AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guava Leaves Benefits: ಪೇರಲೆ ಎಲೆಯ ನೀರಿನಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ

ಪೇರಲೆ ಗಿಡದ ಎಲೆಯಲ್ಲಿಯೂ ಕೂಡ ಅನೇಕ ಪ್ರಯೋಜನಗಳಿವೆ. ಬಿಸಿ ನೀರಿನಲ್ಲಿ ಪೇರಲೆ ಎಲೆಗಳನ್ನು ಕುದಿಸಿ ಕುಡಿಯುವುದರಿಂದ ಕಾಲೋಚಿತ ರೋಗಗಳು ಕಡಿಮೆಯಾಗುವುದಲ್ಲದೆ ಚರ್ಮದ ಸಮಸ್ಯೆಗಳು ಕಡಿಮೆಯಾಗುತ್ತವೆ.

Guava Leaves Benefits: ಪೇರಲೆ ಎಲೆಯ ನೀರಿನಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Aug 17, 2021 | 9:33 AM

ಸಾಮಾನ್ಯವಾಗಿ ಪೇರಲೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಪೋಷಕಾಂಶಗಳು ಮತ್ತು ವಿಟಮಿನ್‌ಗಳು ಅಧಿಕವಾಗಿದ್ದು, ಇದು ದೇಹದಲ್ಲಿನ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡುವುದಲ್ಲದೆ ಆರೋಗ್ಯವಾಗಿರಿಸುತ್ತದೆ. ಕೇವಲ ಪೇರಲೆ ಹಣ್ಣು ಮಾತ್ರವಲ್ಲ. ಪೇರಲೆ ಗಿಡದ ಎಲೆಯಲ್ಲಿಯೂ ಕೂಡ ಅನೇಕ ಪ್ರಯೋಜನಗಳಿವೆ. ಬಿಸಿ ನೀರಿನಲ್ಲಿ ಪೇರಲೆ ಎಲೆಗಳನ್ನು ಕುದಿಸಿ ಕುಡಿಯುವುದರಿಂದ ಕಾಲೋಚಿತ ರೋಗಗಳು ಕಡಿಮೆಯಾಗುವುದಲ್ಲದೆ ಚರ್ಮದ ಸಮಸ್ಯೆಗಳು ಕಡಿಮೆಯಾಗುತ್ತವೆ. ಆದಾಗ್ಯೂ ಈ ಪೇರಲೆ ಎಲೆಗಳಿಂದ ಕೂದಲಿನ ಸಮಸ್ಯೆಗಳನ್ನು ಪರಿಶೀಲಿಸಬಹುದು. ಪೇರಲೆ ಎಲೆ ಬಳಸುವುದರಿಂದ ಕೂದಲು ಕಪ್ಪು, ದಪ್ಪ, ಉದ್ದ ಮತ್ತು ಮೃದುವಾಗುತ್ತದೆ. ಹಾಗಿದ್ದರೆ ಪೇರಲೆ ಎಲೆಗಳನ್ನು ಉಪಯೋಗಿಸುವ ಕ್ರಮ ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಪೇರಲೆ ಎಲೆ ಪೇಸ್ಟ್ ಪೇರಲೆ ಎಲೆಯನ್ನು ಚೆನ್ನಾಗಿ ನೀರಿನಿಂದ ತೊಳೆದು, ರುಬ್ಬಿಕೊಂಡು ದಪ್ಪ ಪೇಸ್ಟ್ ರೀತಿ ಮಾಡಿಕೊಳ್ಳಿ. ಈಗ ಈ ಪೇಸ್ಟ್ ಅನ್ನು ತಲೆಯ ನೆತ್ತಿಗೆ ಮತ್ತು ಕೂದಲಿಗೆ ಹೇರ್ ಕಲರ್ ಬ್ರಷ್ ಸಹಾಯದಿಂದ ಹಚ್ಚಿ. ನಂತರ ಬೆರಳುಗಳಿಂದ ಐದು ನಿಮಿಷಗಳ ಕಾಲ ನೆತ್ತಿಯನ್ನು ಮಸಾಜ್ ಮಾಡಿ ಮತ್ತು ಅರ್ಧ ಘಂಟೆಯವರೆಗೆ ಬಿಡಿ. ಬಳಿಕ ನೀರಿನಿಂದ ತೊಳೆಯಿರಿ. ಈ ರೀತಿ ಮಾಡುವುದರಿಂದ ಕೂದಲು ಉದುರುವ ಸಮಸ್ಯೆ ದೂರವಾಗುತ್ತದೆ

