Sign In

By signing in or creating an account, you agree with Associated Broadcasting Company's Terms & Conditions and Privacy Policy.

Dragon fruit Benefits: ಡ್ರ್ಯಾಗನ್​ ಫ್ರೂಟ್ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನೀವು ತಿಳಿದರೆ ಇಂದೇ ಖರೀದಿಸಿ, ಸೇವಿಸುವ ಅಭ್ಯಾಸ ಮಾಡಿಕೊಳ್ಳುವಿರಿ

ಡ್ರ್ಯಾಗಪ್ ಫ್ರೂಟ್ ತಿನ್ನುವುದರಿಂದ ದೇಹಕ್ಕೆ ಎಲ್ಲಾ ರೀತಿಯ ಜೀವಸತ್ವಗಳು ಮತ್ತು ಖನಿಜಗಳು ದೊರೆಯುತ್ತವೆ. ಡ್ರ್ಯಾಗಪ್ ಫ್ರೂಟ್ ಗುಲಾಬಿ ಬಣ್ಣದ್ದಾಗಿದ್ದು, ಒಳಗೆ ಬಿಳಿ ತಿರುಳು ಇರುತ್ತದೆ. ಅಲ್ಲದೆ ಈ ಹಣ್ಣಿನಲ್ಲಿ ಕಪ್ಪು ಬೀಜಗಳಿವೆ. ಈ ಹಣ್ಣು ಸೇವಿಸುವುದರಿಂದ ಅನೇಕ ಕಾಯಿಲೆಗಳಿಂದ ದೂರ ಇರಬಹುದು.

Dragon fruit Benefits: ಡ್ರ್ಯಾಗನ್​ ಫ್ರೂಟ್ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನೀವು ತಿಳಿದರೆ ಇಂದೇ ಖರೀದಿಸಿ, ಸೇವಿಸುವ ಅಭ್ಯಾಸ ಮಾಡಿಕೊಳ್ಳುವಿರಿ
ಡ್ರ್ಯಾಗನ್​ ಫ್ರೂಟ್
Follow us
TV9 Web
| Updated By: preethi shettigar

Updated on: Jul 17, 2021 | 7:47 AM

ನಮ್ಮ ದೇಹವನ್ನು ಆರೋಗ್ಯವಾಗಿಡಲು ಅನೇಕ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದರಲ್ಲೂ ಇತ್ತೀಚೆಗೆ ಆಹಾರ, ಮಾನಸಿಕ ಒತ್ತಡ, ಖಿನ್ನತೆ, ಇನ್ನಿತರ ತೊಂದರೆಗಳಿಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕೆಲವು ಪದಾರ್ಥಗಳನ್ನು, ಹಣ್ಣು- ತರಕಾರಿಗಳನ್ನು ಸೇವಿಸುವುದು ಉತ್ತಮ. ತಜ್ಞರ ಪ್ರಕಾರ ಆರೋಗ್ಯವನ್ನು ಸುಧಾರಿಸಲು ವಿವಿಧ ಹಣ್ಣುಗಳನ್ನು ಸೇವಿಸಬೇಕು. ಅದರಲ್ಲೂ ಡ್ರ್ಯಾಗಪ್ ಫ್ರೂಟ್ (Dragon fruit) ತಿನ್ನುವುದರಿಂದ ದೇಹಕ್ಕೆ ಎಲ್ಲಾ ರೀತಿಯ ಜೀವಸತ್ವಗಳು ಮತ್ತು ಖನಿಜಗಳು ದೊರೆಯುತ್ತವೆ. ಡ್ರ್ಯಾಗಪ್ ಫ್ರೂಟ್ ಗುಲಾಬಿ ಬಣ್ಣದ್ದಾಗಿದ್ದು, ಒಳಗೆ ಬಿಳಿ ತಿರುಳು ಇರುತ್ತದೆ. ಅಲ್ಲದೆ ಈ ಹಣ್ಣಿನಲ್ಲಿ ಕಪ್ಪು ಬೀಜಗಳಿವೆ. ಈ ಹಣ್ಣು ಸೇವಿಸುವುದರಿಂದ ಅನೇಕ ಕಾಯಿಲೆಗಳಿಂದ ದೂರ ಇರಬಹುದು.

