Health Benefits: ದಿನಕ್ಕೆ ಒಂದು ಬಾರಿಯಾದರೂ ಬರಿಗಾಲಿನಲ್ಲಿ ನಡೆಯಿರಿ; ಕಾಲಿಗೆ ತಾಗುವ ಮಣ್ಣು ಸ್ನಾಯುವನ್ನು ಬಲಪಡಿಸುತ್ತದೆ

ವೇಗವಾಗಿ ನಡೆಯುವುದರಿಂದ ಉಸಿರಾಟದ ವೇಗ ಹೆಚ್ಚಾಗುತ್ತದೆ. ಇದು ಶ್ವಾಸಕೋಶ ಮತ್ತು ಹೃದಯದ ಕಾರ್ಯವನ್ನು ಸುಧಾರಿಸುತ್ತದೆ. ಆದರೆ ಈಗ ಹಲವರು ಓಡಾಡುವಾಗ ಅಥವಾ ವಾಕಿಂಗ್​ ಮಾಡುವಾಗ ಚಪ್ಪಲಿ ಧರಿಸುತ್ತಾರೆ. ಆದರೆ ನೆನಪಿಡಿ ಬರಿಗಾಲಿನಲ್ಲಿ ನಡೆಯುವುದು ಉತ್ತಮ ಅಭ್ಯಾಸ.

Health Benefits: ದಿನಕ್ಕೆ ಒಂದು ಬಾರಿಯಾದರೂ ಬರಿಗಾಲಿನಲ್ಲಿ ನಡೆಯಿರಿ; ಕಾಲಿಗೆ ತಾಗುವ ಮಣ್ಣು ಸ್ನಾಯುವನ್ನು ಬಲಪಡಿಸುತ್ತದೆ
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jul 19, 2021 | 6:45 AM

ದೈಹಿಕವಾಗಿ ಆರೋಗ್ಯವಾಗಿರಲು ಮತ್ತು ಶಾಂತಿಯುತವಾಗಿರಲು ವ್ಯಾಯಾಮ ಅತ್ಯಗತ್ಯ. ಓಡಾಡುವುದು(Walking) ಉತ್ತಮ ವ್ಯಾಯಾಮವಾಗಿದೆ. ವಾಕಿಂಗ್ ದೇಹವನ್ನು ಆರೋಗ್ಯವಾಗಿರಿಸುತ್ತದೆ. ಆದರೆ ಈ ನಡಿಗೆ ಸಾಧ್ಯವಾದಷ್ಟು ಸಕ್ರಿಯವಾಗಿರಬೇಕು. ವೇಗವಾಗಿ ನಡೆಯುವುದರಿಂದ ಉಸಿರಾಟದ ವೇಗ ಹೆಚ್ಚಾಗುತ್ತದೆ. ಇದು ಶ್ವಾಸಕೋಶ ಮತ್ತು ಹೃದಯದ ಕಾರ್ಯವನ್ನು ಸುಧಾರಿಸುತ್ತದೆ. ಆದರೆ ಈಗ ಹಲವರು ಓಡಾಡುವಾಗ ಅಥವಾ ವಾಕಿಂಗ್​ ಮಾಡುವಾಗ ಚಪ್ಪಲಿ ಧರಿಸುತ್ತಾರೆ. ಆದರೆ ನೆನಪಿಡಿ ಬರಿಗಾಲಿನಲ್ಲಿ ನಡೆಯುವುದು ಉತ್ತಮ ಅಭ್ಯಾಸ ಮತ್ತು ಇದು ದೇಹವನ್ನು ಸದಾ ಆರೋಗ್ಯವಾಗಿಡುತ್ತದೆ. ಬರಿಗಾಲಿನಲ್ಲಿ ನಡೆಯುವುದರಿಂದ ಅನೇಕ ಪ್ರಯೋಜನಗಳಿವೆ. ಅವುಗಳು ಯಾವುವು ಎಂದು ಹುಬ್ಬೇರಿಸುವವರಿಗೆ ಇಲ್ಲಿದೆ ಉತ್ತರ.

ಬರಿಗಾಲಿನಲ್ಲಿ ನಡೆದರೆ ನಡಿಗೆ ಸ್ಥಿರವಾಗಿರುತ್ತದೆ. ದೇಹವನ್ನು ಸಮತೋಲನಗೊಳಿಸಲು ಇದು ಸರಿಯಾದ ಮಾರ್ಗವಾಗಿದೆ. ಆದ್ದರಿಂದ ವ್ಯಾಯಾಮದ ಸಮಯದಲ್ಲಿ ಮಾತ್ರವಲ್ಲ, ಮನೆಯಲ್ಲಿ ಮತ್ತು ಕಚೇರಿಯಲ್ಲಿ ಬರಿಗಾಲಿನಲ್ಲಿ ನಡೆಯಿರಿ ಎಂದು ನ್ಯೂಯಾರ್ಕ್‌ನ ಇಥಾಕಾ ಸ್ಕೂಲ್ ಆಫ್ ಹೆಲ್ತ್ ಸೈನ್ಸ್​ ಮತ್ತು ಹ್ಯೂಮನ್ ಪರ್ಫಾರ್ಮೆನ್ಸ್‌ನ ಪ್ರಾಧ್ಯಾಪಕರಾದ ಪ್ಯಾಟ್ರಿಕ್ ಮೆಕೆನ್ನಾ ಹೇಳಿದ್ದಾರೆ.

