AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green Chili Benefits: ಹಸಿರು ಮೆಣಸಿನಕಾಯಿಯ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದರೆ ಒಂದು ಮೆಣಸನ್ನು ಬಿಡುವುದಿಲ್ಲ

Health benefits: ಹಸಿರು ಮೆಣಸಿನಕಾಯಿ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಸಿರು ಮೆಣಸಿನಕಾಯಿ ದೇಹದ ಅನೇಕ ರೋಗಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಹಸಿರು ಮೆಣಸಿನಕಾಯಿಯ ಪ್ರಯೋಜನಗಳ ಬಗ್ಗೆ ತಿಳಿಯುವುದು ಸೂಕ್ತ.

Green Chili Benefits: ಹಸಿರು ಮೆಣಸಿನಕಾಯಿಯ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದರೆ ಒಂದು ಮೆಣಸನ್ನು ಬಿಡುವುದಿಲ್ಲ
ಹಸಿರು ಮೆಣಸಿನಕಾಯಿಗಳು
TV9 Web
| Updated By: preethi shettigar|

Updated on: Jul 31, 2021 | 9:04 AM

Share

ಹಸಿರು ಮೆಣಸಿನಕಾಯಿಗಳು ನಾವು ಮಾಡುವ ಅಡುಗೆಗೆ ಹೆಚ್ಚಿನ ಪರಿಮಳವನ್ನು ನೀಡುತ್ತದೆ ಎಂಬ ಮಾತಿದೆ. ಹೆಚ್ಚಿನ ಮನೆಗಳಲ್ಲಿ ಮಾಡುವ ಪ್ರತಿ ಅಡುಗೆಗೆ ಹಸಿರು ಮೆಣಸಿನಕಾಯಿ ಮತ್ತು ಒಣ ಮೆಣಸಿನಕಾಯಿ ಬಳಸುತ್ತಾರೆ. ಆದರೆ ಹಸಿರು ಮೆಣಸಿನಕಾಯಿ ಬಳಕೆ ಹೆಚ್ಚು. ಅದಾಗ್ಯೂ ಕೆಲವು ಜನರು ಇವುಗಳನ್ನು ತಿನ್ನಲು ಆಸಕ್ತಿ ಹೊಂದವುದಿಲ್ಲ. ಆದರೆ ನೆನಪಿಡಿ ಹಸಿರು ಮೆಣಸಿನಕಾಯಿ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಸಿರು ಮೆಣಸಿನಕಾಯಿ ದೇಹದ ಅನೇಕ ರೋಗಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಹಸಿರು ಮೆಣಸಿನಕಾಯಿಯ ಪ್ರಯೋಜನಗಳ ಬಗ್ಗೆ ತಿಳಿಯುವುದು ಸೂಕ್ತ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಸಿರು ಮೆಣಸಿನಲ್ಲಿ ವಿಟಮಿನ್ ಸಿ ಅಧಿಕವಾಗಿರುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲೂ ಕೊವಿಡ್ ಸೋಂಕು ಹೆಚ್ಚಾಗುತ್ತಿರುವ ಈ ಕಾಲಘಟ್ಟದಲ್ಲಿ ನಾವು ಮನೆಯಲ್ಲಿಯೇ ಒಂದಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಬೇಕು. ಹೀಗಾಗಿ ಹಸಿರು ಮೆಣಸಿನಕಾಯಿಯನ್ನು ನಿಯಮಿತವಾಗಿ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ ಹೃದ್ರೋಗದ ಅಪಾಯವನ್ನು ಹಸಿರು ಮೆಣಸಿನಕಾಯಿ ಕಡಿಮೆ ಮಾಡುತ್ತದೆ. ಇದು ಕಡಿಮೆ ಕ್ಯಾಲೋರಿ ಹೊಂದಿದೆ. ದೈನಂದಿನ ಆಹಾರದಲ್ಲಿ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಚಯಾಪಚಯ ಕ್ರಿಯೆಯು ಆರೋಗ್ಯಕರವಾಗಿರುತ್ತದೆ. ಅಲ್ಲದೇ ಹಸಿರು ಮೆಣಸಿನಕಾಯಿ ಉತ್ಕರ್ಷಣ ನಿರೋಧಕಗಳಿಂದ ಕೂಡಿದೆ.

ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಹಸಿರು ಮೆಣಸಿನಕಾಯಿ ತಿನ್ನುವುದರಿಂದ ಪ್ರಾಸ್ಟೇಟ್ ಸಂಬಂಧಿತ ರೋಗಗಳ ಸಾಧ್ಯತೆ ಕಡಿಮೆಯಾಗುತ್ತದೆ. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ, ಇದರಲ್ಲಿರುವ ಕ್ಯಾಪ್ಸೈಸಿನ್ ರಕ್ತ ಪರಿಚಲನೆಯನ್ನು ಸಮತೋಲನದಲ್ಲಿರಿಸುತ್ತದೆ. ಹಸಿರು ಮೆಣಸಿನಕಾಯಿ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಹೃದಯ ಸಂಬಂಧಿತ ಇತರ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ.

ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ ಹಸಿರು ಮೆಣಸಿನಲ್ಲಿ ಕ್ಯಾಪ್ಸೈಸಿನ್ ಎಂಬ ಅಂಶವಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಇದು ಮೆದುಳಿನ ಒಂದು ಭಾಗವಾದ ಹೈಪೋಥಾಲಮಸ್‌ಗೆ ಪರಿಣಾಮ ಬೀರಿದ ತಕ್ಷಣ ದೇಹದ ಉಷ್ಣತೆ ಕಡಿಮೆಯಾಗುತ್ತದೆ. ಈ ಕಾರಣಕ್ಕಾಗಿಯೇ ಭಾರತದ ಅತ್ಯಂತ ಉಷ್ಣಯುತ ಸ್ಥಳಗಳಲ್ಲಿಯೂ ಹಸಿರು ಮೆಣಸಿನಕಾಯಿಗಳನ್ನು ಹೇರಳವಾಗಿ ತಿನ್ನುತ್ತಾರೆ.

ಸೈನಸ್ ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ ಹಸಿರು ಮೆಣಸಿನಕಾಯಿ ಶೀತ ಮತ್ತು ಸೈನಸ್ ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ. ನಿಮಗೆ ಶೀತ ಬಂದಾಗ ಹಸಿರು ಮೆಣಸಿನಕಾಯಿಯ ಸೊಪ್ಪನ್ನು ಸೇವಿಸಿ, ಇದು ಶೀತವನ್ನು ನಿವಾರಿಸುತ್ತದೆ. ಸೊಪ್ಪನ್ನು ತಿನ್ನುವ ಮೂಲಕ ದೇಹದಲ್ಲಿ ಉತ್ಪತ್ತಿಯಾಗುವ ಶಾಖವು ನೋವು ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ.

ಹುಣ್ಣು ನಿವಾರಕ ಬಾಯಿಯಲ್ಲಿ ಹುಣ್ಣು ಇರುವವರು ಮಸಾಲೆಯುಕ್ತ ಆಹಾರವನ್ನು ಸೇವಿಸುವುದು ಕಷ್ಟವಾದರೂ, ಹಸಿರು ಮೆಣಸಿನಕಾಯಿ ಸೇವನೆಯಿಂದ ಗುಳ್ಳೆಗಳನ್ನು ಬೇಗನೆ ಗುಣಪಡಿಸಬಹುದು. ಇದರಲ್ಲಿ ವಿಟಮಿನ್ ಸಿ ಮತ್ತು ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದ್ದು, ಕಣ್ಣು ಮತ್ತು ಚರ್ಮಕ್ಕೆ ತುಂಬಾ ಒಳ್ಳೆಯದು. ಆದರೆ ನೆನಪಿಡಿ ಹಸಿರು ಮೆಣಸಿನಕಾಯಿ ಅನ್ನು ತಂಪಾದ ಸ್ಥಳದಲ್ಲಿ ಇರಿಸಿ. ಗಾಳಿ ಮತ್ತು ಬೆಳಕಿಗೆ ಇದು ಒಡ್ಡಿಕೊಳ್ಳುವುದರಿಂದ ಅದರ ವಿಟಮಿನ್ ನಾಶವಾಗುತ್ತದೆ.

ಮಧುಮೇಹ ನಿವಾರಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹ ಇದು ಸಹಾಯ ಮಾಡುತ್ತದೆ. ಮಧುಮೇಹಿಗಳು ಹಸಿರು ಮೆಣಸಿನಕಾಯಿ ಸೊಪ್ಪು ತಿನ್ನುವುದು ಸೂಕ್ತ. ಇವುಗಳು ಸಾಕಷ್ಟು ಕಬ್ಬಿಣವನ್ನು ಒದಗಿಸುತ್ತವೆ. ಇದರ ಜತೆಯಲ್ಲಿ, ಹಸಿರು ಎಲೆಗಳ ತರಕಾರಿಗಳನ್ನು ತಿನ್ನುವುದು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ:

ಮನೆಯೊಳಗೆ ಗಿಡ ನೆಡುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ಗಮನಹರಿಸಿ

Health Tips: ವಾರಕ್ಕೆ ಮೂರಕ್ಕಿಂತ ಹೆಚ್ಚು ಬಾರಿ ಚಿಕನ್​ ಸೇವಿಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ಎಚ್ಚರ ವಹಿಸಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