AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lady Finger: ಆಹಾರದಲ್ಲಿ ಬೆಂಡೆಕಾಯಿಯನ್ನು ಹೆಚ್ಚು ಸೇವಿಸಿ, ಇದು ಮಧುಮೇಹದಿಂದ ಮುಕ್ತಿ ನೀಡುತ್ತದೆ

Health Tips: ವಿಟಮಿನ್ ಬಿ, ವಿಟಮಿನ್ ಸಿ, ಫೋಲಿಕ್ ಆಸಿಡ್ ಮತ್ತು ಕ್ಯಾಲ್ಸಿಯಂ ಇರುತ್ತದೆ. ಇದು ಕಡಿಮೆ ಕ್ಯಾಲೋರಿ ಮತ್ತು ಅಧಿಕ ಫೈಬರ್ ಹೊಂದಿದೆ. ಬೆಂಡೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ.

Lady Finger: ಆಹಾರದಲ್ಲಿ ಬೆಂಡೆಕಾಯಿಯನ್ನು ಹೆಚ್ಚು ಸೇವಿಸಿ, ಇದು ಮಧುಮೇಹದಿಂದ ಮುಕ್ತಿ ನೀಡುತ್ತದೆ
ಬೆಂಡೆಕಾಯಿ
TV9 Web
| Edited By: |

Updated on: Aug 05, 2021 | 8:15 AM

Share

ಎಲ್ಲರೂ ಬೆಂಡೆಕಾಯಿ ತಿನ್ನಲು ಇಷ್ಟಪಡುತ್ತಾರೆ. ಬೆಂಡೆಕಾಯಿಯಿಂದ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಬಹುದು. ಇದು ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಬೆಂಡೆಕಾಯಿ (Lady Finger) ಮಧುಮೇಹಿಗಳಿಗೆ ಮತ್ತು ಕ್ಯಾನ್ಸರ್ ರೋಗಿಗಳಿಗೆ ಉತ್ತಮ ಆಹಾರವಾಗಿದೆ. ಇದರಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ಫೋಲಿಕ್ ಆಸಿಡ್ ಮತ್ತು ಕ್ಯಾಲ್ಸಿಯಂ ಇರುತ್ತದೆ. ಇದು ಕಡಿಮೆ ಕ್ಯಾಲೋರಿ ಮತ್ತು ಅಧಿಕ ಫೈಬರ್ ಹೊಂದಿದೆ. ಬೆಂಡೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ.

1. ಮಧುಮೇಹಿಗಳಿಗೆ ಪ್ರಯೋಜನಕಾರಿ ಮಧುಮೇಹಿ ಕಾಯಿಲೆಯಿಂದ ಬಳಲುತ್ತಿರುವವರು ಬೆಂಡೆಕಾಯಿ ತಿನ್ನುವುದು ಪ್ರಯೋಜನಕಾರಿಯಾಗಿದೆ. ಅಧ್ಯಯನದ ಪ್ರಕಾರ ಬೆಂಡೆಕಾಯಿ ತಿನ್ನುವವರು ಕಡಿಮೆ ಸಕ್ಕರೆ ಮಟ್ಟವನ್ನು ಹೊಂದಿರುತ್ತಾರೆ. ಟರ್ಕಿಯಲ್ಲಿ ಹಲವು ವರ್ಷಗಳಿಂದ ಮಧುಮೇಹ ಚಿಕಿತ್ಸೆಯಲ್ಲಿ ಬೆಂಡೆಕಾಯಿ ಬೀಜಗಳನ್ನು ಬಳಸಲಾಗುತ್ತಿದೆ.

2. ಫೈಬರ್ ಅಧಿಕವಾಗಿದೆ ಬೆಂಡೆಕಾಯಿಯಲ್ಲಿ ನಾರಿನಂಶ ಅಧಿಕವಾಗಿದೆ. ಇದು ಮಧುಮೇಹವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಗ್ಲೈಸೆಮಿಕ್ ನಿಯಂತ್ರಣವನ್ನು ಉತ್ತೇಜಿಸುತ್ತದೆ ಮತ್ತು ಇನ್ಸುಲಿನ್ ಅನ್ನು ಸುಧಾರಿಸುತ್ತದೆ. ಫೈಬರ್ ಇರುವಿಕೆಯು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದಂತೆ ಮಾಡುತ್ತದೆ. ಹಸಿವು ಬೇಗನೆ ಬರುವುದಿಲ್ಲ. ಆ ಮೂಲಕ ತೂಕ ಇಳಿಕೆಗೂ ಸಹಕಾರಿಯಾಗಿದೆ. ಇದು ಹೊಟ್ಟೆಗೆ ಸಂಬಂಧಿಸಿದ ಇನ್ನಿತರ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ.

3. ಉತ್ಕರ್ಷಣ ನಿರೋಧಕವಾಗಿದೆ ಬೆಂಡೆಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಜೀವನಶೈಲಿಯಲ್ಲಿನ ಬದಲಾವಣೆಗಳ ಮೂಲಕ ಮಧುಮೇಹವನ್ನು ಸಹ ನಿಯಂತ್ರಿಸಬಹುದು. ಒತ್ತಡವನ್ನು ಕಡಿಮೆ ಮಾಡುವ ಮೂಲಕ ರೋಗವನ್ನು ನಿರ್ಮೂಲನೆ ಮಾಡಬಹುದು.

4. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ ಮಧುಮೇಹ ಇರುವವರು ಅಧಿಕ ಕೊಲೆಸ್ಟ್ರಾಲ್ ಹೊಂದಿರುತ್ತಾರೆ ಎಂದು ಸಂಶೋಧನೆಗಳು ತಿಳಿಸಿವೆ. ಆದ್ದರಿಂದ, ನಾವು ನಮ್ಮ ಆಹಾರದಲ್ಲಿ ಆಂಟಿಆಕ್ಸಿಡೆಂಟ್ ಮತ್ತು ಫೈಬರ್ ಅಧಿಕವಾಗಿರುವ ಆಹಾರವನ್ನು ಸೇವಿಸಬೇಕು. ಹೀಗಾಗಿ ಬೆಂಡೆಕಾಯಿ ಸೇವನೆ ಅತ್ಯಗತ್ಯ. ಇದರಿಂದ ಕೊಲೆಸ್ಟ್ರಾಲ್ ಮಟ್ಟವೂ ನಿಯಂತ್ರಣದಲ್ಲಿರುತ್ತದೆ.

ಇದನ್ನೂ ಓದಿ: Health Benefits: ನೆನೆಸಿದ ಕಡಲೆಕಾಳು ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ

Garam Masala Benefits: ಗರಂ ಮಸಾಲೆ ಪರಿಮಳ ಮತ್ತು ರುಚಿಗಷ್ಟೇ ಸಿಮಿತವಾಗಿಲ್ಲ ಅನೇಕ ಆರೋಗ್ಯಕರ ಗುಣಗಳು ಇದರಲ್ಲಿದೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್