AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Benefits: ತೆಂಗಿನಕಾಯಿ ಪೂಜೆ ಮತ್ತು ಅಡುಗೆಗೆ ಮಾತ್ರ ಎಂದು ತಿಳಿದರೆ ಅದು ತಪ್ಪು; ಆರೋಗ್ಯಕರ ಗುಣದ ಬಗ್ಗೆಯೂ ಗಮನಹರಿಸಿ

ತೆಂಗಿನಕಾಯಿ ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿದೆ. ಪ್ರಾಚೀನ ಕಾಲದಿಂದ ತನ್ನ ನೈಸರ್ಗಿಕ ಗುಣಗಳಿಂದ ತೆಂಗಿನಕಾಯಿ ಅನೇಕ ಕಾಯಿಲೆಗಳನ್ನು ದೂರ ಮಾಡಿಕೊಂಡು ಬಂದಿದೆ.

Coconut Benefits: ತೆಂಗಿನಕಾಯಿ ಪೂಜೆ ಮತ್ತು ಅಡುಗೆಗೆ ಮಾತ್ರ ಎಂದು ತಿಳಿದರೆ ಅದು ತಪ್ಪು; ಆರೋಗ್ಯಕರ ಗುಣದ ಬಗ್ಗೆಯೂ ಗಮನಹರಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 25, 2021 | 8:17 AM

Share

ಭಾರತೀಯ ಹಿಂದೂ ಸಂಪ್ರದಾಯದಲ್ಲಿ ತೆಂಗಿನಕಾಯಿಗೆ ವಿಶಿಷ್ಟ ಸ್ಥಾನವಿದೆ. ತೆಂಗಿನಕಾಯಿಯನ್ನು ಭಾರತೀಯರು ಶುಭಪ್ರಧಾನವಾಗಿ ಭಾವಿಸುತ್ತಾರೆ. ಪೂಜಾದಿಕಾರ್ಯಕ್ರಮಗಳಿಗೆ, ಶುಭಕಾರ್ಯಗಳಿಗೆ ತೆಂಗಿನಕಾಯಿ ಕಡ್ಡಾಯ. ಇಷ್ಟೇ ಅಲ್ಲದೆ ಮಾಡುವ ಪ್ರತಿಯೊಂದು ಅಡುಗೆಗೂ ತೆಂಗಿನಕಾಯಿ ಬೇಕೆ ಬೇಕು. ಇನ್ನು ತೆಂಗಿನಕಾಯಿಯನ್ನು ಕೊಬ್ಬರಿ ಮಾಡಿ ಅದರಿಂದ ಎಣ್ಣೆ ಮಾಡುವುದು ಕೂಡ ಹೆಚ್ಚಿನ ಜನರಲ್ಲಿ ಚಾಲ್ತಿಯಲ್ಲಿದೆ. ಅದರಂತೆ ತೆಂಗಿನಕಾಯಿ ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿದೆ. ಪ್ರಾಚೀನ ಕಾಲದಿಂದ ತನ್ನ ನೈಸರ್ಗಿಕ ಗುಣಗಳಿಂದ ತೆಂಗಿನಕಾಯಿ ಅನೇಕ ಕಾಯಿಲೆಗಳನ್ನು ದೂರ ಮಾಡಿಕೊಂಡು ಬಂದಿದೆ.

ಪೋಷಕಾಂಶ ತೆಂಗಿನಕಾಯಿಯಲ್ಲಿ ಪೌಷ್ಟಿಕ ಮೌಲ್ಯಗಳು ಹೆಚ್ಚಿರುತ್ತವೆ. ಇದರಲ್ಲಿ ವಿಟಮಿನ್ ಎ, ಬಿ, ಸಿ, ರೈಬೋಫ್ಲೆವಿನ್, ಕಬ್ಬಿಣಾಂಶ, ಕ್ಯಾಲ್ಸಿಯಂ, ಫಾಸ್ಫರಸ್ ಅಂಶಗಳು ಸಮೃದ್ಧವಾಗಿದೆ. ಇನ್ನು ತೆಂಗಿನಕಾಯಿಯ ನೀರು ದೇಹಕ್ಕೆ ಹೆಚ್ಚು ಶಕ್ತಿ ನೀಡುತ್ತದೆ. ತೆಂಗಿನಕಾಯಿ ದೇಹವು ಸದಾ ಹೈಡ್ರೇಟೆಡ್ ಆಗಿ ಉಳಿಯಲು ಸಹಾಯ ಮಾಡುತ್ತದೆ.