ಬರಿಗಾಲಿನಲ್ಲಿ ನಡೆಯುವುದು ನಮ್ಮ ಚಲನವಲನಗಳ ಮೇಲೆ ಪರಿಣಾಮ ಬೀರುತ್ತದೆ. ಪಾದಗಳಲ್ಲಿನ ಸ್ನಾಯುಗಳನ್ನು ಸ್ಥಿರವಾಗಿಡಲು ಇದು ಪ್ರಮುಖ ಪಾತ್ರ ವಹಿಸುತ್ತದೆ. ಅಷ್ಟೇ ಅಲ್ಲ ಈ ಮಾದರಿಯ ನಡಿಗೆ ಹೊಟ್ಟೆಯ ಕೆಳಭಾಗದ ಸ್ನಾಯುಗಳ ಮೇಲೆ ಪರಿಣಾಮ ಬೀರುತ್ತದೆ.

ಕಾಲುಗಳಲ್ಲಿನ ಸಣ್ಣ ಮತ್ತು ದೊಡ್ಡ ಸ್ನಾಯುಗಳ ನಡುವೆ ಪರಸ್ಪರ ಸಂಬಂಧವಿದೆ. ಇವುಗಳ ಬಗೆಗಿನ ಮಾಹಿತಿಯು ನರ ಸಂಪರ್ಕದ ಮೂಲಕ ಮೆದುಳಿಗೆ ತಲುಪುತ್ತದೆ. ಈ ಸಂಪರ್ಕಕ್ಕೆ ಹಾನಿಯಾದಾಗ ಗಾಯಗಳಿಗೆ ಕಾರಣವಾಗಬಹುದು. ವಿಶೇಷವಾಗಿ ಬೂಟುಗಳು ಮತ್ತು ಚಪ್ಪಲಿಗಳಿಂದ ಈ ಅಪಾಯ ಇದೆ. ಕೆಲವೊಮ್ಮೆ ಕಾಲುಗಳ ನಡುವಿನ ನೈಸರ್ಗಿಕ ಸಂಪರ್ಕಕ್ಕೂ ಹಾನಿಯಾಗುತ್ತದೆ ಎಂದು ಪ್ರೊಫೆಸರ್ ಪ್ಯಾಟ್ರಿಕ್ ಹೇಳಿದ್ದಾರೆ.

ಸ್ನಾಯುಗಳು ಈ ರೀತಿ ಕೆಲಸ ಮಾಡದಿದ್ದರೆ, ಇದು ಅಸ್ಥಿರಜ್ಜುಗಳು, ಮೂಳೆಗಳು ಮತ್ತು ಸ್ನಾಯುರಜ್ಜುಗಳ ಮೇಲೆ ಪರಿಣಾಮ ಬೀರುತ್ತದೆ. ನಂತರ ಸ್ನಾಯುಗಳಿಗೆ ಅಪಾಯ ಹೆಚ್ಚು. ಅದಕ್ಕಾಗಿಯೇ ಸ್ನಾಯುಗಳು ದೃಢವಾಗಿ ಕೆಲಸ ಮಾಡಬೇಕಾದರೆ ಬರಿಗಾಲಿನಲ್ಲಿ ನಡೆಯುವುದು ಸೂಕ್ತ. ಇದರಿಂದ ಕಾಲುಗಳಲ್ಲಿನ ಸ್ನಾಯುಗಳು ಬಲಗೊಳ್ಳುತ್ತವೆ. ಚಳಿಗಾಲದಲ್ಲಿ ಶೂ ಬಳಸಬಹುದು. ಆದರೆ ಸದಾ ಶೂ ಅಥವಾ ಇನ್ನಿತರ ಚಪ್ಪಲಿ ಬಳಸುವುದು ಒಳಿತಲ್ಲ. ಉದಾಹರಣೆಗೆ ಮಳೆಯ ಅಂಗಳದಲ್ಲಿ ನಡೆಯುವಾಗ ಬರಿಗಾಲಲ್ಲಿ ನಡೆಯಿರಿ. ಮಣ್ಣು ಕಾಲಿಗೆ ತಾಗುವುದರಿಂದ ಸ್ನಾಯುಗಳು ಬಲಗೊಳ್ಳುತ್ತದೆ.

ಇದನ್ನೂ ಓದಿ: Health Benefits: ಕಿಡ್ನಿ ಸಮಸ್ಯೆ ಉಂಟಾದ ಮೇಲೆ ಪರಿಹಾರ ಹುಡುಕುವ ಬದಲು, ಪ್ರತಿದಿನ ಡಿಟಾಕ್ಸ್​ ಮಾಡಿ ಕುಡಿಯಿರಿ

Health Benefits: ಕಡಲೆಕಾಯಿ ತಿನ್ನುವ ಅಭ್ಯಾಸ ಇದೆಯೇ? ಸಿಪ್ಪೆಯ ಜತೆಗೆ ಇದನ್ನು ಸೇವಿಸುವುದರಿಂದಾಗುವ ಆರೋಗ್ಯಕರ ಬದಲಾವಣೆಗಳ ಬಗ್ಗೆ ತಿಳಿಯಿರಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್