ಡ್ರ್ಯಾಗನ್​ ಫ್ರೂಟ್ ಎಂಬ ಹೆಸರು ಹೇಗೆ ಬಂತು? ಡ್ರ್ಯಾಗನ್ ಚೀನಾದಲ್ಲಿ ಇರುವ ಒಂದು ಪವಿತ್ರ ಪ್ರಾಣಿ. ತನ್ನ ಬಾಯಿಯ ಮೂಲಕ ಅಗ್ನಿಯನ್ನು ಹೊತ್ತಿಸುವ ಮತ್ತು ಶತ್ರುಗಳನ್ನು ಕೊಲ್ಲುವ ಪ್ರಾಣಿಯನ್ನು ಚೀನಿಯರು ಡ್ರ್ಯಾಗನ್​ ಎಂದು ಕರೆಯುತ್ತಿದ್ದರು ಮತ್ತು ಈಗಲೂ ಈ ಪ್ರಾಣಿ ಜೀವಂತವಾಗಿದೆ ಎಂದು ನಂಬುತ್ತಾರೆ. ಆದರೆ ಈ ಹಣ್ಣನ್ನು ಡ್ರ್ಯಾಗನ್​ ಫ್ರೂಟ್ ಎಂದು ಹೆಸರಿಸಲು ಕಾರಣ ಅದರ ಆಕರ್ಷಕ ಬಣ್ಣ ಮತ್ತು ನೋಟ. ಗುಲಾಬಿ ಬಣ್ಣದಲ್ಲಿರುವ ಈ ಹಣ್ಣಿನ ಸುತ್ತಲಿನ ದಳಗಳು ಹಳದಿ ಮತ್ತು ಹಸಿರುಯುತವಾಗಿರುತ್ತದೆ. ಇದು ದಕ್ಷಿಣ ಅಮೆರಿಕಾದಲ್ಲಿ ಈ ಹಣ್ಣನ್ನು ಮೊದಲಿಗೆ ಬೆಳೆಯಲು ಆರಂಭಿಸಿದರು. ನಂತರದಲ್ಲಿ ಪೂರ್ವ ಏಷ್ಯಾ, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಜನರು ಈ ಹಣ್ಣನ್ನು ಬೆಳೆಯಲಾರಂಭಿದರು. ಇತ್ತೀಚೆಗೆ ಭಾರತದಲ್ಲಿ ಕೂಡ ಈ ಹಣ್ಣನ್ನು ಬೆಳೆಯುತ್ತಾರೆ.

ಡ್ರ್ಯಾಗನ್ ಹಣ್ಣಿನ ಉಪಯೋಗಗಳು ಈ ಡ್ರ್ಯಾಗನ್ ಹಣ್ಣು ಕಡಿಮೆ ಕ್ಯಾಲೊರಿಯನ್ನು ಹೊಂದಿದೆ. ಇದರಲ್ಲಿ ನಾರಿನಂಶವೂ ಅಧಿಕವಾಗಿದ್ದು, ಕಬ್ಬಿಣ, ಪ್ರೋಟೀನ್, ಕಾರ್ಬೋಹೈಡ್ರೇಟ್, ಮೆಗ್ನೀಸಿಯಮ್, ವಿಟಮಿನ್ ಸಿ, ವಿಟಮಿನ್ ಇ, ಕ್ಯಾರೊಟಿನಾಯ್ಡ್​ಗಳು, ಪಾಲಿಫಿನಾಲ್​ಗಳಂತಹ ಅಮೂಲ್ಯ ಪೋಷಕಾಂಶಗಳು ಲಭ್ಯವಿದೆ. ಡ್ರ್ಯಾಗನ್ ಹಣ್ಣಿನ ಬೆಲೆ ಸ್ವಲ್ಪ ಹೆಚ್ಚಾಗಿದ್ದರೂ, ಇದು ದೇಹಕ್ಕೆ ಶಕ್ತಿ ಹೆಚ್ಚಿಸುವ ಪೋಷಕಾಂಶಗಳನ್ನು ಒದಗಿಸುತ್ತದೆ. ಅದಕ್ಕಾಗಿಯೇ ಈ ಹಣ್ಣನ್ನು ತಿನ್ನುವುದು ತುಂಬಾ ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ.

ರೋಗಗಳನ್ನು ದೂರವಿಡುವ ಹಣ್ಣು ಪ್ರಸ್ತುತ ಯುಗದಲ್ಲಿ ಮಾನವರು ಒಂದಿಲ್ಲಾ ಒಂದು ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ವಿವಿಧ ಸೋಂಕುಗಳು ಮತ್ತು ರೋಗಗಳಿಂದ ದೂರ ಇರಲು ಈ ಹಣ್ಣು ಸೇವಿಸಿ. ಡ್ರ್ಯಾಗನ್ ಹಣ್ಣು ತಿನ್ನುವುದು ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಡ್ರ್ಯಾಗನ್ ಹಣ್ಣಿನಲ್ಲಿ ನೈಸರ್ಗಿಕವಾಗಿ ಕಂಡುಬರುವ ಉತ್ಕರ್ಷಣ ನಿರೋಧಕಗಳು, ಹೃದ್ರೋಗ, ಕ್ಯಾನ್ಸರ್ ಮತ್ತು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳನ್ನು ಗುಣಪಡಿಸುವ ಅಂಶಗಳಿದೆ. ಡ್ರ್ಯಾಗನ್‌ನ ಹೆಚ್ಚಿನ ಫೈಬರ್ ಅಂಶವು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮಧುಮೇಹಿಗಳಿಗೆ ತುಂಬಾ ಉಪಯುಕ್ತವಾಗಿದ್ದು, ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಡ್ರ್ಯಾಗನ್ ಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ.

