Health Tips: ಕೆಮ್ಮು ಮತ್ತು ಮನೆಮದ್ದು; ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ಮಳೆಗಾಲಕ್ಕೆ ಔಷಧಿ

ಜೇನುತುಪ್ಪವನ್ನು ಹೊರತುಪಡಿಸಿ ಕೆಮ್ಮಿಗೆ ಯಾವುದೇ ಚಿಕಿತ್ಸೆ ಇಲ್ಲ ಎಂಬ ಮಾತು ಆಯುರ್ವೇದದಲ್ಲಿ ಇದೆ. ಜೇನುತುಪ್ಪದಲ್ಲಿ ಏನನ್ನೂ ಸೇರಿಸದೆ ನೇರವಾಗಿ ಅದನ್ನು ತೆಗೆದುಕೊಂಡರೆ, ಅದು ಗಂಟಲಿನೊಳಗೆ ಲೇಪನವನ್ನು ರೂಪಿಸುತ್ತದೆ ಮತ್ತು ಸುಡುವ ಸಂವೇದನೆಯನ್ನು ಕಡಿಮೆ ಮಾಡುತ್ತದೆ.

Health Tips: ಕೆಮ್ಮು ಮತ್ತು ಮನೆಮದ್ದು; ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ಮಳೆಗಾಲಕ್ಕೆ ಔಷಧಿ
ಸಾಂದರ್ಭಿಕ ಚಿತ್ರ
Follow us
| Updated By: preethi shettigar

Updated on:Jun 20, 2021 | 10:17 AM

ಮಳೆಗಾಲ ಬಂತು ಎಂದರೆ ಸಾಕು, ಶೀತ, ಕೆಮ್ಮು, ಜ್ವರ ಶುರು ಎಂದರ್ಥ. ಕೆಲಸದ ಸಂದರ್ಭದಲ್ಲಿ ಮಳೆಯಲ್ಲಿ ನೆನೆಯುವುದು ಸಾಮಾನ್ಯ. ಅದರಲ್ಲೂ ಮುಖ್ಯವಾಗಿ ಮಳೆಗಾಲದಲ್ಲಿ ಕಂಡುಬರುವ ಕೆಮ್ಮು ಹೆಚ್ಚು ನಮ್ಮನ್ನು ಭಾದಿಸುತ್ತದೆ. ಹೀಗಾಗಿ ಮುನ್ನೆಚ್ಚರಿಕೆಯಾಗಿ ನಾವು ಕೆಲವೊಂದು ಕ್ರಮ ಕೈಗೊಳ್ಳುವುದು ಸೂಕ್ತ. ಆದರೆ ಈಗ ಕೊರೊನಾ ಕಾಲಘಟ್ಟವಾಗಿರುವುದರಿಂದ ಮೆಡಿಕಲ್ ಅಥವಾ ಆಸ್ಪತ್ರೆಗೆ ಹೋಗುವುದು ಅಷ್ಟು ಸಮಂಜಸವಲ್ಲ ಅಥವಾ ಹೋಗಲು ಕೆಲವರು ಹಿಂದೆ ಸರಿಯಬಹುದು. ಆದರೆ ಚಿಂತೆ ಪಡುವುದು ಬೇಡ. ಇದಕ್ಕೆ ಪರಿಹಾರ ನಿಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳಲ್ಲಿ ಇದೆ. ಅದು ಹೇಗೆ ಎಂದು ಹುಬ್ಬೇರಿಸುವವರಿಗೆ ಇಲ್ಲಿದೆ ಉತ್ತರ.

ಕೆಮ್ಮು ಮತ್ತು ಮನೆಮದ್ದು

ಜೇನುತುಪ್ಪ ಜೇನುತುಪ್ಪವನ್ನು ಹೊರತುಪಡಿಸಿ ಕೆಮ್ಮಿಗೆ ಯಾವುದೇ ಚಿಕಿತ್ಸೆ ಇಲ್ಲ ಎಂಬ ಮಾತು ಆಯುರ್ವೇದದಲ್ಲಿ ಇದೆ. ಜೇನುತುಪ್ಪದಲ್ಲಿ ಏನನ್ನೂ ಸೇರಿಸದೆ ನೇರವಾಗಿ ಅದನ್ನು ತೆಗೆದುಕೊಂಡರೆ, ಅದು ಗಂಟಲಿನೊಳಗೆ ಲೇಪನವನ್ನು ರೂಪಿಸುತ್ತದೆ ಮತ್ತು ಸುಡುವ ಸಂವೇದನೆಯನ್ನು ಕಡಿಮೆ ಮಾಡುತ್ತದೆ. ಇನ್ನು ಜೇನುತುಪ್ಪಕ್ಕೆ ಸ್ವಲ್ಪ ನಿಂಬೆ ರಸವನ್ನು ಸೇರಿಸುವುದರಿಂದ ಕೆಮ್ಮಿಗೆ ತಕ್ಷಣದ ಪರಿಹಾರ ಸಿಗುತ್ತದೆ.

