AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಕೆಮ್ಮು ಮತ್ತು ಮನೆಮದ್ದು; ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ಮಳೆಗಾಲಕ್ಕೆ ಔಷಧಿ

ಜೇನುತುಪ್ಪವನ್ನು ಹೊರತುಪಡಿಸಿ ಕೆಮ್ಮಿಗೆ ಯಾವುದೇ ಚಿಕಿತ್ಸೆ ಇಲ್ಲ ಎಂಬ ಮಾತು ಆಯುರ್ವೇದದಲ್ಲಿ ಇದೆ. ಜೇನುತುಪ್ಪದಲ್ಲಿ ಏನನ್ನೂ ಸೇರಿಸದೆ ನೇರವಾಗಿ ಅದನ್ನು ತೆಗೆದುಕೊಂಡರೆ, ಅದು ಗಂಟಲಿನೊಳಗೆ ಲೇಪನವನ್ನು ರೂಪಿಸುತ್ತದೆ ಮತ್ತು ಸುಡುವ ಸಂವೇದನೆಯನ್ನು ಕಡಿಮೆ ಮಾಡುತ್ತದೆ.

Health Tips: ಕೆಮ್ಮು ಮತ್ತು ಮನೆಮದ್ದು; ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ಮಳೆಗಾಲಕ್ಕೆ ಔಷಧಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Jun 20, 2021 | 10:17 AM

ಮಳೆಗಾಲ ಬಂತು ಎಂದರೆ ಸಾಕು, ಶೀತ, ಕೆಮ್ಮು, ಜ್ವರ ಶುರು ಎಂದರ್ಥ. ಕೆಲಸದ ಸಂದರ್ಭದಲ್ಲಿ ಮಳೆಯಲ್ಲಿ ನೆನೆಯುವುದು ಸಾಮಾನ್ಯ. ಅದರಲ್ಲೂ ಮುಖ್ಯವಾಗಿ ಮಳೆಗಾಲದಲ್ಲಿ ಕಂಡುಬರುವ ಕೆಮ್ಮು ಹೆಚ್ಚು ನಮ್ಮನ್ನು ಭಾದಿಸುತ್ತದೆ. ಹೀಗಾಗಿ ಮುನ್ನೆಚ್ಚರಿಕೆಯಾಗಿ ನಾವು ಕೆಲವೊಂದು ಕ್ರಮ ಕೈಗೊಳ್ಳುವುದು ಸೂಕ್ತ. ಆದರೆ ಈಗ ಕೊರೊನಾ ಕಾಲಘಟ್ಟವಾಗಿರುವುದರಿಂದ ಮೆಡಿಕಲ್ ಅಥವಾ ಆಸ್ಪತ್ರೆಗೆ ಹೋಗುವುದು ಅಷ್ಟು ಸಮಂಜಸವಲ್ಲ ಅಥವಾ ಹೋಗಲು ಕೆಲವರು ಹಿಂದೆ ಸರಿಯಬಹುದು. ಆದರೆ ಚಿಂತೆ ಪಡುವುದು ಬೇಡ. ಇದಕ್ಕೆ ಪರಿಹಾರ ನಿಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳಲ್ಲಿ ಇದೆ. ಅದು ಹೇಗೆ ಎಂದು ಹುಬ್ಬೇರಿಸುವವರಿಗೆ ಇಲ್ಲಿದೆ ಉತ್ತರ.

ಕೆಮ್ಮು ಮತ್ತು ಮನೆಮದ್ದು

ಜೇನುತುಪ್ಪ ಜೇನುತುಪ್ಪವನ್ನು ಹೊರತುಪಡಿಸಿ ಕೆಮ್ಮಿಗೆ ಯಾವುದೇ ಚಿಕಿತ್ಸೆ ಇಲ್ಲ ಎಂಬ ಮಾತು ಆಯುರ್ವೇದದಲ್ಲಿ ಇದೆ. ಜೇನುತುಪ್ಪದಲ್ಲಿ ಏನನ್ನೂ ಸೇರಿಸದೆ ನೇರವಾಗಿ ಅದನ್ನು ತೆಗೆದುಕೊಂಡರೆ, ಅದು ಗಂಟಲಿನೊಳಗೆ ಲೇಪನವನ್ನು ರೂಪಿಸುತ್ತದೆ ಮತ್ತು ಸುಡುವ ಸಂವೇದನೆಯನ್ನು ಕಡಿಮೆ ಮಾಡುತ್ತದೆ. ಇನ್ನು ಜೇನುತುಪ್ಪಕ್ಕೆ ಸ್ವಲ್ಪ ನಿಂಬೆ ರಸವನ್ನು ಸೇರಿಸುವುದರಿಂದ ಕೆಮ್ಮಿಗೆ ತಕ್ಷಣದ ಪರಿಹಾರ ಸಿಗುತ್ತದೆ.