ಪ್ರತಿರಕ್ಷಣಾ ಅಂಶವನ್ನು ಹೊಂದಿದೆ ಈ ಡ್ರ್ಯಾಗನ್ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಕ್ಯಾರೊಟಿನಾಯ್ಡ್​ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಬಿಳಿ ರಕ್ತ ಕಣಗಳನ್ನು ರಕ್ಷಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ದೇಹದಲ್ಲಿ ಹೆಚ್ಚಿಸುತ್ತದೆ. ಇದು ಸೋಂಕು ಅಥವಾ ಇತರೆ ಯಾವುದೇ ಕಾಯಿಲೆಗಳು ನಮ್ಮನ್ನು ಹಾನಿ ಮಾಡದಂತೆ ತಡೆಯುತ್ತದೆ. ಸೇವಿಸಿದ ಆಹಾರವನ್ನು ಜೀರ್ಣಿಸಿಕೊಳ್ಳಲು ಆಮ್ಲಜನಕದ ಅಗತ್ಯವಿದೆ. ಶಿಟ್ ತುಂಬಿದ ಆಮ್ಲಜನಕವನ್ನು ಪಡೆಯಬೇಕಾದರೆ ಕಬ್ಬಿಣವು ಹೇರಳವಾಗಿರಬೇಕು. ಡ್ರ್ಯಾಗನ್ ಹಣ್ಣು ತಿನ್ನುವುದರಿಂದ ಕಬ್ಬಿಣದ ಕೊರತೆಯನ್ನು ನಿವಾರಿಸಬಹುದು. ಇತರ ಎಲ್ಲಾ ಹಣ್ಣುಗಳಿಗೆ ಹೋಲಿಸಿದರೆ ಡ್ರ್ಯಾಗನ್ ಹಣ್ಣಿನಲ್ಲಿ ಮೆಗ್ನೀಸಿಯಮ್ ಅಧಿಕವಾಗಿರುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಡ್ರ್ಯಾಗನ್ ಹಣ್ಣುಗಳು ಅತ್ಯುತ್ತಮವಾಗಿದೆ. ಏಕೆಂದರೆ ಇದು ಹೆಚ್ಚು ಕ್ಯಾಲೊರಿಗಳನ್ನು ಹೊಂದಿರುವುದಿಲ್ಲ. ಈ ಹಣ್ಣಿನಲ್ಲಿನ ಬೀಜಗಳನ್ನು ಕೂಡ ಸೇವಿಸುವುದು ಉತ್ತಮ.

ಡ್ರ್ಯಾಗನ್ ಹಣ್ಣು ಹೆಚ್ಚು ದುಬಾರಿಯಾಗಿದೆ ಈ ಹಣ್ಣುಗಳು ಪ್ರಸ್ತುತ ಮಾರುಕಟ್ಟೆಗಳಲ್ಲಿ ಲಭ್ಯವಿದೆ. ಪ್ರತಿ ಹಣ್ಣಿನ ಬೆಲೆ (ಸುಮಾರು 400 ಗ್ರಾಂ ತೂಕಕ್ಕೆ) 70 ರಿಂದ100 ರೂಪಾಯಿ ಇರುತ್ತದೆ. ಈ ಹಣ್ಣು ಸ್ವಲ್ಪ ಹುಳಿ ಮತ್ತು ಸ್ವಲ್ಪ ಸಿಹಿಯಾದ ರುಚಿಯನ್ನು ನೀಡುತ್ತದೆ.

ಇದನ್ನೂ ಓದಿ: Health Benefits: ಚೀನಿಕಾಯಿಯ ಆರೋಗ್ಯಕರ ಗುಣಗಳ ಬಗ್ಗೆ ತಿಳಿದರೆ, ಇದನ್ನು ದಿನನಿತ್ಯ ತಿನ್ನುವ ಅಭ್ಯಾಸ ಮಾಡಿಕೊಳ್ಳುತ್ತೀರಿ

’Jamun Health Benefits: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸಿ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು