AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coriander Water Benefits: ಪ್ರತಿದಿನ ಬೆಳಿಗ್ಗೆ ಕೊತ್ತಂಬರಿ ಕಾಳಿನ ನೀರನ್ನು ಕುಡಿಯಿರಿ; ನಿಮ್ಮಲ್ಲಿನ ಅನೇಕ ಸಮಸ್ಯೆಗಳಿಗೆ ಇದೇ ಮದ್ದು

ಕೊತ್ತಂಬರಿ ನೀರಿನಲ್ಲಿ ಪೊಟ್ಯಾಸಿಯಮ್, ಕ್ಯಾಲ್ಸಿಯಂ, ವಿಟಮಿನ್ ಸಿ ಮತ್ತು ಮೆಗ್ನೀಸಿಯಮ್ ಹೇರಳವಾಗಿದೆ. ಈ ಪೋಷಕಾಂಶಗಳು ರೋಗಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

Coriander Water Benefits: ಪ್ರತಿದಿನ ಬೆಳಿಗ್ಗೆ ಕೊತ್ತಂಬರಿ ಕಾಳಿನ ನೀರನ್ನು ಕುಡಿಯಿರಿ; ನಿಮ್ಮಲ್ಲಿನ ಅನೇಕ ಸಮಸ್ಯೆಗಳಿಗೆ ಇದೇ ಮದ್ದು
ಕೊತ್ತಂಬರಿ ಕಾಳು
Follow us
TV9 Web
| Updated By: preethi shettigar

Updated on: Jan 24, 2022 | 7:34 AM

ಕೊತ್ತಂಬರಿ ಕಾಳನ್ನು ಸಾಮಾನ್ಯವಾಗಿ ಭಾರತೀಯ ಅಡುಗೆಯಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಕಾಳು(Coriander) ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯಕ್ಕೂ(Health) ತುಂಬಾ ಪ್ರಯೋಜನಕಾರಿ. ಅನೇಕ ಆಹಾರ ತಜ್ಞರು ಕೊತ್ತಂಬರಿ ಕಾಳಿನ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ಈ ನೀರನ್ನು ತಯಾರಿಸಲು, 1 ಚಮಚ ಕೊತ್ತಂಬರಿ ಕಾಳುಗಳನ್ನು 1 ಕಪ್ ಕುಡಿಯುವ ನೀರಿನಲ್ಲಿ ರಾತ್ರಿ(Night) ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಫಿಲ್ಟರ್ ಮಾಡಿ. ಅದರ ನಂತರ ನೀವು ಈ ನೀರನ್ನು ಕುಡಿಯಬಹುದು. ಕೊತ್ತಂಬರಿ ನೀರಿನಲ್ಲಿ ಪೊಟ್ಯಾಸಿಯಮ್, ಕ್ಯಾಲ್ಸಿಯಂ, ವಿಟಮಿನ್ ಸಿ ಮತ್ತು ಮೆಗ್ನೀಸಿಯಮ್ ಹೇರಳವಾಗಿದೆ. ಈ ಪೋಷಕಾಂಶಗಳು ರೋಗಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

ಕೊತ್ತಂಬರಿ ಕಾಳಿನ ನೀರು ಆರೋಗ್ಯಕ್ಕೆ ಹೇಗೆ ಉಪಯುಕ್ತ?

ರೋಗನಿರೋಧಕ ಶಕ್ತಿಯ ಹೆಚ್ಚಳ

ಕೊತ್ತಂಬರಿ ಕಾಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಏಕೆಂದರೆ ಇದರಲ್ಲಿನ ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್‌ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಅನೇಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ತಲೆ ಕೂದಲನ್ನು ಬಲಪಡಿಸುತ್ತದೆ

