AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coriander Water Benefits: ಪ್ರತಿದಿನ ಬೆಳಿಗ್ಗೆ ಕೊತ್ತಂಬರಿ ಕಾಳಿನ ನೀರನ್ನು ಕುಡಿಯಿರಿ; ನಿಮ್ಮಲ್ಲಿನ ಅನೇಕ ಸಮಸ್ಯೆಗಳಿಗೆ ಇದೇ ಮದ್ದು

ಕೊತ್ತಂಬರಿ ನೀರಿನಲ್ಲಿ ಪೊಟ್ಯಾಸಿಯಮ್, ಕ್ಯಾಲ್ಸಿಯಂ, ವಿಟಮಿನ್ ಸಿ ಮತ್ತು ಮೆಗ್ನೀಸಿಯಮ್ ಹೇರಳವಾಗಿದೆ. ಈ ಪೋಷಕಾಂಶಗಳು ರೋಗಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

Coriander Water Benefits: ಪ್ರತಿದಿನ ಬೆಳಿಗ್ಗೆ ಕೊತ್ತಂಬರಿ ಕಾಳಿನ ನೀರನ್ನು ಕುಡಿಯಿರಿ; ನಿಮ್ಮಲ್ಲಿನ ಅನೇಕ ಸಮಸ್ಯೆಗಳಿಗೆ ಇದೇ ಮದ್ದು
ಕೊತ್ತಂಬರಿ ಕಾಳು
TV9 Web
| Edited By: |

Updated on: Jan 24, 2022 | 7:34 AM

Share

ಕೊತ್ತಂಬರಿ ಕಾಳನ್ನು ಸಾಮಾನ್ಯವಾಗಿ ಭಾರತೀಯ ಅಡುಗೆಯಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಕಾಳು(Coriander) ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯಕ್ಕೂ(Health) ತುಂಬಾ ಪ್ರಯೋಜನಕಾರಿ. ಅನೇಕ ಆಹಾರ ತಜ್ಞರು ಕೊತ್ತಂಬರಿ ಕಾಳಿನ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ಈ ನೀರನ್ನು ತಯಾರಿಸಲು, 1 ಚಮಚ ಕೊತ್ತಂಬರಿ ಕಾಳುಗಳನ್ನು 1 ಕಪ್ ಕುಡಿಯುವ ನೀರಿನಲ್ಲಿ ರಾತ್ರಿ(Night) ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಫಿಲ್ಟರ್ ಮಾಡಿ. ಅದರ ನಂತರ ನೀವು ಈ ನೀರನ್ನು ಕುಡಿಯಬಹುದು. ಕೊತ್ತಂಬರಿ ನೀರಿನಲ್ಲಿ ಪೊಟ್ಯಾಸಿಯಮ್, ಕ್ಯಾಲ್ಸಿಯಂ, ವಿಟಮಿನ್ ಸಿ ಮತ್ತು ಮೆಗ್ನೀಸಿಯಮ್ ಹೇರಳವಾಗಿದೆ. ಈ ಪೋಷಕಾಂಶಗಳು ರೋಗಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

ಕೊತ್ತಂಬರಿ ಕಾಳಿನ ನೀರು ಆರೋಗ್ಯಕ್ಕೆ ಹೇಗೆ ಉಪಯುಕ್ತ?

ರೋಗನಿರೋಧಕ ಶಕ್ತಿಯ ಹೆಚ್ಚಳ

ಕೊತ್ತಂಬರಿ ಕಾಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಏಕೆಂದರೆ ಇದರಲ್ಲಿನ ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್‌ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಅನೇಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ತಲೆ ಕೂದಲನ್ನು ಬಲಪಡಿಸುತ್ತದೆ

