ರಾತ್ರಿ ಊಟ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದರಿಂದ ಉಂಟಾಗುವ ಸಮಸ್ಯೆ ಬಗ್ಗೆ ಗಮನಿಸಿ

ರಾತ್ರಿ ಊಟ ಮಾಡಿದ ಕೂಡಲೇ ಸ್ನಾನ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದಲ್ಲದೆ, ಹೊಟ್ಟೆ ನೋವು ಮತ್ತು ಸೆಳೆತದಂತಹ ಸಮಸ್ಯೆಗಳ ಸಾಧ್ಯತೆಯಿದೆ.

ರಾತ್ರಿ ಊಟ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದರಿಂದ ಉಂಟಾಗುವ ಸಮಸ್ಯೆ ಬಗ್ಗೆ ಗಮನಿಸಿ
ಪ್ರಾತಿನಿಧಿಕ ಚಿತ್ರ
Follow us
| Updated By: Skanda

Updated on: Jun 22, 2021 | 8:13 AM

ಕೆಲಸದ ಒತ್ತಡ, ಆರ್ಥಿಕ ಹೊರೆ, ಇನ್ನಿತರ ಸಮಸ್ಯೆಗಳಿಂದ ಪ್ರತಿದಿನ ಹಲವರು ಮಿಷನ್​ನಂತೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹೆಚ್ಚು ಸೂಕ್ತವಾಗಿದೆ. ಕಾರಣ ಮನಸ್ಸು ಮತ್ತು ದೇಹದ ಸಮತೋಲವನ್ನು ಕಾಯ್ದುಕೊಳ್ಳಲು ಯಾವಾಗಲೂ ಪೌಷ್ಠಿಕ ಆಹಾರವನ್ನು ತೆಗೆದುಕೊಳ್ಳಬೇಕು. ವೈದ್ಯರು ಕೂಡ ಇದನ್ನೇ ಹೇಳುತ್ತಾರೆ. ಆದರೆ ಆಹಾರ ಸೇವಿಸುವ ಸಮಯದ ಬಗ್ಗೆ ಹಲವರಲ್ಲಿ ಗೊಂದಲಗಳಿದೆ. ಅದರಲ್ಲೂ ರಾತ್ರಿ ಊಟ ಮಾಡುವಾಗ ವಿಶೇಷ ಕಾಳಜಿ ಅಗತ್ಯ. ಕೆಲವರು ಸ್ನಾನ ಮಾಡಿ ಊಟ ಮಾಡುತ್ತಾರೆ. ಮತ್ತೆ ಕೆಲವರಿಗೆ ಊಟ ಮಾಡಿದ ಕೂಡಲೆ ಮಲಗುವ ಅಭ್ಯಾಸವಿದೆ. ಹೀಗೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಸೂಚಿಸುತ್ತಾರೆ. ಹಾಗಿದ್ದರೆ ಯಾವೆಲ್ಲಾ ಸಮಸ್ಯೆಗಳು ಎದುರಾಗುತ್ತದೆ ಎಂಬ ಪ್ರಶ್ನೆ ನಿಮ್ಮಲ್ಲಿದ್ದರೆ ಅದಕ್ಕೆ ಉತ್ತರ ಹೀಗಿದೆ.

ರಾತ್ರಿ ಊಟ ಮಾಡಿದ ಕೂಡಲೇ ಸ್ನಾನ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದಲ್ಲದೆ, ಹೊಟ್ಟೆ ನೋವು ಮತ್ತು ಸೆಳೆತದಂತಹ ಸಮಸ್ಯೆಗಳ ಸಾಧ್ಯತೆಯಿದೆ.

ಊಟ ಮಾಡಿದ ನಂತರ ಸ್ನಾನ ಮಾಡುವುದು ಒಳ್ಳೆಯದೋ? ಅಥವಾ ಕೆಟ್ಟದ್ದೋ? ರಾತ್ರಿ ಊಟ ಮಾಡಿದ ನಂತರ ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ದೇಹದ ಉಷ್ಣತೆ ಹೆಚ್ಚಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಇದರ ಪರಿಣಾಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಉಂಟಾಗುತ್ತದೆ. ಇದರಿಂದಾಗಿ ವಾಂತಿ, ಹುಣ್ಣು, ಆಮ್ಲೀಯತೆ ಮತ್ತು ಇತರ ಆರೋಗ್ಯ ಸಮಸ್ಯೆಗಳು ಸೃಷ್ಟಿಯಾಗುವ ಸಾಧ್ಯತೆ ಇದೆ. ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ನಾಡಿ ದರವೂ ಹೆಚ್ಚಾಗುತ್ತದೆ. ಇದು ಮೂಳೆ ಸೆಳೆತ ಮತ್ತು ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.

ಊಟದ ನಂತರ ತಣ್ಣಗಿನ ನೀರಿನಲ್ಲಿ ಸ್ನಾನ ಮಾಡಬಹುದೇ? ಆಹಾರ ಸೇವಿಸಿದ ನಂತರ ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವ ಬದಲು ನೀವು ತಣ್ಣಗಿನ ನೀರಿನಿಂದ ಸ್ನಾನ ಮಾಡಬಹುದು ಎಂದು ತಜ್ಞರು ಹೇಳಿದ್ದಾರೆ. ತಣ್ಣಗಿನ ನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹದ ಉಷ್ಣಾಂಶದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಮತ್ತು ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಸಾಮಾನ್ಯವಾಗಿರುತ್ತದೆ. ಸೇವಿಸುವ ಆಹಾರದಲ್ಲಿನ ಕೆಟ್ಟ ಕೊಬ್ಬನ್ನು ಕರಗಿಸಲು ಸಹ ಇದು ಸಹಾಯ ಮಾಡುತ್ತದೆ. ಆದಾಗ್ಯೂ, ಊಟ ಮಾಡಿ ಸುಮಾರು 20 ನಿಮಿಷಗಳ ನಂತರ ಸ್ನಾನ ಮಾಡುವುದು ಉತ್ತಮ ಎಂದು ವೈದ್ಯರು ತಿಳಿಸಿದ್ದಾರೆ. ರಾತ್ರಿ ಊಟದ ನಂತರ ನೀವು 30 ನಿಮಿಷಗಳ ಕಾಲ ಬೇರೆ ಕೆಲಸದಲ್ಲಿ ನಿರತರಾಗಬಹುದು, ಬ್ರಷ್ ಮಾಡಬಹುದು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

Health Tips: ಮನೆಯಲ್ಲೇ ಇದೆ ಮದ್ದು; ಬೆನ್ನು ನೋವಿನ ಉಪಶಮನಕ್ಕಾಗಿ ಸರಳ ವಿಧಾನ

Mouth Ulcers: ಬಾಯಿ ಹುಣ್ಣಿನಿಂದ ಬಳಲುತ್ತಿದ್ದೀರಾ? ಈ ಸರಳ ವಿಧಾನವನ್ನು ಅನುಸರಿಸಿ ನೋವಿನಿಂದ ಮುಕ್ತಿ ಪಡೆಯಿರಿ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