ಕೂದಲಿನ ಆರೈಕೆಗೆ ಉತ್ತಮ ಕೂದಲಿನ ಆರೈಕೆಗೂ ತೆಂಗಿನಕಾಯಿ ಉತ್ತಮವಾಗಿದೆ. ಕೂದಲಿಗೆ ಕೊಬ್ಬರಿ ಎಣ್ಣೆ ಮಾತ್ರ ಅಲ್ಲ ತೆಂಗಿನಕಾಯಿಯ ಹಾಲು ಕೂಡ ಒಳ್ಳೆಯದು. ಕೂದಲಿನ ತೇವವನ್ನು ಹಾಗೆಯೇ ಇರಿಸಿಕೊಳ್ಳಲು ಆಗಾಗ ಕೊಬ್ಬರಿ ಎಣ್ಣೆಯನ್ನು ಬಳಸುವುದು ಸೂಕ್ತ.

ನೈಸರ್ಗಿಕ ಶಕ್ತಿ ಶಕ್ತಿ ಹೀನವಾಗಿದ್ದಾಗ ತೆಂಗಿನಕಾಯಿ ಸಹಾಯಕಾಗಿ ಕೆಲಸ ಮಾಡುತ್ತದೆ. ತೆಂಗಿನಕಾಯಿಯೊಳಗಿನ ಎಲೆಕ್ಟ್ರೋಲೈಟ್ಸ್, ಆಕ್ಸಿಡೆಂಟ್ ಲಕ್ಷಣಗಳು ಮನಸ್ಸು ಮತ್ತು ದೇಹಕ್ಕೆ ಹೊಸ ಹುರುಪು ನೀಡವಲ್ಲಿ ಸಹಾಯ ಮಾಡುತ್ತವೆ.

ಚರ್ಮದ ಕಾಂತಿ ಹೆಚ್ಚಿಸುತ್ತದೆ ತೆಂಗಿನಕಾಯಿಯ ನೀರು ನೈಸರ್ಗಿಕವಾದ ಟೋನರ್ ಆಗಿ ಕಾರ್ಯನಿರ್ವಹಿಸುತ್ತದೆ. ತೆಂಗಿನ ಕಾಯಿಯನ್ನು ನಿಯಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ಚರ್ಮ ಮೃದುವಾಗುತ್ತದೆ ಮತ್ತು ಕಾಂತಿಯು ಹೆಚ್ಚಳವಾಗುತ್ತದೆ. ತೆಂಗಿನಕಾಯಿಯಲ್ಲಿ ಇರುವ ಸೈಟೋಕಿನಿನ್ಸ್ ಚರ್ಮದ ಮೇಲಿನ ಸುಕ್ಕುಗಳನ್ನು ದೂರ ಮಾಡುತ್ತದೆ.

ಜೀರ್ಣಕಾರಿ ಸಮಸ್ಯೆಯನ್ನು ದೂರ ಮಾಡುತ್ತದೆ ತೆಂಗಿನಕಾಯಿ ರುಚಿಯಷ್ಟೇ ಅಲ್ಲ ಆರೋಗ್ಯಯುತವಾಗಿದೆ. ಇದು ಅಜೀರ್ಣದಂತಹ ಸಮಸ್ಯೆಯನ್ನು ದೂರ ಮಾಡುತ್ತದೆ. ಅಲ್ಲದೆ ತೆಂಗಿನಕಾಯಿಯಲ್ಲಿ ಕಡಿಮೆ ಸಕ್ಕರೆ ಇರುತ್ತದೆ. ಜತೆಗೆ ಹೊಟ್ಟೆ ಉಬ್ಬರಿಸಿದಂತಾಗುವುದು ಅಥವಾ ಹೊಟ್ಟೆಗೆ ಸಂಬಂಧಿಸಿದ ಇನ್ನಿತರ ಕಾಯಿಲೆಗೆ ತೆಂಗಿನಕಾಯಿ ರಾಮಬಾಣದಂತೆ ಕೆಲಸ ಮಾಡುತ್ತದೆ.

ಇದನ್ನೂ ಓದಿ: Health Tips: ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ವಿಧಾನಗಳನ್ನು ಅನುಸರಿಸಿ

Left Side Sleeping: ಎಡಭಾಗಕ್ಕೆ ತಿರುಗಿ ಮಲಗುವುದು ನಮ್ಮ ಆರೋಗ್ಯಕ್ಕೆ ಎಷ್ಟು ಮುಖ್ಯ?

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!