ಪೇರಲೆ ಎಲೆಯ ನೀರು ಕೂದಲ ಬೆಳವಣಿಗೆ, ಉದ್ದ ಮತ್ತು ಸೌಂದರ್ಯವನ್ನು ಹೆಚ್ಚಿಸಲು ಪೇರಲೆ ಎಲೆಯ ನೀರನ್ನು ಕೂದಲಿಗೆ ಬಳಸಬಹುದು. ತಾಜಾ ಪೇರಲೆ ಎಲೆಗಳನ್ನು ತೆಗೆದುಕೊಂಡು ನಂತರ ಅವುಗಳನ್ನು ಶುದ್ಧ ನೀರಿನಿಂದ ತೊಳೆಯಿರಿ. ಈಗ ಒಂದು ಪಾತ್ರೆಯಲ್ಲಿ ಕುದಿಯಲು ಒಂದು ಲೀಟರ್ ನೀರನ್ನು ಹಾಕಿ ಮತ್ತು ಅದರಲ್ಲಿ ಪೇರಲೆ ಎಲೆಗಳನ್ನು ಹಾಕಿ. ಈ ನೀರನ್ನು ಕಡಿಮೆ ಉರಿಯಲ್ಲಿ ಎರಡು ನಿಮಿಷ ಕುದಿಸಿ. ನಂತರ ನೀರನ್ನು ತಣ್ಣಗಾಗಲು ಬಿಡಿ. ನೀರು ತಣ್ಣಗಾದ ನಂತರ ಅದನ್ನು ಫಿಲ್ಟರ್ ಮಾಡಿ ಇನ್ನೊಂದು ಬೌಲ್​ಗೆ ತೆಗೆದುಕೊಳ್ಳಿ. ಈಗ ಈ ಪೇರಲೆ ನೀರನ್ನು ಕೂದಲಿನ ತುದಿಗೆ ಹಚ್ಚಿ ಒಂದು ಗಂಟೆ ನಂತರ ನೀರಿನಿಂದ ತೊಳೆಯಿರಿ.

ಪೇರಲೆ ಎಲೆ, ಈರುಳ್ಳಿ ರಸ, ತೆಂಗಿನ ಎಣ್ಣೆ ಪೇಸ್ಟ್ ಮೊದಲು ಪೇರಲೆ ಎಲೆಗಳನ್ನು ಮಿಕ್ಸಿಯಲ್ಲಿ ಹಾಕಿ ನಯವಾಗಿ ಪೇಸ್ಟ್ ಮಾಡಿ. ನಂತರ ಈರುಳ್ಳಿಯನ್ನು ತೆಗೆದುಕೊಂಡು ಪೇಸ್ಟ್ ಮಾಡಿ ಮತ್ತು ಅದರಿಂದ ರಸವನ್ನು ತೆಗೆದುಕೊಂಡು ಪಕ್ಕಕ್ಕೆ ಇರಿಸಿ. ಈಗ ಪೇರಲೆ ಎಲೆ ಪೇಸ್ಟ್ ಮತ್ತು ಈರುಳ್ಳಿ ರಸ ಎರಡನ್ನೂ ಸೇರಿಸಿ ಮತ್ತು ಒಂದು ಚಮಚ ತೆಂಗಿನ ಎಣ್ಣೆಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಪೇಸ್ಟ್ ಅನ್ನು ತಲೆಗೆ ಬ್ರಷ್ ಅಥವಾ ಬೆರಳುಗಳ ಸಹಾಯದಿಂದ ಹಚ್ಚಿ. ಅರ್ಧ ಗಂಟೆಯ ನಂತರ ಶಾಂಪೂ ಬಳಸಿ ತೊಳೆಯಿರಿ.

ಇದನ್ನೂ ಓದಿ: Hairy Ears: ಕಿವಿಯಲ್ಲಿ ಬೆಳೆಯುವ ಕೂದಲು ಆರೋಗ್ಯಕ್ಕೆ ಹಾನಿಕಾರಕವೇ?

Guava Side Effect: ಪೇರಲೆ ಹಣ್ಣಿನ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ!

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