ಕೊತ್ತಂಬರಿ ಕಾಳು ವಿಟಮಿನ್ ಕೆ, ಸಿ ಮತ್ತು ಎ ಯಂತಹ ವಿಟಮಿನ್‌ಗಳಿಂದ ಸಮೃದ್ಧವಾಗಿದೆ. ಕೂದಲು ಗಟ್ಟಿಯಾಗಲು ಮತ್ತು ವೇಗವಾಗಿ ಬೆಳೆಯಲು ಇವು ಅತ್ಯಗತ್ಯ. ಬೆಳಿಗ್ಗೆ ಕೊತ್ತಂಬರಿ ಕಾಳಿನ ನೀರನ್ನು ಕುಡಿಯುವುದರಿಂದ ಕೂದಲು ಉದುರುವುದು ಮತ್ತು ಒಡೆಯುವುದು ಕಡಿಮೆಯಾಗುತ್ತದೆ. ನೀವು ಕೊತ್ತಂಬರಿ ಕಾಳನ್ನು ಎಣ್ಣೆ ರೂಪದಲ್ಲಿ ಕೂಡ ಕೂದಲಿಗೆ ಅನ್ವಯಿಸಬಹುದು.

ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ

ಕೊತ್ತಂಬರಿಯು ಕೆಲವು ಜೀರ್ಣಕಾರಿ ಗುಣಗಳನ್ನು ಹೊಂದಿದೆ. ಬೆಳಿಗ್ಗೆ ಕೊತ್ತಂಬರಿ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಚಯಾಪಚಯವನ್ನು ವೇಗಗೊಳಿಸುತ್ತದೆ. ಈ ಎರಡೂ ಗುಣಲಕ್ಷಣಗಳು ನಿಮ್ಮ ತೂಕ ನಷ್ಟ ಪ್ರಕ್ರಿಯೆಯಲ್ಲಿ ನಿಮಗೆ ಸಹಾಯ ಮಾಡಬಹುದು.

ಪಿಗ್ಮೆಂಟೇಶನ್ ಮತ್ತು ಮೊಡವೆಗಳನ್ನು ಕಡಿಮೆ ಮಾಡುತ್ತದೆ

ಕೊತ್ತಂಬರಿ ಕಾಳಿನಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಇದು ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಸಹ ಹೊಂದಿದೆ. ಬೆಳಗ್ಗೆ ಕೊತ್ತಂಬರಿ ಕಾಳಿನನ ನೀರನ್ನು ಕುಡಿಯುವುದರಿಂದ ತ್ವಚೆಯು ಕಾಂತಿಯುತ ಹಾಗೂ ಮೃದುವಾಗಿರುತ್ತದೆ.

ಕೊಲೆಸ್ಟ್ರಾಲ್ ಅನ್ನು ತೊಡೆದುಹಾಕುತ್ತದೆ

ಕೊತ್ತಂಬರಿ ಕಾಳಿನಲ್ಲಿ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುವ ಕೆಲವು ಅಂಶಗಳಿವೆ. ಸಂಶೋಧನೆಯ ಪ್ರಕಾರ, ನೀವು ಅಧಿಕ ಕೊಲೆಸ್ಟ್ರಾಲ್ ಹೊಂದಿದ್ದರೆ, ಕೊತ್ತಂಬರಿ ಕಾಳು ನೆನೆಸಿದ ನೀರನ್ನು ಸೇವಿಸಬಹುದು.

ಮಧುಮೇಹವನ್ನು ನಿಯಂತ್ರಿಸುತ್ತದೆ

ಮಧುಮೇಹವನ್ನು ನಿಯಂತ್ರಿಸಲು ನೀವು ಕೊತ್ತಂಬರಿ ನೀರನ್ನು ಕುಡಿಯಬಹುದು. ಕೊತ್ತಂಬರಿ ಕಾಳಿನ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಇನ್ಸುಲಿನ್ ಪ್ರಮಾಣ ನಿಯಂತ್ರಣದಲ್ಲಿರುತ್ತದೆ.

ಇದನ್ನೂ ಓದಿ: ಚರ್ಮದ ಅಲರ್ಜಿ ಸಮಸ್ಯೆಗಳಿಗೆ ಈ ಆಹಾರಗಳನ್ನು ಸೇವಿಸಿ; ಫೋಟೋದೊಂದಿಗೆ ಇಲ್ಲಿದೆ ಮಾಹಿತಿ

Cold Wave Diseases: ತಣ್ಣನೆಯ ಗಾಳಿಯಿಂದ ಆರೋಗ್ಯದಲ್ಲಾಗುತ್ತದೆ ಅನೇಕ ಬದಲಾವಣೆ; ಇರಲಿ ಎಚ್ಚರ

ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