ಕೊತ್ತಂಬರಿ ಕಾಳು ವಿಟಮಿನ್ ಕೆ, ಸಿ ಮತ್ತು ಎ ಯಂತಹ ವಿಟಮಿನ್‌ಗಳಿಂದ ಸಮೃದ್ಧವಾಗಿದೆ. ಕೂದಲು ಗಟ್ಟಿಯಾಗಲು ಮತ್ತು ವೇಗವಾಗಿ ಬೆಳೆಯಲು ಇವು ಅತ್ಯಗತ್ಯ. ಬೆಳಿಗ್ಗೆ ಕೊತ್ತಂಬರಿ ಕಾಳಿನ ನೀರನ್ನು ಕುಡಿಯುವುದರಿಂದ ಕೂದಲು ಉದುರುವುದು ಮತ್ತು ಒಡೆಯುವುದು ಕಡಿಮೆಯಾಗುತ್ತದೆ. ನೀವು ಕೊತ್ತಂಬರಿ ಕಾಳನ್ನು ಎಣ್ಣೆ ರೂಪದಲ್ಲಿ ಕೂಡ ಕೂದಲಿಗೆ ಅನ್ವಯಿಸಬಹುದು.

ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ

ಕೊತ್ತಂಬರಿಯು ಕೆಲವು ಜೀರ್ಣಕಾರಿ ಗುಣಗಳನ್ನು ಹೊಂದಿದೆ. ಬೆಳಿಗ್ಗೆ ಕೊತ್ತಂಬರಿ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಚಯಾಪಚಯವನ್ನು ವೇಗಗೊಳಿಸುತ್ತದೆ. ಈ ಎರಡೂ ಗುಣಲಕ್ಷಣಗಳು ನಿಮ್ಮ ತೂಕ ನಷ್ಟ ಪ್ರಕ್ರಿಯೆಯಲ್ಲಿ ನಿಮಗೆ ಸಹಾಯ ಮಾಡಬಹುದು.

ಪಿಗ್ಮೆಂಟೇಶನ್ ಮತ್ತು ಮೊಡವೆಗಳನ್ನು ಕಡಿಮೆ ಮಾಡುತ್ತದೆ

ಕೊತ್ತಂಬರಿ ಕಾಳಿನಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಇದು ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಸಹ ಹೊಂದಿದೆ. ಬೆಳಗ್ಗೆ ಕೊತ್ತಂಬರಿ ಕಾಳಿನನ ನೀರನ್ನು ಕುಡಿಯುವುದರಿಂದ ತ್ವಚೆಯು ಕಾಂತಿಯುತ ಹಾಗೂ ಮೃದುವಾಗಿರುತ್ತದೆ.

ಕೊಲೆಸ್ಟ್ರಾಲ್ ಅನ್ನು ತೊಡೆದುಹಾಕುತ್ತದೆ

ಕೊತ್ತಂಬರಿ ಕಾಳಿನಲ್ಲಿ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುವ ಕೆಲವು ಅಂಶಗಳಿವೆ. ಸಂಶೋಧನೆಯ ಪ್ರಕಾರ, ನೀವು ಅಧಿಕ ಕೊಲೆಸ್ಟ್ರಾಲ್ ಹೊಂದಿದ್ದರೆ, ಕೊತ್ತಂಬರಿ ಕಾಳು ನೆನೆಸಿದ ನೀರನ್ನು ಸೇವಿಸಬಹುದು.

ಮಧುಮೇಹವನ್ನು ನಿಯಂತ್ರಿಸುತ್ತದೆ

ಮಧುಮೇಹವನ್ನು ನಿಯಂತ್ರಿಸಲು ನೀವು ಕೊತ್ತಂಬರಿ ನೀರನ್ನು ಕುಡಿಯಬಹುದು. ಕೊತ್ತಂಬರಿ ಕಾಳಿನ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಇನ್ಸುಲಿನ್ ಪ್ರಮಾಣ ನಿಯಂತ್ರಣದಲ್ಲಿರುತ್ತದೆ.

ಇದನ್ನೂ ಓದಿ: ಚರ್ಮದ ಅಲರ್ಜಿ ಸಮಸ್ಯೆಗಳಿಗೆ ಈ ಆಹಾರಗಳನ್ನು ಸೇವಿಸಿ; ಫೋಟೋದೊಂದಿಗೆ ಇಲ್ಲಿದೆ ಮಾಹಿತಿ

Cold Wave Diseases: ತಣ್ಣನೆಯ ಗಾಳಿಯಿಂದ ಆರೋಗ್ಯದಲ್ಲಾಗುತ್ತದೆ ಅನೇಕ ಬದಲಾವಣೆ; ಇರಲಿ ಎಚ್ಚರ

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು