Cumin for health: ಪ್ರತಿದಿನ ಜೀರಿಗೆ ಸೇವಿಸುವುದರಿಂದಾಗುವ ಆರೋಗ್ಯಕರ ಬದಲಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

ಆರೋಗ್ಯವಾಗಿರಲು ಜೀರಿಗೆಯನ್ನು ಸೇವಿಸಲು ತಜ್ಞರು ಶಿಫಾರಸು ಮಾಡುತ್ತಾರೆ. ತಜ್ಞರ ಪ್ರಕಾರ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದು ಆರೋಗ್ಯಕರವಾಗಿರಲು ಸಹಾಯ ಮಾಡುತ್ತದೆ.

Cumin for health: ಪ್ರತಿದಿನ ಜೀರಿಗೆ ಸೇವಿಸುವುದರಿಂದಾಗುವ ಆರೋಗ್ಯಕರ ಬದಲಾವಣೆ ಬಗ್ಗೆ ನಿಮಗೆಷ್ಟು ಗೊತ್ತು?
ಜೀರಿಗೆ
Follow us
| Updated By: preethi shettigar

Updated on: Mar 26, 2022 | 7:09 AM

ಆಹಾರದ ರುಚಿಯನ್ನು ಹೆಚ್ಚಿಸುವ ಜೀರಿಗೆಯು ಹಲವಾರು ಆರೋಗ್ಯ (Health) ಪ್ರಯೋಜನಗಳನ್ನು ಹೊಂದಿದೆ. ಮಸಾಲೆಗಳ ವರ್ಗದಲ್ಲಿ ಬರುವ ಜೀರಿಗೆಯನ್ನು(cumin) ಸರಿಯಾಗಿ ಸೇವಿಸಿದರೆ, ಅದು ನಮ್ಮನ್ನು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ದೂರವಿಡುತ್ತದೆ. ಜೀರಿಗೆಯಲ್ಲಿರುವ ನಂಜುನಿರೋಧಕ ಗುಣಲಕ್ಷಣಗಳು ಗಾಯಗಳನ್ನು ತ್ವರಿತವಾಗಿ ಗುಣಪಡಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ದುರ್ಬಲ ಜೀರ್ಣಾಂಗ ವ್ಯವಸ್ಥೆಯನ್ನು ಎದುರಿಸುತ್ತಿರುವ ಜನರು ಇದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವ ಮೂಲಕ ಹೊಟ್ಟೆಯನ್ನು ಆರೋಗ್ಯಕರವಾಗಿರಿಸಿಕೊಳ್ಳಬಹುದು. ದೇಹದಲ್ಲಿ(Body) ಇರುವ ವಿಷವನ್ನು ಹೊರಹಾಕಬಹುದು. ಜೀರಿಗೆಯ ಮತ್ತೊಂದು ವಿಶೇಷತೆಯೆಂದರೆ ಇದು ಅನೇಕ ಆ್ಯಂಟಿ ಕಾರ್ಸಿನೋಜೆನಿಕ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಹೊಟ್ಟೆ ಮತ್ತು ಯಕೃತ್ತಿನಲ್ಲಿ ಸಂಭವಿಸುವ ಗೆಡ್ಡೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯವಾಗಿರಲು ಜೀರಿಗೆಯನ್ನು ಸೇವಿಸಲು ತಜ್ಞರು ಶಿಫಾರಸು ಮಾಡುತ್ತಾರೆ. ತಜ್ಞರ ಪ್ರಕಾರ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದು ಆರೋಗ್ಯಕರವಾಗಿರಲು ಸಹಾಯ ಮಾಡುತ್ತದೆ. ಜೀರಿಗೆ ಸೇವನೆಯಿಂದ ಇನ್ನೂ ಅನೇಕ ಪ್ರಯೋಜನಗಳಿವೆ. ಈ ಕುರಿತ ಮಾಹಿತಿ ಇಲ್ಲಿದೆ ನೋಡಿ

ರೋಗನಿರೋಧಕ ಶಕ್ತಿ

ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುತ್ತಿದ್ದರೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕೊರೊನಾ ನಂತರದ ಯುಗದಲ್ಲಿ, ಹೆಚ್ಚಿನ ಜನರು ಔಷಧೀಯ ಗುಣಗಳನ್ನು ಹೊಂದಿರುವ ಗಿಡಮೂಲಿಕೆಗಳ ಕಷಾಯವನ್ನು ತಯಾರಿಸುತ್ತಾರೆ ಮತ್ತು ಕುಡಿಯುತ್ತಾರೆ. ಏಕೆಂದರೆ ಈ ವಿಧಾನವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಗಿಡಮೂಲಿಕೆಗಳ ಹೊರತಾಗಿ, ಜೀರಿಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿಯನ್ನು ಸುಲಭವಾಗಿ ಹೆಚ್ಚಿಸಬಹುದು.

ಜ್ಞಾಪಕ ಶಕ್ತಿ ಹೆಚ್ಚಳ

ನಿಮಗೆ ಮರೆಯುವ ಸಮಸ್ಯೆಯಿದ್ದರೆ, ಈ ಸ್ಥಿತಿಯಲ್ಲಿ ಖಾಲಿ ಹೊಟ್ಟೆಯಲ್ಲಿ ಜೀರಿಗೆಯನ್ನು ತಿನ್ನುವುದರಿಂದ ಜ್ಞಾಪಕಶಕ್ತಿಯನ್ನು ವೇಗಗೊಳಿಸಬಹುದು. ಜೀರಿಗೆಯು ನರಮಂಡಲವನ್ನು ಬಲಪಡಿಸಲು ಸಂಬಂಧಿಸಿದ ಅನೇಕ ಪ್ರಮುಖ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್‌ಗಳನ್ನು ಒಳಗೊಂಡಿದೆ. ತಜ್ಞರ ಪ್ರಕಾರ, ಜೀರಿಗೆ ಮಾನಸಿಕ ಆರೋಗ್ಯವನ್ನು ಉತ್ತೇಜಿಸುತ್ತದೆ ಮತ್ತು ಅದರ ಉತ್ಕರ್ಷಣ ನಿರೋಧಕಗಳು ಮೆದುಳಿನ ಕೋಶಗಳಿಗೆ ಉತ್ತಮ ಪೋಷಣೆಯನ್ನು ಒದಗಿಸಲು ಕೆಲಸ ಮಾಡುತ್ತದೆ. ಇದಕ್ಕಾಗಿ ಜೀರಿಗೆಯನ್ನು ರಾತ್ರಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅದರ ನೀರನ್ನು ಕುಡಿಯಬೇಕು. ಈ ನೆನೆಸಿದ ಜೀರಿಗೆಯನ್ನೂ ಕೂಡ ತಿನ್ನಬಹುದು.

ಮೊಡವೆ ನಿವಾರಣೆ

ಜೀರಿಗೆಯಲ್ಲಿರುವ ಉರಿಯೂತ ನಿವಾರಕ ಗುಣಗಳು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ ಎಂದು ಹೇಳಲಾಗುತ್ತದೆ. ನೀವು ಆಗಾಗ್ಗೆ ಮೊಡವೆಗಳ ಸಮಸ್ಯೆಯನ್ನು ಹೊಂದಿದ್ದರೆ, ಖಾಲಿ ಹೊಟ್ಟೆಯಲ್ಲಿ ಜೀರಿಗೆ ಬೀಜಗಳನ್ನು ಪ್ರತಿದಿನ ಸೇವಿಸಿ. ತಪ್ಪು ಆಹಾರದ ಕೆಟ್ಟ ಪರಿಣಾಮ ಆರೋಗ್ಯದ ಮೇಲೆ ಮಾತ್ರವಲ್ಲದೆ ತ್ವಚೆಯ ಮೇಲೂ ಗೋಚರಿಸುತ್ತದೆ. ಚರ್ಮದ ಮೇಲೆ ಸಂಗ್ರಹವಾಗುವ ಬ್ಯಾಕ್ಟೀರಿಯಾಗಳು ಮೊಡವೆಗಳ ಸಂಭವಕ್ಕೆ ಕಾರಣವಾಗಿರಬಹುದು. ಅಂತಹ ಪರಿಸ್ಥಿತಿಯಲ್ಲಿ ಜೀರಿಗೆಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳೊಂದಿಗೆ ಈ ಬ್ಯಾಕ್ಟೀರಿಯಾವನ್ನು ತೆಗೆದುಹಾಕಬಹುದು.

ಇದನ್ನೂ ಓದಿ: Health Tips: ಸೆಲರಿ ತಿನ್ನುವ ಅಭ್ಯಾಸ ಇದೆಯೇ? ಇಲ್ಲಿದೆ ಇದರ ಆರೋಗ್ಯಯುತ ಗುಣಗಳ ಮಾಹಿತಿ

ಬೇವಿನ ಎಲೆ ಕಹಿ ಎಂದು ಮೂಗು ಮುರಿಯುವ ಬದಲು ಆರೋಗ್ಯ ಪ್ರಯೋಜನ ತಿಳಿದುಕೊಳ್ಳಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್