ತುಳಸಿ ಎಲೆ ತುಳಸಿ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಿ ಸೇವಿಸುವುದರಿಂದ ಕೆಮ್ಮು ಕಡಿಮೆಯಾಗುತ್ತದೆ. ತುಳಸಿ ಎಲೆಗೆ ಜೇನುತುಪ್ಪವನ್ನು ಸಿಂಪಡಿಸಿ ತಿನ್ನುವುದರಿಂದಲೂ ಕೆಮ್ಮು ಕಡಿಮೆಯಾಗುತ್ತದೆ. ಸುಮಾರು 15 ದಿನಗಳವರೆಗೆ ಈ ಕ್ರಮವನ್ನು ಅನುಸರಿಸುವುದರಿಂದ ಕೆಮ್ಮು ನಿವಾರಣೆಯಾಗುತ್ತದೆ.

ಶುಂಠಿ ಶುಂಠಿ ಚಹಾವು ಕೆಮ್ಮಿಗೆ ಉತ್ತಮ ಪರಿಹಾರವಾಗಿ ಕಾರ್ಯನಿರ್ವಹಿಸುತ್ತದೆ. ಶುಂಠಿಯನ್ನು ಹತ್ತು ಅಥವಾ ಹನ್ನೆರಡು ಸಣ್ಣ ತುಂಡುಗಳಾಗಿ ಕತ್ತರಿಸಿ. ಮೂರು ಕಪ್ ನೀರಿನಲ್ಲಿ 20 ನಿಮಿಷಗಳ ಕಾಲ ಕುದಿಸಿ. ನಂತರ ಅದು ಸ್ವಲ್ಪ ತಣ್ಣಗಾದ ಮೇಲೆ 1 ಚಮಚೆ ಜೇನುತುಪ್ಪ, ನಿಂಬೆ ರಸ ಹಾಕಿ ಸೇವಿಸುವುದು ಉತ್ತಮ. ಇದನ್ನು ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ಕೆಮ್ಮು ಕಡಿಮೆಯಾಗುತ್ತದೆ.

ಕರಿಮೆಣಸು ಒಂದು ಚಮಚೆ ಕರಿಮೆಣಸಿಗೆ ಒಂದು ಚಮಚೆ ಜೇನುತುಪ್ಪ ಸೇರಿಸಿ ಚೆನ್ನಾಗಿ ಕುದಿಸಿ ಕುಡಿಯುವುದರಿಂದ ಕೆಮ್ಮು ಕಡಿಮೆಯಾಗುತ್ತದೆ. ಈ ಮಿಶ್ರಣವನ್ನು ಕುದಿಸಿದ 15 ನಿಮಿಷಗಳ ನಂತರ ಕುಡಿಯುವುದು ಉತ್ತಮ.

ಅರಿಶಿಣ ಒಂದು ಚಮಚೆ ಅರಿಶಿಣ ಪುಡಿಯನ್ನು ನೀರಿಗೆ ಬೆರಸಿ ಚೆನ್ನಾಗಿ ಕುದಿ ಬಂದ ಮೇಲೆ ಸೇವಿಸುವುದು ಉತ್ತಮ. ಇದಕ್ಕೆ ಜೇನುತುಪ್ಪ ಕೂಡ ಸೇರಿಸಬಹುದು. ದಿನಕ್ಕೆ ಮೂರು ಬಾರಿ ಈ ವಿಧಾನವನ್ನು ಅನುಸರಿಸಿದರೆ ಕೆಮ್ಮು ಬೇಗನೆ ಗುಣವಾಗುತ್ತದೆ.

ಈರುಳ್ಳಿ ಈರುಳ್ಳಿ ಜತೆಗೆ ಬೆಲ್ಲವನ್ನು ಗುದ್ದಿ ಸೇವಿಸುವುದರಿಂದಲೂ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.

ಇದನ್ನೂ ಓದಿ:

Health Tips: ಮನೆಯಲ್ಲೇ ಇದೆ ಮದ್ದು; ಬೆನ್ನು ನೋವಿನ ಉಪಶಮನಕ್ಕಾಗಿ ಸರಳ ವಿಧಾನ

Health Benefits: ಹಾಲು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಸೇವಿಸುವ ಸಮಯದ ಬಗ್ಗೆ ತಿಳಿಯವುದನ್ನು ಮರೆಯಬೇಡಿ

Published On - 10:11 am, Sun, 20 June 21

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