Papaya Leaf Benefits: ಪಪ್ಪಾಯಿ ಹಣ್ಣು ಮಾತ್ರ ಅಲ್ಲ, ಇದರ ಎಲೆಯೂ ಕೂಡ ಅನೇಕ ಆರೋಗ್ಯಕರ ಗುಣಗಳಿಂದ ಕೂಡಿದೆ

ಪಪ್ಪಾಯಿ ಎಲೆಯ ಜ್ಯೂಸ್ ಫ್ಲೇವನಾಯ್ಡ್‌ಗಳು ಮತ್ತು ಕ್ಯಾರೋಟಿನ್ ಮಾತ್ರವಲ್ಲದೆ ವಿಟಮಿನ್ ಎ, ಬಿ, ಸಿ ಮತ್ತು ಡಿ ಅನ್ನು ಹೊಂದಿರುತ್ತದೆ. ಪಪ್ಪಾಯಿ ಎಲೆಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇದು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ.

Papaya Leaf Benefits: ಪಪ್ಪಾಯಿ ಹಣ್ಣು ಮಾತ್ರ ಅಲ್ಲ, ಇದರ ಎಲೆಯೂ ಕೂಡ ಅನೇಕ ಆರೋಗ್ಯಕರ ಗುಣಗಳಿಂದ ಕೂಡಿದೆ
ಸಾಂದರ್ಭಿಕ ಚಿತ್ರ
Follow us
| Updated By: preethi shettigar

Updated on: Oct 04, 2021 | 8:11 AM

ಪಪ್ಪಾಯಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂಬುವುದು ಎಲ್ಲರಿಗೂ ತಿಳಿದಿರುವ ವಿಷಯ. ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ಇದು ಇತರ ಸಮಸ್ಯೆಗಳನ್ನು ಕೂಡ ಕಡಿಮೆ ಮಾಡುತ್ತದೆ. ಅದರಂತೆ ಪಪ್ಪಾಯಿಯ ಎಲೆಗಳು ಕೂಡ ಅನೇಕ ಪ್ರಯೋಜನಗಳನ್ನು ಹೊಂದಿವೆ. ಪಪ್ಪಾಯಿ ಬೀಜಗಳು ಮತ್ತು ಎಲೆಗಳು ಆರೋಗ್ಯಕ್ಕೂ ಒಳ್ಳೆಯದು. ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.

ಪಪ್ಪಾಯಿ ಎಲೆಯ ಜ್ಯೂಸ್ ಉತ್ಕರ್ಷಣ ನಿರೋಧಕಗಳು, ಫ್ಲೇವನಾಯ್ಡ್‌ಗಳು ಮತ್ತು ಕ್ಯಾರೋಟಿನ್ ಮಾತ್ರವಲ್ಲದೆ ವಿಟಮಿನ್ ಎ, ಬಿ, ಸಿ ಮತ್ತು ಡಿ ಅನ್ನು ಹೊಂದಿರುತ್ತದೆ. ಪಪ್ಪಾಯಿ ಎಲೆಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇದು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಡೆಂಗ್ಯೂ ತಡೆಗಟ್ಟಲು ಪಪ್ಪಾಯಿ ಎಲೆಗಳು ವಿಶೇಷವಾಗಿ ಉಪಯುಕ್ತವಾಗಿವೆ. ಇವುಗಳನ್ನು ತೆಗೆದುಕೊಳ್ಳುವುದರಿಂದ ರಕ್ತದಲ್ಲಿ ಪ್ಲೇಟ್ ಲೆಟ್ಸ್ ಹೆಚ್ಚಾಗುತ್ತದೆ.

ಡೆಂಗ್ಯೂ ವಿರುದ್ಧ ಹೋರಾಡಲು ಪಪ್ಪಾಯಿ ಎಲೆಯ ಜ್ಯೂಸ್ ಡೆಂಗ್ಯೂ ವಿರುದ್ಧ ಹೋರಾಡಲು ಪಪ್ಪಾಯಿ ಎಲೆಯ ಜ್ಯೂಸ್ ಸಹಾಯ ಮಾಡುತ್ತದೆ. ಡೆಂಗ್ಯೂ ಜ್ವರ ಕಾಣಿಸಿಕೊಂಡರೆ ರಕ್ತದಲ್ಲಿನ ಪ್ಲೇಟ್‌ಲೆಟ್‌ಗಳ ಸಂಖ್ಯೆ ವೇಗವಾಗಿ ಕುಸಿಯುತ್ತದೆ. ಪ್ಲೇಟ್‌ಲೆಟ್‌ಗಳ ಇಳಿಕೆ ಮತ್ತು ಅಧಿಕ ಜ್ವರದಿಂದಾಗಿ ದೇಹವು ನಿತ್ರಾಣಗೊಂಡಂತೆ ಭಾಸವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಪಪ್ಪಾಯಿ ಎಲೆಗಳನ್ನು ಸೇವಿಸಿದರೆ ಪ್ಲೇಟ್‌ಲೆಟ್‌ಗಳ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತದೆ.

