ್ನಾನ ಮಾಡುವ ನೀರಿಗೆ ಈ ವಸ್ತುಗಳನ್ನು ಸೇರಿಸಿ; ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್