ತುಳಸಿ ಎಲೆ ತುಳಸಿ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಿ ಸೇವಿಸುವುದರಿಂದ ಕೆಮ್ಮು ಕಡಿಮೆಯಾಗುತ್ತದೆ. ತುಳಸಿ ಎಲೆಗೆ ಜೇನುತುಪ್ಪವನ್ನು ಸಿಂಪಡಿಸಿ ತಿನ್ನುವುದರಿಂದಲೂ ಕೆಮ್ಮು ಕಡಿಮೆಯಾಗುತ್ತದೆ. ಸುಮಾರು 15 ದಿನಗಳವರೆಗೆ ಈ ಕ್ರಮವನ್ನು ಅನುಸರಿಸುವುದರಿಂದ ಕೆಮ್ಮು ನಿವಾರಣೆಯಾಗುತ್ತದೆ.

ಶುಂಠಿ ಶುಂಠಿ ಚಹಾವು ಕೆಮ್ಮಿಗೆ ಉತ್ತಮ ಪರಿಹಾರವಾಗಿ ಕಾರ್ಯನಿರ್ವಹಿಸುತ್ತದೆ. ಶುಂಠಿಯನ್ನು ಹತ್ತು ಅಥವಾ ಹನ್ನೆರಡು ಸಣ್ಣ ತುಂಡುಗಳಾಗಿ ಕತ್ತರಿಸಿ. ಮೂರು ಕಪ್ ನೀರಿನಲ್ಲಿ 20 ನಿಮಿಷಗಳ ಕಾಲ ಕುದಿಸಿ. ನಂತರ ಅದು ಸ್ವಲ್ಪ ತಣ್ಣಗಾದ ಮೇಲೆ 1 ಚಮಚೆ ಜೇನುತುಪ್ಪ, ನಿಂಬೆ ರಸ ಹಾಕಿ ಸೇವಿಸುವುದು ಉತ್ತಮ. ಇದನ್ನು ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ಕೆಮ್ಮು ಕಡಿಮೆಯಾಗುತ್ತದೆ.

ಕರಿಮೆಣಸು ಒಂದು ಚಮಚೆ ಕರಿಮೆಣಸಿಗೆ ಒಂದು ಚಮಚೆ ಜೇನುತುಪ್ಪ ಸೇರಿಸಿ ಚೆನ್ನಾಗಿ ಕುದಿಸಿ ಕುಡಿಯುವುದರಿಂದ ಕೆಮ್ಮು ಕಡಿಮೆಯಾಗುತ್ತದೆ. ಈ ಮಿಶ್ರಣವನ್ನು ಕುದಿಸಿದ 15 ನಿಮಿಷಗಳ ನಂತರ ಕುಡಿಯುವುದು ಉತ್ತಮ.

ಅರಿಶಿಣ ಒಂದು ಚಮಚೆ ಅರಿಶಿಣ ಪುಡಿಯನ್ನು ನೀರಿಗೆ ಬೆರಸಿ ಚೆನ್ನಾಗಿ ಕುದಿ ಬಂದ ಮೇಲೆ ಸೇವಿಸುವುದು ಉತ್ತಮ. ಇದಕ್ಕೆ ಜೇನುತುಪ್ಪ ಕೂಡ ಸೇರಿಸಬಹುದು. ದಿನಕ್ಕೆ ಮೂರು ಬಾರಿ ಈ ವಿಧಾನವನ್ನು ಅನುಸರಿಸಿದರೆ ಕೆಮ್ಮು ಬೇಗನೆ ಗುಣವಾಗುತ್ತದೆ.

ಈರುಳ್ಳಿ ಈರುಳ್ಳಿ ಜತೆಗೆ ಬೆಲ್ಲವನ್ನು ಗುದ್ದಿ ಸೇವಿಸುವುದರಿಂದಲೂ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.

ಇದನ್ನೂ ಓದಿ:

Health Tips: ಮನೆಯಲ್ಲೇ ಇದೆ ಮದ್ದು; ಬೆನ್ನು ನೋವಿನ ಉಪಶಮನಕ್ಕಾಗಿ ಸರಳ ವಿಧಾನ

Health Benefits: ಹಾಲು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಸೇವಿಸುವ ಸಮಯದ ಬಗ್ಗೆ ತಿಳಿಯವುದನ್ನು ಮರೆಯಬೇಡಿ

Published On - 10:11 am, Sun, 20 June 21

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