ಮಲೇರಿಯಾಗೆ ರಾಮಬಾಣ ಪಪ್ಪಾಯಿ ಎಲೆಗಳ ರಸ ಅಥವಾ ಸಾರವನ್ನು ಮಲೇರಿಯಾ ಚಿಕಿತ್ಸೆಗೂ ಬಳಸಲಾಗುತ್ತದೆ. ಮಲೇರಿಯಾ ಜ್ವರವನ್ನು ನಿಯಂತ್ರಿಸಲು ಸಹಾಯ ಮಾಡುವ ಪ್ಲಾಜ್‌ಮೋಡಿಸ್ಟಾಟಿಕ್ ಗುಣಗಳು ಪಪ್ಪಾಯಿ ಎಲೆಗಳಲ್ಲಿ ಕಂಡು ಬರುತ್ತವೆ. ಹೀಗಾಗಿ ಮಲೇರಿಯಾ ಜ್ವರಕ್ಕೆ ಪಪ್ಪಾಯಿ ಎಲೆ ಅತ್ಯುತ್ತಮ ಮನೆಮದ್ದು ಎನ್ನಬಹುದು.

ಜೀರ್ಣಕಾರಿ ಸಮಸ್ಯೆಗೆ ಪರಿಹಾರ ಪಪ್ಪಾಯಿ ಎಲೆ ಕೈಮೋಪೆಪಿನ್‌ನ ಪೆಪಿನ್ ಅಂಶಗಳನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಬೇಕಾದ ಅಗತ್ಯ ಫೈಬರ್ ಅನ್ನು ಒಳಗೊಂಡಿರುತ್ತವೆ. ಇದನ್ನು ಸೇವಿಸುವುದರಿಂದ ಎದೆ ಉರಿ, ಹುಳಿ ತೇಗು, ಅಜೀರ್ಣ ಸಮಸ್ಯೆ ಮತ್ತು ಮಲಬದ್ಧತೆ ಮುಂತಾದ ಸಮಸ್ಯೆಗಳು ದೂರವಾಗುತ್ತದೆ.

ಪಿತ್ತಜನಕಾಂಗಕ್ಕೆ ಸಹಕಾರಿ ಪಪ್ಪಾಯಿ ಎಲೆಗಳ ಸೇವನೆಯು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಇದು ರಕ್ತವನ್ನು ಶುದ್ಧೀಕರಿಸುತ್ತದೆ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಮೂಲಕ, ಲಿಪಿಡ್​ಗಳು ಪೆರಾಕ್ಸಿಡೇಶನ್ ಕೂಡ ಕಡಿಮೆಯಾಗುತ್ತದೆ. ಇದೇ ಕಾರಣದಿಂದಾಗಿ ಕಾಮಾಲೆ, ಲಿವರ್ ಸಿರೋಸಿಸ್ ಮೊದಲಾದ ಪಿತ್ತಜನಕಾಂಗಕ್ಕೆ ಸಂಬಂಧಿಸಿದ ರೋಗಗಳು ದೂರವಾಗುತ್ತವೆ.

ಇನ್ನಿತರ ಸಮಸ್ಯೆಗೆ ಪರಿಹಾರ ಪಿರಿಯಡ್ಸ್ ನೋವನ್ನು ಕಡಿಮೆ ಮಾಡಲು ಈ ಜ್ಯೂಸ್ ತುಂಬಾ ಉಪಯುಕ್ತವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪಪ್ಪಾಯಿ ಎಲೆಯ ಜ್ಯೂಸ್ ತುಂಬಾ ಉಪಯುಕ್ತವಾಗಿದೆ. ಇದು ವೈರಲ್ ಸೋಂಕಿನಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಈ ರಸವನ್ನು ಕುಡಿಯುವುದರಿಂದ ರಕ್ತದಲ್ಲಿ ಬಿಳಿ ರಕ್ತ ಕಣಗಳು ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆ ಹೆಚ್ಚಾಗುತ್ತದೆ. ಪಪ್ಪಾಯಿ ಎಲೆಯ ಜ್ಯೂಸ್ ಕುಡಿಯುವುದರಿಂದ ಕಬ್ಬಿಣದ ಕೊರತೆಯು ಕಡಿಮೆಯಾಗುತ್ತದೆ.

ಇದನ್ನೂ ಓದಿ:

Health Tips: ಡ್ರೈ ಫ್ರೂಟ್ಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Raisin Water Benefits: ಒಣದ್ರಾಕ್ಷಿ ನೆನಸಿದ ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದು

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್